Advertisement
MIRROR FOCUS

ಅಡಿಕೆಗೆ ವ್ಯಾಪಕ ಕೊಳೆರೋಗ | ಹವಾಮಾನ ಆಧಾರಿತ  ಬೆಳೆವಿಮೆ ತಕ್ಷಣವೇ ಬಿಡುಗಡೆಗೆ ಕ್ರಮ ಕೈಗೊಳ್ಳಲು ಒತ್ತಾಯ

Share
ರಾಜ್ಯದಲ್ಲಿ ಈ ಬಾರಿ ಮಳೆಯ ಕಾರಣದಿಂದ ಅಡಿಕೆ ಬೆಳೆಗಾರರು ಕೊಳೆರೋಗದಿಂದ ಸಂಕಷ್ಟ ಒಳಗಾಗಿದ್ದಾರೆ. ಈಗಾಗಲೇ ಕಳೆದ ಸಾಲಿನ ಹವಾಮಾನ ಆಧಾರಿತ ಬೆಳೆ ವಿಮಾ ವರ್ಷವೂ ಅಂತ್ಯವಾಗಿದ್ದು, ತಕ್ಷಣವೇ ಹವಾಮಾನ ಆಧಾರಿತ ಬೆಳೆ ವಿಮೆ ಬಿಡುಗಡೆಗೆ ಕ್ರಮ ಕೈಗೊಳ್ಳಬೇಕು ಎಂದು ಅಖಿಲ ಭಾರತ ಅಡಿಕೆ ಬೆಳೆಗಾರರ ಸಂಘವು ಒತ್ತಾಯಿಸಿದೆ.
ಈ ವರ್ಷದ ಮಳೆಯ ಕಾರಣದಿಂದ ಅಡಿಕೆಗೆ ವ್ಯಾಪಕವಾಗಿ ಕೊಳೆರೋಗ ಬಾಧಿಸಿದೆ. ಅಡಿಕೆ ಬೆಳೆಗಾರರ ಸಂಘವು ನಡೆಸಿದ ಸರ್ವೆಯ ಪ್ರಕಾರ ಈ ಬಾರಿ ಕೃಷಿಕರಿಗೆ ಶೇ.50 ಕ್ಕಿಂತಲೂ ಅಧಿಕ ಪ್ರಮಾಣದಲ್ಲಿ ಅಡಿಕೆ ಬೆಳೆ ನಷ್ಟವಾಗಿದೆ. ಬೆಳೆಗಾರರು ಈಗ ಸಂಕಷ್ಟದಲ್ಲಿದ್ದಾರೆ.  ಶೇ.95 ರಷ್ಟು ಅಡಿಕೆ ಬೆಳೆಗಾರರು ಈ ಬಾರಿ ಕೊಳೆರೋಗದ ಸಂಕಷ್ಟ ಎದುರಿಸುತ್ತಿದ್ದಾರೆ. ಶೇ.85 ರಷ್ಟು ಕೃಷಿಕರಿಗೆ ಮಳೆಯ ಕಾರಣದಿಂದ ಕೊಳೆರೋಗ ತಡೆಗೆ ಬೋರ್ಡೋ ಸಿಂಪಡಣೆಗೆ ಸಾಧ್ಯವಾಗಿಲ್ಲ. ಈಗ ಕೊಳೆರೋಗ ನಿಯಂತ್ರಣಕ್ಕೆ ಇನ್ನಿಲ್ಲದ ಪ್ರಯತ್ನ ನಡೆಸುತ್ತಿದ್ದಾರೆ. ಕೊಳೆರೋಗ ನಿಯಂತ್ರಣಕ್ಕೆ ಮೂರನೇ ಸುತ್ತಿನ ಔಷಧಿ ಸಿಂಪಡಣೆಗೂ ಪ್ರಯತ್ನ ನಡೆಯುತ್ತಿದೆ. ಕಳೆದ ವರ್ಷವೂ ಹಲವು ಕಡೆ ಇಳುವರಿಯ ಕೊರತೆಯೂ ಇತ್ತು. ಇದೀಗ ವ್ಯಾಪಕವಾದ ಕೊಳೆರೋಗದಿಂದ ಸಂಕಷ್ಟ ಎದುರಿಸುತ್ತಿದ್ದಾರೆ. ಈಗ ಕೊಳೆರೋಗ ನಿಯಂತ್ರಣಕ್ಕೆ ಔಷಧಿ ಸಿಂಪಡಣೆ ಮಾಡಲೇಬೇಕಾಗಿದೆ. ಈ ಹಂತದಲ್ಲಿ ಬೆಳೆಗಾರರಿಗೆ ಆರ್ಥಿಕ ನೆರವು ಕೂಡಾ ಅಗತ್ಯ ಇದೆ. ಹೀಗಾಗಿ, ಕಳೆದ ಸಾಲಿನಲ್ಲಿ ಹವಾಮಾನ ಆಧಾರಿತ ಬೆಳೆ ವಿಮೆ ಕಟ್ಟಿರುವ  ಬೆಳೆಗಾರರಿಗೆ ತಕ್ಷಣವೇ ಬೆಳೆ ವಿಮೆ ಪಾವತಿಗೆ ವ್ಯವಸ್ಥೆ ಮಾಡುವುದರ ಜೊತೆಗೆ ಬೆಳೆ ವಿಮೆ ಪಾವತಿಗೆ ಸಾಧ್ಯವಾಗದ ಅಡಿಕೆ ಬೆಳೆಗಾರರಿಗೆ ನಷ್ಟದ ಪರಿಹಾರ ಕ್ರಮವಾಗಿ ತಕ್ಷಣವೇ ಸರ್ಕಾರವು ಇಲಾಖೆಗಳ ಮೂಲಕ ಮುಂದಿನ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಅಖಿಲ ಭಾರತ ಅಡಿಕೆ ಬೆಳೆಗಾರರು ಸಂಘವು ಒತ್ತಾಯಿಸಿದೆ.
ಹವಾಮಾನ ಆಧಾರಿತ ಬೆಳೆವಿಮೆಯ ಕಳೆದ ಸಾಲಿನ ವಿಮಾ ವರ್ಷವು ಅಂತ್ಯವಾಗಿದೆ. ಈಗ ಜಿಲ್ಲಾಧಿಕಾರಿಗಳ ನೇತೃತ್ವದ ಸಮಿತಿ ದಾಖಲೆಗಳನ್ನು ಪರಿಶೀಲಿಸಿ ವಿಮೆ ಬಿಡುಗಡೆಗೆ ತಕ್ಷಣದ ಕ್ರಮ ಆಗಬೇಕಾಗಿದೆ. ಈ ಹಂತಗಳನ್ನು ತಕ್ಷಣವೇ ಮಾಡಬೇಕಾಗಿದೆ. ಕಳೆದ ಒಂದೆರಡು ವರ್ಷಗಳಿಂದ ಅಕ್ಟೋಬರ್‌ ಅಂತ್ಯ ಅಥವಾ ನವೆಂಬರ್‌  ತಿಂಗಳಲ್ಲಿ ವಿಮೆ ಹಣ ಬಿಡುಗಡೆಯಾಗುತ್ತಿದೆ. ಇಲಾಖೆಗಳ  ಬಳಿ ಹವಾಮಾನದ ಡಾಟಾಗಳು ಇರುವುದರಿಂದ ತಕ್ಷಣವೇ ಮುಂದಿನ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಬೆಳೆಗಾರರ ಸಂಘವು ಒತ್ತಾಯಿಸಿದೆ.  ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿ ಮತ್ತು ನ್ಯೂಸ್ ಎಲರ್ಟ್ ಗಾಗಿ  ನಮ್ಮ WhatsApp Channel ಗೆ ಇಲ್ಲಿ ಕ್ಲಿಕ್‌ ಮಾಡಿ ಸೇರಿಕೊಳ್ಳಿ…
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಆಹಾರ-ನಿದ್ರೆ ಪರಸ್ಪರ ಪೂರಕ; ಉತ್ತಮ ನಿದ್ರೆಗೆ ಹಸಿವು ಅಗತ್ಯ: ರಾಘವೇಶ್ವರ ಶ್ರೀ

ಉತ್ತಮ ಆರೋಗ್ಯಕ್ಕೆ ಸರಿಯಾದ ಆಹಾರ ಮತ್ತು ನಿದ್ರೆ ಎರಡೂ ಅವಿಭಾಜ್ಯ ಎಂದು ಶ್ರೀ…

3 hours ago

ಕೃಷಿಕರ ಮಿತ್ರ ಸಾಯಿಶೇಖರ್‌ ಕರಿಕಳ ಅವರಿಗೆ ರೈತ ರತ್ನ ಪ್ರಶಸ್ತಿ

ಮಳೆ ಮಾಹಿತಿ ಮೂಲಕ ಕೃಷಿಕರಿಗೆ ನೆರವಾಗುತ್ತಿರುವ ಸಾಯಿಶೇಖರ್‌ ಕರಿಕಳ ಅವರಿಗೆ ರೈತ ರತ್ನ…

3 hours ago

ಮಂಗಳೂರಿನಲ್ಲಿ ರಾಷ್ಟ್ರೀಯ ಚೆಸ್ ಚಾಂಪಿಯನ್ ಶಿಪ್‌ಗೆ ಚಾಲನೆ – 28 ರಾಜ್ಯ–ಕೇಂದ್ರಾಡಳಿತ ಪ್ರದೇಶಗಳಿಂದ 644 ಬಾಲಕಿ-ಬಾಲಕಿಯರು

ಮಂಗಳೂರಿನಲ್ಲಿ ರಾಷ್ಟ್ರೀಯ ಅಂಡರ್‌-11 ಚೆಸ್ ಚಾಂಪಿಯನ್ಶಿಪ್‌ಗೆ ಭವ್ಯ ಚಾಲನೆ ದೊರೆತಿದ್ದು, ದೇಶದ 28…

4 hours ago

ಹವಾಮಾನ ವರದಿ | 02-08-2026 | ಕರಾವಳಿಯಲ್ಲಿ ಮಳೆ ಇಳಿಮುಖ ..? ರಾಜ್ಯದಲ್ಲಿ ಮುಂಗಾರು ಸ್ಥಿತಿ ಏನು..?

ರಾಜ್ಯದ ಕರಾವಳಿ ಮತ್ತು ಮಲೆನಾಡಿನಲ್ಲಿ ಮಳೆಯ ತೀವ್ರತೆ ಇಳಿಮುಖವಾಗಲಿದ್ದು, ಆಗಸ್ಟ್‌ 3ರಿಂದ ತೋಟದ…

6 hours ago

ಭಾರೀ ಮಳೆಯ ಎಚ್ಚರಿಕೆ : 24 ಗಂಟೆ ಸನ್ನದ್ಧವಾಗಿರಲು ಡಿಸಿ ಸೂಚನೆ, ಭೂಕುಸಿತ ಪ್ರದೇಶಗಳ ಮೇಲೆ ಕಟ್ಟೆಚ್ಚರ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ಎಲ್ಲಾ ಇಲಾಖೆಗಳನ್ನು 24…

18 hours ago

ಹುಬ್ಬಳ್ಳಿಯಲ್ಲಿ ಹಲಸು ಮೇಳಕ್ಕೆ ಚಾಲನೆ – 50ಕ್ಕೂ ಹೆಚ್ಚು ಮಳಿಗೆಗಳು, ಹಲಸಿನ ಬಿರಿಯಾನಿಯಿಂದ ಕಬಾಬ್‌ವರೆಗೆ ಸವಿಯುವ ಅವಕಾಶ

ಹುಬ್ಬಳ್ಳಿಯಲ್ಲಿ ಆರಂಭವಾದ ಮೂರು ದಿನಗಳ ಹಲಸು ಮೇಳಕ್ಕೆ ಜನರಿಂದ ಉತ್ತಮ ಸ್ಪಂದನೆ ವ್ಯಕ್ತವಾಗಿದೆ.…

18 hours ago