ತಲಕಾವೇರಿಯಲ್ಲಿ ಇಂದು ಬೆಳಿಗ್ಗೆ 7.05ರ ಕನ್ಯಾರಾಶಿಯಲ್ಲಿ ಕಾವೇರಿ ತೀರ್ಥೋದ್ಭವವಾಗಿದೆ.
ಬೆಳಗ್ಗಿನ ಜಾವ 3.30 ಗಂಟೆಯಿಂದಲೇ ಗೋಪಾಲಕೃಷ್ಣ ಆಚಾರ್ ಅವರ ನೇತೃತ್ವದಲ್ಲಿ ಕಾವೇರಿ ಕುಂಡಿಕೆ ಬಳಿ ಪೂಜಾ ಕೈಂಕರ್ಯ ಸಾಗಿದೆ. ಮಹಾಸಂಕಲ್ಪ ಪ್ರಾರ್ಥನೆಯೊಂದಿಗೆ ಕಾವೇರಿ ಪೂಜೆ ಪ್ರಾರಂಭವಾಗಿದೆ.
ಕೊಡವ ಸಾಂಪ್ರದಾಯಿಕ ಉಡುಗೆಯಲ್ಲಿ ಭಾಗಮಂಡಲದಿಂದ ತಲಕಾವೇರಿಗೆ ಭಕ್ತರು ಆಗಮಿಸಿದ್ದರು. ಕೊರೊನಾ ಹಿನ್ನೆಲೆಯಲ್ಲಿ ಈ ಬಾರಿ ಕಾವೇರಿ ತೀರ್ಥೋದ್ಭವಕ್ಕೆ ಭಕ್ತರ ಸಂಖ್ಯೆ ಕಡಿಮೆಯಾಗಿತ್ತು. ತೀರ್ಥೋದ್ಭವ ಸಂದರ್ಭದಲ್ಲಿ ದೇವಾಲಯ ಅರ್ಚಕರು, ಸಿಬ್ಬಂದಿ ಮತ್ತು ಉಸ್ತುವಾರಿ ಸಚಿವರು ಹಾಗೂ ಕೆಲವೇ ಅಧಿಕಾರಿಗಳಿಗೆ ಮಾತ್ರ ಭಾಗವಹಿಸಲು ಅವಕಾಶ ನೀಡಲಾಗಿದೆ. ತೀರ್ಥೋಧ್ಭವದ ಬಳಿಕ ಭಕ್ತರು ತಲಕಾವೇರಿಗೆ ಬಂದು ತೀರ್ಥ ಪಡೆಯಲು ಅವಕಾಶ ಕಲ್ಪಿಸಲಾಗಿದೆ.
ಕಾವೇರಿ ತೀರ್ಥೋದ್ಭವ ಸಂದರ್ಭ ವಸತಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ, ಶಾಸಕ ಅಪ್ಪಚ್ಚು ರಂಜನ್, ವಿಧಾನ ಪರಿಷತ್ ಸದಸ್ಯ ಸುನೀಲ್ ಸುಬ್ರಮಣಿ, ವೀಣಾ ಅಚ್ಚಯ್ಯ, ಜಿ.ಪಂ ಅಧ್ಯಕ್ಷರಾದ ಬಿ.ಎ ಹರೀಶ್, ಲ್, ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕ್ಷಮಾ ಮಿಶ್ರಾ, ಜಿ.ಪಂ ಸಿ.ಇ.ಒ ಭನ್ವರ್ ಸಿಂಗ್ ಮೀನಾ ಮೊದಲಾದ ಗಣ್ಯರು ಉಪಸ್ಥಿತರಿದ್ದರು.
ಕುಕ್ಕೆ ಸುಬ್ರಹ್ಮಣ್ಯ ಪರಿಸರದ ಪಾವಿತ್ರ್ಯತೆ ಹೇಗೆಲ್ಲಾ ಉಳಿಸಬಹುದು..ಒಮ್ಮೆ ಯೋಚಿಸಿ ನೋಡಿ..
ಕೃಷಿಯಲ್ಲಿ ಡ್ರೋನ್ ಬಳಕೆಯ ಬಗ್ಗೆ ಸರ್ಕಾರ ಒಂದು ವರ್ಷದ ಅವಧಿಗೆ ಅನುಮೋದನೆ ವಿಸ್ತರಣೆ…
ಮಲೆನಾಡು ಗಿಡ್ಡ ತಳಿ ವಿಶೇಷತೆ ಹಾಗೂ ಭಾರತೀಯ ಗೋತಳಿ ಉಳಿವಿಗೆ ಪ್ರಯತ್ನ ನಡೆಯಬೇಕಿದೆ.
ಮುಂದಿನ 10 ದಿನಗಳವರೆಗೂ ರಾಜ್ಯದ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.
ರಾಜ್ಯದಲ್ಲಿ ಲೋಕಸಭೆ ಚುನಾವಣೆಗೆ(Loksabha Elections 2024) ತೆರೆ ಬಿದ್ದಿದೆ. ಇನ್ನು ಫಲಿತಾಂಶಕ್ಕಾಗಿ ಕಾಯೋದೊಂದೇ …
ಕೊಕ್ಕೋ ಧಾರಣೆ ವಾರದಲ್ಲಿ 100 ರೂಪಾಯಿ ಇಳಿಕೆಯಾಗಿದೆ.