Advertisement
ಸುದ್ದಿಗಳು

ತಾಳಮದ್ದಳೆ ಸಪ್ತಾಹ ಸಮಾರೋಪ – ಪದ್ಯಾಣ, ಕುರಿಯ ಪ್ರಶಸ್ತಿ ಪ್ರದಾನ |‘ತಾಳಮದ್ದಳೆಯಿಂದ ಬುದ್ಧಿಗೆ ಗ್ರಾಸ, ಬಯಲಾಟದಿಂದ ಮೋದಾನುಭವ’ – ಎಡನೀರು ಶ್ರೀ

Share
“ಯಕ್ಷಗಾನ ಬಯಲಾಟಗಳು ಮನಸ್ಸಿಗೆ ಮೋದವನ್ನು ನೀಡಿದರೆ, ತಾಳಮದ್ದಳೆಯು ಬುದ್ದಿಗೆ ಗ್ರಾಸವನ್ನು ಒದಗಿಸುತ್ತದೆ. ಭಾಷಾಶುದ್ಧತೆ, ಪುರಾಣ ಜ್ಞಾನ, ಅಂದವಾಗಿ ಮಾತನಾಡುವ ಶಕ್ತಿ, ಗ್ರಹಿಕಾ ಸಾಮಥ್ರ್ಯ ಮತ್ತು ಬದುಕಿಗೆ ಬೇಕಾದ ಸಂದೇಶಗಳನ್ನು ಯಕ್ಷಗಾನವು ಒದಗಿಸುತ್ತದೆ. ಅಕ್ಷರಾಭ್ಯಾಸ ಇಲ್ಲದವರೂ ಆಟ, ಕೂಟಗಳನ್ನು ನೋಡಿಯೇ ಪುರಾಣ ಜ್ಞಾನವನ್ನು ಪಡೆದವರಿದ್ದಾರೆ. ಅದು ಯಕ್ಷಗಾನದ ಶಕ್ತಿ.” ಎಂದು ಎಡನೀರು ಮಠದ ಪರಮಪೂಜ್ಯ  ಶ್ರೀ ಸಚ್ಚಿದಾನಂದ ಭಾರತೀ ಶ್ರೀಪಾದಂಗಳವರು ಹೇಳಿದರು.
ಅವರು ಪುತ್ತೂರಿನ ಶ್ರೀ ವೆಂಕಟರಮಣ ದೇವಸ್ಥಾನದ ಶ್ರೀ ಸುಕೃತೀಂದ್ರ ಸಭಾವನದಲ್ಲಿ ಜರುಗಿದ ತಾಳಮದ್ದಳೆ ಸಪ್ತಾಹದ ಸಮಾರೋಪ ಸಮಾರಂಭದಲ್ಲಿ ಅನುಗ್ರಹ ಸಂದೇಶ ನೀಡುತ್ತಾ, “ಎಡನೀರು ಮಠದಲ್ಲಿ ಚಾತುರ್ಮಾಸ್ಯ ವ್ರತಾಚರಣೆ ಸಂದರ್ಭದಲ್ಲಿ ಹಿಂದಿನಿಂದಲೂ ತಾಳಮದ್ದಳೆಯು ಆರಾಧನೆಯ ರೂಪದಲ್ಲಿ ನಡೆಯುತ್ತದೆ.” ಎಂದರು. ಕುರಿಯ ವಿಠಲ ಶಾಸ್ತ್ರಿ ಸಾಂಸ್ಕøತಿಕ ಪ್ರತಿಷ್ಠಾನ (ರಿ) ಉಜಿರೆ ಇವರು ಕಾರ್ಯಕ್ರಮವನ್ನು ಆಯೋಜಿಸಿದ್ದರು.
ಈ ಸಂದರ್ಭದಲ್ಲಿ ಪದ್ಯಾಣ ಮನೆತನದ ಹಿರಿಯ ಪುಟ್ಟು ನಾರಾಯಣ ಭಾಗವತರ ಸ್ಮೃತಿಯಲ್ಲಿ ನೀಡುವ ‘ಪದ್ಯಾಣ ಪ್ರಶಸ್ತಿ’ಯನ್ನು ಹಿರಿಯ ಭಾಗವತ ಕುರಿಯ ಗಣಪತಿ ಶಾಸ್ತ್ರಿ ಹಾಗೂ ಕುರಿಯ ವಿಠಲ ಶಾಸ್ತ್ರಿ ನೆನಪಿನ ‘ಕುರಿಯ ಪ್ರಶಸ್ತಿ’ಯನ್ನು ಹಿರಿಯ ಹಿಮ್ಮೇಳ ವಾದಕರಾದ ಧರ್ಮಸ್ಥಳದ ಬಿ.ಸೀತಾರಾಮ ತೋಳ್ಪಾಡಿತ್ತಾಯರಿಗೆ ಶ್ರೀಗಳು ಪ್ರದಾನಿಸಿದರು. ಕುರಿಯ ಸ್ಮøತಿ ಗೌರವವನ್ನು ಯಕ್ಷಗಾನ ಅರ್ಥದಾರಿಗಳಾದ ಕೆ.ಭಾಸ್ಕರ ರಾವ್ ಹಾಗೂ ಭಾಸ್ಕರ ನೂರಿತ್ತಾಯ ಬಾರ್ಯ ಇವರಿಗೆ ನೀಡಲಾಯಿತು.
ಪುತ್ತೂರು ಮುಳಿಯ ಜ್ಯುವೆಲ್ಲರ್ಸ್ ಇದರ ಆಡಳಿತ ನಿರ್ದೇಶಕ ಮುಳಿಯ ಕೇಶವ ಪ್ರಸಾದ್, ಯಕ್ಷಗಾನ ವಿದ್ವಾಂಸ ಡಾ.ಎಂ.ಪ್ರಭಾಕರ ಜೋಷಿಯವರು ಪ್ರಶಸ್ತಿ ಪುರಸ್ಕೃತರನ್ನು ನುಡಿಹಾರಗಳ ಮೂಲಕ ಗೌರವಿಸಿದರು. ಶೀಲಾ ಗಣಪತಿ ಭಟ್ ಉಪಸ್ಥಿತರಿದ್ದರು.
ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಆಯೋಗದ ಹಂಗಾಮಿ ಅಧ್ಯಕ್ಷ ಡಾ.ಟಿ.ಶ್ಯಾಮ ಭಟ್ ಮಾತನಾಡುತ್ತಾ, “ಕೀರ್ತಿಶೇಷ ಭಾಗವತ ಪದ್ಯಾಣ ಗಣಪತಿ ಭಟ್ಟರು ಕಾಲಮಿತಿ ಪ್ರದರ್ಶನವನ್ನು ಯಶಸ್ವಿಯಾಗಿ ನಿಭಾಯಿಸಿದವರು. ಪದ್ಯಾಣ ಮತ್ತು ಕುರಿಯ ಮನೆತನಗಳ ಯಕ್ಷಗಾನೀಯ ಕೊಡುಗೆಗಳಲ್ಲಿ ಸಮರ್ಪಣಾ ಭಾವವಿರುವುದನ್ನು ಕಾಣಬಹುದು.” ಎಂದರು.
ಕುರಿಯ ವಿಠಲ ಶಾಸ್ತ್ರಿ ಸಾಂಸ್ಕೃ ತಿಕ ಪ್ರತಿಷ್ಠಾನದ ಸಂಚಾಲಕ ಉಜಿರೆ ಅಶೋಕ ಭಟ್ಟರು ಸಂಮಾನಿತರನ್ನು ನುಡಿಹಾರಗಳ ಮೂಲಕ ಅಲಂಕರಿಸಿದರು. ತಾಳಮದ್ದಳೆ ಸಪ್ತಾಹದುದ್ದಕ್ಕೂ ಭಾಗವತ ಪದ್ಯಾಣ ಗಣಪತಿ ಭಟ್ಟರ ಸ್ಮøತಿಯನ್ನು ಮಾಡಲಾಗಿತ್ತು. ಪುತ್ತೂರಿನ ಶ್ರೀ ಲಕ್ಷ್ಮೀವೆಂಕಟರಮಣ ದೇವಸ್ಥಾನದ ಆಡಳಿತ ಮಂಡಳಿಯು ಸಪ್ತಾಹದ ಸಂಘಟನೆಯಲ್ಲಿ ದೊಡ್ಡ ಹೆಗಲು ನೀಡಿತ್ತು.
ಕಲಾವಿದ, ಲೇಖಕ ನಾ. ಕಾರಂತ ಪೆರಾಜೆ ನಿರ್ವಹಿಸಿದರು. ಪದ್ಯಾಣ ಪ್ರಶಸ್ತಿ ಸಮಿತಿಯ ಸ್ವಸ್ತಿಕ್ ಪದ್ಯಾಣ ವಂದಿಸಿದರು. ಉಜಿರೆ ಅಶೋಕ ಭಟ್ಟರ ಸಪ್ತಾಹ ಸಂಯೋಜನೆಯ ಸುಭಗತೆಯು ಸಪ್ತಾಹದ ಒಟ್ಟೂ ಯಶಸ್ಸಿನಲ್ಲಿ ಅನಾವರಣಗೊಂಡಿತ್ತು.  ಕೊನೆಯಲ್ಲಿ ‘ಗಂಗಾ ಸಾರಥ್ಯ’ ಪ್ರಸಂಗದ ತಾಳಮದ್ದಳೆ ನಡೆಯಿತು.
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕಡಲಾಮೆಗಳ ಸಂತಾನೋತ್ಪತ್ತಿಗೆ ಅರಣ್ಯ ಇಲಾಖೆ ರಕ್ಷಣೆ | ಬಾವಳ ಕಡಲತೀರದಲ್ಲಿ ಸಂತೋಷದ ಕ್ಷಣ

ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಬಾವಳದಲ್ಲಿ ಕಡಲಾಮೆ ಮೊಟ್ಟೆಯಿಂದ ಹೊರ ಬಂದ…

2 hours ago

ಮಂಗಳೂರಿನಲ್ಲಿ ಸಮುದ್ರ ಮೀನು ಮರಿ ಉತ್ಪಾದನಾ ಕೇಂದ್ರ ಸ್ಥಾಪನೆಗೆ ಸಂಸದರಿಂದ ಒತ್ತಾಯ

ದಕ್ಷಿಣ ಕನ್ನಡದಲ್ಲಿ ಗುಣಮಟ್ಟದ ಮೀನು ಮರಿ ಕೊರತೆ ನೀಗಿಸಲು ಮಂಗಳೂರಿನಲ್ಲಿ Marine Finfish…

3 hours ago

ಕರಾವಳಿ ಅಭಿವೃದ್ಧಿಗೆ ವಿಶೇಷ ಪ್ಯಾಕೇಜ್ ಆಗ್ರಹ | ಕರಾವಳಿ ಜಿಲ್ಲೆಗಳ ಅಭಿವೃದ್ಧಿಗೆ ಸಮಗ್ರ ದೃಷ್ಟಿ ಅಗತ್ಯ

ಕರಾವಳಿ ಜಿಲ್ಲೆಗಳ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಅಗತ್ಯ ಅನುದಾನವನ್ನು ಮುಂದಿನ ಬಜೆಟ್‌ನಲ್ಲಿ ನೀಡಬೇಕೆಂದು…

24 hours ago

ಅಡಿಕೆಯ ಬಗ್ಗೆ ಹೊಸ ಅಧ್ಯಯನ | ಕ್ಯಾನ್ಸರ್‌ ಅಷ್ಟೇ ಅಲ್ಲ… ಹೃದಯ ರೋಗ ಮತ್ತು ಮೆಟಾಬಾಲಿಕ್ ಸಮಸ್ಯೆಯೂ ಇದೆ…!

ಅಡಿಕೆ ಜಗಿಯುವುದು ಕೇವಲ ಸಾಂಪ್ರದಾಯಿಕ ಅಭ್ಯಾಸ ಮಾತ್ರವಲ್ಲ,  ಅದು ಗಂಭೀರ ಆರೋಗ್ಯ ಅಪಾಯಗಳಿಗೆ…

2 days ago

ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ | ಶಾಶ್ವತ ಪರಿಹಾರಕ್ಕೆ ಕೇಂದ್ರದ ಗಮನ ಸೆಳೆದು ಕುಮಾರಸ್ವಾಮಿ ಮನವಿ

ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ ಹಾಗೂ ಆನೆ ದಾಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು…

2 days ago

ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರಿಗೆ ಲಾಭ

ದಾವಣಗೆರೆ ಜಿಲ್ಲೆಯಲ್ಲಿ 5 ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರು 87,258 ಕ್ವಿಂಟಲ್…

2 days ago