ತಲಕಾವೇರಿಯಲ್ಲಿ ಇಂದು ಬೆಳಿಗ್ಗೆ 7.05ರ ಕನ್ಯಾರಾಶಿಯಲ್ಲಿ ಕಾವೇರಿ ತೀರ್ಥೋದ್ಭವವಾಗಿದೆ.
ಬೆಳಗ್ಗಿನ ಜಾವ 3.30 ಗಂಟೆಯಿಂದಲೇ ಗೋಪಾಲಕೃಷ್ಣ ಆಚಾರ್ ಅವರ ನೇತೃತ್ವದಲ್ಲಿ ಕಾವೇರಿ ಕುಂಡಿಕೆ ಬಳಿ ಪೂಜಾ ಕೈಂಕರ್ಯ ಸಾಗಿದೆ. ಮಹಾಸಂಕಲ್ಪ ಪ್ರಾರ್ಥನೆಯೊಂದಿಗೆ ಕಾವೇರಿ ಪೂಜೆ ಪ್ರಾರಂಭವಾಗಿದೆ.
ಕೊಡವ ಸಾಂಪ್ರದಾಯಿಕ ಉಡುಗೆಯಲ್ಲಿ ಭಾಗಮಂಡಲದಿಂದ ತಲಕಾವೇರಿಗೆ ಭಕ್ತರು ಆಗಮಿಸಿದ್ದರು. ಕೊರೊನಾ ಹಿನ್ನೆಲೆಯಲ್ಲಿ ಈ ಬಾರಿ ಕಾವೇರಿ ತೀರ್ಥೋದ್ಭವಕ್ಕೆ ಭಕ್ತರ ಸಂಖ್ಯೆ ಕಡಿಮೆಯಾಗಿತ್ತು. ತೀರ್ಥೋದ್ಭವ ಸಂದರ್ಭದಲ್ಲಿ ದೇವಾಲಯ ಅರ್ಚಕರು, ಸಿಬ್ಬಂದಿ ಮತ್ತು ಉಸ್ತುವಾರಿ ಸಚಿವರು ಹಾಗೂ ಕೆಲವೇ ಅಧಿಕಾರಿಗಳಿಗೆ ಮಾತ್ರ ಭಾಗವಹಿಸಲು ಅವಕಾಶ ನೀಡಲಾಗಿದೆ. ತೀರ್ಥೋಧ್ಭವದ ಬಳಿಕ ಭಕ್ತರು ತಲಕಾವೇರಿಗೆ ಬಂದು ತೀರ್ಥ ಪಡೆಯಲು ಅವಕಾಶ ಕಲ್ಪಿಸಲಾಗಿದೆ.
ಕಾವೇರಿ ತೀರ್ಥೋದ್ಭವ ಸಂದರ್ಭ ವಸತಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ, ಶಾಸಕ ಅಪ್ಪಚ್ಚು ರಂಜನ್, ವಿಧಾನ ಪರಿಷತ್ ಸದಸ್ಯ ಸುನೀಲ್ ಸುಬ್ರಮಣಿ, ವೀಣಾ ಅಚ್ಚಯ್ಯ, ಜಿ.ಪಂ ಅಧ್ಯಕ್ಷರಾದ ಬಿ.ಎ ಹರೀಶ್, ಲ್, ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕ್ಷಮಾ ಮಿಶ್ರಾ, ಜಿ.ಪಂ ಸಿ.ಇ.ಒ ಭನ್ವರ್ ಸಿಂಗ್ ಮೀನಾ ಮೊದಲಾದ ಗಣ್ಯರು ಉಪಸ್ಥಿತರಿದ್ದರು.
ಬರಗಾಲದ ಪರಿಸ್ಥಿತಿಗಳು ಮಣ್ಣಿನಲ್ಲಿನ ಬ್ಯಾಕ್ಟೀರಿಯಾಗಳಲ್ಲಿ ಆ್ಯಂಟಿಬಯೋಟಿಕ್ ಪ್ರತಿರೋಧ ಹೆಚ್ಚಿಸಲು ಕಾರಣವಾಗಬಹುದು ಎಂದು ಹೊಸ…
ಜೇನುನೊಣಗಳ ಸಂಖ್ಯೆ ಕುಸಿಯುತ್ತಿರುವುದು ಕೃಷಿ ಉತ್ಪಾದನೆ, ಆಹಾರ ಭದ್ರತೆ ಮತ್ತು ಪರಿಸರ ಸಮತೋಲನಕ್ಕೆ…
ವಿಟ್ಲದ ಆರ್. ಕೆ. ಪೈ ಅವರು ತಮ್ಮ 60ನೇ ಹುಟ್ಟುಹಬ್ಬವನ್ನು ಮಕ್ಕಳಲ್ಲಿ ಪ್ರಕೃತಿ…
ನಾಗ್ಪುರದ ಕಾಂಪ್ಟಿಯಲ್ಲಿ FDA ಹಾಗೂ ಪೊಲೀಸರು ನಡೆಸಿದ ದಾಳಿಯಲ್ಲಿ ₹1.11 ಕೋಟಿ ಮೌಲ್ಯದ…
ಕರ್ನಾಟಕದ ಹಲವು ಭಾಗಗಳಲ್ಲಿ ಜೂನ್ 20ರವರೆಗೆ ಪ್ರಸ್ತುತ ಹವಾಮಾನ ಮಾದರಿಯೇ ಮುಂದುವರಿಯುವ ಸಾಧ್ಯತೆ…
ತುಮಕೂರು ಜಿಲ್ಲೆಯಲ್ಲಿ ಅಡಿಕೆ ಬೆಳೆ ವಿಸ್ತೀರ್ಣ 94 ಸಾವಿರ ಹೆಕ್ಟೇರ್ ದಾಟಿದ್ದು, ತೆಂಗಿನ…