ದಕ್ಷಿಣ ಕನ್ನಡ ಜಿಲ್ಲೆಯು ಕಲಾರಾಧನೆಗೆ ಅದರಲ್ಲೂ ಯಕ್ಷಗಾನದ ನೆಲ. ಯಕ್ಷಗಾನ ಈ ಬಾರಿ ಬಹುಪಾಲು ನಿಂತೇ ಹೋಯಿತು, ಕೊರೋನಾ ಈ ಕಲೆಗೂ ಬಾಧೆ ನೀಡಿತು. ತಾಳಮದ್ದಳೆಯೂ ಅದರ ಒಂದು ಭಾಗ. ಕೊರೋನಾ ಇಫೆಕ್ಟ್ ಕಡಿಮೆಯಾಗುತ್ತಿದ್ದಂತೆಯೇ ಯಕ್ಷಗಾನಕ್ಕೆ ಅವಕಾಶ ನೀಡಿದರೂ ಹೆಚ್ಚು ಜನರು ಭಾಗವಹಿಸುವಂತಿಲ್ಲ.ಇದೇ ವೇಳೆ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಗುತ್ತಿಗಾರಿನ ಶ್ರೀಕೃಷ್ಣ ಯಕ್ಷಗಾನ ಹವ್ಯಾಸಿ ಕಲಾ ಬಳಗವು ಕಲಾಸಕ್ತರಿಗಾಗಿ ತಾಳಮದ್ದಳೆಯನ್ನು ಹಮ್ಮಿಕೊಂಡಿತು. ಅದೂ ಉಚಿತವಾಗಿ. ಕಲಾ ಆಸಕ್ತರ ಮನೆಯಲ್ಲಿ ಉಚಿತವಾಗಿ ಶ್ರೀಕೃಷ್ಣ ಯಕ್ಷಗಾನ ಕಲಾ ಬಳಗದ ತಂಡದ ಸದಸ್ಯರು ತಾಳಮದ್ದಳೆ ನಡೆಸಿ ಕೊಡುತ್ತಿದ್ದಾರೆ. ಈಗಾಗಲೇ ಸುಮಾರು 10 ತಾಳಮದ್ದಳೆ ಉಚಿತವಾಗಿ ನಡೆಸಿದ್ದಾರೆ. ತಂಡದಲ್ಲಿ ಸುಮಾರು 10 ಕಲಾವಿದರು ಇದ್ದಾರೆ.
ಹಿಮ್ಮೇಳದಲ್ಲಿ ಭಾಗವತರಾಗಿ ಗೋಪಾಲಕೃಷ್ಣ ಭಟ್ ದೇವಸ್ಯ, ಗಂಗಾಧರ ಗೌಡ ರುದ್ರಚಾಮುಂಡಿ , ಪ್ರತೀಕ್ ಆಚಾರ್ಯ ಕಂದ್ರಪ್ಪಾಡಿ, ಶಶಾಂಕ್ ಎಲಿಮಲೆ
ಚೆಂಡೆ-ಮದ್ದಳೆಯಲ್ಲಿ ಬಾಲಸುಬ್ರಹ್ಮಣ್ಯ ಭಟ್ ದೇವಸ್ಯ, ವೆಂಕಟೇಶ್ ಭಟ್ ದೇವಸ್ಯ, ಲಕ್ಷ್ಮೀಶ ಶಗ್ರಿತ್ತಾಯ,
ಮುಮ್ಮೇಳದಲ್ಲಿ ಬಾಬು ಗೌಡ ಅಚ್ರಪ್ಪಾಡಿ, ಕುಶಾಲಪ್ಪ ಮಾಸ್ತರ್ ಕಂದ್ರಪ್ಪಾಡಿ, ಶಿವಸುಬ್ರಹ್ಮಣ್ಯ ಜೋಯಿಸ ಕರುವಜೆ, ಶಿವಕುಮಾರ ಭಟ್ ಗುತ್ತಿಗಾರು, ಲಕ್ಷ್ಮೀಶ ಗಬ್ಲಡ್ಕ , ತಾರಾನಾಥ ಅಂಬೆಕಲ್ಲು, ಪಾಲನೇತ್ರ ಮುಂಡೋಡಿ, ರಾಜೇಶ್ ,ಮಾವಿನಕಟ್ಟೆ ಮೊದಲಾದವರು ಇದ್ದಾರೆ. ಮನೆ ಮನೆಗಳಲ್ಲಿ ಕಲಾಸೇವೆ ಮಾಡುವ ಈ ತಂಡ ಇದುವರೆಗೂ ಉಚಿತವಾಗಿ ಕಾರ್ಯಕ್ರಮ ನಡೆಸಿಕೊಟ್ಟಿದೆ. ಕಲಾಸೇವೆಯಲ್ಲಿ ತೊಡಗಿಸಿದೆ.
ಶಿಕ್ಷಿತರ ನಾಡು, ಬುದ್ದಿವಂತರ ಜಿಲ್ಲೆ ದಕ್ಷಿಣಕನ್ನಡದಲ್ಲಿ(Dakshina Kannada) ಹೆಚ್ಚಿನ ಮತದಾರರು(Voters) ಮತದಾನ ಮಾಡಿ…
ಈಗಿನಂತೆ ಅಧಿಕ ತಾಪಮಾನದ ವಾತಾವರಣದ ಇನ್ನೂ 3 ರಿಂದ 4 ದಿನಗಳ ಕಾಲ…
ಚಾಮರಾಜನಗರ ಕ್ಷೇತ್ರದ ಬಿಜೆಪಿ ಸಂಸದ, ಮೈಸೂರು – ಚಾಮರಾಜನಗರ ಭಾಗದ ಪ್ರಭಾವಿ ದಲಿತ…
ದಶಕಗಳ ಹಿಂದೆ ವಿಮಾ ಸಂಸ್ಥೆಯೊಂದು ಸಾಗವಾನಿ ಬೆಳೆಯಲು ರೈತರ ಷೇರು ಪಡೆದುಕೊಂಡು ಹತ್ತೊ…
ನಾಡು ಮಾವು ಸಂರಕ್ಷಣೆ ಕೆಲಸದ ಮೊದಲ ದಿನವದು. ನವೆಂಬರ್ 2022. ಕಸಿ ಕಡ್ಡಿಗಳನ್ನು…
ಭಾರತದಲ್ಲಿ(India) ಉರಿ ಬಿಸಿಲಿನ ತಾಪ(Heat) ಏರುತ್ತಿದ್ದರೆ ತಾಂಜೇನಿಯಾದಲ್ಲಿ (Tanzania) ಕಳೆದ ವಾರದಿಂದ ಭಾರೀ…