ತಲಕಾವೇರಿಯಲ್ಲಿ ಇಂದು ಬೆಳಿಗ್ಗೆ 7.05ರ ಕನ್ಯಾರಾಶಿಯಲ್ಲಿ ಕಾವೇರಿ ತೀರ್ಥೋದ್ಭವವಾಗಿದೆ.
ಬೆಳಗ್ಗಿನ ಜಾವ 3.30 ಗಂಟೆಯಿಂದಲೇ ಗೋಪಾಲಕೃಷ್ಣ ಆಚಾರ್ ಅವರ ನೇತೃತ್ವದಲ್ಲಿ ಕಾವೇರಿ ಕುಂಡಿಕೆ ಬಳಿ ಪೂಜಾ ಕೈಂಕರ್ಯ ಸಾಗಿದೆ. ಮಹಾಸಂಕಲ್ಪ ಪ್ರಾರ್ಥನೆಯೊಂದಿಗೆ ಕಾವೇರಿ ಪೂಜೆ ಪ್ರಾರಂಭವಾಗಿದೆ.
ಕೊಡವ ಸಾಂಪ್ರದಾಯಿಕ ಉಡುಗೆಯಲ್ಲಿ ಭಾಗಮಂಡಲದಿಂದ ತಲಕಾವೇರಿಗೆ ಭಕ್ತರು ಆಗಮಿಸಿದ್ದರು. ಕೊರೊನಾ ಹಿನ್ನೆಲೆಯಲ್ಲಿ ಈ ಬಾರಿ ಕಾವೇರಿ ತೀರ್ಥೋದ್ಭವಕ್ಕೆ ಭಕ್ತರ ಸಂಖ್ಯೆ ಕಡಿಮೆಯಾಗಿತ್ತು. ತೀರ್ಥೋದ್ಭವ ಸಂದರ್ಭದಲ್ಲಿ ದೇವಾಲಯ ಅರ್ಚಕರು, ಸಿಬ್ಬಂದಿ ಮತ್ತು ಉಸ್ತುವಾರಿ ಸಚಿವರು ಹಾಗೂ ಕೆಲವೇ ಅಧಿಕಾರಿಗಳಿಗೆ ಮಾತ್ರ ಭಾಗವಹಿಸಲು ಅವಕಾಶ ನೀಡಲಾಗಿದೆ. ತೀರ್ಥೋಧ್ಭವದ ಬಳಿಕ ಭಕ್ತರು ತಲಕಾವೇರಿಗೆ ಬಂದು ತೀರ್ಥ ಪಡೆಯಲು ಅವಕಾಶ ಕಲ್ಪಿಸಲಾಗಿದೆ.
ಕಾವೇರಿ ತೀರ್ಥೋದ್ಭವ ಸಂದರ್ಭ ವಸತಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ, ಶಾಸಕ ಅಪ್ಪಚ್ಚು ರಂಜನ್, ವಿಧಾನ ಪರಿಷತ್ ಸದಸ್ಯ ಸುನೀಲ್ ಸುಬ್ರಮಣಿ, ವೀಣಾ ಅಚ್ಚಯ್ಯ, ಜಿ.ಪಂ ಅಧ್ಯಕ್ಷರಾದ ಬಿ.ಎ ಹರೀಶ್, ಲ್, ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕ್ಷಮಾ ಮಿಶ್ರಾ, ಜಿ.ಪಂ ಸಿ.ಇ.ಒ ಭನ್ವರ್ ಸಿಂಗ್ ಮೀನಾ ಮೊದಲಾದ ಗಣ್ಯರು ಉಪಸ್ಥಿತರಿದ್ದರು.
ಅಡಿಕೆ ಮಾರುಕಟ್ಟೆ ಸ್ಥಿರದಿಂದ ಏರಿಕೆಯತ್ತ ಸಾಗುತ್ತಿದೆ. ಜೂನ್-ಜುಲೈನಲ್ಲಿ ಬೆಲೆ ಹೆಚ್ಚಾಗುವ ಸಾಧ್ಯತೆ ಇದೆ.
ಏಪ್ರಿಲ್ 1ರಿಂದ 15ರವರೆಗೆ ಸ್ವಯಂ-ಎಣಿಕೆ ಆರಂಭವಾಗಿದೆ. ಏಪ್ರಿಲ್ 16ರಿಂದ ಮನೆಗಳಿಗೆ ಭೇಟಿ ನೀಡಿ…
ಏಪ್ರಿಲ್ 4ರವರೆಗೆ ಮಳೆ ಮುಂದುವರಿಯಲಿದೆ, ಬಳಿಕ ತಾತ್ಕಾಲಿಕ ಕಡಿಮೆ. ಏಪ್ರಿಲ್ 10ರಿಂದ ಮತ್ತೆ…
ಏಪ್ರಿಲ್ನಲ್ಲಿ ಮಳೆ ಹೆಚ್ಚಾದರೂ ಬಿಸಿಲು ಕಡಿಮೆಯಾಗುವುದಿಲ್ಲ ಎಂದು IMD ಎಚ್ಚರಿಸಿದೆ. ಏಪ್ರಿಲ್–ಜೂನ್ ಅವಧಿಯಲ್ಲಿ…
ಗ್ಯಾಸ್ ಸಿಲಿಂಡರ್ ಕೊರತೆಯಿಂದ ರಾಜ್ಯದಲ್ಲಿ ವಿದ್ಯುತ್ ಬಳಕೆ 10% ಏರಿಕೆಯಾಗಿದೆ. ಕೇಂದ್ರದ ನೀತಿಗಳ…
ಹಸಿರು ಅಮೋನಿಯಾ ಒಪ್ಪಂದಗಳು ಭಾರತದ ಇಂಧನ ಭದ್ರತೆಗೆ ದೊಡ್ಡ ಬಲ ನೀಡಲಿವೆ. 2030ರೊಳಗೆ…