ಯಾರಲ್ಲಿ ಹೆಚ್ಚು ಆತ್ಮವಿಶ್ವಾಸ ಇರುತ್ತದೆಯೋ ಅವರಲ್ಲಿ ದೃಢ ನಿರ್ಧಾರ ಕೈಗೊಳ್ಳುವ ಸಾಮರ್ಥ್ಯ ಮನೋಭಾವ ಇರುತ್ತದೆ.ಅಂತವರು ತಮ್ಮ ಗುರಿಗಳನ್ನು ಬೇಗ ಮುಟ್ಟುತ್ತಾರೆ ಎಂದು ನಿವೃತ್ತ ಪ್ರಾಧ್ಯಾಪಕ ಪ್ರೊ. ವಿ. ಬಿ. ಅರ್ತಿಕಜೆ ಹೇಳಿದರು.
ಅವರು ಪುತ್ತೂರು ವಿವೇಕಾನಂದ ಪದವಿಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ಕಲಾ ವಿಭಾಗದ ವಿದ್ಯಾರ್ಥಿಗಳು ಅವರ ಮನೆಗೆ ತೆರಳಿ ಸಂದರ್ಶಿಸಿ ವಿಶೇಷ ಸಂವಾದ ನಡೆಸಿದರು. ತಮ್ಮ ಯೋಚನೆಗೆ ತಕ್ಕಂತೆ, ಬುದ್ದಿವಂತಿಕೆಗೆ ಅನುಗುಣವಾಗಿ ಕೆಲಸವನ್ನು ಹಿಡಿಯುವಲ್ಲಿ ಕಾರ್ಯನಿರತರಾಗುವುದು ಉತ್ತಮ. ಹಾಗೆಯೇ ದೊಡ್ಡವರಾದ ನಂತರ ತಮಗೆ ಬೇಕಾದ ವಸ್ತುಗಳನ್ನು ತಾವೇ ನಿರ್ಧರಿಸಿ ಸರಿಯಾದ ದಾರಿಯಲ್ಲಿ ಹೋಗುವುದು ಪ್ರತಿಯೊಬ್ಬನ ಕರ್ತವ್ಯ. ಅಲ್ಲದೆ ಶಿಕ್ಷಣದಲ್ಲಿ ಸಂಸ್ಕಾರವನ್ನು ಕಲಿತುಕೊಂಡು ಮನುಷ್ಯತ್ವವನ್ನು ಬೆಳೆಸುವುದು. ಈ ಮೂಲಕ ಸುಪ್ತ ಪ್ರತಿಭೆಯನ್ನು ಪ್ರಕಾಶಿಸಬೇಕು ಎಂದು ಹೇಳಿದರು.
ಸಂವಾದವನ್ನು ಕಾಲೇಜಿನ ಕಲಾ ವಿಭಾಗದ ವಿದ್ಯಾರ್ಥಿಗಳಾದ ವಸುದೇವ ತಿಲಕ್, ದಿಶಾ, ವರ್ಷ,ವೈಷ್ಣವಿ ಶೆಟ್ಟಿ ಮತ್ತು ದೇವಯಾನಿ ನಡೆಸಿದರು. ಉಪನ್ಯಾಸಕಿಯರಾದ ಸಾಯಿಸುಧಾ ಮತ್ತು ಕವಿತಾ ಸಂವಾದದಲ್ಲಿ ಭಾಗಿಯಾಗಿದ್ದರು.
ಆಂದ್ರಾ ಕರಾವಳಿಯಲ್ಲಿ ಸಣ್ಣ ಪ್ರಮಾಣದ ವಾಯುಭಾರ ಕುಸಿತದಂತಹ ತಿರುವಿಕೆ ಉಂಟಾಗಿದ್ದು, ಮುಂದಿನ ಪರಿಣಾಮ…
ಕಬ್ಬಿನ ದರ ನಿಗದಿ ಮಾಡುವ ಸಂದರ್ಭದಲ್ಲಿ ಉತ್ತರ ಕರ್ನಾಟಕ ಹಾಗೂ ದಕ್ಷಿಣ ಕರ್ನಾಟಕದಲ್ಲಿ …
ಕೇಂದ್ರ ಸರ್ಕಾರ ಹರಳು ರೂಪದ ಯೂರಿಯ ಬದಲಾಗಿ ನ್ಯಾನೋ ಯೂರಿಯಾ ಬಳಕೆಗೆ ಹೆಚ್ಚು…
ಮಹಿಳೆಯರನ್ನು ಆರ್ಥಿಕ ಸ್ವಾವಲಂಬಿಗಳನ್ನಾಗಿ ಮಾಡುವ ಕೇಂದ್ರ ಸರ್ಕಾರದ ಮಹತ್ವಕಾಂಕ್ಷಿ ಯೋಜನೆ ‘ಲಕ್ ಪತಿ …
ಆರೋಗ್ಯವು ಜೀವನದ ಮೂಲಾಧಾರವಾಗಿದ್ದು, ವೈದಿಕ ಜ್ಯೋತಿಷ್ಯದ ಪ್ರಕಾರ ಗ್ರಹಗಳ ಚಲನೆಯು ಆರೋಗ್ಯ ಮತ್ತು…
ಭಾರೀ ಮಳೆ ಮುನ್ಸೂಚನೆ ಹಿನ್ನೆಲೆಯಲ್ಲಿ ಭಾರತೀಯ ಹವಾಮಾನ ಇಲಾಖೆ ರಾಜ್ಯದ ಕರಾವಳಿ ಹಾಗೂ…