ಯಾರಲ್ಲಿ ಹೆಚ್ಚು ಆತ್ಮವಿಶ್ವಾಸ ಇರುತ್ತದೆಯೋ ಅವರಲ್ಲಿ ದೃಢ ನಿರ್ಧಾರ ಕೈಗೊಳ್ಳುವ ಸಾಮರ್ಥ್ಯ ಮನೋಭಾವ ಇರುತ್ತದೆ.ಅಂತವರು ತಮ್ಮ ಗುರಿಗಳನ್ನು ಬೇಗ ಮುಟ್ಟುತ್ತಾರೆ ಎಂದು ನಿವೃತ್ತ ಪ್ರಾಧ್ಯಾಪಕ ಪ್ರೊ. ವಿ. ಬಿ. ಅರ್ತಿಕಜೆ ಹೇಳಿದರು.
ಅವರು ಪುತ್ತೂರು ವಿವೇಕಾನಂದ ಪದವಿಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ಕಲಾ ವಿಭಾಗದ ವಿದ್ಯಾರ್ಥಿಗಳು ಅವರ ಮನೆಗೆ ತೆರಳಿ ಸಂದರ್ಶಿಸಿ ವಿಶೇಷ ಸಂವಾದ ನಡೆಸಿದರು. ತಮ್ಮ ಯೋಚನೆಗೆ ತಕ್ಕಂತೆ, ಬುದ್ದಿವಂತಿಕೆಗೆ ಅನುಗುಣವಾಗಿ ಕೆಲಸವನ್ನು ಹಿಡಿಯುವಲ್ಲಿ ಕಾರ್ಯನಿರತರಾಗುವುದು ಉತ್ತಮ. ಹಾಗೆಯೇ ದೊಡ್ಡವರಾದ ನಂತರ ತಮಗೆ ಬೇಕಾದ ವಸ್ತುಗಳನ್ನು ತಾವೇ ನಿರ್ಧರಿಸಿ ಸರಿಯಾದ ದಾರಿಯಲ್ಲಿ ಹೋಗುವುದು ಪ್ರತಿಯೊಬ್ಬನ ಕರ್ತವ್ಯ. ಅಲ್ಲದೆ ಶಿಕ್ಷಣದಲ್ಲಿ ಸಂಸ್ಕಾರವನ್ನು ಕಲಿತುಕೊಂಡು ಮನುಷ್ಯತ್ವವನ್ನು ಬೆಳೆಸುವುದು. ಈ ಮೂಲಕ ಸುಪ್ತ ಪ್ರತಿಭೆಯನ್ನು ಪ್ರಕಾಶಿಸಬೇಕು ಎಂದು ಹೇಳಿದರು.
ಸಂವಾದವನ್ನು ಕಾಲೇಜಿನ ಕಲಾ ವಿಭಾಗದ ವಿದ್ಯಾರ್ಥಿಗಳಾದ ವಸುದೇವ ತಿಲಕ್, ದಿಶಾ, ವರ್ಷ,ವೈಷ್ಣವಿ ಶೆಟ್ಟಿ ಮತ್ತು ದೇವಯಾನಿ ನಡೆಸಿದರು. ಉಪನ್ಯಾಸಕಿಯರಾದ ಸಾಯಿಸುಧಾ ಮತ್ತು ಕವಿತಾ ಸಂವಾದದಲ್ಲಿ ಭಾಗಿಯಾಗಿದ್ದರು.
ರಾಜ್ಯದ 101 ತಾಲ್ಲೂಕುಗಳನ್ನು ಬರಪೀಡಿತ ಎಂದು ಘೋಷಿಸಲಾಗಿದ್ದು, 89 ತೀವ್ರ ಹಾಗೂ 12…
ರಾಜ್ಯದ 101 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಹಿನ್ನೆಲೆಯಲ್ಲಿ ಗ್ರಾಮೀಣ ಜನರ ಬೇಡಿಕೆಗೆ ಅನುಗುಣವಾಗಿ…
ಕರ್ನಾಟಕದಲ್ಲಿ ಮುಂಗಾರು ಸದ್ಯ ದುರ್ಬಲಗೊಂಡಿದ್ದು, ಬಹುತೇಕ ಕಡೆ ಬಿಸಿಲು–ಮೋಡದ ವಾತಾವರಣ ಹಾಗೂ ಅಲ್ಲಲ್ಲಿ…
ಜಗತ್ತು ಸದಾ ನಮ್ಮ ಜೊತೆಗಿರುತ್ತದೆ ಎಂಬ ನಿರೀಕ್ಷೆಗಿಂತ, ಪರಿಸ್ಥಿತಿ ಬದಲಾದರೂ ನಮ್ಮ ದಾರಿಯಲ್ಲಿ…
ಮಾರುಕಟ್ಟೆಗೆ ಯೋಗ್ಯವಲ್ಲದ ತೆಂಗಿನಕಾಯಿಯಿಂದ ಪಡೆದ ತೆಂಗಿನ ಎಣ್ಣೆಯನ್ನು ಬಳಸಿ ಸುಸ್ಥಿರ ವಿಮಾನ ಇಂಧನ…
ಕೃಷಿ ಮತ್ತು ಕೃಷಿ ಸಂಬಂಧಿತ ಕ್ಷೇತ್ರಗಳು ಯುವ ಉದ್ಯಮಶೀಲತೆಗೆ ಮುಂದಿನ ದೊಡ್ಡ ಅವಕಾಶಗಳಾಗಿದ್ದು,…