ಯಾರಲ್ಲಿ ಹೆಚ್ಚು ಆತ್ಮವಿಶ್ವಾಸ ಇರುತ್ತದೆಯೋ ಅವರಲ್ಲಿ ದೃಢ ನಿರ್ಧಾರ ಕೈಗೊಳ್ಳುವ ಸಾಮರ್ಥ್ಯ ಮನೋಭಾವ ಇರುತ್ತದೆ.ಅಂತವರು ತಮ್ಮ ಗುರಿಗಳನ್ನು ಬೇಗ ಮುಟ್ಟುತ್ತಾರೆ ಎಂದು ನಿವೃತ್ತ ಪ್ರಾಧ್ಯಾಪಕ ಪ್ರೊ. ವಿ. ಬಿ. ಅರ್ತಿಕಜೆ ಹೇಳಿದರು.
ಅವರು ಪುತ್ತೂರು ವಿವೇಕಾನಂದ ಪದವಿಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ಕಲಾ ವಿಭಾಗದ ವಿದ್ಯಾರ್ಥಿಗಳು ಅವರ ಮನೆಗೆ ತೆರಳಿ ಸಂದರ್ಶಿಸಿ ವಿಶೇಷ ಸಂವಾದ ನಡೆಸಿದರು. ತಮ್ಮ ಯೋಚನೆಗೆ ತಕ್ಕಂತೆ, ಬುದ್ದಿವಂತಿಕೆಗೆ ಅನುಗುಣವಾಗಿ ಕೆಲಸವನ್ನು ಹಿಡಿಯುವಲ್ಲಿ ಕಾರ್ಯನಿರತರಾಗುವುದು ಉತ್ತಮ. ಹಾಗೆಯೇ ದೊಡ್ಡವರಾದ ನಂತರ ತಮಗೆ ಬೇಕಾದ ವಸ್ತುಗಳನ್ನು ತಾವೇ ನಿರ್ಧರಿಸಿ ಸರಿಯಾದ ದಾರಿಯಲ್ಲಿ ಹೋಗುವುದು ಪ್ರತಿಯೊಬ್ಬನ ಕರ್ತವ್ಯ. ಅಲ್ಲದೆ ಶಿಕ್ಷಣದಲ್ಲಿ ಸಂಸ್ಕಾರವನ್ನು ಕಲಿತುಕೊಂಡು ಮನುಷ್ಯತ್ವವನ್ನು ಬೆಳೆಸುವುದು. ಈ ಮೂಲಕ ಸುಪ್ತ ಪ್ರತಿಭೆಯನ್ನು ಪ್ರಕಾಶಿಸಬೇಕು ಎಂದು ಹೇಳಿದರು.
ಸಂವಾದವನ್ನು ಕಾಲೇಜಿನ ಕಲಾ ವಿಭಾಗದ ವಿದ್ಯಾರ್ಥಿಗಳಾದ ವಸುದೇವ ತಿಲಕ್, ದಿಶಾ, ವರ್ಷ,ವೈಷ್ಣವಿ ಶೆಟ್ಟಿ ಮತ್ತು ದೇವಯಾನಿ ನಡೆಸಿದರು. ಉಪನ್ಯಾಸಕಿಯರಾದ ಸಾಯಿಸುಧಾ ಮತ್ತು ಕವಿತಾ ಸಂವಾದದಲ್ಲಿ ಭಾಗಿಯಾಗಿದ್ದರು.
ರಾಜ್ಯದ ಕರಾವಳಿ ಜಿಲ್ಲೆಗಳು ಸೇರಿದಂತೆ ಹಲವೆಡೆ ಅಬ್ಬರಿಸಿದ್ದ ಮಳೆ ಇಂದು ಇಳಿಮುಖವಾಗಿದೆ. ಕರಾವಳಿ…
ಹಲವಾರು ವಿದ್ಯಾರ್ಥಿಗಳಿಗೆ, ಪೋಷಕರಿಗೆ ತಮ್ಮ ಮಕ್ಕಳು ಎಸ್ಎಸ್ ಎಲ್ಸಿ , ಪಿಯುಸಿ ಆದ…
ಭತ್ತದ ಬೆಳೆ ಬೆಳೆಯುವ ರೈತರಿಗೆ ಪ್ರಧಾನಮಂತ್ರಿ ಫಸಲ್ ಭಿಮಾ ಯೋಜನೆಯ ವಿಮಾ ಪ್ರೀಮಿಯಂ…
ಕೇರಳದ ವಯನಾಡಿನಲ್ಲಿ ಧಾರಾಕಾರ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಮೈಸೂರು ಜಿಲ್ಲೆ ಎಚ್.ಡಿ.ಕೋಟೆ ತಾಲ್ಲೂಕಿನ ಬೀಚನಹಳ್ಳಿಯಲ್ಲಿರುವ…
ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಕಲ್ಲಡ್ಕದಲ್ಲಿ ಪ್ಲೈಓವರ್ ಮೂಲಕ ವಾಹನ ಓಡಾಟ ಆರಂಭವಾಗಿದೆ. ಹೀಗಾಗಿ…
ಗೇರು ಒಂದು ವಾಣಿಜ್ಯ ಬೆಳೆಯಾಗಿದ್ದು ಇದು ಗ್ರಾಮೀಣ ಭಾಗದ ರೈತರ ಮೂಲಸಂಪತ್ತು.…