ಕೊಡಗಿನ ತಲಕಾವೇರಿಯಲ್ಲಿ ತೀರ್ಥೋದ್ಭವ | ಸಹಸ್ರಾರು ಯಾತ್ರಾರ್ಥಿಗಳಿಂದ ಪುಣ್ಯಸ್ನಾನ

October 17, 2024
7:37 PM

ಕೊಡಗು ಜಿಲ್ಲೆಯ ತಲಕಾವೇರಿ ಕ್ಷೇತ್ರದಲ್ಲಿ ಇಂದು ಬೆಳಗ್ಗೆ 7.40 ಸುಮಾರಿಗೆ ಸರಿಯಾಗಿ ಕಾವೇರಿ ತೀರ್ಥೋದ್ಭವ ಜರುಗಿದೆ.  ಬ್ರಹ್ಮಗಿರಿ ತಪ್ಪಲಿನ ಕಾವೇರಿ ಕುಂಡಿಕೆಯಲ್ಲಿ ಕಾವೇರಿ ತೀರ್ಥಸ್ವರೂಪಿಣಿಯಾದ ಸಂದರ್ಭವನ್ನು ಸಹಸ್ರಾರು ಮಂದಿ ಈ ಕ್ಷಣವನ್ನು ಕಣ್ತುಂಬಿಕೊಂಡರು. 

ಪುಟ್ಟ ಕುಂಡಿಕೆಯಲ್ಲಿ ಕಾವೇರಿ ನದಿ ನೀರು, ಉಕ್ಕಿದ ಸಂದರ್ಭದಲ್ಲಿ ಯಾತ್ರಿಗಳು ಭಾವಪರವಶರಾದರು, ಕ್ಷೇತ್ರದ ಪ್ರಧಾನ ಅರ್ಚಕ ಪ್ರಶಾಂತ್ ಆಚಾರ್ ನೇತೃತ್ವದಲ್ಲಿ ಅರ್ಚಕರು ಸಾಂಪ್ರದಾಯಿಕ ಪೂಜಾ ವಿಧಿವಿಧಾನಗಳನ್ನು ನೆರವೇರಿಸಿತು. ತಲಕಾವೇರಿಯಲ್ಲಿ ತೀರ್ಥೋದ್ಭವದ ಪುಣ್ಯ ಕ್ಷಣಕ್ಕಾಗಿ ಕಾಯುತ್ತಿದ್ದ ಭಕ್ತರ ಮೇಲೆ ಅರ್ಚಕರು ಕಾವೇರಿ ತೀರ್ಥವನ್ನು ಪ್ರೋಕ್ಷಿಸಿದರು.

ಕಾವೇರಿ ತೀರ್ಥೋದ್ಭವಕ್ಕೆ ಕೊಡಗು ಜಿಲ್ಲಾಡಳಿತದಿಂದ ಸಕಲ ಸಿದ್ದತೆ ಕೈಗೊಳ್ಳಲಾಗಿತ್ತು, ತಲಕಾವೇರಿಯಲ್ಲಿ ಯಾತ್ರಾರ್ಥಿಗಳಿಗೆ ಮೂಲಸೌಲಭ್ಯಗಳನ್ನು ಕಲ್ಪಿಸಲಾಗಿದ್ದು ಇನ್ನು ಒಂದು ತಿಂಗಳ ಕಾಲ ತಲಕಾವೇರಿ – ಭಾಗಮಂಡಲದಲ್ಲಿ ಕಾವೇರಿ ಜಾತ್ರೆಯ ಸಂಭ್ರಮ ಕಂಡುಬರಲಿದೆ.

ಈ ವರ್ಷ ತಲಕಾವೇರಿ ಮತ್ತು ಭಾಗಮಂಡಲ ಕ್ಷೇತ್ರಗಳಲ್ಲಿ ಕಾವೇರಿ ತೀರ್ಥ ಸಂಗ್ರಹಣೆಗಾಗಿ ಪ್ಲಾಸ್ಟಿಕ್ ಬಿಂದಿಗೆ, ಬಾಟಲಿಗಳನ್ನು ಸರ್ಕಾರ ನಿಷೇಧ ಮಾಡಿದೆ,   ಭಾಗಮಂಡಲದಿಂದ ತಲಕಾವೇರಿಗೆ ದಿನವಿಡೀ ಯಾತ್ರಿಗಳು ಸಾಗರೋಪಾದಿಯಲ್ಲಿ ಕಾವೇರಿ ತೀರ್ಥ ಪಡೆಯಲು ತೆರಳುತ್ತಿದ್ದಾರೆ.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಹಸುವಿನ ಹಾಲಿಗೆ ಬದಲಾಗಿ ‘ಲ್ಯಾಬ್‌ ಹಾಲು’ – ಇನ್ನು ಕೇವಲ ವಿಜ್ಞಾನಕಲ್ಪನೆ ಅಲ್ಲ..! ಹೊಸ ಅಧ್ಯಯನದ ಲೆಕ್ಕಾಚಾರ
September 12, 2026
7:30 AM
by: ದ ರೂರಲ್ ಮಿರರ್.ಕಾಂ
ಅಡಿಕೆಗೆ ಉತ್ತಮ ಬೆಲೆ , ಆದರೂ ಬೆಳೆಗಾರರ ಚಿಂತೆ ಮುಂದುವರಿದಿದೆ – ಕಾರಣವೇನು?
September 12, 2026
7:08 AM
by: ದ ರೂರಲ್ ಮಿರರ್.ಕಾಂ
ಚಂಡಮಾರುತಗಳು ಏಕೆ ಕಡಿಮೆಯಾಗುತ್ತಿವೆ? ಎಲ್ ನಿನೋದಿಂದ ಮಳೆ–ಬಿಸಿಲಿನ ಚಿತ್ರಣ ಬದಲಾಗುತ್ತಿದೆಯೇ?
September 11, 2026
8:34 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 11-09-2026 | ಸೆ.12ರಿಂದ ಬಿಸಿಲು ಹೆಚ್ಚಳ, ಕೆಲವೆಡೆ ಮಳೆ ಸಾಧ್ಯತೆ
September 11, 2026
4:00 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror