Advertisement
MIRROR FOCUS

ಅಡಿಕೆಗೆ ವ್ಯಾಪಕ ಕೊಳೆರೋಗ | ಹವಾಮಾನ ಆಧಾರಿತ  ಬೆಳೆವಿಮೆ ತಕ್ಷಣವೇ ಬಿಡುಗಡೆಗೆ ಕ್ರಮ ಕೈಗೊಳ್ಳಲು ಒತ್ತಾಯ

Share
ರಾಜ್ಯದಲ್ಲಿ ಈ ಬಾರಿ ಮಳೆಯ ಕಾರಣದಿಂದ ಅಡಿಕೆ ಬೆಳೆಗಾರರು ಕೊಳೆರೋಗದಿಂದ ಸಂಕಷ್ಟ ಒಳಗಾಗಿದ್ದಾರೆ. ಈಗಾಗಲೇ ಕಳೆದ ಸಾಲಿನ ಹವಾಮಾನ ಆಧಾರಿತ ಬೆಳೆ ವಿಮಾ ವರ್ಷವೂ ಅಂತ್ಯವಾಗಿದ್ದು, ತಕ್ಷಣವೇ ಹವಾಮಾನ ಆಧಾರಿತ ಬೆಳೆ ವಿಮೆ ಬಿಡುಗಡೆಗೆ ಕ್ರಮ ಕೈಗೊಳ್ಳಬೇಕು ಎಂದು ಅಖಿಲ ಭಾರತ ಅಡಿಕೆ ಬೆಳೆಗಾರರ ಸಂಘವು ಒತ್ತಾಯಿಸಿದೆ.
ಈ ವರ್ಷದ ಮಳೆಯ ಕಾರಣದಿಂದ ಅಡಿಕೆಗೆ ವ್ಯಾಪಕವಾಗಿ ಕೊಳೆರೋಗ ಬಾಧಿಸಿದೆ. ಅಡಿಕೆ ಬೆಳೆಗಾರರ ಸಂಘವು ನಡೆಸಿದ ಸರ್ವೆಯ ಪ್ರಕಾರ ಈ ಬಾರಿ ಕೃಷಿಕರಿಗೆ ಶೇ.50 ಕ್ಕಿಂತಲೂ ಅಧಿಕ ಪ್ರಮಾಣದಲ್ಲಿ ಅಡಿಕೆ ಬೆಳೆ ನಷ್ಟವಾಗಿದೆ. ಬೆಳೆಗಾರರು ಈಗ ಸಂಕಷ್ಟದಲ್ಲಿದ್ದಾರೆ.  ಶೇ.95 ರಷ್ಟು ಅಡಿಕೆ ಬೆಳೆಗಾರರು ಈ ಬಾರಿ ಕೊಳೆರೋಗದ ಸಂಕಷ್ಟ ಎದುರಿಸುತ್ತಿದ್ದಾರೆ. ಶೇ.85 ರಷ್ಟು ಕೃಷಿಕರಿಗೆ ಮಳೆಯ ಕಾರಣದಿಂದ ಕೊಳೆರೋಗ ತಡೆಗೆ ಬೋರ್ಡೋ ಸಿಂಪಡಣೆಗೆ ಸಾಧ್ಯವಾಗಿಲ್ಲ. ಈಗ ಕೊಳೆರೋಗ ನಿಯಂತ್ರಣಕ್ಕೆ ಇನ್ನಿಲ್ಲದ ಪ್ರಯತ್ನ ನಡೆಸುತ್ತಿದ್ದಾರೆ. ಕೊಳೆರೋಗ ನಿಯಂತ್ರಣಕ್ಕೆ ಮೂರನೇ ಸುತ್ತಿನ ಔಷಧಿ ಸಿಂಪಡಣೆಗೂ ಪ್ರಯತ್ನ ನಡೆಯುತ್ತಿದೆ. ಕಳೆದ ವರ್ಷವೂ ಹಲವು ಕಡೆ ಇಳುವರಿಯ ಕೊರತೆಯೂ ಇತ್ತು. ಇದೀಗ ವ್ಯಾಪಕವಾದ ಕೊಳೆರೋಗದಿಂದ ಸಂಕಷ್ಟ ಎದುರಿಸುತ್ತಿದ್ದಾರೆ. ಈಗ ಕೊಳೆರೋಗ ನಿಯಂತ್ರಣಕ್ಕೆ ಔಷಧಿ ಸಿಂಪಡಣೆ ಮಾಡಲೇಬೇಕಾಗಿದೆ. ಈ ಹಂತದಲ್ಲಿ ಬೆಳೆಗಾರರಿಗೆ ಆರ್ಥಿಕ ನೆರವು ಕೂಡಾ ಅಗತ್ಯ ಇದೆ. ಹೀಗಾಗಿ, ಕಳೆದ ಸಾಲಿನಲ್ಲಿ ಹವಾಮಾನ ಆಧಾರಿತ ಬೆಳೆ ವಿಮೆ ಕಟ್ಟಿರುವ  ಬೆಳೆಗಾರರಿಗೆ ತಕ್ಷಣವೇ ಬೆಳೆ ವಿಮೆ ಪಾವತಿಗೆ ವ್ಯವಸ್ಥೆ ಮಾಡುವುದರ ಜೊತೆಗೆ ಬೆಳೆ ವಿಮೆ ಪಾವತಿಗೆ ಸಾಧ್ಯವಾಗದ ಅಡಿಕೆ ಬೆಳೆಗಾರರಿಗೆ ನಷ್ಟದ ಪರಿಹಾರ ಕ್ರಮವಾಗಿ ತಕ್ಷಣವೇ ಸರ್ಕಾರವು ಇಲಾಖೆಗಳ ಮೂಲಕ ಮುಂದಿನ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಅಖಿಲ ಭಾರತ ಅಡಿಕೆ ಬೆಳೆಗಾರರು ಸಂಘವು ಒತ್ತಾಯಿಸಿದೆ.
ಹವಾಮಾನ ಆಧಾರಿತ ಬೆಳೆವಿಮೆಯ ಕಳೆದ ಸಾಲಿನ ವಿಮಾ ವರ್ಷವು ಅಂತ್ಯವಾಗಿದೆ. ಈಗ ಜಿಲ್ಲಾಧಿಕಾರಿಗಳ ನೇತೃತ್ವದ ಸಮಿತಿ ದಾಖಲೆಗಳನ್ನು ಪರಿಶೀಲಿಸಿ ವಿಮೆ ಬಿಡುಗಡೆಗೆ ತಕ್ಷಣದ ಕ್ರಮ ಆಗಬೇಕಾಗಿದೆ. ಈ ಹಂತಗಳನ್ನು ತಕ್ಷಣವೇ ಮಾಡಬೇಕಾಗಿದೆ. ಕಳೆದ ಒಂದೆರಡು ವರ್ಷಗಳಿಂದ ಅಕ್ಟೋಬರ್‌ ಅಂತ್ಯ ಅಥವಾ ನವೆಂಬರ್‌  ತಿಂಗಳಲ್ಲಿ ವಿಮೆ ಹಣ ಬಿಡುಗಡೆಯಾಗುತ್ತಿದೆ. ಇಲಾಖೆಗಳ  ಬಳಿ ಹವಾಮಾನದ ಡಾಟಾಗಳು ಇರುವುದರಿಂದ ತಕ್ಷಣವೇ ಮುಂದಿನ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಬೆಳೆಗಾರರ ಸಂಘವು ಒತ್ತಾಯಿಸಿದೆ.  ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿ ಮತ್ತು ನ್ಯೂಸ್ ಎಲರ್ಟ್ ಗಾಗಿ  ನಮ್ಮ WhatsApp Channel ಗೆ ಇಲ್ಲಿ ಕ್ಲಿಕ್‌ ಮಾಡಿ ಸೇರಿಕೊಳ್ಳಿ…
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

2025-26 ರಲ್ಲಿ ಅಡಿಕೆ ಕೊಳೆರೋಗ ಮತ್ತು ಎಲೆಚುಕ್ಕಿ ರೋಗ ಪ್ರಕರಣ ವರದಿಯಾಗಿಲ್ಲ…!

ಕೃಷಿ ಮತ್ತು ರೈತರ ಕಲ್ಯಾಣ ಇಲಾಖೆಯ ಕೇಂದ್ರದ ಸಮಗ್ರ ಕೀಟ ನಿರ್ವಹಣಾ ಕೇಂದ್ರಗಳು…

13 hours ago

ಮನೆಯ ಮೇಲ್ಛಾವಣಿಯನ್ನು ಕೃಷಿ ಭೂಮಿಯನ್ನಾಗಿಸಿದ ಆಸಿಯಾ ಇತರ ಮಹಿಳೆಯರಿಗೂ ಇಂದು ಮಾದರಿ..

ಮನಸ್ಸಿದ್ದರೆ ಮಾರ್ಗ ಎಂಬ ಗಾದೆ ಮಾತು ನಾವು ಕೇಳಿದ್ದೇವೆ. ಆದರೆ, ಕೆಲವು ಜನರ…

13 hours ago

ನಮ್ಮ ಹೊಲ ನಮ್ಮ ದಾರಿ : ರಸ್ತೆಗೆ 12.5 ಲಕ್ಷ ಸಹಾಯಧನ

ಕೆಲವು ಕಡೆಗಳಲ್ಲಿ ರೈತರು ತಮ್ಮ ಜಮೀನಿಗೆ ಹೋಗಲು ಸರಿಯಾದ ದಾರಿಯಿಲ್ಲದೆ ಪರದಾಟ ನಡೆಸಬೇಕಾಗುತ್ತದೆ.…

13 hours ago

2025-26 ನೇ ಸಾಲಿನ ಕೃಷಿ ಇಲಾಖೆ ಸಹಾಯಧನ ಯೋಜನೆಗಳು

ಕೃಷಿ ಇಲಾಖೆಯು ರೈತರಿಗೆಂದು ವಿವಿಧ ಸಬ್ಸಿಡಿ ಯೋಜನೆಗಳನ್ನು ಜಾರಿಗೆ ತಂದಿದೆ. ಇದಕ್ಕೆ ಯಾವ…

13 hours ago

ಕುಕ್ಕುಟ ಸಂಜೀವಿನಿ ಯೋಜನೆ : ಉಚಿತ ಕೋಳಿ ಮರಿ ಶೇಡ್ ನಿರ್ಮಾಣಕ್ಕೆ ಆರ್ಥಿಕ ನೆರವು

ಮಹಿಳೆಯರ ಏಳಿಗೆಗೆ ಸರ್ಕಾರವೂ ಹಲವಾರು ರೀತಿಯ ಯೋಜನೆಯನ್ನು ಜಾರಿಗೊಳಿಸಿದೆ. ಇದೀಗ ಗ್ರಾಮೀಣ ಮಹಿಳೆಯರಿಗೆ…

14 hours ago

ಹವಾಮಾನ ವರದಿ | 16-12-2025 | ಮೋಡ ಮಾತ್ರವೇ ಮಳೆ ಇದೆಯೇ…? | ಮುಂದೆ ಚಳಿಯ ಪ್ರಭಾವ ಹೇಗಿರಬಹುದು..?

17.12.2025 ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ…

1 day ago