Opinion

ಮಣ್ಣಿನೊಂದಿಗೆ ಮಾತುಕತೆ | ವಿಸ್ತಾರಗೊಂಡ ಮಾಹಿತಿ – ಅನುಭವ ಹಂಚಿಕೆ |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ತುಂಗಭದ್ರಾ ಎಡದಂಡೆ ನಾಲೆಯ ಪಕ್ಕದಲ್ಲೇ ಹಸಿರಿನಿಂದ ಕಂಗೊಳಿಸುವ ಭತ್ತದ ಗದ್ದೆಗಳು. ಅದರಲ್ಲಿ ರಸವಿಷದಿಂದ ತೋಯ್ದ ಗದ್ದೆಗಳೆಷ್ಟೋ? ಆದರೆ ಮಲ್ಲನಗೌಡ ಮಾಲಿ ಪಾಟೀಲ ಕೃಷಿ ವಿಭಿನ್ನ. ‘ಮಣ್ಣಿಗೆ ರಾಸಾಯನಿಕ(Chemical) ಸುರಿಯುವ ಬದಲಿಗೆ, ಎರೆಜಲ ಹಾಗೂ ಗೋಕೃಪಾಮೃತ ಬಳಸುತ್ತ, ಸಾವಯವದಲ್ಲಿ ಭತ್ತ ಬೆಳೆಯುತ್ತಿರುವೆ’ ಎಂದರು ಮಲ್ಲನ ಗೌಡ ಮಾಲಿಪಾಟೀಲ. ಭತ್ತದ ಜತೆಗೆ ಒಂದೂವರೆ ಎಕರೆ ತೋಟದಲ್ಲಿ ತರಹೇವಾರಿ ಹಣ್ಣಿನ ಗಿಡಗಳನ್ನೂ, ಸೊಪ್ಪು-ತರಕಾರಿ- ಔಷಧೀಯ ಮೂಲಿಕೆಗಳನ್ನೂ ಮಲ್ಲನಗೌಡರು ಬೆಳೆಯುತ್ತಿದ್ದಾರೆ.

Advertisement

ಕನಕಗಿರಿ ತಾಲ್ಲೂಕಿನ ಜೀರಾಳಕಲ್ಗುಡಿ ಗ್ರಾಮದ ಹೊರವಲಯದಲ್ಲಿನ ಮಲ್ಲನಗೌಡರ ತೋಟದಲ್ಲಿ ‘ಮಣ್ಣಿನೊಂದಿಗೆ ಮಾತುಕತೆ’ಯ 23ನೇ ಆವೃತ್ತಿ  ಕಳೆದ ಭಾನುವಾರ ನಡೆಯಿತು. ಬಾಳೆ, ದಾಳಿಂಬೆ ಹಾಗೂ ಬೀಜೋತ್ಪಾದನೆ ವಲಯದಲ್ಲಿ ಹಲವಾರು ಏರಿಳಿತ ಕಂಡಿರುವ ಮಲ್ಲನಗೌಡರು ಈಚೀಚೆಗೆ ಸಾವಯವದತ್ತ(Organic) ಹೊರಳಿದವರು. ಗುಜರಾತಿನ ಗೋಪಾಲಭಾಯಿ ಸುತಾರಿಯಾ ಅವರ ಸಲಹೆ ಮೇರೆಗೆ ವಿಷಮುಕ್ತ ಕೃಷಿ(Toxic free farming) ಮಾಡಲು ಮುಂದಾಗಿದ್ದಾರೆ.

ಮಾತುಕತೆ ವಿಷಯ: ‘ಬರ ಎದುರಿಸುವ ದಾರಿಗಳು.’ ಉತ್ತರ ಕರ್ನಾಟಕ ಕೃಷಿಯ ಜೀವಾಳವಾಗಿದ್ದ ಸಿರಿಧಾನ್ಯಗಳು, ಮೌಲ್ಯವರ್ಧನೆ, ವೈವಿಧ್ಯಮಯ ಬೆಳೆ ಹಾಗೂ ನೇರ ಮಾರುಕಟ್ಟೆ ಕುರಿತು ಚರ್ಚೆ ನಡೆಯಿತು. ಕೊಪ್ಪಳದ ಮೂಲತಳಿಯಲ್ಲಿ ಒಂದಾದ ಡುಗ್ಗ (ಕಡಿಮೆ ಮಳೆಯಲ್ಲೂ ಬೆಳೆಯುವ) ಭತ್ತದ ಬಗ್ಗೆ ರೈತ ಹಂಚಾಳಪ್ಪ ಮಾಹಿತಿ ನೀಡಿದರು. ಕುಂದಗೋಳ ಪ್ರದೇಶದಲ್ಲಿ ಈ ಸಲ ರೈತರಿಗೆ ಖಚಿತ ಆದಾಯ ಕೊಟ್ಟ ಸಿರಿಧಾನ್ಯಗಳ ಬಗ್ಗೆ ವಿವಿರಿಸಲಾಯಿತು.ತೋಟಗಾರಿಕೆ ಬಗ್ಗೆ Shripadaraj G Muradi ಅನುಭವ ಹಂಚಿಕೊಂಡರು.

ಮಧ್ಯಾಹ್ನದ ಗೋಷ್ಠಿಯಲ್ಲಿ ರೈತರ ಸೋಲು- ಗೆಲುವು ಚರ್ಚೆ ನಡೆಯಿತು. ದಾಳಿಂಬೆ ಕೃಷಿಯಲ್ಲಿ ಯಶಸ್ಸು ಗಳಿಸದೇ ಹೋಗಿದ್ದು ಯಾಕೆ ಎಂದು ಮಲ್ಲನಗೌಡ ಹಾಗೂ ದೇವೇಂದ್ರಗೌಡ ವಿಶ್ಲೇಷಿಸಿದರು. ಇದಕ್ಕೆ ವ್ಯತಿರಿಕ್ತವಾಗಿ, ವಿಷಮುಕ್ತ ದಾಳಿಂಬೆ ಬೆಳೆದು ಮಾರುಕಟ್ಟೆ ಕಂಡುಕೊಂಡ ಯಶಸ್ಸನ್ನು Shankar Raddi ತೆರೆದಿಟ್ಟರು. ಉಳಿದಂತೆ ಬಾಳೆ, ತೆಂಗು, ಗೇರು, ಹಲಸು, ಮಾವು ಬೇಸಾಯದ ಕುರಿತು ಸಹ ಮಾಹಿತಿ ಸಿಕ್ಕಿತು. ಈ ಬಾರಿಯ ‘..ಮಾತುಕತೆ’ಗೆ ಬೆಳಗಾವಿಯಿಂದ Vinod R Patil ತಮ್ಮ ತಂಡದೊಂದಿಗೆ ಬಂದಿದ್ದರು. ನರಗುಂದದ ಸಿದ್ಧಲಿಂಗ ಶಿವಾಚಾರ್ಯ ಸ್ವಾಮೀಜಿ ಸಹ ಆಗಮಿಸಿ, ಸಂಜೆಯವರೆಗೆ ಆಸಕ್ತಿಯಿಂದ ಮಾತು ಆಲಿಸಿದ್ದು ವಿಶೇಷ.

ಉಳಿದಂತೆ ಮೈಸೂರು, ಗದಗ, ಧಾರವಾಡ, ರಾಯಚೂರು, ವಿಜಯನಗರ, ಬಳ್ಳಾರಿ ಜಿಲ್ಲೆಯ ಕೃಷಿ ಆಸಕ್ತರೂ ಸೇರಿ 120 ಜನರು ಭಾಗವಹಿಸಿದ್ದರು. ಮುಂದಿನ ಆವೃತ್ತಿಯ ‘…ಮಾತುಕತೆ’ಯನ್ನು ಇರಕಲ್ಲಗಡದ ರೈತ ಹಾಗೂ ದೇಸಿ ಬೀಜ ಸಂರಕ್ಷಕ ಹಂಚಾಳಪ್ಪ ಅವರು ತಮ್ಮ ತೋಟದಲ್ಲಿ ಆಯೋಜಿಸುವುದಾಗಿ ಪ್ರಕಟಿಸಿದರು. ಕಾಮನೂರಿನ ರೈತ ಮಲ್ಲಪ್ಪ ಕುಂಬಾರ ಸಾವಯವ ಉತ್ಪನ್ನ ಹಾಗೂ ಕಿರಣ್ ಶೆಡ್ಡೆ ಪುಸ್ತಕ ಮಳಿಗೆ ನಿರ್ವಹಿಸಿದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 25-04-2025 | ಅಲ್ಲಲ್ಲಿ ಗುಡುಗು ಸಹಿತ ಸಾಮಾನ್ಯ ಮಳೆ |

ಮುನ್ಸೂಚನೆಯಂತೆ ಮೇ 1 ರಿಂದ ದಕ್ಷಿಣ ಒಳನಾಡಿನ ಅಲ್ಲಲ್ಲಿ ಮಳೆ ಆರಂಭವಾಗುವ ಸಾಧ್ಯತೆಗಳಿವೆ.

6 hours ago

ಒತ್ತುವರಿಯಾಗಿರುವ  ಕೆರೆಗಳನ್ನು ಮುಲಾಜಿಲ್ಲದೆ ತೆರವುಗೊಳಿಸಲು ಮುಖ್ಯಮಂತ್ರಿ ಸೂಚನೆ

ಖಾಸಗಿಯವರಿಂದ ಒತ್ತುವರಿಯಾಗಿರುವ  ಪ್ರದೇಶವನ್ನು ಯಾವುದೇ ಮುಲಾಜಿಲ್ಲದೆ ತೆರವುಗೊಳಿಸಲು ಮುಖ್ಯಮಂತ್ರಿಗಳು ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಮುಖ್ಯಮಂತ್ರಿ…

12 hours ago

ಭಾರತದಿಂದ ಅಫ್ಘಾನಿಸ್ತಾನಕ್ಕೆ 4.8 ಟನ್ ಜೀವರಕ್ಷಕ ಲಸಿಕೆ ರವಾನೆ

ಭಾರತವು 4.8 ಟನ್ ಲಸಿಕೆಗಳನ್ನು ಅಫ್ಘಾನಿಸ್ತಾನಕ್ಕೆಕಳುಹಿಸುವ ಮೂಲಕ ಮಾನವೀಯ ನೆರವು ನೀಡಿದೆ. ಇದರಲ್ಲಿ…

12 hours ago

ಭ್ರಷ್ಟಾಚಾರದ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ  | ಉಪಲೋಕಾಯುಕ್ತ ಬಿ. ವೀರಪ್ಪ ಎಚ್ಚರಿಕೆ

ರಾಜ್ಯದಲ್ಲಿ ಲೋಕಾಯುಕ್ತ ಸಂಸ್ಥೆಯನ್ನು ಬಲಪಡಿಸುವ ನಿಟ್ಟಿನಲ್ಲಿ ರಾಜ್ಯಾದ್ಯಂತ ಪ್ರವಾಸ ಕೈಗೊಂಡಿದ್ದು, ಭ್ರಷ್ಟಾಚಾರದ ವಿರುದ್ಧ…

12 hours ago

ಶುಕ್ರ ಮತ್ತು ರಾಹು ಮೀನ ರಾಶಿಯಲ್ಲಿ ಸಂಯೋಗ | 5 ರಾಶಿಚಕ್ರಗಳಲ್ಲಿ ವಿಶೇಷ ಪ್ರಭಾವ |

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

13 hours ago

ಸಂಜೀವಿನಿ ಸ್ವ ಸಹಾಯ ಸಂಘಗಳ ಸದಸ್ಯರ ಉತ್ಪನ್ನಗಳ ಪ್ರದರ್ಶನ ಮಾರಾಟ ಮೇಳ | ಜಿಲ್ಲೆಯ ಅತ್ಯುತ್ತಮ ಕೃಷಿ ಸಖಿ ಪ್ರಶಸ್ತಿ ಸಂಪಾಜೆ ಮೋಹಿನಿ ವಿಶ್ವನಾಥ್ ಅವರಿಗೆ

ಜಿಲ್ಲಾಡಳಿತ ಜಿಲ್ಲಾ ಪಂಚಾಯತ್, ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಸಂಜೀವಿನಿ ಕರ್ನಾಟಕ…

22 hours ago