ಅಡಿಕೆಗೆ ವ್ಯಾಪಕ ಕೊಳೆರೋಗ | ಹವಾಮಾನ ಆಧಾರಿತ  ಬೆಳೆವಿಮೆ ತಕ್ಷಣವೇ ಬಿಡುಗಡೆಗೆ ಕ್ರಮ ಕೈಗೊಳ್ಳಲು ಒತ್ತಾಯ

August 20, 2025
4:59 PM
ಹವಾಮಾನ ಆಧಾರಿತ ಬೆಳೆವಿಮೆಯ ಕಳೆದ ಸಾಲಿನ ವಿಮಾ ವರ್ಷವು ಅಂತ್ಯವಾಗಿದೆ. ಈಗ ಜಿಲ್ಲಾಧಿಕಾರಿಗಳ ನೇತೃತ್ವದ ಸಮಿತಿ ದಾಖಲೆಗಳನ್ನು ಪರಿಶೀಲಿಸಿ ವಿಮೆ ಬಿಡುಗಡೆಗೆ ತಕ್ಷಣದ ಕ್ರಮ ಆಗಬೇಕಾಗಿದೆ.
ರಾಜ್ಯದಲ್ಲಿ ಈ ಬಾರಿ ಮಳೆಯ ಕಾರಣದಿಂದ ಅಡಿಕೆ ಬೆಳೆಗಾರರು ಕೊಳೆರೋಗದಿಂದ ಸಂಕಷ್ಟ ಒಳಗಾಗಿದ್ದಾರೆ. ಈಗಾಗಲೇ ಕಳೆದ ಸಾಲಿನ ಹವಾಮಾನ ಆಧಾರಿತ ಬೆಳೆ ವಿಮಾ ವರ್ಷವೂ ಅಂತ್ಯವಾಗಿದ್ದು, ತಕ್ಷಣವೇ ಹವಾಮಾನ ಆಧಾರಿತ ಬೆಳೆ ವಿಮೆ ಬಿಡುಗಡೆಗೆ ಕ್ರಮ ಕೈಗೊಳ್ಳಬೇಕು ಎಂದು ಅಖಿಲ ಭಾರತ ಅಡಿಕೆ ಬೆಳೆಗಾರರ ಸಂಘವು ಒತ್ತಾಯಿಸಿದೆ.
ಈ ವರ್ಷದ ಮಳೆಯ ಕಾರಣದಿಂದ ಅಡಿಕೆಗೆ ವ್ಯಾಪಕವಾಗಿ ಕೊಳೆರೋಗ ಬಾಧಿಸಿದೆ. ಅಡಿಕೆ ಬೆಳೆಗಾರರ ಸಂಘವು ನಡೆಸಿದ ಸರ್ವೆಯ ಪ್ರಕಾರ ಈ ಬಾರಿ ಕೃಷಿಕರಿಗೆ ಶೇ.50 ಕ್ಕಿಂತಲೂ ಅಧಿಕ ಪ್ರಮಾಣದಲ್ಲಿ ಅಡಿಕೆ ಬೆಳೆ ನಷ್ಟವಾಗಿದೆ. ಬೆಳೆಗಾರರು ಈಗ ಸಂಕಷ್ಟದಲ್ಲಿದ್ದಾರೆ.  ಶೇ.95 ರಷ್ಟು ಅಡಿಕೆ ಬೆಳೆಗಾರರು ಈ ಬಾರಿ ಕೊಳೆರೋಗದ ಸಂಕಷ್ಟ ಎದುರಿಸುತ್ತಿದ್ದಾರೆ. ಶೇ.85 ರಷ್ಟು ಕೃಷಿಕರಿಗೆ ಮಳೆಯ ಕಾರಣದಿಂದ ಕೊಳೆರೋಗ ತಡೆಗೆ ಬೋರ್ಡೋ ಸಿಂಪಡಣೆಗೆ ಸಾಧ್ಯವಾಗಿಲ್ಲ. ಈಗ ಕೊಳೆರೋಗ ನಿಯಂತ್ರಣಕ್ಕೆ ಇನ್ನಿಲ್ಲದ ಪ್ರಯತ್ನ ನಡೆಸುತ್ತಿದ್ದಾರೆ. ಕೊಳೆರೋಗ ನಿಯಂತ್ರಣಕ್ಕೆ ಮೂರನೇ ಸುತ್ತಿನ ಔಷಧಿ ಸಿಂಪಡಣೆಗೂ ಪ್ರಯತ್ನ ನಡೆಯುತ್ತಿದೆ. ಕಳೆದ ವರ್ಷವೂ ಹಲವು ಕಡೆ ಇಳುವರಿಯ ಕೊರತೆಯೂ ಇತ್ತು. ಇದೀಗ ವ್ಯಾಪಕವಾದ ಕೊಳೆರೋಗದಿಂದ ಸಂಕಷ್ಟ ಎದುರಿಸುತ್ತಿದ್ದಾರೆ. ಈಗ ಕೊಳೆರೋಗ ನಿಯಂತ್ರಣಕ್ಕೆ ಔಷಧಿ ಸಿಂಪಡಣೆ ಮಾಡಲೇಬೇಕಾಗಿದೆ. ಈ ಹಂತದಲ್ಲಿ ಬೆಳೆಗಾರರಿಗೆ ಆರ್ಥಿಕ ನೆರವು ಕೂಡಾ ಅಗತ್ಯ ಇದೆ. ಹೀಗಾಗಿ, ಕಳೆದ ಸಾಲಿನಲ್ಲಿ ಹವಾಮಾನ ಆಧಾರಿತ ಬೆಳೆ ವಿಮೆ ಕಟ್ಟಿರುವ  ಬೆಳೆಗಾರರಿಗೆ ತಕ್ಷಣವೇ ಬೆಳೆ ವಿಮೆ ಪಾವತಿಗೆ ವ್ಯವಸ್ಥೆ ಮಾಡುವುದರ ಜೊತೆಗೆ ಬೆಳೆ ವಿಮೆ ಪಾವತಿಗೆ ಸಾಧ್ಯವಾಗದ ಅಡಿಕೆ ಬೆಳೆಗಾರರಿಗೆ ನಷ್ಟದ ಪರಿಹಾರ ಕ್ರಮವಾಗಿ ತಕ್ಷಣವೇ ಸರ್ಕಾರವು ಇಲಾಖೆಗಳ ಮೂಲಕ ಮುಂದಿನ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಅಖಿಲ ಭಾರತ ಅಡಿಕೆ ಬೆಳೆಗಾರರು ಸಂಘವು ಒತ್ತಾಯಿಸಿದೆ.
ಹವಾಮಾನ ಆಧಾರಿತ ಬೆಳೆವಿಮೆಯ ಕಳೆದ ಸಾಲಿನ ವಿಮಾ ವರ್ಷವು ಅಂತ್ಯವಾಗಿದೆ. ಈಗ ಜಿಲ್ಲಾಧಿಕಾರಿಗಳ ನೇತೃತ್ವದ ಸಮಿತಿ ದಾಖಲೆಗಳನ್ನು ಪರಿಶೀಲಿಸಿ ವಿಮೆ ಬಿಡುಗಡೆಗೆ ತಕ್ಷಣದ ಕ್ರಮ ಆಗಬೇಕಾಗಿದೆ. ಈ ಹಂತಗಳನ್ನು ತಕ್ಷಣವೇ ಮಾಡಬೇಕಾಗಿದೆ. ಕಳೆದ ಒಂದೆರಡು ವರ್ಷಗಳಿಂದ ಅಕ್ಟೋಬರ್‌ ಅಂತ್ಯ ಅಥವಾ ನವೆಂಬರ್‌  ತಿಂಗಳಲ್ಲಿ ವಿಮೆ ಹಣ ಬಿಡುಗಡೆಯಾಗುತ್ತಿದೆ. ಇಲಾಖೆಗಳ  ಬಳಿ ಹವಾಮಾನದ ಡಾಟಾಗಳು ಇರುವುದರಿಂದ ತಕ್ಷಣವೇ ಮುಂದಿನ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಬೆಳೆಗಾರರ ಸಂಘವು ಒತ್ತಾಯಿಸಿದೆ.  ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿ ಮತ್ತು ನ್ಯೂಸ್ ಎಲರ್ಟ್ ಗಾಗಿ  ನಮ್ಮ WhatsApp Channel   ಗೆ ಇಲ್ಲಿ ಕ್ಲಿಕ್‌ ಮಾಡಿ ಸೇರಿಕೊಳ್ಳಿ…
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಕೃಷಿ ಇನ್ನು ಕೇವಲ ಬೆಳೆ ಬೆಳೆಯುವುದಲ್ಲ – ಯುವಕರಿಗೆ ಸ್ಟಾರ್ಟ್‌ಅಪ್ ಕ್ಷೇತ್ರ
August 26, 2026
6:52 AM
by: ದ ರೂರಲ್ ಮಿರರ್.ಕಾಂ
ಬರಪೀಡಿತ ಪ್ರದೇಶಗಳ ರೈತರಿಗೆ ಗುಡ್‌ನ್ಯೂಸ್ ; ಬೆಳೆ ವಿಮೆ ನೋಂದಣಿ ಅವಧಿ ವಿಸ್ತರಣೆ
August 25, 2026
10:36 PM
by: ದ ರೂರಲ್ ಮಿರರ್.ಕಾಂ
ರಾಜ್ಯದ 102 ತಾಲೂಕುಗಳಲ್ಲಿ ಬರದ ಛಾಯೆ – ತಿಂಗಳಾಂತ್ಯಕ್ಕೆ ಕೇಂದ್ರಕ್ಕೆ ವರದಿ ಸಲ್ಲಿಕೆ
August 25, 2026
10:30 PM
by: ದ ರೂರಲ್ ಮಿರರ್.ಕಾಂ
ಮಂಗಳೂರಿನ ಅಶ್ಮಿತ್ ಎ.ಜೆ. ಅವರಿಗೆ ‘ಸರಿಗಮಪ 2026’ರ ಕಿರೀಟ
August 25, 2026
8:54 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror