Advertisement
ಧಾರ್ಮಿಕ

ಕೊಡಗಿನ ತಲಕಾವೇರಿಯಲ್ಲಿ ತೀರ್ಥೋದ್ಭವ | ಸಹಸ್ರಾರು ಯಾತ್ರಾರ್ಥಿಗಳಿಂದ ಪುಣ್ಯಸ್ನಾನ

Share

ಕೊಡಗು ಜಿಲ್ಲೆಯ ತಲಕಾವೇರಿ ಕ್ಷೇತ್ರದಲ್ಲಿ ಇಂದು ಬೆಳಗ್ಗೆ 7.40 ಸುಮಾರಿಗೆ ಸರಿಯಾಗಿ ಕಾವೇರಿ ತೀರ್ಥೋದ್ಭವ ಜರುಗಿದೆ.  ಬ್ರಹ್ಮಗಿರಿ ತಪ್ಪಲಿನ ಕಾವೇರಿ ಕುಂಡಿಕೆಯಲ್ಲಿ ಕಾವೇರಿ ತೀರ್ಥಸ್ವರೂಪಿಣಿಯಾದ ಸಂದರ್ಭವನ್ನು ಸಹಸ್ರಾರು ಮಂದಿ ಈ ಕ್ಷಣವನ್ನು ಕಣ್ತುಂಬಿಕೊಂಡರು. 

ಪುಟ್ಟ ಕುಂಡಿಕೆಯಲ್ಲಿ ಕಾವೇರಿ ನದಿ ನೀರು, ಉಕ್ಕಿದ ಸಂದರ್ಭದಲ್ಲಿ ಯಾತ್ರಿಗಳು ಭಾವಪರವಶರಾದರು, ಕ್ಷೇತ್ರದ ಪ್ರಧಾನ ಅರ್ಚಕ ಪ್ರಶಾಂತ್ ಆಚಾರ್ ನೇತೃತ್ವದಲ್ಲಿ ಅರ್ಚಕರು ಸಾಂಪ್ರದಾಯಿಕ ಪೂಜಾ ವಿಧಿವಿಧಾನಗಳನ್ನು ನೆರವೇರಿಸಿತು. ತಲಕಾವೇರಿಯಲ್ಲಿ ತೀರ್ಥೋದ್ಭವದ ಪುಣ್ಯ ಕ್ಷಣಕ್ಕಾಗಿ ಕಾಯುತ್ತಿದ್ದ ಭಕ್ತರ ಮೇಲೆ ಅರ್ಚಕರು ಕಾವೇರಿ ತೀರ್ಥವನ್ನು ಪ್ರೋಕ್ಷಿಸಿದರು.

ಕಾವೇರಿ ತೀರ್ಥೋದ್ಭವಕ್ಕೆ ಕೊಡಗು ಜಿಲ್ಲಾಡಳಿತದಿಂದ ಸಕಲ ಸಿದ್ದತೆ ಕೈಗೊಳ್ಳಲಾಗಿತ್ತು, ತಲಕಾವೇರಿಯಲ್ಲಿ ಯಾತ್ರಾರ್ಥಿಗಳಿಗೆ ಮೂಲಸೌಲಭ್ಯಗಳನ್ನು ಕಲ್ಪಿಸಲಾಗಿದ್ದು ಇನ್ನು ಒಂದು ತಿಂಗಳ ಕಾಲ ತಲಕಾವೇರಿ – ಭಾಗಮಂಡಲದಲ್ಲಿ ಕಾವೇರಿ ಜಾತ್ರೆಯ ಸಂಭ್ರಮ ಕಂಡುಬರಲಿದೆ.

ಈ ವರ್ಷ ತಲಕಾವೇರಿ ಮತ್ತು ಭಾಗಮಂಡಲ ಕ್ಷೇತ್ರಗಳಲ್ಲಿ ಕಾವೇರಿ ತೀರ್ಥ ಸಂಗ್ರಹಣೆಗಾಗಿ ಪ್ಲಾಸ್ಟಿಕ್ ಬಿಂದಿಗೆ, ಬಾಟಲಿಗಳನ್ನು ಸರ್ಕಾರ ನಿಷೇಧ ಮಾಡಿದೆ,   ಭಾಗಮಂಡಲದಿಂದ ತಲಕಾವೇರಿಗೆ ದಿನವಿಡೀ ಯಾತ್ರಿಗಳು ಸಾಗರೋಪಾದಿಯಲ್ಲಿ ಕಾವೇರಿ ತೀರ್ಥ ಪಡೆಯಲು ತೆರಳುತ್ತಿದ್ದಾರೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 15-04-2026 | ಕರ್ನಾಟಕದಲ್ಲಿ ಬಿಸಿಗಾಳಿಯ ನಡುವೆ ಮಳೆಯ ಸುಳಿವು – ಏಪ್ರಿಲ್ 18 ರಿಂದ ಮಳೆ…!

ಕರ್ನಾಟಕದಲ್ಲಿ ಏಪ್ರಿಲ್ 18ರಿಂದ ಹಂತ ಹಂತವಾಗಿ ಮಳೆಯ ಚಟುವಟಿಕೆ ಆರಂಭವಾಗುವ ಸಾಧ್ಯತೆ ಇದೆ.…

8 hours ago

ವಿಷು ಹಬ್ಬದ ಅರ್ಥವೇನು ಗೊತ್ತಾ..? ಸೂರ್ಯ ಸಂಕ್ರಮಣದ ಈ ರಹಸ್ಯ ನಿಮ್ಮ ಜೀವನವೇ ಬದಲಾಯಿಸಬಹುದು..!

ವಿಷು ಹಬ್ಬವು ಸೂರ್ಯನ ಮೇಷ ಸಂಕ್ರಮಣದೊಂದಿಗೆ ಸಂಬಂಧಿಸಿದ ಆಧ್ಯಾತ್ಮಿಕ ಹಬ್ಬವಾಗಿದೆ. ವಿಷು ಕಣಿ…

14 hours ago

ಬೇಸಿಗೆ ಬಿತ್ತನೆ ಭರ್ಜರಿ ಏರಿಕೆ..! 64 ಲಕ್ಷ ಹೆಕ್ಟೇರ್ ದಾಟಿದ ಕೃಷಿ ವ್ಯಾಪ್ತಿ, 0.77 ಲಕ್ಷ ಹೆಕ್ಟೇರ್ ಹೆಚ್ಚಳ

ಈ ವರ್ಷ ಬೇಸಿಗೆ ಬಿತ್ತನೆ 64 ಲಕ್ಷ ಹೆಕ್ಟೇರ್ ದಾಟಿದ್ದು, ಕಳೆದ ವರ್ಷಕ್ಕಿಂತ…

14 hours ago

ಮುಂದಿನ 5 ದಿನ ತಾಪಮಾನ ಏರಿಕೆ ಎಚ್ಚರಿಕೆ ! ಉತ್ತರ-ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಬಿಸಿಗಾಳಿ ತೀವ್ರ

ಮುಂದಿನ ಐದು ದಿನಗಳಲ್ಲಿ ಉತ್ತರ ಹಾಗೂ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ತಾಪಮಾನ ಹೆಚ್ಚಾಗಲಿದೆ…

1 day ago

ಹವಾಮಾನ ವರದಿ | 14-04-2026 | ಕರ್ನಾಟಕದಲ್ಲಿ ಉರಿಬಿಸಿಲು…! ಆದರೆ ಮಳೆಯೂ ಬರುತ್ತಿದೆ ! ಯಾವಾಗ ಗೊತ್ತಾ? – ಸದ್ಯ ರೈತರಿಗೆ ಸಲಹೆ ಏನು..?

ರಾಜ್ಯದಲ್ಲಿ ಬಿಸಿಲಿನ ತೀವ್ರತೆ ಮುಂದುವರಿದಿದ್ದು, ಏಪ್ರಿಲ್ 18ರಿಂದ ಮಳೆ ಆರಂಭವಾಗುವ ಸಾಧ್ಯತೆ ಇದೆ.…

1 day ago

ಇರಾನ್-ಇಸ್ರೇಲ್ ಯುದ್ಧದ ಪರಿಣಾಮ – ಮಾವಿನ ರಫ್ತು ಕುಸಿತ, ರೈತರಿಗೆ ಹೊಡೆತ | ಅಲ್ಫೋನ್ಸೊ ಬೆಲೆ ಅರ್ಧಕ್ಕೆ ಇಳಿಕೆ

ಇರಾನ್-ಇಸ್ರೇಲ್ ಯುದ್ಧದಿಂದ ಮಾವಿನ ರಫ್ತು ಕುಸಿತಗೊಂಡು ಬೆಲೆ ತೀವ್ರವಾಗಿ ಇಳಿಕೆಯಾಗಿದೆ. ರೈತರು ನಷ್ಟದಲ್ಲಿ…

2 days ago