ಉತ್ತರಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಮೂರೂರು ಗ್ರಾಮದಲ್ಲಿ ಶಿವಮೂರ್ತಿ ಭಟ್ ಅವರು ಮರದ ಬೇರು, ಕಲ್ಲು ಹೀಗೆ ಬಳಸಿ ಬಿಸಾಡಿದ ನಿರುಪಯುಕ್ತ ಎನಿಸಿಕೊಂಡ ವಸ್ತುಗಳನ್ನ ತಂದು 400ಕ್ಕೂ ಅಧಿಕ ಕಲಾಕೃತಿಗಳನ್ನ ರೂಪಿಸುವ ಮೂಲಕ ಈ ಸಾಧನೆ ಮಾಡಿದ್ದಾರೆ.
ಅತೀ ಸೂಕ್ಷ್ಮ ಕೆತ್ತನೆ ಮೂಲಕ ತೆಂಗಿನ ಚಿಪ್ಪುಗಳಿಗೆ ಸುಂದರ ರೂಪ ನೀಡಿ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ನಲ್ಲಿ ಹೆಸರು ಮಾಡಿದ್ದಾರೆ. ತೆಂಗಿನ ಚಿಪ್ಪುಗಳು ನಾಜೂಕು ಸ್ಪರ್ಶದ ಕೆತ್ತನೆ ಮೂಲಕ ನೂರಾರು ಕಲಾಕೃತಿಗಳು ಜೀವಪಡೆದುಕೊಂಡಿವೆ. ಪ್ರಾಣಿಗಳು, ಪಕ್ಷಿಗಳು, ಮನುಷ್ಯರು, ದೇವರ ರೂಪಗಳನ್ನು ತೆಂಗಿನ ಚಿಪ್ಪಿನಲ್ಲಿ ಕೆತ್ತನೆ ಮಾಡಿದ್ದಾರೆ. ಇನ್ನೂರಕ್ಕೂ ಅಧಿಕ ಕಲಾಕೃತಿಗಳು ತೆಂಗಿನ ಚಿಪ್ಪಿನಲ್ಲೇ ಸಿದ್ದವಾಗಿದ್ದು, ಉಳಿದವು ಮರದ ಬೇರುಗಳಿಂದ ರೂಪಿತವಾಗಿವೆ. ಒಂದು ಇಂಚಿನಿಂದ ಹಿಡಿದು ಹತ್ತಾರು ಅಡಿ ಎತ್ತರದ ಕಲಾಕೃತಿಗಳನ್ನು ಮಾಡಿದ್ದಾರೆ.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel