Advertisement
MIRROR FOCUS

ಉತ್ತರ ಕರ್ನಾಟಕದ ಮಾವು ಬೆಳೆಗಾರರಿಗೆ ಸಿಹಿ ಸುದ್ದಿ | ಧಾರವಾಡಕ್ಕೆ ಮಾವು ಅಭಿವೃದ್ಧಿ ಕೇಂದ್ರ ಮಂಜೂರು

Share

ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ ಅನೇಕ ಆಹಾರ ಪದಾರ್ಥಗಳನ್ನು ಬೆಳೆಯಲಾಗುತ್ತದೆ. ಹಣ್ಣು, ಸೊಪ್ಪು- ತರಕಾರಿ, ದವಸ, ಧಾನ್ಯ, ಬೇಳೆ ಕಾಳು ಮುಂತಾದ ಹೆಚ್ಚಿನ ಬೆಳೆಗಳು ಇಲ್ಲಿ ಆದಾಯ. ರಾಜ್ಯದ ಅಲ್ಲದೆ ದೇಶದ ಇತರ ಭಾಗಗಳಿಗೂ ಇವುಗಳ ರಫ್ತು ನಡೆಯುತ್ತದೆ. ಅದಕ್ಕೆ ತಕ್ಕ ಮಾರುಕಟ್ಟೆ ವ್ಯವಸ್ಥೆಇದ್ದರೆ ರೈತರಿಗೆ ಇನ್ನು ಅನುಕೂಲ. ಅದರಲ್ಲೂ ಉತ್ತರ ಕರ್ನಾಟಕದ ಬಹುಭಾಗದಲ್ಲಿ ಮಾವು ಬೆಳೆ ಬೆಳೆಯಲಾಗುತ್ತದೆ. ಇದೀಗ  ಮಾವು ಬೆಳೆಗಾರರಿಗೆ ಕೇಂದ್ರ ಸರ್ಕಾರ ಸಂತಸ ಸುದ್ದಿ ನೀಡಿದೆ. ಧಾರವಾಡ ಜಿಲ್ಲೆಯಲ್ಲಿ ಮಾವು ಅಭಿವೃದ್ಧಿ ಕೇಂದ್ರ ಸ್ಥಾಪಿಸಲು ಅನುಮತಿ ನೀಡಿ ಅನುದಾನ ಮಂಜೂರು ಮಾಡಿದೆ. ಇದು ಈ ಭಾಗದಲ್ಲಿ ಮಾವು ಕೃಷಿ ಅಭಿವೃದ್ಧಿಗೆ ಸಹಕಾರಿಯಾಗಲಿದೆ.

ಇತ್ತೀಚೆಗೆ ಹವಾಮಾನ ಬದಲಾವಣೆಯಿಂದಾಗಿ ಸುಸ್ಥಿರ ಮಾರುಕಟ್ಟೆ ಇಲ್ಲದೇ ಮಾವು ಬೆಳೆಗಾರರು ನಷ್ಟ ಅನುಭವಿಸುತ್ತಿದ್ದಾರೆ. ಎಷ್ಟೋ ರೈತರು ಇರುವ ತೋಟಗಳನ್ನೇ ತೆರವುಗೊಳಿಸುವ ನಿರ್ಧಾರಕ್ಕೂ ಬಂದಿದ್ದರು. ಆದರೆ ಧಾರವಾಡ ಆಫೂಸ್ ಮಾವಿಗೆ ವಿದೇಶಗಳಲ್ಲಿಯೂ ಬೇಡಿಕೆ ಇದೆ. ಹೀಗಾಗಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ಮಾರುಕಟ್ಟೆ ಕಲ್ಪಿಸಲು ಕೇಂದ್ರದ ನಿರ್ಧಾರ ಪೂರಕವಾಗಲಿದೆ. ಉತ್ತರ ಕರ್ನಾಟಕದಲ್ಲಿ ವಿವಿಧ ಮಾವಿನ ತಳಿಗಳ ಬೆಳೆಯುವ ಅಗತ್ಯತೆ ಇದ್ದು, ಮಾವು ತಳಿಗಳ ಅಭಿವೃದ್ಧಿ, ಸಂಶೋಧನೆ, ಪ್ರಾತ್ಯಕ್ಷಿಕೆ, ರೈತರಿಗೆ ತರಬೇತಿ, ಮಾವಿನ ಹಣ್ಣು ಮತ್ತು ಮಾವಿನ ಕಾಯಿ ರಫ್ತು ವ್ಯವಸ್ಥೆ ಒದಗಿಸುವ ಕೆಲಸಗಳನ್ನು ಈ ಕೇಂದ್ರ ಮಾಡಲಿದೆ.

ಧಾರವಾಡ ಪಕ್ಕದ ಜಿಲ್ಲೆಗಳಿಗೂ ಅನುಕೂಲ: ಧಾರವಾಡ ಜಿಲ್ಲೆಯಲ್ಲಿ 8,400 ಹೆಕ್ಟೇರ್ ಪ್ರದೇಶದಲ್ಲಿ ಮಾವು ಬೆಳೆ ಇದೆ. ಅಕ್ಕಪಕ್ಕದ ಜಿಲ್ಲೆಗಳಾಗಿರುವ ಕೊಪ್ಪಳ, ಉತ್ತರ ಕನ್ನಡ, ಬೆಳಗಾವಿ, ಹಾವೇರಿ ಮತ್ತು ಗದಗ ಭಾಗದಲ್ಲಿ ಮಾವಿನ ತೋಟಗಳು ಹೆಚ್ಚಿನ ಸಂಖ್ಯೆಯಲ್ಲಿದ್ದು ಅಂದಾಜು 30 ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ಮಾವಿನ ತೋಟಗಳಿವೆ. ಹೀಗಾಗಿ ಕೇಂದ್ರ ಸರ್ಕಾರ ರಾಷ್ಟ್ರೀಯ ಕೃಷಿ ವಿಕಾಸ ಯೋಜನೆಯಡಿಯಲ್ಲಿ ಕರ್ನಾಟಕಕ್ಕೆ ಮಾವು ಅಭಿವೃದ್ಧಿ ಕೇಂದ್ರ ಮಂಜೂರು ಮಾಡಿದೆ.  ಮಾವು ಅಭಿವೃದ್ಧಿ ಕೇಂದ್ರ ಸ್ಥಾಪನೆಗೆ ಧಾರವಾಡ ಜಿಲ್ಲೆಯಲ್ಲಿರುವ ಕುಂಭಾಪುರ ಫಾರ್ಮ್​ನಲ್ಲಿ ಈಗಾಗಲೇ ಒಂದು ಎಕರೆ ಜಾಗ ಗುರುತಿಸಲಾಗಿದೆ. ಒಟ್ಟು 7.5 ಕೋಟಿ ರೂಪಾಯಿ ಅನುದಾನ ಕೇಂದ್ರದಿಂದ ಮಂಜೂರಾಗಿದ್ದು, ಇನ್ನೆರಡು ತಿಂಗಳಿನಲ್ಲಿ ಕೇಂದ್ರ ಸ್ಥಾಪನೆಯ ಕಾರ್ಯಗಳು ಆರಂಭವಾಗಲಿವೆ.

“ಈ ಭಾಗದ ಮಾವು ರೈತರಿಗೆ ಅನುಕೂಲವಾಗಲಿ ಎಂದು ನಮ್ಮ ಇಲಾಖೆಯಿಂದ ಮಾವು ಅಭಿವೃದ್ಧಿ ಕೇಂದ್ರ ಸ್ಥಾಪನೆಗೆ ರಾಜ್ಯ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದೆವು. ರಾಜ್ಯ ಸರ್ಕಾರ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಕಳುಹಿಸಿತ್ತು. ಇದಕ್ಕೆ ರಾಷ್ಟ್ರೀಯ ಕೃಷಿ ವಿಕಾಸ ಯೋಜನೆಯಡಿಯಲ್ಲಿ ಮಾವು ಅಭಿವೃದ್ಧಿ ಕೇಂದ್ರಕ್ಕೆ ಕೇಂದ್ರ ಅನುಮತಿ ನೀಡಿ, ಅನುದಾನ ಮಂಜೂರು ಮಾಡಿದೆ. ಮಾವು ಇಳುವರಿ ಹೆಚ್ಚಿಸಲು, ಸಂಶೋಧನೆ, ಕೋಲ್ಡ್ ಸ್ಟೋರೇಜ್, ಮಾರುಕಟ್ಟೆ ಸೌಲಭ್ಯ ಸೇರಿದಂತೆ ಇನ್ನಿತರೆ ಅನುಕೂಲಗಳನ್ನು ಬೆಳೆಗಾರರಿಗೆ ಈ ಕೇಂದ್ರದ ಮೂಲಕ ಒದಗಿಸಲಾಗುವುದು” ಎಂದು ತೋಟಗಾರಿಕೆ ಇಲಾಖೆಯ ಉಪನಿರ್ದೇಶಕ ಕಾಶಿನಾಥ ಭದ್ರಣ್ಣವರ ಮಾಹಿತಿ ನೀಡಿದರು.

  • ಅಂತರ್ಜಾಲ ಮಾಹಿತಿ
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಅವೈಜ್ಞಾನಿಕ ಮಳೆ ವರದಿ ಶೈಕ್ಷಣಿಕ ವಲಯಕ್ಕೆ ತೊಂದರೆ – ಹವಾಮಾನ ಮುನ್ಸೂಚನೆ ಕುರಿತು ಎಸ್.ಎಲ್. ಭೋಜೆಗೌಡ ಕಳವಳ

ಅವೈಜ್ಞಾನಿಕ ಮಳೆ ಮುನ್ಸೂಚನೆಗಳ ಆಧಾರದ ಮೇಲೆ ಪದೇ ಪದೇ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸುವುದು…

9 hours ago

ಹವಾಮಾನ ವರದಿ | 26-07-2026 | ಕರ್ನಾಟಕದಲ್ಲಿ ಮತ್ತೆ ಮಳೆ ಚುರುಕು – ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ | ಕರಾವಳಿ–ಮಲೆನಾಡಿನಲ್ಲಿ 10 ದಿನ ಮಳೆಯ ಸಾಧ್ಯತೆ

ಪಶ್ಚಿಮ ಬಂಗಾಳ ಕರಾವಳಿಯಲ್ಲಿ ರೂಪುಗೊಳ್ಳಲಿರುವ ವಾಯುಭಾರ ಕುಸಿತದಿಂದ ಕರ್ನಾಟಕದಲ್ಲಿ ಮತ್ತೆ ಮುಂಗಾರು ಚುರುಕುಗೊಳ್ಳುವ…

10 hours ago

ಅಡಿಕೆ ತಳಿಗಳ ಬಗ್ಗೆ ಹೊಸ ವೈಜ್ಞಾನಿಕ ಅಧ್ಯಯನ – ಅಡಿಕೆ ತಳಿಗಳಲ್ಲೂ ಆಲ್ಕಲಾಯ್ಡ್ ಪ್ರಮಾಣದಲ್ಲಿ ವ್ಯತ್ಯಾಸ

ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…

2 days ago

ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ – ದಕ್ಷಿಣ ಕನ್ನಡ- ಉಡುಪಿ ಜಿಲ್ಲೆಯಲ್ಲಿ ಜು.25ರಂದು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…

2 days ago

ಉದ್ಯೋಗಾಕಾಂಕ್ಷಿಗಳಿಗೆ ಸುವರ್ಣಾವಕಾಶ: ಜುಲೈ 30ರಂದು ಮಂಗಳೂರಿನಲ್ಲಿ ನೇರ ಸಂದರ್ಶನ

ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…

2 days ago