ಕೊಡಗು ಜಿಲ್ಲೆಯಲ್ಲಿ ಬೇಸಿಗೆ ಅವಧಿಯಲ್ಲಿ ಕುಡಿಯುವ ನೀರಿನ ಸಮಸ್ಯೆ ಉಲ್ಬಣಗೊಳ್ಳದಂತೆ ಮುನ್ನೆಚ್ಚರ ವಹಿಸಬೇಕು. ಕಾಲ ಕಾಲಕ್ಕೆ ಕುಡಿಯುವ ನೀರನ್ನು ನಿರಂತರವಾಗಿ ಪೂರೈಸಬೇಕು. ಸಾರ್ವಜನಿಕರಿಂದ ದೂರು ಬರದಂತೆ ಎಚ್ಚರವಹಿಸಬೇಕು ಎಂದು ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಎಸ್.ಭೋಸರಾಜು ಅವರು ಹೇಳಿದ್ದಾರೆ.
ಬಿಟ್ಟಂಗಾಲದಲ್ಲಿ ವಿರಾಜಪೇಟೆ ಮತ್ತು ಪೊನ್ನಂಪೇಟೆ ತಾಲ್ಲೂಕುಗಳ ಅಧಿಕಾರಿಗಳೊಂದಿಗೆ ಪ್ರಸಕ್ತ ಆರ್ಥಿಕ ವರ್ಷದ ಪ್ರಗತಿ ಸಂಬಂಧಿಸಿದಂತೆ ಮಾಹಿತಿ ಪಡೆದು ಸಚಿವರು ಮಾತನಾಡಿದರು.ನಾಗರಹೊಳೆಯಲ್ಲಿನ ಗಿರಿಜನ ಆಶ್ರಮ ಶಾಲೆಯಲ್ಲಿ ಮೂಲ ಸೌಲಭ್ಯ ಇಲ್ಲದೆ ವಿದ್ಯಾರ್ಥಿಗಳು ಪರಿತಪಿಸುತ್ತಿದ್ದಾರೆ. ಸರ್ಕಾರ ಹಲವು ಯೋಜನಾ ಕಾರ್ಯಕ್ರಮಗಳು ಜಾರಿಗೊಳಿಸಿದ್ದರೂ ಸಹ ಪರಿಪೂರ್ಣವಾಗಿ ತಲುಪಿಸಲು ಸಾಧ್ಯವಾಗುತ್ತಿಲ್ಲ. ಆದ್ದರಿಂದ ಈ ಬಗ್ಗೆ ಶಾಸಕರು, ಜಿಲ್ಲಾಧಿಕಾರಿಯವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರ ಗಮನಕ್ಕೆ ತಂದಲ್ಲಿ ಸರ್ಕಾರದ ಗಮನಕ್ಕೆ ತರಬಹುದಾಗಿದೆ. ಯಾವುದೇ ಮಾಹಿತಿ ನೀಡದಿದ್ದಲ್ಲಿ ಸಮಸ್ಯೆ ಬಗೆ ಹರಿಸುವುದಾದರೂ ಹೇಗೆ ಎಂದು ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.
ದಕ್ಷಿಣ ಕನ್ನಡ ಹಾಗೂ ಚಿಕ್ಕಮಗಳೂರು ಭಾಗಗಳಲ್ಲಿ ಮಧ್ಯಾಹ್ನ ನಂತರ ಗುಡುಗು-ಮಿಂಚು ಸಹಿತ ಸಾಧಾರಣ…
ಕರ್ನಾಟಕದ ಹಲವೆಡೆ ಪೂರ್ವ ಮುಂಗಾರು ಮಳೆ ಮುಂದುವರಿದಿದ್ದು, ಕರಾವಳಿಯಲ್ಲಿ ಮೇ 20ರಿಂದ ಮುಂಗಾರು…
ಮೇ 26ರಂದು ಕೇರಳಕ್ಕೆ ಮುಂಗಾರು ಪ್ರವೇಶಿಸುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ…
ಚಾಲಿ ಅಡಿಕೆ ಧಾರಣೆ ಮೇ ತಿಂಗಳಲ್ಲಿ ಇಳಿಕೆಯಾಗುತ್ತಿರುವುದು ರೈತರ ಆತಂಕಕ್ಕೆ ಕಾರಣವಾಗಿದೆ. ಬರ್ಮಾ-ಇಂಡೋನೇಷ್ಯಾ…
ರಬ್ಬರ್ ದರವು ದೇಶದಲ್ಲಿ ದಾಖಲೆ ಮಟ್ಟ ತಲುಪಿದ್ದು, ರೈತರಿಗೆ ಲಾಭದ ನಿರೀಕ್ಷೆ ಮೂಡಿಸಿದೆ.…
ರಾಜ್ಯದ ಹಲವು ಜಿಲ್ಲೆಗಳಲ್ಲಿ ಮೇ 19ರವರೆಗೆ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.…