Advertisement
ಧಾರ್ಮಿಕ

ಕೊಡಗಿನ ತಲಕಾವೇರಿಯಲ್ಲಿ ತೀರ್ಥೋದ್ಭವ | ಸಹಸ್ರಾರು ಯಾತ್ರಾರ್ಥಿಗಳಿಂದ ಪುಣ್ಯಸ್ನಾನ

Share

ಕೊಡಗು ಜಿಲ್ಲೆಯ ತಲಕಾವೇರಿ ಕ್ಷೇತ್ರದಲ್ಲಿ ಇಂದು ಬೆಳಗ್ಗೆ 7.40 ಸುಮಾರಿಗೆ ಸರಿಯಾಗಿ ಕಾವೇರಿ ತೀರ್ಥೋದ್ಭವ ಜರುಗಿದೆ.  ಬ್ರಹ್ಮಗಿರಿ ತಪ್ಪಲಿನ ಕಾವೇರಿ ಕುಂಡಿಕೆಯಲ್ಲಿ ಕಾವೇರಿ ತೀರ್ಥಸ್ವರೂಪಿಣಿಯಾದ ಸಂದರ್ಭವನ್ನು ಸಹಸ್ರಾರು ಮಂದಿ ಈ ಕ್ಷಣವನ್ನು ಕಣ್ತುಂಬಿಕೊಂಡರು. 

ಪುಟ್ಟ ಕುಂಡಿಕೆಯಲ್ಲಿ ಕಾವೇರಿ ನದಿ ನೀರು, ಉಕ್ಕಿದ ಸಂದರ್ಭದಲ್ಲಿ ಯಾತ್ರಿಗಳು ಭಾವಪರವಶರಾದರು, ಕ್ಷೇತ್ರದ ಪ್ರಧಾನ ಅರ್ಚಕ ಪ್ರಶಾಂತ್ ಆಚಾರ್ ನೇತೃತ್ವದಲ್ಲಿ ಅರ್ಚಕರು ಸಾಂಪ್ರದಾಯಿಕ ಪೂಜಾ ವಿಧಿವಿಧಾನಗಳನ್ನು ನೆರವೇರಿಸಿತು. ತಲಕಾವೇರಿಯಲ್ಲಿ ತೀರ್ಥೋದ್ಭವದ ಪುಣ್ಯ ಕ್ಷಣಕ್ಕಾಗಿ ಕಾಯುತ್ತಿದ್ದ ಭಕ್ತರ ಮೇಲೆ ಅರ್ಚಕರು ಕಾವೇರಿ ತೀರ್ಥವನ್ನು ಪ್ರೋಕ್ಷಿಸಿದರು.

ಕಾವೇರಿ ತೀರ್ಥೋದ್ಭವಕ್ಕೆ ಕೊಡಗು ಜಿಲ್ಲಾಡಳಿತದಿಂದ ಸಕಲ ಸಿದ್ದತೆ ಕೈಗೊಳ್ಳಲಾಗಿತ್ತು, ತಲಕಾವೇರಿಯಲ್ಲಿ ಯಾತ್ರಾರ್ಥಿಗಳಿಗೆ ಮೂಲಸೌಲಭ್ಯಗಳನ್ನು ಕಲ್ಪಿಸಲಾಗಿದ್ದು ಇನ್ನು ಒಂದು ತಿಂಗಳ ಕಾಲ ತಲಕಾವೇರಿ – ಭಾಗಮಂಡಲದಲ್ಲಿ ಕಾವೇರಿ ಜಾತ್ರೆಯ ಸಂಭ್ರಮ ಕಂಡುಬರಲಿದೆ.

ಈ ವರ್ಷ ತಲಕಾವೇರಿ ಮತ್ತು ಭಾಗಮಂಡಲ ಕ್ಷೇತ್ರಗಳಲ್ಲಿ ಕಾವೇರಿ ತೀರ್ಥ ಸಂಗ್ರಹಣೆಗಾಗಿ ಪ್ಲಾಸ್ಟಿಕ್ ಬಿಂದಿಗೆ, ಬಾಟಲಿಗಳನ್ನು ಸರ್ಕಾರ ನಿಷೇಧ ಮಾಡಿದೆ,   ಭಾಗಮಂಡಲದಿಂದ ತಲಕಾವೇರಿಗೆ ದಿನವಿಡೀ ಯಾತ್ರಿಗಳು ಸಾಗರೋಪಾದಿಯಲ್ಲಿ ಕಾವೇರಿ ತೀರ್ಥ ಪಡೆಯಲು ತೆರಳುತ್ತಿದ್ದಾರೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ |13-07-2026 | ಕರ್ನಾಟಕದಲ್ಲಿ ಮುಂಗಾರು ದುರ್ಬಲ – ಮುಂದಿನ 10 ದಿನ ಜೋರು ಮಳೆ ಇಲ್ಲ

ರಾಜ್ಯದಲ್ಲಿ ಮುಂದಿನ 10 ದಿನಗಳವರೆಗೆ ಜೋರು ಮಳೆಯ ಸಾಧ್ಯತೆಗಳು ಕಾಣುತ್ತಿಲ್ಲ. ಕರಾವಳಿಯಲ್ಲಿ ಜುಲೈ…

6 hours ago

ಅಮರನಾಥದ ಹಿಮ ಶಿವಲಿಂಗ 90% ಕರಗಿತು…! ಹವಾಮಾನ ಬದಲಾವಣೆಯೇ ಕಾರಣವೇ?

ಅಮರನಾಥ ಯಾತ್ರೆ ಆರಂಭವಾದ ಕೆಲವೇ ದಿನಗಳಲ್ಲಿ ಹಿಮ ಶಿವಲಿಂಗವು 90%ಕ್ಕೂ ಹೆಚ್ಚು ಕರಗಿರುವುದಾಗಿ…

13 hours ago

16 ವರ್ಷದೊಳಗಿನ ಮಕ್ಕಳಿಗೆ ಸೋಷಿಯಲ್ ಮೀಡಿಯಾ ನಿರ್ಬಂಧ – ಆಸ್ಟ್ರೇಲಿಯಾದ ಕ್ರಮಕ್ಕೆ ಪ್ರಧಾನಿ ಮೋದಿ ಮೆಚ್ಚುಗೆ

16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಜಾಲತಾಣ ನಿರ್ಬಂಧ ವಿಧಿಸಿರುವ ಆಸ್ಟ್ರೇಲಿಯಾದ ಕ್ರಮವನ್ನು ಪ್ರಧಾನಿ…

23 hours ago

ಎಲ್‌ ನಿನೊ ಎಫೆಕ್ಟ್‌ – ಮುಂದಿನ ವರ್ಷ ಮತ್ಸ್ಯೋದ್ಯಮಕ್ಕೆ ಸಂಕಷ್ಟ?

ಎಲ್‌ ನಿನೊ ಪರಿಣಾಮದಿಂದ 2027ರಲ್ಲಿ ಎಣ್ಣೆ ಸಾರ್ಡಿನ್ ಮೀನುಗಳ ಉತ್ಪಾದನೆ ಕುಸಿಯುವ ಸಾಧ್ಯತೆ…

24 hours ago

ಮುಂಗಾರು ಇದ್ದಕ್ಕಿದ್ದಂತೆ ದುರ್ಬಲವಾಗಿದ್ದೇಕೆ..? ಇಲ್ಲಿದೆ ವೈಜ್ಞಾನಿಕ ಕಾರಣ

ದೇಶದ ಬಹುತೇಕ ಭಾಗಗಳಿಂದ ಮಳೆ ಮೋಡಗಳು ಕಡಿಮೆಯಾಗಲು ಪಶ್ಚಿಮ ಪೆಸಿಫಿಕ್‌ನ ಪ್ರಬಲ ಚಂಡಮಾರುತ…

1 day ago

ಮತ್ತೆ ಹೆಚ್ಚಿದ ದೇಶದ ಮಳೆ ಕೊರತೆ – ಜುಲೈ ಆರಂಭದ ಚೇತರಿಕೆ ಕುಂಠಿತ, ಮುಂಗಾರು ಮತ್ತೆ ದುರ್ಬಲ

ಜುಲೈ ಮೊದಲ ವಾರದ ಚೇತರಿಕೆಯ ಬಳಿಕ ದೇಶದ ಮುಂಗಾರು ಮತ್ತೆ ದುರ್ಬಲಗೊಂಡಿದ್ದು, ಮಳೆ…

1 day ago