ತಲಕಾವೇರಿಯಲ್ಲಿ ಕಾವೇರಿ ತೀರ್ಥೋದ್ಬವ..

October 17, 2020
12:19 PM

ತಲಕಾವೇರಿಯಲ್ಲಿ ಇಂದು ಬೆಳಿಗ್ಗೆ 7.05ರ  ಕನ್ಯಾರಾಶಿಯಲ್ಲಿ ಕಾವೇರಿ ತೀರ್ಥೋದ್ಭವವಾಗಿದೆ.

ಬೆಳಗ್ಗಿನ ಜಾವ 3.30 ಗಂಟೆಯಿಂದಲೇ ಗೋಪಾಲಕೃಷ್ಣ ಆಚಾರ್ ಅವರ ನೇತೃತ್ವದಲ್ಲಿ ಕಾವೇರಿ ಕುಂಡಿಕೆ ಬಳಿ ಪೂಜಾ ಕೈಂಕರ್ಯ ಸಾಗಿದೆ. ಮಹಾಸಂಕಲ್ಪ ಪ್ರಾರ್ಥನೆಯೊಂದಿಗೆ ಕಾವೇರಿ ಪೂಜೆ ಪ್ರಾರಂಭವಾಗಿದೆ.

ಕೊಡವ ಸಾಂಪ್ರದಾಯಿಕ ಉಡುಗೆಯಲ್ಲಿ ಭಾಗಮಂಡಲದಿಂದ ತಲಕಾವೇರಿಗೆ ಭಕ್ತರು ಆಗಮಿಸಿದ್ದರು. ಕೊರೊನಾ ಹಿನ್ನೆಲೆಯಲ್ಲಿ ಈ ಬಾರಿ ಕಾವೇರಿ ತೀರ್ಥೋದ್ಭವಕ್ಕೆ ಭಕ್ತರ ಸಂಖ್ಯೆ ಕಡಿಮೆಯಾಗಿತ್ತು. ತೀರ್ಥೋದ್ಭವ ಸಂದರ್ಭದಲ್ಲಿ ದೇವಾಲಯ ಅರ್ಚಕರು, ಸಿಬ್ಬಂದಿ ಮತ್ತು ಉಸ್ತುವಾರಿ ಸಚಿವರು ಹಾಗೂ ಕೆಲವೇ ಅಧಿಕಾರಿಗಳಿಗೆ ಮಾತ್ರ ಭಾಗವಹಿಸಲು ಅವಕಾಶ ನೀಡಲಾಗಿದೆ. ತೀರ್ಥೋಧ್ಭವದ ಬಳಿಕ ಭಕ್ತರು ತಲಕಾವೇರಿಗೆ ಬಂದು ತೀರ್ಥ ಪಡೆಯಲು ಅವಕಾಶ ಕಲ್ಪಿಸಲಾಗಿದೆ.

ಕಾವೇರಿ ತೀರ್ಥೋದ್ಭವ ಸಂದರ್ಭ ವಸತಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ, ಶಾಸಕ ಅಪ್ಪಚ್ಚು ರಂಜನ್, ವಿಧಾನ ಪರಿಷತ್ ಸದಸ್ಯ ಸುನೀಲ್ ಸುಬ್ರಮಣಿ, ವೀಣಾ ಅಚ್ಚಯ್ಯ, ಜಿ.ಪಂ ಅಧ್ಯಕ್ಷರಾದ ಬಿ.ಎ ಹರೀಶ್, ಲ್, ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕ್ಷಮಾ ಮಿಶ್ರಾ, ಜಿ.ಪಂ ಸಿ.ಇ.ಒ ಭನ್ವರ್ ಸಿಂಗ್ ಮೀನಾ ಮೊದಲಾದ ಗಣ್ಯರು ಉಪಸ್ಥಿತರಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 08-08-2026 | ಕರಾವಳಿಯಲ್ಲಿ ಮಳೆ ಇಳಿಕೆ – ರಾಜ್ಯದಲ್ಲಿ ಹೇಗೆ..?
August 8, 2026
11:50 AM
by: ಸಾಯಿಶೇಖರ್ ಕರಿಕಳ
ಸಿರಿಧಾನ್ಯಗಳಿಗೆ ಬೇಡಿಕೆ ಹೆಚ್ಚಿದೆ… ಆದರೆ ರೈತರಿಗೆ ಲಾಭ ಹೆಚ್ಚಿದೆಯೇ?
August 8, 2026
7:12 AM
by: ದ ರೂರಲ್ ಮಿರರ್.ಕಾಂ
ಚಂಡಮಾರುತದ ಗಾಳಿಗೂ ಬಗ್ಗಿ ಉಳಿಯುವ ಅಡಿಕೆ ತಳಿ..! ಮೊಹಿತ್‌ನಗರ ತಳಿಗೆ ಹಲವು ರಾಜ್ಯಗಳಲ್ಲಿ ಬೇಡಿಕೆ
August 8, 2026
6:48 AM
by: ದ ರೂರಲ್ ಮಿರರ್.ಕಾಂ
ದಕ್ಷಿಣ ಕನ್ನಡದಲ್ಲಿ ಮಳೆ | 4 ತಾಲೂಕುಗಳ ಶಾಲಾ-ಕಾಲೇಜುಗಳಿಗೆ ಇಂದು ರಜೆ – ಕಾಸರಗೋಡಿನಲ್ಲೂ ಶಾಲೆಗಳಿಗೆ ರಜೆ
August 8, 2026
6:26 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror