ಉತ್ತರಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಮೂರೂರು ಗ್ರಾಮದಲ್ಲಿ ಶಿವಮೂರ್ತಿ ಭಟ್ ಅವರು ಮರದ ಬೇರು, ಕಲ್ಲು ಹೀಗೆ ಬಳಸಿ ಬಿಸಾಡಿದ ನಿರುಪಯುಕ್ತ ಎನಿಸಿಕೊಂಡ ವಸ್ತುಗಳನ್ನ ತಂದು 400ಕ್ಕೂ ಅಧಿಕ ಕಲಾಕೃತಿಗಳನ್ನ ರೂಪಿಸುವ ಮೂಲಕ ಈ ಸಾಧನೆ ಮಾಡಿದ್ದಾರೆ.
ಅತೀ ಸೂಕ್ಷ್ಮ ಕೆತ್ತನೆ ಮೂಲಕ ತೆಂಗಿನ ಚಿಪ್ಪುಗಳಿಗೆ ಸುಂದರ ರೂಪ ನೀಡಿ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ನಲ್ಲಿ ಹೆಸರು ಮಾಡಿದ್ದಾರೆ. ತೆಂಗಿನ ಚಿಪ್ಪುಗಳು ನಾಜೂಕು ಸ್ಪರ್ಶದ ಕೆತ್ತನೆ ಮೂಲಕ ನೂರಾರು ಕಲಾಕೃತಿಗಳು ಜೀವಪಡೆದುಕೊಂಡಿವೆ. ಪ್ರಾಣಿಗಳು, ಪಕ್ಷಿಗಳು, ಮನುಷ್ಯರು, ದೇವರ ರೂಪಗಳನ್ನು ತೆಂಗಿನ ಚಿಪ್ಪಿನಲ್ಲಿ ಕೆತ್ತನೆ ಮಾಡಿದ್ದಾರೆ. ಇನ್ನೂರಕ್ಕೂ ಅಧಿಕ ಕಲಾಕೃತಿಗಳು ತೆಂಗಿನ ಚಿಪ್ಪಿನಲ್ಲೇ ಸಿದ್ದವಾಗಿದ್ದು, ಉಳಿದವು ಮರದ ಬೇರುಗಳಿಂದ ರೂಪಿತವಾಗಿವೆ. ಒಂದು ಇಂಚಿನಿಂದ ಹಿಡಿದು ಹತ್ತಾರು ಅಡಿ ಎತ್ತರದ ಕಲಾಕೃತಿಗಳನ್ನು ಮಾಡಿದ್ದಾರೆ.
ಪವರ್ ಸ್ಪ್ರೇಯರ್ ಸಮಸ್ಯೆಯ ಅನುಭವದ ಮೂಲಕ E20 ಪೆಟ್ರೋಲ್ನ ಪರಿಣಾಮಗಳ ಬಗ್ಗೆ ಪ್ರಶ್ನೆ…
ಮ್ಯಾನ್ಮಾರ್ನಿಂದ ಅಕ್ರಮ ಅಡಿಕೆ ಸಾಗಾಟ ಮಾಡಿ ₹1,500 ಕೋಟಿ ಹಣ ವರ್ಗಾವಣೆ ನಡೆಸಿದ…
ಮಹಾರಾಷ್ಟ್ರದಲ್ಲಿ ತಡೆಹಿಡಿದಿರುವ 50ಕ್ಕೂ ಹೆಚ್ಚು ಅಡಿಕೆ ಲಾರಿಗಳನ್ನು ಬಿಡುಗಡೆ ಮಾಡುವಂತೆ ಫಡ್ನವೀಸ್ಗೆ ಅಡಿಕೆ…
ಭಾರೀ ಮಳೆ ಹಿನ್ನೆಲೆಯಲ್ಲಿ ಜುಲೈ 8ರಂದು ರಾಜ್ಯದ ಹಲವು ಜಿಲ್ಲೆಗಳ ಶಾಲೆ-ಕಾಲೇಜುಗಳಿಗೆ ರಜೆ…
2026-27ರ ಮುಂಗಾರು ಬೆಳೆ ಸಮೀಕ್ಷೆಗೆ ಚಾಲನೆ; ರೈತರು ಮೊಬೈಲ್ ಆ್ಯಪ್ ಮೂಲಕವೇ ಬೆಳೆ…
ಮಾಣಿ–ಸಂಪಾಜೆ ರಾಷ್ಟ್ರೀಯ ಹೆದ್ದಾರಿ ದುರಸ್ತಿಗೆ ಕೇಂದ್ರದಿಂದ ₹49.22 ಕೋಟಿ ವಿಶೇಷ ಅನುದಾನ ಮಂಜೂರು.…