Advertisement
Exclusive - Mirror Hunt

ಕೊರೋನಾ ನಂತರದ ಬೆಳವಣಿಗೆ | ಮನೆ ಮನೆಯಲ್ಲಿ ತಾಳಮದ್ದಳೆ ಸೇವೆ | ಕಲಾಸೇವೆಯಲ್ಲಿ ತೊಡಗಿದ ಹವ್ಯಾಸಿ ಕಲಾವಿದರ ತಂಡ |

Share
ಕೊರೋನಾ ವೈರಸ್‌  ದೇಶದ ಇಡೀ ವರ್ಷದ ಚಟುವಟಿಕೆಯನ್ನು ನಿಲ್ಲಿಸಿಯೇ ಬಿಟ್ಟಿತು. ಇನ್ನು  ಕೇವಲ  2 ತಿಂಗಳಲ್ಲಿ  2020  ಮುಗಿದೇ ಬಿಡುತ್ತದೆ. ಸುಮಾರು 7  ತಿಂಗಳಲ್ಲಿ  ಜನರ ವಿವಿಧ ಆಸಕ್ತಿಗಳೂ ನಿಂತೇ ಹೋಗಿತ್ತು. ಕೊರೋನಾ ಪ್ರಭಾವ ಕಡಿಮೆಯಾದಂತೆಯೇ ಕಡಿಮೆ ಜನರು ಸೇರಲು ಅವಕಾಶ ಸಿಕ್ಕಾಗ ಎಲ್ಲಾ ಹೊಸ ಸಾಧ್ಯತೆಗಳು ತೆರೆದುಕೊಂಡವು. ಅದರಲ್ಲಿ ಕಲಾ ಸೇವೆಯೂ ಒಂದು. ಅಂತಹ ಕಲಾ ಸೇವೆ ಈಗ ಮನೆ ಮನೆ ತಾಳಮದ್ದಳೆ ರೂಪದಲ್ಲಿ  ಆರಂಭವಾಗಿದೆ.

 

ದಕ್ಷಿಣ ಕನ್ನಡ ಜಿಲ್ಲೆಯು ಕಲಾರಾಧನೆಗೆ ಅದರಲ್ಲೂ ಯಕ್ಷಗಾನದ ನೆಲ. ಯಕ್ಷಗಾನ ಈ ಬಾರಿ ಬಹುಪಾಲು ನಿಂತೇ ಹೋಯಿತು, ಕೊರೋನಾ ಈ ಕಲೆಗೂ ಬಾಧೆ ನೀಡಿತು. ತಾಳಮದ್ದಳೆಯೂ ಅದರ ಒಂದು ಭಾಗ. ಕೊರೋನಾ ಇಫೆಕ್ಟ್‌ ಕಡಿಮೆಯಾಗುತ್ತಿದ್ದಂತೆಯೇ ಯಕ್ಷಗಾನಕ್ಕೆ ಅವಕಾಶ ನೀಡಿದರೂ ಹೆಚ್ಚು ಜನರು ಭಾಗವಹಿಸುವಂತಿಲ್ಲ.ಇದೇ ವೇಳೆ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಗುತ್ತಿಗಾರಿನ ಶ್ರೀಕೃಷ್ಣ ಯಕ್ಷಗಾನ ಹವ್ಯಾಸಿ ಕಲಾ ಬಳಗವು ಕಲಾಸಕ್ತರಿಗಾಗಿ ತಾಳಮದ್ದಳೆಯನ್ನು  ಹಮ್ಮಿಕೊಂಡಿತು. ಅದೂ ಉಚಿತವಾಗಿ. ಕಲಾ ಆಸಕ್ತರ ಮನೆಯಲ್ಲಿ ಉಚಿತವಾಗಿ ಶ್ರೀಕೃಷ್ಣ ಯಕ್ಷಗಾನ ಕಲಾ ಬಳಗದ ತಂಡದ ಸದಸ್ಯರು ತಾಳಮದ್ದಳೆ ನಡೆಸಿ ಕೊಡುತ್ತಿದ್ದಾರೆ. ಈಗಾಗಲೇ ಸುಮಾರು 10 ತಾಳಮದ್ದಳೆ ಉಚಿತವಾಗಿ ನಡೆಸಿದ್ದಾರೆ. ತಂಡದಲ್ಲಿ ಸುಮಾರು 10  ಕಲಾವಿದರು ಇದ್ದಾರೆ.

 

 

ಹಿಮ್ಮೇಳದಲ್ಲಿ ಭಾಗವತರಾಗಿ ಗೋಪಾಲಕೃಷ್ಣ ಭಟ್ ದೇವಸ್ಯ, ಗಂಗಾಧರ ಗೌಡ ರುದ್ರಚಾಮುಂಡಿ  , ಪ್ರತೀಕ್‌ ಆಚಾರ್ಯ ಕಂದ್ರಪ್ಪಾಡಿ, ಶಶಾಂಕ್‌ ಎಲಿಮಲೆ ‌

ಚೆಂಡೆ-ಮದ್ದಳೆಯಲ್ಲಿ  ಬಾಲಸುಬ್ರಹ್ಮಣ್ಯ ಭಟ್ ದೇವಸ್ಯ, ವೆಂಕಟೇಶ್‌ ಭಟ್ ದೇವಸ್ಯ,‌ ಲಕ್ಷ್ಮೀಶ ಶಗ್ರಿತ್ತಾಯ,

ಮುಮ್ಮೇಳದಲ್ಲಿ  ಬಾಬು ಗೌಡ ಅಚ್ರಪ್ಪಾಡಿ, ಕುಶಾಲಪ್ಪ ಮಾಸ್ತರ್‌ ಕಂದ್ರಪ್ಪಾಡಿ, ಶಿವಸುಬ್ರಹ್ಮಣ್ಯ ಜೋಯಿಸ ಕರುವಜೆ, ಶಿವಕುಮಾರ ಭಟ್ ಗುತ್ತಿಗಾರು, ಲಕ್ಷ್ಮೀಶ ಗಬ್ಲಡ್ಕ ,‌ ತಾರಾನಾಥ ಅಂಬೆಕಲ್ಲು, ಪಾಲನೇತ್ರ ಮುಂಡೋಡಿ, ರಾಜೇಶ್‌ ,ಮಾವಿನಕಟ್ಟೆ ಮೊದಲಾದವರು ಇದ್ದಾರೆ. ಮನೆ ಮನೆಗಳಲ್ಲಿ ಕಲಾಸೇವೆ ಮಾಡುವ ಈ ತಂಡ ಇದುವರೆಗೂ ಉಚಿತವಾಗಿ ಕಾರ್ಯಕ್ರಮ ನಡೆಸಿಕೊಟ್ಟಿದೆ. ಕಲಾಸೇವೆಯಲ್ಲಿ  ತೊಡಗಿಸಿದೆ.

 

 

ಕೊರೋನಾ ಸಮಯದಲ್ಲಿ  ಹಾಗೂ ಆ ನಂತರ ಕಲಾಸಕ್ತರಿಗೆ ಮನೋರಂಜನೆಯಲ್ಲಿ  ಕೊರತೆಯಾಗಬಾರದು ಎಂದು ಈ ಸೇವೆಯಲ್ಲಿ  ತೊಡಗಿದ್ದೇವೆ ಎಂದು ಹೇಳುತ್ತಾರೆ ಭಾಗವತ ಗೋಪಾಲಕೃಷ್ಣ ದೇವಸ್ಯ,
ಕಲೆ ಎನ್ನುವುದು ಜನರಿಗೆ ಹಾಗೂ ಕಲಾವಿದರಿಗೆ  ಮಾನಸಿಕ ಧೈರ್ಯ ಹಾಗೂ ನೋವು ಮರೆಸುವಲ್ಲಿ ಸಹಾಯಕವಾಗುತ್ತದೆ. ಹೀಗಾಗಿ ಈ ಕಲಾಸೇವೆಯಲ್ಲಿ ತೊಡಗಿಸಿಕೊಂಡಿದ್ದೇನೆ ಎಂದು ಹೇಳುತ್ತಾರೆ ಲಕ್ಷ್ಮೀಶ ಗಬ್ಲಡ್ಕ.
Tooltip content
ತಾಳಮದ್ದಳೆ ವಿಡಿಯೋ….

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಆಸ್ಪತ್ರೆಗಳಲ್ಲಿ ಬಳಕೆಯಾಗದ ಔಷಧ ಮರುಬಳಕೆ – ಹಣವೂ ಉಳಿಯುತ್ತದೆ, ಪರಿಸರವೂ ಕಾಪಾಡುತ್ತದೆ..!

ಆಸ್ಪತ್ರೆಗಳಲ್ಲಿ ಬಳಕೆಯಾಗದೆ ಉಳಿಯುವ ಔಷಧಗಳನ್ನು ಸುರಕ್ಷಿತವಾಗಿ ಮರುಬಳಕೆ ಮಾಡಿದರೆ ಆರೋಗ್ಯ ಕ್ಷೇತ್ರದ ವೆಚ್ಚ…

5 hours ago

ಮಲೆನಾಡಿನಿಂದ ಬಯಲುನಾಡಿನತ್ತ ಅಡಿಕೆ ಬೆಳೆ ವಿಸ್ತರಣೆ : ರಾಣೆಬೆನ್ನೂರಿನಲ್ಲಿ ಹೆಚ್ಚಿದ ರೈತರ ಆಸಕ್ತಿ

ಹಾವೇರಿ ಜಿಲ್ಲೆಯ ರಾಣೆಬೆನ್ನೂರು ಭಾಗದಲ್ಲಿ ಅಡಿಕೆ ಬೆಳೆ ವೇಗವಾಗಿ ವಿಸ್ತರಿಸುತ್ತಿದ್ದು, ಉತ್ತಮ ಆದಾಯದ…

6 hours ago

ಕೊಂಬೆಯಲ್ಲ, ಕಾಂಡದಲ್ಲೇ ಗೊಂಚಲು ಗೊಂಚಲಾಗಿ ಹಣ್ಣು! ಪಶ್ಚಿಮ ಘಟ್ಟದ ಅಪರೂಪದ ‘ಕೋಳಿಜುಟ್ಟು’ ಹಣ್ಣಿನ ಕಥೆ

ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಕಾಡು ಹಣ್ಣು ಇದೀಗ ರೈತರ ತೋಟಗಳಲ್ಲೂ ಫಲ…

13 hours ago

ಕಾಡು ಹಣ್ಣು…. ಕೋಳಿ ಜುಟ್ಟು ಹಣ್ಣು…!

ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಹಣ್ಣು ಕಾಂಡದ ಮೇಲೆಯೇ ಗೊಂಚಲು ಗೊಂಚಲಾಗಿ ಬೆಳೆಯುವ…

14 hours ago

ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಒಡಿಶಾದಲ್ಲಿ ಭಾರಿ ಮಳೆ, ಹಲವು ಜಿಲ್ಲೆಗಳಲ್ಲಿ ರೆಡ್ ಅಲರ್ಟ್

ಬಂಗಾಳ ಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮ ಒಡಿಶಾದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ…

23 hours ago

ಭರ್ತಿಯಾಗುವ ಹಂತಕ್ಕೆ ಆಲಮಟ್ಟಿ ಜಲಾಶಯ – 114.896 ಟಿಎಂಸಿ ನೀರು ಸಂಗ್ರಹ, 73 ಸಾವಿರ ಕ್ಯೂಸೆಕ್ ಒಳಹರಿವು

ಆಲಮಟ್ಟಿ ಕೃಷ್ಣಾ ಜಲಾಶಯದಲ್ಲಿ 114.896 ಟಿಎಂಸಿ ನೀರು ಸಂಗ್ರಹವಾಗಿದ್ದು, ಜಲಾಶಯ ಭರ್ತಿಯಾಗಲು ಕೆಲವೇ…

24 hours ago