Advertisement
MIRROR FOCUS

ಅಡಿಕೆಗೆ ವ್ಯಾಪಕ ಕೊಳೆರೋಗ | ಹವಾಮಾನ ಆಧಾರಿತ  ಬೆಳೆವಿಮೆ ತಕ್ಷಣವೇ ಬಿಡುಗಡೆಗೆ ಕ್ರಮ ಕೈಗೊಳ್ಳಲು ಒತ್ತಾಯ

Share
ರಾಜ್ಯದಲ್ಲಿ ಈ ಬಾರಿ ಮಳೆಯ ಕಾರಣದಿಂದ ಅಡಿಕೆ ಬೆಳೆಗಾರರು ಕೊಳೆರೋಗದಿಂದ ಸಂಕಷ್ಟ ಒಳಗಾಗಿದ್ದಾರೆ. ಈಗಾಗಲೇ ಕಳೆದ ಸಾಲಿನ ಹವಾಮಾನ ಆಧಾರಿತ ಬೆಳೆ ವಿಮಾ ವರ್ಷವೂ ಅಂತ್ಯವಾಗಿದ್ದು, ತಕ್ಷಣವೇ ಹವಾಮಾನ ಆಧಾರಿತ ಬೆಳೆ ವಿಮೆ ಬಿಡುಗಡೆಗೆ ಕ್ರಮ ಕೈಗೊಳ್ಳಬೇಕು ಎಂದು ಅಖಿಲ ಭಾರತ ಅಡಿಕೆ ಬೆಳೆಗಾರರ ಸಂಘವು ಒತ್ತಾಯಿಸಿದೆ.
ಈ ವರ್ಷದ ಮಳೆಯ ಕಾರಣದಿಂದ ಅಡಿಕೆಗೆ ವ್ಯಾಪಕವಾಗಿ ಕೊಳೆರೋಗ ಬಾಧಿಸಿದೆ. ಅಡಿಕೆ ಬೆಳೆಗಾರರ ಸಂಘವು ನಡೆಸಿದ ಸರ್ವೆಯ ಪ್ರಕಾರ ಈ ಬಾರಿ ಕೃಷಿಕರಿಗೆ ಶೇ.50 ಕ್ಕಿಂತಲೂ ಅಧಿಕ ಪ್ರಮಾಣದಲ್ಲಿ ಅಡಿಕೆ ಬೆಳೆ ನಷ್ಟವಾಗಿದೆ. ಬೆಳೆಗಾರರು ಈಗ ಸಂಕಷ್ಟದಲ್ಲಿದ್ದಾರೆ.  ಶೇ.95 ರಷ್ಟು ಅಡಿಕೆ ಬೆಳೆಗಾರರು ಈ ಬಾರಿ ಕೊಳೆರೋಗದ ಸಂಕಷ್ಟ ಎದುರಿಸುತ್ತಿದ್ದಾರೆ. ಶೇ.85 ರಷ್ಟು ಕೃಷಿಕರಿಗೆ ಮಳೆಯ ಕಾರಣದಿಂದ ಕೊಳೆರೋಗ ತಡೆಗೆ ಬೋರ್ಡೋ ಸಿಂಪಡಣೆಗೆ ಸಾಧ್ಯವಾಗಿಲ್ಲ. ಈಗ ಕೊಳೆರೋಗ ನಿಯಂತ್ರಣಕ್ಕೆ ಇನ್ನಿಲ್ಲದ ಪ್ರಯತ್ನ ನಡೆಸುತ್ತಿದ್ದಾರೆ. ಕೊಳೆರೋಗ ನಿಯಂತ್ರಣಕ್ಕೆ ಮೂರನೇ ಸುತ್ತಿನ ಔಷಧಿ ಸಿಂಪಡಣೆಗೂ ಪ್ರಯತ್ನ ನಡೆಯುತ್ತಿದೆ. ಕಳೆದ ವರ್ಷವೂ ಹಲವು ಕಡೆ ಇಳುವರಿಯ ಕೊರತೆಯೂ ಇತ್ತು. ಇದೀಗ ವ್ಯಾಪಕವಾದ ಕೊಳೆರೋಗದಿಂದ ಸಂಕಷ್ಟ ಎದುರಿಸುತ್ತಿದ್ದಾರೆ. ಈಗ ಕೊಳೆರೋಗ ನಿಯಂತ್ರಣಕ್ಕೆ ಔಷಧಿ ಸಿಂಪಡಣೆ ಮಾಡಲೇಬೇಕಾಗಿದೆ. ಈ ಹಂತದಲ್ಲಿ ಬೆಳೆಗಾರರಿಗೆ ಆರ್ಥಿಕ ನೆರವು ಕೂಡಾ ಅಗತ್ಯ ಇದೆ. ಹೀಗಾಗಿ, ಕಳೆದ ಸಾಲಿನಲ್ಲಿ ಹವಾಮಾನ ಆಧಾರಿತ ಬೆಳೆ ವಿಮೆ ಕಟ್ಟಿರುವ  ಬೆಳೆಗಾರರಿಗೆ ತಕ್ಷಣವೇ ಬೆಳೆ ವಿಮೆ ಪಾವತಿಗೆ ವ್ಯವಸ್ಥೆ ಮಾಡುವುದರ ಜೊತೆಗೆ ಬೆಳೆ ವಿಮೆ ಪಾವತಿಗೆ ಸಾಧ್ಯವಾಗದ ಅಡಿಕೆ ಬೆಳೆಗಾರರಿಗೆ ನಷ್ಟದ ಪರಿಹಾರ ಕ್ರಮವಾಗಿ ತಕ್ಷಣವೇ ಸರ್ಕಾರವು ಇಲಾಖೆಗಳ ಮೂಲಕ ಮುಂದಿನ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಅಖಿಲ ಭಾರತ ಅಡಿಕೆ ಬೆಳೆಗಾರರು ಸಂಘವು ಒತ್ತಾಯಿಸಿದೆ.
ಹವಾಮಾನ ಆಧಾರಿತ ಬೆಳೆವಿಮೆಯ ಕಳೆದ ಸಾಲಿನ ವಿಮಾ ವರ್ಷವು ಅಂತ್ಯವಾಗಿದೆ. ಈಗ ಜಿಲ್ಲಾಧಿಕಾರಿಗಳ ನೇತೃತ್ವದ ಸಮಿತಿ ದಾಖಲೆಗಳನ್ನು ಪರಿಶೀಲಿಸಿ ವಿಮೆ ಬಿಡುಗಡೆಗೆ ತಕ್ಷಣದ ಕ್ರಮ ಆಗಬೇಕಾಗಿದೆ. ಈ ಹಂತಗಳನ್ನು ತಕ್ಷಣವೇ ಮಾಡಬೇಕಾಗಿದೆ. ಕಳೆದ ಒಂದೆರಡು ವರ್ಷಗಳಿಂದ ಅಕ್ಟೋಬರ್‌ ಅಂತ್ಯ ಅಥವಾ ನವೆಂಬರ್‌  ತಿಂಗಳಲ್ಲಿ ವಿಮೆ ಹಣ ಬಿಡುಗಡೆಯಾಗುತ್ತಿದೆ. ಇಲಾಖೆಗಳ  ಬಳಿ ಹವಾಮಾನದ ಡಾಟಾಗಳು ಇರುವುದರಿಂದ ತಕ್ಷಣವೇ ಮುಂದಿನ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಬೆಳೆಗಾರರ ಸಂಘವು ಒತ್ತಾಯಿಸಿದೆ.  ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿ ಮತ್ತು ನ್ಯೂಸ್ ಎಲರ್ಟ್ ಗಾಗಿ  ನಮ್ಮ WhatsApp Channel ಗೆ ಇಲ್ಲಿ ಕ್ಲಿಕ್‌ ಮಾಡಿ ಸೇರಿಕೊಳ್ಳಿ…
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಅಭಿವೃದ್ಧಿ ಹೆಸರಿನಲ್ಲಿ ಮರಗಳನ್ನು ಕಡಿಯುವುದಿಲ್ಲ

ಮೈಸೂರು ಜಿಲ್ಲೆಯ ಮೇಲ್ಸೇತುವೆ ಕಾಮಗಾರಿಗಳ ವೇಳೆ ಯಾವುದೇ ಮರಗಳನ್ನು ಕಡಿಯುವುದಿಲ್ಲ ಎಂದು ಸಂಸದ…

2 hours ago

ರಾಜ್ಯದ ಹಲವೆಡೆ ಮಳೆ; ಕುಕನೂರಿನಲ್ಲಿ 7 ಸೆಂ.ಮೀ ಮಳೆ

ರಾಜ್ಯದ ಒಳನಾಡಿನ ಕೆಲವೆಡೆ ಮಳೆಯಾಗಿದ್ದು, ಕುಕನೂರಿನಲ್ಲಿ 7 ಸೆಂ.ಮೀ ಮಳೆಯಾಗಿದೆ. ಕಲಬುರಗಿಯಲ್ಲಿ 41…

2 hours ago

ಹವಾಮಾನ ವರದಿ | 07-05-2026 | ಕರ್ನಾಟಕದಲ್ಲಿ ಪೂರ್ವ ಮುಂಗಾರು ಚುರುಕು : ಕರಾವಳಿ-ಮಲೆನಾಡಿನಲ್ಲಿ ಮುಂದಿನ 10 ದಿನ ಮಳೆ ಸಾಧ್ಯತೆ,

08.05.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆಯ ಪ್ರಕಾರ ರಾಜ್ಯದ ಹಲವು…

19 hours ago

ಕೆಲವು ರಾಜ್ಯಗಳಲ್ಲಿ ಸುಡುವ ಬಿಸಿಲು, ಇನ್ನೂ ಕೆಲವು ಕಡೆ ಮಳೆ – ದೇಶಾದ್ಯಂತ ಹವಾಮಾನ ವೈಪರೀತ್ಯ

ದೇಶದ ಹಲವೆಡೆ ಬಿಸಿಗಾಳಿ ತೀವ್ರವಾಗಿದ್ದು, ಕೆಲ ರಾಜ್ಯಗಳಲ್ಲಿ ಮಳೆ ಹಾಗೂ ಮೋಡ ಕವಿದ…

1 day ago

ಪರಿಸರ ಸಂರಕ್ಷಣೆಯಿಂದ ಮಾತ್ರ ಸುಸ್ಥಿರ ಆರೋಗ್ಯ ಸಾಧ್ಯ

ಪರಿಸರ ಮಾಲಿನ್ಯ ಮತ್ತು ಹಸಿರು ಹೊದಿಕೆ ನಾಶದಿಂದ ಆರೋಗ್ಯ ಸಮಸ್ಯೆಗಳು ಹೆಚ್ಚುತ್ತಿವೆ. ಪ್ರಕೃತಿ…

1 day ago

ಸ್ಥಳೀಯ ಸಂಸ್ಥೆ ಚುನಾವಣೆ ಶೀಘ್ರ – ಮುಖ್ಯಮಂತ್ರಿ ಸಿದ್ದರಾಮಯ್ಯ

ರಾಜ್ಯದಲ್ಲಿ ಬಾಕಿ ಇರುವ ಸ್ಥಳೀಯ ಸಂಸ್ಥೆ ಚುನಾವಣೆಗಳನ್ನು ಶೀಘ್ರದಲ್ಲೇ ನಡೆಸಲು ಸರ್ಕಾರ ಸಿದ್ಧವಿದೆ…

1 day ago