Opinion

ಮಧುಮೇಹಕ್ಕೆ ಕೇವಲ ಸಿಹಿ ತಿಂಡಿಗಳೇ ಕಾರಣವಲ್ಲ… | ಹಾಗಾದರೆ ಸಕ್ಕರೆ ಕಾಯಿಲೆ ಬರಲು ಕಾರಣವೇನು..? |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಬಿಡುವಿಲ್ಲದ ಜೀವನಶೈಲಿ(Lifestyle) ಮತ್ತು ಅನಿಯಮಿತ ಆಹಾರ ಪದ್ಧತಿಗಳು(Diet) ಅನೇಕ ರೋಗಗಳಿಗೆ(decease) ಕಾರಣವಾಗುತ್ತವೆ, ಅವುಗಳಲ್ಲಿ ಒಂದು ಮಧುಮೇಹ(Diabetes). ನಿಮಗೆ ಹಲವೆಡೆ ಡಯಾಬಿಟೀಸ್ ರೋಗಿಗಳು ಖಂಡಿತಾ ಸಿಗುತ್ತಾರೆ, ಹೆಚ್ಚು ಸಕ್ಕರೆ(Sugar) ಸೇವನೆಯಿಂದ ಮಧುಮೇಹ ಬರುತ್ತದೆ ಎಂಬ ಸಮಾಜದಲ್ಲಿ ಹೆಚ್ಚಿನ ಜನರಿದ್ದಾರೆ, ಅದಕ್ಕಾಗಿಯೇ ಹೆಚ್ಚು ಸಿಹಿ ತಿನ್ನಬೇಡಿ ಎಂದು ಜನರು ಹೇಳುವುದನ್ನು ನೀವು ಕೇಳಿರಬಹುದು, ಆದರೆ ಇದು ಸಂಪೂರ್ಣ ಸತ್ಯವಲ್ಲ.

Advertisement
Advertisement

ಸಿಹಿ ತಿಂಡಿಗಳ ಸೇವನೆಯಿಂದ ರಕ್ತದಲ್ಲಿ ಸಕ್ಕರೆ ವೇಗವಾಗಿ ವೃದ್ಧಿಯಾಗುತ್ತದೆ ಹಾಗೂ ಇದು ಆರೋಗ್ಯವಂತ ವ್ಯಕ್ತಿಗಳಲ್ಲಿ ಹೆಚ್ಚು ಪ್ರಮಾಣದ ಇನ್ಸುಲಿನ್‌ ಅನ್ನು ತಕ್ಷಣ ಸ್ರವಿಸಲು ಪ್ರೇರೇಪಿಸುತ್ತದೆ. ಇದರಿಂದ ಮೇದೋಜೀರಕ ಗ್ರಂಥಿ ಹಾಗೂ ಚಯಾಪಚಯ ವ್ಯವಸ್ಥೆಯ ಮೇಲೆ ಪ್ರತಿಕೂಲ ಪರಿಣಾಮ ಉಂಟಾಗುತ್ತದೆ. ಅಲ್ಲದೇ, ಸಿಹಿ ತಿಂಡಿಗಳಲ್ಲಿ ಸಾಮಾನ್ಯವಾಗಿ ಇತರ ಪೋಷಕಾಂಶಗಳು ಹಾಗೂ ನಾರಿನಂಶದ ಅಭಾವವಿರುತ್ತದೆ. ಇಂತಹ ಆಹಾರ ಪದ್ಧತಿ ಮಧುಮೇಹ ಉಂಟಾಗಲು ಪೂರಕವಾಗುತ್ತದೆ. ಆದರೆ, ಮಧುಮೇಹ ಉಂಟಾಗಲು ಇದೊಂದೇ ಕಾರಣವಲ್ಲ. ಸಾಮಾನ್ಯ ರಕ್ತದ ಸಕ್ಕರೆ ಹೊಂದಿರುವ ಜನರು ಸಿಹಿ ತಿನ್ನಬಹುದು. ಆದರೆ ಹಿತಮಿತವಾಗಿಯೇ ತಿನ್ನಬೇಕು. ಸಿಹಿತಿಂಡಿಗಳನ್ನು ತಿನ್ನದ ಅನೇಕ ಮಧುಮೇಹಿಗಳಿದ್ದಾರೆ ಮತ್ತು ಸಿಹಿತಿಂಡಿಗಳನ್ನು ಇಷ್ಟಪಡದವರೂ ಇದ್ದಾರೆ, ಆದರೂ ಅವರು ಮಧುಮೇಹದ ಸಮಸ್ಯೆಯಿಂದ ಬಳಲುತ್ತಿದ್ದಾರೆ.

ಹಾಗಾದರೆ ಮಧುಮೇಹಕ್ಕೆ ನಿಜವಾದ ಕಾರಣವೇನು?: ಮಧುಮೇಹ ಇನ್ಸುಲಿನ್ ನ ಕೊರತೆ ಅಥವಾ ಇನ್ಸುಲಿನ್ ಪ್ರತಿರೋಧದಿಂದ ಉಂಟಾಗುತ್ತದೆ ಎಂದು ಈಗ ಅನೇಕರಿಗೆ ತಿಳಿದಿದೆ. ಈ ಇನ್ಸುಲಿನ್ ಕೊರತೆ ಅಥವಾ ಪ್ರತಿರೋಧ ಸಂಭವಿಸಲು ಅನೇಕ ಅಂಶಗಳು ಪೂರಕವಾಗಿರುತ್ತವೆ. ಆಹಾರದ ಗುಣಮಟ್ಟ, ಅನಿಯಮಿತತೆ, ಮಾನಸಿಕ ಒತ್ತಡ, ದೈಹಿಕ ಚಟುವಟಿಕೆಗಳ ಕೊರತೆ, ಪರಿಸರ ಮಾಲಿನ್ಯ ಅಂದರೆ ನಾವು ಎಷ್ಟು ಕೃತ್ರಿಮ ರಾಸಾಯನಿಕ ಗಳಿಗೆ ನಮ್ಮನ್ನು ಒಡ್ಡಿಕೊಂಡಿದ್ದೇವೆ, ನಿಸರ್ಗದಿಂದ ನಾವು ಎಷ್ಟು ದೂರವಾಗಿದ್ದೇವೆ, ಅನಿಯಮಿತ ನಿದ್ರೆ ಅಥವಾ ನಿದ್ರಾನಾಶ, ವಿವಿಧ ಆರೋಗ್ಯ ಸಮಸ್ಯೆಗಳಿಗಾಗಿ ಪದೇಪದೇ ಸೇವಿಸುವ ಕೃತಿಮ ರಾಸಾಯನಿಕ (ಇಂಗ್ಲಿಷ್) ಔಷಧಿಗಳು, ಇತ್ಯಾದಿ ಅನೇಕ ಅಂಶಗಳು ಯಾವುದೇ ಕಾಯಿಲೆ ಸಂಭವಿಸಲು ಕಾರಣವಾಗುತ್ತವೆ.

ನಿದ್ರೆ : ಸಾಕಷ್ಟು ನಿದ್ದೆ ಮಾಡದವರಲ್ಲಿ ಮಧುಮೇಹ ಬರುವ ಸಾಧ್ಯತೆ ಹೆಚ್ಚಾಗಿರುತ್ತದೆ ಕೆಲವೊಮ್ಮೆ ನಿದ್ರೆಯ ಕೊರತೆ ಇರುವುದು ಸಹಜ, ಆದರೆ ಸಮಯಕ್ಕೆ ಸರಿಯಾಗಿ ಅಥವಾ ಗಾಢವಾದ ನಿದ್ದೆ ಮಾಡದಿದ್ದರೆ ಅಂತಹವರು ಜಾಗ್ರತೆ ವಹಿಸಬೇಕು. ಮಧುಮೇಹದಿಂದ ಬಳಲುವ ಸಾಧ್ಯತೆಯಿದೆ.

ಬೊಜ್ಜು: ದೇಹದ ತೂಕವನ್ನು ನಿಯಂತ್ರಣದಲ್ಲಿಟ್ಟರೆ ಮಧುಮೇಹದ ಸಮಸ್ಯೆಯನ್ನು ದೂರವಿಡಬಹುದು.

Advertisement

ಒತ್ತಡ : ಒಬ್ಬ ವ್ಯಕ್ತಿಯು ನಿರಂತರ ಒತ್ತಡದಲ್ಲಿದ್ದರೆ ಆಗ ಸಕ್ಕರೆಯ ಮಟ್ಟವು ಹೆಚ್ಚಾಗುತ್ತದೆ.

ಜಡ ಕೆಲಸ: ದಿನವಿಡೀ ಕಚೇರಿಯ ಕುರ್ಚಿಯಲ್ಲಿ ಕುಳಿತು ಕೆಲಸ ಮಾಡುವವರು ಮಧುಮೇಹದ ಅಪಾಯವನ್ನು 80% ವರೆಗೆ ಹೆಚ್ಚಿಸುತ್ತಾರೆ.

ವ್ಯಾಯಾಮದ ಕೊರತೆ: ದಿನಕ್ಕೆ ಕನಿಷ್ಠ 30 ನಿಮಿಷ ವ್ಯಾಯಾಮ ಮಾಡುವುದು ಕಡ್ಡಾಯ. ತಮ್ಮ ದಿನಚರಿಯಲ್ಲಿ ವ್ಯಾಯಾಮದ ಕೊರತೆ ಇರುವವರಿಗೆ ಮಧುಮೇಹ ಬರುವ ಸಾಧ್ಯತೆ ಹೆಚ್ಚು. ಆದ್ದರಿಂದ ಸಮಗ್ರ ಆರೋಗ್ಯಕರ ಜೀವನ ಶೈಲಿಯನ್ನು ರೂಢಿಸಿಕೊಳ್ಳುವುದು ಆಧುನಿಕ ಕಾಲದ ಅನಿವಾರ್ಯತೆಯಾಗಿದೆ.

ಪೌಷ್ಟಿಕ ತಜ್ಞ ಮತ್ತು ಆಹಾರ ತಜ್ಞರು ಪ್ರಕೃತಿ ಚಿಕಿತ್ಸಕ ಡಾ. ಭೋರ್ಕರ್ ಕನ್ನಡಕ್ಕೆ ಅನುವಾದ ಹಾಗೂ ಸಂಪಾದನೆ: ಡಾ. ಕುಲಕರ್ಣಿ ಪಿ. ಎ.

Busy lifestyle and irregular diet lead to many diseases, one of which is diabetes. You will definitely find diabetics in many places, there are many people in the society that diabetes is caused by consuming too much sugar, so you may have heard people saying that don’t eat too much sweets, but this is not entirely true.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಕೇರಳಕ್ಕೆ ನೈಋತ್ಯ ಮಾನ್ಸೂನ್ ಪ್ರವೇಶ | ಇಂದಿನಿಂದಲೇ ಮುಂಗಾರು ಆರಂಭ | 8 ದಿನ ಮುಂಚಿತವಾಗಿ ಆರಂಭವಾದ ಮಳೆಗಾಲ |

ಕಳೆದ 16 ವರ್ಷಗಳ ದಾಖಲೆಗಳ ಪ್ರಕಾರ ನಿಗದಿತ ದಿನಕ್ಕಿಂತ ಮೊದಲೇ ಈ ಬಾರಿ…

3 hours ago

ಉತ್ತಮ ಮಳೆಯಿಂದ ಹಸಿರಾದ ವನ್ಯಜೀವಿ ತಾಣ | ಚಾಮರಾಜನಗರ ಜಿಲ್ಲೆಯ ಹಲವೆಡೆ ಹಸಿರು ಸಂಭ್ರಮ

ಉತ್ತಮ ಮಳೆಗೆ ಅರಣ್ಯ ಪ್ರದೇಶವೆಲ್ಲ ಹಚ್ಚ ಹಸಿರಿನಿಂದ ಕಂಗೊಳಿಸುತ್ತಿದೆ, ಮಳೆ ಹನಿಗಳಿಗೆ ಮೈಯೊಡ್ಡಿದ…

9 hours ago

50 ಕೋಟಿಗೂ ಹೆಚ್ಚು ಜನರು ಕೃಷಿ ಕ್ಷೇತ್ರದಲ್ಲಿದ್ದಾರೆ , ಜಿಡಿಪಿಗೆ ಕೃಷಿಯ ಕೊಡುಗೆ ಶೇಕಡಾ 18

ರಾಜ್ಯದ ಅಡಿಕೆ ಬೆಳೆ ಅತ್ಯಂತ ಉತ್ಕೃಷ್ಟ ಗುಣಮಟ್ಟದ್ದಾಗಿದ್ದು, ಇದರಲ್ಲಿ ಯಾವುದೇ ರಾಸಾಯನಿಕ ಇಲ್ಲ.…

9 hours ago

ಅಡಿಕೆ ಹಾಳೆ ರಫ್ತು ನಿರ್ಬಂಧದ ಸಂಕಷ್ಟದಿಂದ ಪಾರಾಗಲು ಕೈಗೊಳ್ಳಬಹುದಾದ ಪರಿಹಾರೋಪಾಯಗಳು

ನಿಷೇಧವು ಶಾಶ್ವತವಲ್ಲ, ಮತ್ತು ವೈಜ್ಞಾನಿಕ, ತಾಂತ್ರಿಕ, ಮತ್ತು ವಾಣಿಜ್ಯ ರಾಜತಾಂತ್ರಿಕ ಮಾರ್ಗದಿಂದ ಈ…

10 hours ago

ಅಡಿಕೆ ಎನ್ನುವ ಚಿನ್ನದ ಮೊಟ್ಟೆ ಇಡುವ ಕೋಳಿ | ವರವೋ ಶಾಪವೋ?

ಆಹಾರ ಧಾನ್ಯಗಳನ್ನು ಬೆಳೆಸುತ್ತಿದ್ದ ಕೃಷಿಕರು ಅಡಿಕೆ ಕೃಷಿಗೆ ಪರಿವರ್ತನೆ ಆಗಿ ಆಹಾರಕ್ಕಾಗಿ ಪರಾವಲಂಬಿಗಳು…

11 hours ago

ಹೊಸರುಚಿ | ಉಪ್ಪಿನಲ್ಲಿ ಹಾಕಿದ ಹಲಸಿನ ಕಾಯಿ ರೊಟ್ಟಿ

ಉಪ್ಪಿನಲ್ಲಿ ಹಾಕಿದ ಹಲಸಿನ ಕಾಯಿ ರೊಟ್ಟಿಗೆ ಬೇಕಾಗುವ ಸಾಮಗ್ರಿಗಳು: ಉಪ್ಪಿನಲ್ಲಿ ಹಾಕಿದ ಹಲಸಿನ ಕಾಯಿ…

12 hours ago