Advertisement
MIRROR FOCUS

24 ಗಂಟೆಗಳಲ್ಲಿ 80 ಭೂಕಂಪ | ಭೂಕಂಪದ ತೀವ್ರತೆಯಲ್ಲಿ ತೈವಾನ್‌ |

Share

80 ಕ್ಕೂ ಹೆಚ್ಚು ಭೂಕಂಪಗಳು, ಅದರಲ್ಲಿ 6.3 ತೀವ್ರತೆ.  ಇದು ತೈವಾನ್‌ ಸ್ಥಿತಿ. ತೈವಾನ್‌ನ ಪೂರ್ವ ಕರಾವಳಿಗೆ  ಅಪ್ಪಳಿಸಿದ ಭೂಕಂಪ, ರಾಜಧಾನಿ ತೈಪೆಯಲ್ಲಿ ಕಟ್ಟಡಗಳನ್ನು ನೆಲಸಮ ಮಾಡಿದೆ ಎಂದು ತೈವಾನ್‌  ಆಡಳಿತ ತಿಳಿಸಿದೆ.  ಏಪ್ರಿಲ್ 3 ರಂದು 7.2 ತೀವ್ರತೆಯ ಭೂಕಂಪದ ನಂತರ ಕನಿಷ್ಠ 14 ಜನರು ಸಾವನ್ನಪ್ಪಿದರು. ಇದು ತೈವಾನ್‌ನಲ್ಲಿ ಕಳೆದ 25 ವರ್ಷಗಳಲ್ಲಿ ಸಂಭವಿಸಿದ ಪ್ರಬಲ ಭೂಕಂಪವಾಗಿದೆ.

Advertisement
Advertisement
Advertisement
Advertisement

ಮಂಗಳವಾರದ 6.1 ತೀವ್ರತೆಯ ಭೂಕಂಪವು  ಹುವಾಲಿಯನ್ ನಗರದ ದಕ್ಷಿಣಕ್ಕೆ  ಕೇಂದ್ರೀಕೃತವಾಗಿತ್ತು.  ತೈವಾನ್ ಗೆ ಪ್ರಬಲ ಭೂಕಂಪಗಳಿಗೆ ಹೊಸದೇನಲ್ಲ, ದ್ವೀಪದ 23 ಮಿಲಿಯನ್ ನಿವಾಸಿಗಳ ಭೂಕಂಪದ ಎದುರಿಸಲು ಅಗತ್ಯವಾದ ಮುನ್ಸೂಚನೆಯನ್ನು ಕಟ್ಟಡ ಕಟ್ಟುವಾಗಲೇ ಸಿದ್ಧ ಮಾಡುತ್ತಾರೆ ಹಾಗೂ   ಭೂಕಂಪಗಳ ಬಗ್ಗೆ ವ್ಯಾಪಕವಾದ ಸಾರ್ವಜನಿಕ  ಅಭಿಯಾನಗಳನ್ನು ಮಾಡುತ್ತದೆ. ಹೀಗಾಗಿ ಸತತ 80 ಭೂಕಂಪನಗಳು ಸಂಭವಿಸಿದರೂ ಅಪಾದ ಸಂಖ್ಯೆ ಕಡಿಮೆಯಾಗುತ್ತದೆ.

Advertisement

ಏಪ್ರಿಲ್ 3 ರಂದು,  7.2 ತೀವ್ರತೆಯ ಭೂಕಂಪ ಸಂಭವಿಸಿತ್ತು, ಇದರಲ್ಲಿ ಕನಿಷ್ಠ 14 ಜನರು ಸಾವನ್ನಪ್ಪಿದ್ದರು ಮತ್ತು ಅಂದಿನಿಂದ 1,000 ಕ್ಕೂ ಹೆಚ್ಚು ಭೂಕಂಪಗಳು ತೈವಾನ್‌ನಲ್ಲಿ ಸಂಭವಿಸಿವೆ. ರಾಜಧಾನಿ ತೈಪೆ ಸೇರಿದಂತೆ ಉತ್ತರ, ಪೂರ್ವ ಮತ್ತು ಪಶ್ಚಿಮ ತೈವಾನ್‌ನ ದೊಡ್ಡ ಭಾಗಗಳಲ್ಲಿ ಕಟ್ಟಡಗಳು ಕಳೆದ 24 ಗಂಟೆಗಳಲ್ಲಿ ಹತ್ತಾರು ಬಾರಿ ಅಲುಗಾಡಿದ್ದು, ಪ್ರಬಲವಾದ ಭೂಕಂಪವು 6.3 ರಷ್ಟಿದೆ. 2016 ರಲ್ಲಿ ದಕ್ಷಿಣ ತೈವಾನ್‌ನಲ್ಲಿ ಸಂಭವಿಸಿದ ಭೂಕಂಪದಲ್ಲಿ 100 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದರೆ, 1999 ರಲ್ಲಿ 7.3 ತೀವ್ರತೆಯ ಭೂಕಂಪದಲ್ಲಿ 2,000 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ರಾಜ್ಯದ ಗ್ರಾಮ ಪಂಚಾಯತ್‌ ಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ʼದರ್ಶಿನಿʼ ವಿನೂತನ ಕಾರ್ಯಕ್ರಮಕ್ಕೆ  ಸರ್ಕಾರ ಚಾಲನೆ

ರಾಜ್ಯದ ಗ್ರಾಮ ಪಂಚಾಯತ್‌ ಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಅರಿವು ಕೇಂದ್ರಗಳು ಜ್ಞಾನದ ಕೇಂದ್ರಗಳಾಗಿದ್ದು, ಸ್ಪರ್ಧಾತ್ಮಕ…

13 hours ago

‘ಜಲಾನಯನ ಯಾತ್ರೆ’ ಕುರುಡು ಮಲೆಯಲ್ಲಿ ಆರಂಭ

ಜಲಾನಯನ ಯಾತ್ರೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಯಾತ್ರೆ ಸಂಚರಿಸಲಿದ್ದು, ನೀರು ನಿರ್ವಹಣೆ ಬಗ್ಗೆ…

13 hours ago

ದೇಶದ 25 ಸಾವಿರ ಗ್ರಾಮಗಳಲ್ಲಿ ಸಂಪರ್ಕ ಕಲ್ಪಿಸುವ ಕ್ರಮ  | 900 ಕ್ಕೂ ಅಧಿಕ ಗ್ರಾಮಗಳಲ್ಲಿ ಮೊಬೈಲ್‌ ಟವರ್‌ ಅಳವಡಿಕೆ |

15 ರಾಜ್ಯಗಳಲ್ಲಿ 2 ಸಾವಿರದ 590 ಮೊಬೈಲ್ ಸಂಪರ್ಕರಹಿತ ಗ್ರಾಮಗಳನ್ನು ಗುರುತಿಸಲಾಗಿದೆ. ಈ…

13 hours ago

ಕಪ್ಪತ ಗುಡ್ಡ ರಕ್ಷಣೆ ಕುರಿತು ಜಾಗೃತಿ | ಗುಡ್ಡದ ತಪ್ಪಲಿನ ಗ್ರಾಮಗಳಲ್ಲಿ ಜನಜಾಗೃತಿ

ಗದಗ ಜಿಲ್ಲೆಯ ಮುಂಡರಗಿ ಮತ್ತು ಶಿರಹಟ್ಟಿ ತಾಲೂಕಿನ ಸುಮಾರು 33 ಸಾವಿರ ಹೆಕ್ಟೇರ್…

13 hours ago

ಅಡಿಕೆಯ ಹಳದಿ ಎಲೆ ರೋಗದ ಖಾಯಂ ನಿವಾರಣೆಗಾಗಿ ಯೋಜನೆ ಅನುಷ್ಟಾನಗೊಳ್ಳುತ್ತದೆ ಎಂಬ ಭರವಸೆ ಇರಲಿ

ಅಡಿಕೆಯಲ್ಲೂ ಟಿಶ್ಯೂ ಕಲ್ಚರ್ ತಂತ್ರಜ್ಞಾನದ ಅಳವಡಿಕೆ ಸಾಧ್ಯವೇ ಎಂಬ ಪ್ರಯತ್ನ ಸಾಕಷ್ಟು ಹಿಂದೆಯೇ…

20 hours ago

ಅಡಿಕೆ ಆಮದು ಮೇಲೆ ನಿಗಾ ವಹಿಸಲು ಸಚಿವರಿಗೆ ಮನವಿ ಮಾಡಿದ ಸಂಸದ ಕ್ಯಾ. ಬ್ರಿಜೇಶ್ ಚೌಟ

ಅಡಿಕೆ ಆಮದು ಆಗುತ್ತಿರುವ ಹಿನ್ನಲೆ ನಮ್ಮ ಸ್ಥಳೀಯ ಅಡಿಕೆ ಬೆಳೆಗಾರರು ನ್ಯಾಯಸಮ್ಮತವಲ್ಲದ ದರ…

21 hours ago