Advertisement
Exclusive - Mirror Hunt

ಕೊರೋನಾ ನಂತರದ ಬೆಳವಣಿಗೆ | ಮನೆ ಮನೆಯಲ್ಲಿ ತಾಳಮದ್ದಳೆ ಸೇವೆ | ಕಲಾಸೇವೆಯಲ್ಲಿ ತೊಡಗಿದ ಹವ್ಯಾಸಿ ಕಲಾವಿದರ ತಂಡ |

Share
ಕೊರೋನಾ ವೈರಸ್‌  ದೇಶದ ಇಡೀ ವರ್ಷದ ಚಟುವಟಿಕೆಯನ್ನು ನಿಲ್ಲಿಸಿಯೇ ಬಿಟ್ಟಿತು. ಇನ್ನು  ಕೇವಲ  2 ತಿಂಗಳಲ್ಲಿ  2020  ಮುಗಿದೇ ಬಿಡುತ್ತದೆ. ಸುಮಾರು 7  ತಿಂಗಳಲ್ಲಿ  ಜನರ ವಿವಿಧ ಆಸಕ್ತಿಗಳೂ ನಿಂತೇ ಹೋಗಿತ್ತು. ಕೊರೋನಾ ಪ್ರಭಾವ ಕಡಿಮೆಯಾದಂತೆಯೇ ಕಡಿಮೆ ಜನರು ಸೇರಲು ಅವಕಾಶ ಸಿಕ್ಕಾಗ ಎಲ್ಲಾ ಹೊಸ ಸಾಧ್ಯತೆಗಳು ತೆರೆದುಕೊಂಡವು. ಅದರಲ್ಲಿ ಕಲಾ ಸೇವೆಯೂ ಒಂದು. ಅಂತಹ ಕಲಾ ಸೇವೆ ಈಗ ಮನೆ ಮನೆ ತಾಳಮದ್ದಳೆ ರೂಪದಲ್ಲಿ  ಆರಂಭವಾಗಿದೆ.

 

ದಕ್ಷಿಣ ಕನ್ನಡ ಜಿಲ್ಲೆಯು ಕಲಾರಾಧನೆಗೆ ಅದರಲ್ಲೂ ಯಕ್ಷಗಾನದ ನೆಲ. ಯಕ್ಷಗಾನ ಈ ಬಾರಿ ಬಹುಪಾಲು ನಿಂತೇ ಹೋಯಿತು, ಕೊರೋನಾ ಈ ಕಲೆಗೂ ಬಾಧೆ ನೀಡಿತು. ತಾಳಮದ್ದಳೆಯೂ ಅದರ ಒಂದು ಭಾಗ. ಕೊರೋನಾ ಇಫೆಕ್ಟ್‌ ಕಡಿಮೆಯಾಗುತ್ತಿದ್ದಂತೆಯೇ ಯಕ್ಷಗಾನಕ್ಕೆ ಅವಕಾಶ ನೀಡಿದರೂ ಹೆಚ್ಚು ಜನರು ಭಾಗವಹಿಸುವಂತಿಲ್ಲ.ಇದೇ ವೇಳೆ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಗುತ್ತಿಗಾರಿನ ಶ್ರೀಕೃಷ್ಣ ಯಕ್ಷಗಾನ ಹವ್ಯಾಸಿ ಕಲಾ ಬಳಗವು ಕಲಾಸಕ್ತರಿಗಾಗಿ ತಾಳಮದ್ದಳೆಯನ್ನು  ಹಮ್ಮಿಕೊಂಡಿತು. ಅದೂ ಉಚಿತವಾಗಿ. ಕಲಾ ಆಸಕ್ತರ ಮನೆಯಲ್ಲಿ ಉಚಿತವಾಗಿ ಶ್ರೀಕೃಷ್ಣ ಯಕ್ಷಗಾನ ಕಲಾ ಬಳಗದ ತಂಡದ ಸದಸ್ಯರು ತಾಳಮದ್ದಳೆ ನಡೆಸಿ ಕೊಡುತ್ತಿದ್ದಾರೆ. ಈಗಾಗಲೇ ಸುಮಾರು 10 ತಾಳಮದ್ದಳೆ ಉಚಿತವಾಗಿ ನಡೆಸಿದ್ದಾರೆ. ತಂಡದಲ್ಲಿ ಸುಮಾರು 10  ಕಲಾವಿದರು ಇದ್ದಾರೆ.

 

 

ಹಿಮ್ಮೇಳದಲ್ಲಿ ಭಾಗವತರಾಗಿ ಗೋಪಾಲಕೃಷ್ಣ ಭಟ್ ದೇವಸ್ಯ, ಗಂಗಾಧರ ಗೌಡ ರುದ್ರಚಾಮುಂಡಿ  , ಪ್ರತೀಕ್‌ ಆಚಾರ್ಯ ಕಂದ್ರಪ್ಪಾಡಿ, ಶಶಾಂಕ್‌ ಎಲಿಮಲೆ ‌

ಚೆಂಡೆ-ಮದ್ದಳೆಯಲ್ಲಿ  ಬಾಲಸುಬ್ರಹ್ಮಣ್ಯ ಭಟ್ ದೇವಸ್ಯ, ವೆಂಕಟೇಶ್‌ ಭಟ್ ದೇವಸ್ಯ,‌ ಲಕ್ಷ್ಮೀಶ ಶಗ್ರಿತ್ತಾಯ,

ಮುಮ್ಮೇಳದಲ್ಲಿ  ಬಾಬು ಗೌಡ ಅಚ್ರಪ್ಪಾಡಿ, ಕುಶಾಲಪ್ಪ ಮಾಸ್ತರ್‌ ಕಂದ್ರಪ್ಪಾಡಿ, ಶಿವಸುಬ್ರಹ್ಮಣ್ಯ ಜೋಯಿಸ ಕರುವಜೆ, ಶಿವಕುಮಾರ ಭಟ್ ಗುತ್ತಿಗಾರು, ಲಕ್ಷ್ಮೀಶ ಗಬ್ಲಡ್ಕ ,‌ ತಾರಾನಾಥ ಅಂಬೆಕಲ್ಲು, ಪಾಲನೇತ್ರ ಮುಂಡೋಡಿ, ರಾಜೇಶ್‌ ,ಮಾವಿನಕಟ್ಟೆ ಮೊದಲಾದವರು ಇದ್ದಾರೆ. ಮನೆ ಮನೆಗಳಲ್ಲಿ ಕಲಾಸೇವೆ ಮಾಡುವ ಈ ತಂಡ ಇದುವರೆಗೂ ಉಚಿತವಾಗಿ ಕಾರ್ಯಕ್ರಮ ನಡೆಸಿಕೊಟ್ಟಿದೆ. ಕಲಾಸೇವೆಯಲ್ಲಿ  ತೊಡಗಿಸಿದೆ.

 

 

ಕೊರೋನಾ ಸಮಯದಲ್ಲಿ  ಹಾಗೂ ಆ ನಂತರ ಕಲಾಸಕ್ತರಿಗೆ ಮನೋರಂಜನೆಯಲ್ಲಿ  ಕೊರತೆಯಾಗಬಾರದು ಎಂದು ಈ ಸೇವೆಯಲ್ಲಿ  ತೊಡಗಿದ್ದೇವೆ ಎಂದು ಹೇಳುತ್ತಾರೆ ಭಾಗವತ ಗೋಪಾಲಕೃಷ್ಣ ದೇವಸ್ಯ,
ಕಲೆ ಎನ್ನುವುದು ಜನರಿಗೆ ಹಾಗೂ ಕಲಾವಿದರಿಗೆ  ಮಾನಸಿಕ ಧೈರ್ಯ ಹಾಗೂ ನೋವು ಮರೆಸುವಲ್ಲಿ ಸಹಾಯಕವಾಗುತ್ತದೆ. ಹೀಗಾಗಿ ಈ ಕಲಾಸೇವೆಯಲ್ಲಿ ತೊಡಗಿಸಿಕೊಂಡಿದ್ದೇನೆ ಎಂದು ಹೇಳುತ್ತಾರೆ ಲಕ್ಷ್ಮೀಶ ಗಬ್ಲಡ್ಕ.
Tooltip content
ತಾಳಮದ್ದಳೆ ವಿಡಿಯೋ….

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಗುತ್ತಿಗಾರಿನಲ್ಲಿ ಮಹಿಳೆಯರ ನೇತೃತ್ವದಲ್ಲಿ ಗೇರು ಹಣ್ಣಿನ ಜ್ಯೂಸ್‌ ಘಟಕ ಆರಂಭ – ಮಹಿಳೆಯರ ನೇತೃತ್ವದಲ್ಲಿ ಗ್ರಾಮೀಣ ಉದ್ಯಮಕ್ಕೆ ಹೊಸ ದಿಕ್ಕು

ಸುಳ್ಯದ ಗುತ್ತಿಗಾರಿನಲ್ಲಿ ಮಹಿಳೆಯರ ನೇತೃತ್ವದಲ್ಲಿ ಗೇರು ಹಣ್ಣಿನ ಜ್ಯೂಸ್‌ ಘಟಕ ಆರಂಭವಾಗಿದೆ. ಮೌಲ್ಯವರ್ಧನೆಯ…

19 hours ago

ಅಡಿಕೆ ಎಲೆಚುಕ್ಕೆ ರೋಗದ ವಿರುದ್ಧ ಹೋರಾಟ – ಸಮುದಾಯ ಮಟ್ಟದಲ್ಲಿ ಕ್ರಿಯಾ ಯೋಜನೆಗೆ ಸಂಸದ ಬ್ರಿಜೇಶ್ ಚೌಟ ಕರೆ

ಗುತ್ತಿಗಾರಿನಲ್ಲಿ ಅಡಿಕೆ ಎಲೆಚುಕ್ಕೆ ರೋಗ ನಿಯಂತ್ರಣ ಕುರಿತು ಸಂವಾದ ಕಾರ್ಯಕ್ರಮ ನಡೆಯಿತು. ಸಮುದಾಯದ…

20 hours ago

ಹವಾಮಾನ ವರದಿ | 28-04-2026 | ಎಪ್ರಿಲ್ 29ರಿಂದ ಕರ್ನಾಟಕದಲ್ಲಿ ಮಳೆ ಚುರುಕು! ಕರಾವಳಿ–ಮಲೆನಾಡಿನಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ

29.04.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆಯ ಪ್ರಕಾರ ರಾಜ್ಯದಲ್ಲಿ ತಾಪಮಾನ…

2 days ago

ಹೆಸರಘಟ್ಟ ಹಕ್ಕಿಜ್ವರ ನಿಯಂತ್ರಣದಲ್ಲಿ | ಜನರಿಗೆ ಯಾವುದೇ ಆತಂಕ ಬೇಡ ಎಂದ ಆರೋಗ್ಯ ಇಲಾಖೆ

ಹೆಸರಘಟ್ಟದಲ್ಲಿ ಕಂಡುಬಂದ ಹಕ್ಕಿಜ್ವರವನ್ನು ಆರೋಗ್ಯ ಇಲಾಖೆ ಸಂಪೂರ್ಣ ನಿಯಂತ್ರಣಕ್ಕೆ ತಂದಿದೆ. ಮಾನವ ಸೋಂಕಿನ…

3 days ago

ಬಿಸಿಲಿನ ಬೇಗೆಯಲ್ಲಿ ಕಾಡಿಗೆ ಜೀವಜಲ..! ವನ್ಯಜೀವಿಗಳಿಗಾಗಿ ಕೃತಕ ನೀರಿನ ತೊಟ್ಟಿಗಳ ಮಹಾಯೋಜನೆ

ಬೇಸಿಗೆಯಲ್ಲಿ ವನ್ಯಜೀವಿಗಳಿಗೆ ನೀರಿನ ಕೊರತೆಯನ್ನು ತಡೆಯಲು ಅರಣ್ಯ ಇಲಾಖೆ ಕೃತಕ ನೀರಿನ ತೊಟ್ಟಿಗಳನ್ನು…

3 days ago

ಹವಾಮಾನ ವರದಿ | 26-04-2026 | ಸದ್ಯ ಸೆಖೆಯ ಉಗ್ರ ರೂಪ…! ಏಪ್ರಿಲ್ 28 ರಿಂದ ರಾಜ್ಯಾದ್ಯಂತ ಮಳೆ ಸಾಧ್ಯತೆ

ರಾಜ್ಯದಲ್ಲಿ ಭಾರಿ ಬಿಸಿಲು ಮುಂದುವರಿದಿದ್ದು, ಕೆಲವೆಡೆ ಗುಡುಗು ಸಹಿತ ಮಳೆಯ ಲಕ್ಷಣಗಳಿವೆ. ಏಪ್ರಿಲ್…

4 days ago