Advertisement
MIRROR FOCUS

ಅಡಿಕೆಗೆ ವ್ಯಾಪಕ ಕೊಳೆರೋಗ | ಹವಾಮಾನ ಆಧಾರಿತ  ಬೆಳೆವಿಮೆ ತಕ್ಷಣವೇ ಬಿಡುಗಡೆಗೆ ಕ್ರಮ ಕೈಗೊಳ್ಳಲು ಒತ್ತಾಯ

Share
ರಾಜ್ಯದಲ್ಲಿ ಈ ಬಾರಿ ಮಳೆಯ ಕಾರಣದಿಂದ ಅಡಿಕೆ ಬೆಳೆಗಾರರು ಕೊಳೆರೋಗದಿಂದ ಸಂಕಷ್ಟ ಒಳಗಾಗಿದ್ದಾರೆ. ಈಗಾಗಲೇ ಕಳೆದ ಸಾಲಿನ ಹವಾಮಾನ ಆಧಾರಿತ ಬೆಳೆ ವಿಮಾ ವರ್ಷವೂ ಅಂತ್ಯವಾಗಿದ್ದು, ತಕ್ಷಣವೇ ಹವಾಮಾನ ಆಧಾರಿತ ಬೆಳೆ ವಿಮೆ ಬಿಡುಗಡೆಗೆ ಕ್ರಮ ಕೈಗೊಳ್ಳಬೇಕು ಎಂದು ಅಖಿಲ ಭಾರತ ಅಡಿಕೆ ಬೆಳೆಗಾರರ ಸಂಘವು ಒತ್ತಾಯಿಸಿದೆ.
ಈ ವರ್ಷದ ಮಳೆಯ ಕಾರಣದಿಂದ ಅಡಿಕೆಗೆ ವ್ಯಾಪಕವಾಗಿ ಕೊಳೆರೋಗ ಬಾಧಿಸಿದೆ. ಅಡಿಕೆ ಬೆಳೆಗಾರರ ಸಂಘವು ನಡೆಸಿದ ಸರ್ವೆಯ ಪ್ರಕಾರ ಈ ಬಾರಿ ಕೃಷಿಕರಿಗೆ ಶೇ.50 ಕ್ಕಿಂತಲೂ ಅಧಿಕ ಪ್ರಮಾಣದಲ್ಲಿ ಅಡಿಕೆ ಬೆಳೆ ನಷ್ಟವಾಗಿದೆ. ಬೆಳೆಗಾರರು ಈಗ ಸಂಕಷ್ಟದಲ್ಲಿದ್ದಾರೆ.  ಶೇ.95 ರಷ್ಟು ಅಡಿಕೆ ಬೆಳೆಗಾರರು ಈ ಬಾರಿ ಕೊಳೆರೋಗದ ಸಂಕಷ್ಟ ಎದುರಿಸುತ್ತಿದ್ದಾರೆ. ಶೇ.85 ರಷ್ಟು ಕೃಷಿಕರಿಗೆ ಮಳೆಯ ಕಾರಣದಿಂದ ಕೊಳೆರೋಗ ತಡೆಗೆ ಬೋರ್ಡೋ ಸಿಂಪಡಣೆಗೆ ಸಾಧ್ಯವಾಗಿಲ್ಲ. ಈಗ ಕೊಳೆರೋಗ ನಿಯಂತ್ರಣಕ್ಕೆ ಇನ್ನಿಲ್ಲದ ಪ್ರಯತ್ನ ನಡೆಸುತ್ತಿದ್ದಾರೆ. ಕೊಳೆರೋಗ ನಿಯಂತ್ರಣಕ್ಕೆ ಮೂರನೇ ಸುತ್ತಿನ ಔಷಧಿ ಸಿಂಪಡಣೆಗೂ ಪ್ರಯತ್ನ ನಡೆಯುತ್ತಿದೆ. ಕಳೆದ ವರ್ಷವೂ ಹಲವು ಕಡೆ ಇಳುವರಿಯ ಕೊರತೆಯೂ ಇತ್ತು. ಇದೀಗ ವ್ಯಾಪಕವಾದ ಕೊಳೆರೋಗದಿಂದ ಸಂಕಷ್ಟ ಎದುರಿಸುತ್ತಿದ್ದಾರೆ. ಈಗ ಕೊಳೆರೋಗ ನಿಯಂತ್ರಣಕ್ಕೆ ಔಷಧಿ ಸಿಂಪಡಣೆ ಮಾಡಲೇಬೇಕಾಗಿದೆ. ಈ ಹಂತದಲ್ಲಿ ಬೆಳೆಗಾರರಿಗೆ ಆರ್ಥಿಕ ನೆರವು ಕೂಡಾ ಅಗತ್ಯ ಇದೆ. ಹೀಗಾಗಿ, ಕಳೆದ ಸಾಲಿನಲ್ಲಿ ಹವಾಮಾನ ಆಧಾರಿತ ಬೆಳೆ ವಿಮೆ ಕಟ್ಟಿರುವ  ಬೆಳೆಗಾರರಿಗೆ ತಕ್ಷಣವೇ ಬೆಳೆ ವಿಮೆ ಪಾವತಿಗೆ ವ್ಯವಸ್ಥೆ ಮಾಡುವುದರ ಜೊತೆಗೆ ಬೆಳೆ ವಿಮೆ ಪಾವತಿಗೆ ಸಾಧ್ಯವಾಗದ ಅಡಿಕೆ ಬೆಳೆಗಾರರಿಗೆ ನಷ್ಟದ ಪರಿಹಾರ ಕ್ರಮವಾಗಿ ತಕ್ಷಣವೇ ಸರ್ಕಾರವು ಇಲಾಖೆಗಳ ಮೂಲಕ ಮುಂದಿನ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಅಖಿಲ ಭಾರತ ಅಡಿಕೆ ಬೆಳೆಗಾರರು ಸಂಘವು ಒತ್ತಾಯಿಸಿದೆ.
ಹವಾಮಾನ ಆಧಾರಿತ ಬೆಳೆವಿಮೆಯ ಕಳೆದ ಸಾಲಿನ ವಿಮಾ ವರ್ಷವು ಅಂತ್ಯವಾಗಿದೆ. ಈಗ ಜಿಲ್ಲಾಧಿಕಾರಿಗಳ ನೇತೃತ್ವದ ಸಮಿತಿ ದಾಖಲೆಗಳನ್ನು ಪರಿಶೀಲಿಸಿ ವಿಮೆ ಬಿಡುಗಡೆಗೆ ತಕ್ಷಣದ ಕ್ರಮ ಆಗಬೇಕಾಗಿದೆ. ಈ ಹಂತಗಳನ್ನು ತಕ್ಷಣವೇ ಮಾಡಬೇಕಾಗಿದೆ. ಕಳೆದ ಒಂದೆರಡು ವರ್ಷಗಳಿಂದ ಅಕ್ಟೋಬರ್‌ ಅಂತ್ಯ ಅಥವಾ ನವೆಂಬರ್‌  ತಿಂಗಳಲ್ಲಿ ವಿಮೆ ಹಣ ಬಿಡುಗಡೆಯಾಗುತ್ತಿದೆ. ಇಲಾಖೆಗಳ  ಬಳಿ ಹವಾಮಾನದ ಡಾಟಾಗಳು ಇರುವುದರಿಂದ ತಕ್ಷಣವೇ ಮುಂದಿನ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಬೆಳೆಗಾರರ ಸಂಘವು ಒತ್ತಾಯಿಸಿದೆ.  ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿ ಮತ್ತು ನ್ಯೂಸ್ ಎಲರ್ಟ್ ಗಾಗಿ  ನಮ್ಮ WhatsApp Channel ಗೆ ಇಲ್ಲಿ ಕ್ಲಿಕ್‌ ಮಾಡಿ ಸೇರಿಕೊಳ್ಳಿ…
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 30.05.2026 | ಕರಾವಳಿಯಲ್ಲಿ ತುಂತುರು ಮಳೆ, ಜೂ.7ರ ಸುಮಾರಿಗೆ ಮುಂಗಾರು ಪ್ರವೇಶ ಸಾಧ್ಯತೆ| ಆರಂಭ ದುರ್ಬಲವಾಗುವ ಲಕ್ಷಣ

31.05.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆಯ ಪ್ರಕಾರ, ರಾಜ್ಯದ ವಿವಿಧ…

5 hours ago

ಅಡಿಕೆ ಹಳದಿ ಎಲೆ ರೋಗಕ್ಕೆ ಶಾಶ್ವತ ಪರಿಹಾರದ ಭರವಸೆ..! ಟಿಶ್ಯೂ ಕಲ್ಚರ್‌ನಲ್ಲಿ ಮೊದಲ ಹಂತದ ಅಡಿಕೆ ಗಿಡಗಳು ನಾಟಿಗೆ ಸಿದ್ಧ

ಅಡಿಕೆ ಹಳದಿ ಎಲೆ ರೋಗ ನಿರೋಧಕ ಟಿಶ್ಯೂ ಕಲ್ಚರ್‌ ತಳಿ ಅಭಿವೃದ್ಧಿಯಲ್ಲಿ ಸಿಪಿಸಿಆರ್‌ಐ…

14 hours ago

ಈ ಬಾರಿಯ ಮುಂಗಾರು ದುರ್ಬಲವೇ..? ಐಎಂಡಿ ಎರಡನೇ ಮುನ್ಸೂಚನೆ ಬಿಡುಗಡೆ – 11 ವರ್ಷಗಳಲ್ಲೇ ಅತೀ ದುರ್ಬಲ ಮುಂಗಾರು ಸಾಧ್ಯತೆ..?

ಐಎಂಡಿ ಬಿಡುಗಡೆ ಮಾಡಿದ ಎರಡನೇ ಮುಂಗಾರು ಮುನ್ಸೂಚನೆಯಲ್ಲಿ ದೇಶದಲ್ಲಿ ಕೇವಲ 90% ಮಳೆಯ…

23 hours ago

ಹವಾಮಾನ ವರದಿ | 29.05.2026 | ಕರ್ನಾಟಕಕ್ಕೆ ಮುಂಗಾರು ಪ್ರವೇಶಕ್ಕೆ ಕ್ಷಣಗಣನೆ | ಜೂನ್ 7 ಬಳಿಕ ಕರಾವಳಿಯಲ್ಲಿ ಭಾರೀ ಮಳೆಯ ಸೂಚನೆ!

ಕರ್ನಾಟಕದಲ್ಲಿ ಮುಂಗಾರು ಪ್ರವೇಶದ ನಿರೀಕ್ಷೆ ಹೆಚ್ಚಾಗುತ್ತಿದ್ದು, ಸದ್ಯ ರಾಜ್ಯದ ಬಹುತೇಕ ಭಾಗಗಳಲ್ಲಿ ಬಿಸಿಲು…

1 day ago

ಭಾರತದಲ್ಲಿ 191 ಜಾತಿಯ ಜಿರಳೆಗಳು ದಾಖಲೆ – ವಿಜ್ಞಾನಿಗಳ ಹೊಸ ಅಧ್ಯಯನದಲ್ಲಿ ಬಹಿರಂಗವಾದ ಅಚ್ಚರಿಯ ಜೀವ ವೈವಿಧ್ಯ

ಭಾರತದಲ್ಲಿ 191 ಜಾತಿಯ ಜಿರಳೆಗಳು ದಾಖಲಾಗಿದ್ದು, ZSI ವಿಜ್ಞಾನಿಗಳು ದೇಶದ ಮೊದಲ ದೊಡ್ಡ…

2 days ago

ಜೈಸಲ್ಮೇರ್‌ ಘಟನೆ ಬಳಿಕ ಎಚ್ಚೆತ್ತ ಆಡಳಿತ | ಕೊಳೆತ ಸ್ಥಿತಿಯಲ್ಲಿದ್ದ ನೂರಾರು ಹಸುಗಳನ್ನು ಹೂಳುವ ಕಾರ್ಯ ಆರಂಭ

ಜೈಸಲ್ಮೇರ್‌ನಲ್ಲಿ ಬಯಲಿನಲ್ಲಿ ಪತ್ತೆಯಾಗಿದ್ದ ನೂರಾರು ಹಸುಗಳ ಶವಗಳ ಘಟನೆ ಬಳಿಕ ನಗರಸಭೆ ಶವಗಳನ್ನು…

2 days ago