ಯಾರಲ್ಲಿ ಹೆಚ್ಚು ಆತ್ಮವಿಶ್ವಾಸ ಇರುತ್ತದೆಯೋ ಅವರಲ್ಲಿ ದೃಢ ನಿರ್ಧಾರ ಕೈಗೊಳ್ಳುವ ಸಾಮರ್ಥ್ಯ ಮನೋಭಾವ ಇರುತ್ತದೆ.ಅಂತವರು ತಮ್ಮ ಗುರಿಗಳನ್ನು ಬೇಗ ಮುಟ್ಟುತ್ತಾರೆ ಎಂದು ನಿವೃತ್ತ ಪ್ರಾಧ್ಯಾಪಕ ಪ್ರೊ. ವಿ. ಬಿ. ಅರ್ತಿಕಜೆ ಹೇಳಿದರು.
ಅವರು ಪುತ್ತೂರು ವಿವೇಕಾನಂದ ಪದವಿಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ಕಲಾ ವಿಭಾಗದ ವಿದ್ಯಾರ್ಥಿಗಳು ಅವರ ಮನೆಗೆ ತೆರಳಿ ಸಂದರ್ಶಿಸಿ ವಿಶೇಷ ಸಂವಾದ ನಡೆಸಿದರು. ತಮ್ಮ ಯೋಚನೆಗೆ ತಕ್ಕಂತೆ, ಬುದ್ದಿವಂತಿಕೆಗೆ ಅನುಗುಣವಾಗಿ ಕೆಲಸವನ್ನು ಹಿಡಿಯುವಲ್ಲಿ ಕಾರ್ಯನಿರತರಾಗುವುದು ಉತ್ತಮ. ಹಾಗೆಯೇ ದೊಡ್ಡವರಾದ ನಂತರ ತಮಗೆ ಬೇಕಾದ ವಸ್ತುಗಳನ್ನು ತಾವೇ ನಿರ್ಧರಿಸಿ ಸರಿಯಾದ ದಾರಿಯಲ್ಲಿ ಹೋಗುವುದು ಪ್ರತಿಯೊಬ್ಬನ ಕರ್ತವ್ಯ. ಅಲ್ಲದೆ ಶಿಕ್ಷಣದಲ್ಲಿ ಸಂಸ್ಕಾರವನ್ನು ಕಲಿತುಕೊಂಡು ಮನುಷ್ಯತ್ವವನ್ನು ಬೆಳೆಸುವುದು. ಈ ಮೂಲಕ ಸುಪ್ತ ಪ್ರತಿಭೆಯನ್ನು ಪ್ರಕಾಶಿಸಬೇಕು ಎಂದು ಹೇಳಿದರು.
ಸಂವಾದವನ್ನು ಕಾಲೇಜಿನ ಕಲಾ ವಿಭಾಗದ ವಿದ್ಯಾರ್ಥಿಗಳಾದ ವಸುದೇವ ತಿಲಕ್, ದಿಶಾ, ವರ್ಷ,ವೈಷ್ಣವಿ ಶೆಟ್ಟಿ ಮತ್ತು ದೇವಯಾನಿ ನಡೆಸಿದರು. ಉಪನ್ಯಾಸಕಿಯರಾದ ಸಾಯಿಸುಧಾ ಮತ್ತು ಕವಿತಾ ಸಂವಾದದಲ್ಲಿ ಭಾಗಿಯಾಗಿದ್ದರು.
ಮುಂದಿನ 3 ಗಂಟೆಗಳ ಕಾಲ ಉಡುಪಿ, ದಕ್ಷಿಣ ಕನ್ನಡ ಸೇರಿದಂತೆ ನಾಲ್ಕು ಜಿಲ್ಲೆಗಳಲ್ಲಿ…
ಯುವಕರ ಮೊದಲ ಆದ್ಯತೆ ರಾಜಕೀಯವಲ್ಲ, ಕೌಶಲ್ಯ ಮತ್ತು ಆರ್ಥಿಕ ಸ್ವಾವಲಂಬನೆ ಆಗಿರಬೇಕು ಎಂಬುದು…
ಜುಲೈ 16ರಿಂದ ಕರಾವಳಿ ಹಾಗೂ ಮಲೆನಾಡಿನ ಕೆಲವು ಭಾಗಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆ…
ರಾಜ್ಯದ ಕರಾವಳಿ ಹಾಗೂ ಒಳನಾಡಿನ ಕೆಲವು ಜಿಲ್ಲೆಗಳಿಗೆ IMD ಯೆಲ್ಲೋ ಅಲರ್ಟ್ ಘೋಷಿಸಿದೆ.…
ಭುವನೇಶ್ವರದಲ್ಲಿ ಪ್ರತಿದಿನ ಸಾವಿರಾರು ತೆಂಗಿನಕಾಯಿ ತ್ಯಾಜ್ಯವನ್ನು ಕೊಕೊಪೀಟ್, ಹಗ್ಗ ಹಾಗೂ ಚಾಪೆಗಳಾಗಿ ಪರಿವರ್ತಿಸಿ…
ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರದಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು, ರೈತರಿಗೆ ಎಕರೆಗೆ ₹50 ಸಾವಿರ…