ಯಾರಲ್ಲಿ ಹೆಚ್ಚು ಆತ್ಮವಿಶ್ವಾಸ ಇರುತ್ತದೆಯೋ ಅವರಲ್ಲಿ ದೃಢ ನಿರ್ಧಾರ ಕೈಗೊಳ್ಳುವ ಸಾಮರ್ಥ್ಯ ಮನೋಭಾವ ಇರುತ್ತದೆ.ಅಂತವರು ತಮ್ಮ ಗುರಿಗಳನ್ನು ಬೇಗ ಮುಟ್ಟುತ್ತಾರೆ ಎಂದು ನಿವೃತ್ತ ಪ್ರಾಧ್ಯಾಪಕ ಪ್ರೊ. ವಿ. ಬಿ. ಅರ್ತಿಕಜೆ ಹೇಳಿದರು.
ಅವರು ಪುತ್ತೂರು ವಿವೇಕಾನಂದ ಪದವಿಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ಕಲಾ ವಿಭಾಗದ ವಿದ್ಯಾರ್ಥಿಗಳು ಅವರ ಮನೆಗೆ ತೆರಳಿ ಸಂದರ್ಶಿಸಿ ವಿಶೇಷ ಸಂವಾದ ನಡೆಸಿದರು. ತಮ್ಮ ಯೋಚನೆಗೆ ತಕ್ಕಂತೆ, ಬುದ್ದಿವಂತಿಕೆಗೆ ಅನುಗುಣವಾಗಿ ಕೆಲಸವನ್ನು ಹಿಡಿಯುವಲ್ಲಿ ಕಾರ್ಯನಿರತರಾಗುವುದು ಉತ್ತಮ. ಹಾಗೆಯೇ ದೊಡ್ಡವರಾದ ನಂತರ ತಮಗೆ ಬೇಕಾದ ವಸ್ತುಗಳನ್ನು ತಾವೇ ನಿರ್ಧರಿಸಿ ಸರಿಯಾದ ದಾರಿಯಲ್ಲಿ ಹೋಗುವುದು ಪ್ರತಿಯೊಬ್ಬನ ಕರ್ತವ್ಯ. ಅಲ್ಲದೆ ಶಿಕ್ಷಣದಲ್ಲಿ ಸಂಸ್ಕಾರವನ್ನು ಕಲಿತುಕೊಂಡು ಮನುಷ್ಯತ್ವವನ್ನು ಬೆಳೆಸುವುದು. ಈ ಮೂಲಕ ಸುಪ್ತ ಪ್ರತಿಭೆಯನ್ನು ಪ್ರಕಾಶಿಸಬೇಕು ಎಂದು ಹೇಳಿದರು.
ಸಂವಾದವನ್ನು ಕಾಲೇಜಿನ ಕಲಾ ವಿಭಾಗದ ವಿದ್ಯಾರ್ಥಿಗಳಾದ ವಸುದೇವ ತಿಲಕ್, ದಿಶಾ, ವರ್ಷ,ವೈಷ್ಣವಿ ಶೆಟ್ಟಿ ಮತ್ತು ದೇವಯಾನಿ ನಡೆಸಿದರು. ಉಪನ್ಯಾಸಕಿಯರಾದ ಸಾಯಿಸುಧಾ ಮತ್ತು ಕವಿತಾ ಸಂವಾದದಲ್ಲಿ ಭಾಗಿಯಾಗಿದ್ದರು.
ಕರ್ನಾಟಕದಲ್ಲಿ ಮಳೆಯ ಚಟುವಟಿಕೆ ಮತ್ತೆ ಹೆಚ್ಚಾಗುವ ಸೂಚನೆ ದೊರೆತಿದ್ದು, ಮುಂದಿನ ಏಳು ದಿನಗಳ…
ಭಾರತದ ತೆಂಗಿನಕಾಯಿ ರಫ್ತು ಮೌಲ್ಯ ಒಂದೇ ವರ್ಷದಲ್ಲಿ ಶೇ.62ರಷ್ಟು ಏರಿಕೆಯಾಗಿ ₹7,038 ಕೋಟಿಗೆ…
ಒಡಿಶಾದ ಬಾಲಸೋರ್ನಲ್ಲಿ ಸಮುದ್ರ ಮಾರ್ಗದ ಮೂಲಕ ಅಡಿಕೆ ಸಾಗಾಟದ ಹಲವು ಪ್ರಕರಣಗಳು ಪತ್ತೆಯಾಗಿದ್ದು,…
ಕರ್ನಾಟಕದ ಹಲವು ಭಾಗಗಳಲ್ಲಿ ಮಳೆ ಮುಂದುವರಿಯುವ ಸೂಚನೆ ಇದ್ದು, ಸೆ.22ರಿಂದ ಕರಾವಳಿ–ಮಲೆನಾಡಿನಲ್ಲಿ ಮಳೆ…
ತಂದೆಯ ನೆನಪಿಗಾಗಿ ಇಂದೋರ್ನ ವ್ಯಕ್ತಿಯೊಬ್ಬರು ಗೋಮಯದಿಂದ ಪರಿಸರ ಸ್ನೇಹಿ ಗಣೇಶ ಮೂರ್ತಿಗಳನ್ನು ತಯಾರಿಸಿ…
ಸೆ.18ರಿಂದ ಕರ್ನಾಟಕದ ಹಲವು ಭಾಗಗಳಲ್ಲಿ ಮಳೆ ಚುರುಕಾಗುವ ಸೂಚನೆ ಇದ್ದು, ಸೆ.19ರಿಂದ ಉತ್ತರ…