Advertisement
Opinion

ಮಣ್ಣಿನೊಂದಿಗೆ ಮಾತುಕತೆ | ವಿಸ್ತಾರಗೊಂಡ ಮಾಹಿತಿ – ಅನುಭವ ಹಂಚಿಕೆ |

Share

ತುಂಗಭದ್ರಾ ಎಡದಂಡೆ ನಾಲೆಯ ಪಕ್ಕದಲ್ಲೇ ಹಸಿರಿನಿಂದ ಕಂಗೊಳಿಸುವ ಭತ್ತದ ಗದ್ದೆಗಳು. ಅದರಲ್ಲಿ ರಸವಿಷದಿಂದ ತೋಯ್ದ ಗದ್ದೆಗಳೆಷ್ಟೋ? ಆದರೆ ಮಲ್ಲನಗೌಡ ಮಾಲಿ ಪಾಟೀಲ ಕೃಷಿ ವಿಭಿನ್ನ. ‘ಮಣ್ಣಿಗೆ ರಾಸಾಯನಿಕ(Chemical) ಸುರಿಯುವ ಬದಲಿಗೆ, ಎರೆಜಲ ಹಾಗೂ ಗೋಕೃಪಾಮೃತ ಬಳಸುತ್ತ, ಸಾವಯವದಲ್ಲಿ ಭತ್ತ ಬೆಳೆಯುತ್ತಿರುವೆ’ ಎಂದರು ಮಲ್ಲನ ಗೌಡ ಮಾಲಿಪಾಟೀಲ. ಭತ್ತದ ಜತೆಗೆ ಒಂದೂವರೆ ಎಕರೆ ತೋಟದಲ್ಲಿ ತರಹೇವಾರಿ ಹಣ್ಣಿನ ಗಿಡಗಳನ್ನೂ, ಸೊಪ್ಪು-ತರಕಾರಿ- ಔಷಧೀಯ ಮೂಲಿಕೆಗಳನ್ನೂ ಮಲ್ಲನಗೌಡರು ಬೆಳೆಯುತ್ತಿದ್ದಾರೆ.

ಕನಕಗಿರಿ ತಾಲ್ಲೂಕಿನ ಜೀರಾಳಕಲ್ಗುಡಿ ಗ್ರಾಮದ ಹೊರವಲಯದಲ್ಲಿನ ಮಲ್ಲನಗೌಡರ ತೋಟದಲ್ಲಿ ‘ಮಣ್ಣಿನೊಂದಿಗೆ ಮಾತುಕತೆ’ಯ 23ನೇ ಆವೃತ್ತಿ  ಕಳೆದ ಭಾನುವಾರ ನಡೆಯಿತು. ಬಾಳೆ, ದಾಳಿಂಬೆ ಹಾಗೂ ಬೀಜೋತ್ಪಾದನೆ ವಲಯದಲ್ಲಿ ಹಲವಾರು ಏರಿಳಿತ ಕಂಡಿರುವ ಮಲ್ಲನಗೌಡರು ಈಚೀಚೆಗೆ ಸಾವಯವದತ್ತ(Organic) ಹೊರಳಿದವರು. ಗುಜರಾತಿನ ಗೋಪಾಲಭಾಯಿ ಸುತಾರಿಯಾ ಅವರ ಸಲಹೆ ಮೇರೆಗೆ ವಿಷಮುಕ್ತ ಕೃಷಿ(Toxic free farming) ಮಾಡಲು ಮುಂದಾಗಿದ್ದಾರೆ.

ಮಾತುಕತೆ ವಿಷಯ: ‘ಬರ ಎದುರಿಸುವ ದಾರಿಗಳು.’ ಉತ್ತರ ಕರ್ನಾಟಕ ಕೃಷಿಯ ಜೀವಾಳವಾಗಿದ್ದ ಸಿರಿಧಾನ್ಯಗಳು, ಮೌಲ್ಯವರ್ಧನೆ, ವೈವಿಧ್ಯಮಯ ಬೆಳೆ ಹಾಗೂ ನೇರ ಮಾರುಕಟ್ಟೆ ಕುರಿತು ಚರ್ಚೆ ನಡೆಯಿತು. ಕೊಪ್ಪಳದ ಮೂಲತಳಿಯಲ್ಲಿ ಒಂದಾದ ಡುಗ್ಗ (ಕಡಿಮೆ ಮಳೆಯಲ್ಲೂ ಬೆಳೆಯುವ) ಭತ್ತದ ಬಗ್ಗೆ ರೈತ ಹಂಚಾಳಪ್ಪ ಮಾಹಿತಿ ನೀಡಿದರು. ಕುಂದಗೋಳ ಪ್ರದೇಶದಲ್ಲಿ ಈ ಸಲ ರೈತರಿಗೆ ಖಚಿತ ಆದಾಯ ಕೊಟ್ಟ ಸಿರಿಧಾನ್ಯಗಳ ಬಗ್ಗೆ ವಿವಿರಿಸಲಾಯಿತು.ತೋಟಗಾರಿಕೆ ಬಗ್ಗೆ Shripadaraj G Muradi ಅನುಭವ ಹಂಚಿಕೊಂಡರು.

ಮಧ್ಯಾಹ್ನದ ಗೋಷ್ಠಿಯಲ್ಲಿ ರೈತರ ಸೋಲು- ಗೆಲುವು ಚರ್ಚೆ ನಡೆಯಿತು. ದಾಳಿಂಬೆ ಕೃಷಿಯಲ್ಲಿ ಯಶಸ್ಸು ಗಳಿಸದೇ ಹೋಗಿದ್ದು ಯಾಕೆ ಎಂದು ಮಲ್ಲನಗೌಡ ಹಾಗೂ ದೇವೇಂದ್ರಗೌಡ ವಿಶ್ಲೇಷಿಸಿದರು. ಇದಕ್ಕೆ ವ್ಯತಿರಿಕ್ತವಾಗಿ, ವಿಷಮುಕ್ತ ದಾಳಿಂಬೆ ಬೆಳೆದು ಮಾರುಕಟ್ಟೆ ಕಂಡುಕೊಂಡ ಯಶಸ್ಸನ್ನು Shankar Raddi ತೆರೆದಿಟ್ಟರು. ಉಳಿದಂತೆ ಬಾಳೆ, ತೆಂಗು, ಗೇರು, ಹಲಸು, ಮಾವು ಬೇಸಾಯದ ಕುರಿತು ಸಹ ಮಾಹಿತಿ ಸಿಕ್ಕಿತು. ಈ ಬಾರಿಯ ‘..ಮಾತುಕತೆ’ಗೆ ಬೆಳಗಾವಿಯಿಂದ Vinod R Patil ತಮ್ಮ ತಂಡದೊಂದಿಗೆ ಬಂದಿದ್ದರು. ನರಗುಂದದ ಸಿದ್ಧಲಿಂಗ ಶಿವಾಚಾರ್ಯ ಸ್ವಾಮೀಜಿ ಸಹ ಆಗಮಿಸಿ, ಸಂಜೆಯವರೆಗೆ ಆಸಕ್ತಿಯಿಂದ ಮಾತು ಆಲಿಸಿದ್ದು ವಿಶೇಷ.

ಉಳಿದಂತೆ ಮೈಸೂರು, ಗದಗ, ಧಾರವಾಡ, ರಾಯಚೂರು, ವಿಜಯನಗರ, ಬಳ್ಳಾರಿ ಜಿಲ್ಲೆಯ ಕೃಷಿ ಆಸಕ್ತರೂ ಸೇರಿ 120 ಜನರು ಭಾಗವಹಿಸಿದ್ದರು. ಮುಂದಿನ ಆವೃತ್ತಿಯ ‘…ಮಾತುಕತೆ’ಯನ್ನು ಇರಕಲ್ಲಗಡದ ರೈತ ಹಾಗೂ ದೇಸಿ ಬೀಜ ಸಂರಕ್ಷಕ ಹಂಚಾಳಪ್ಪ ಅವರು ತಮ್ಮ ತೋಟದಲ್ಲಿ ಆಯೋಜಿಸುವುದಾಗಿ ಪ್ರಕಟಿಸಿದರು. ಕಾಮನೂರಿನ ರೈತ ಮಲ್ಲಪ್ಪ ಕುಂಬಾರ ಸಾವಯವ ಉತ್ಪನ್ನ ಹಾಗೂ ಕಿರಣ್ ಶೆಡ್ಡೆ ಪುಸ್ತಕ ಮಳಿಗೆ ನಿರ್ವಹಿಸಿದರು.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಪ್ರತೀ ವರ್ಷ “ಕ್ಲೈಮೇಟ್ ರಿಪೋರ್ಟ್ ಕಾರ್ಡ್” ಏಕೆ ಬೇಕು..? ನಮ್ಮ ನಗರ-ಹಳ್ಳಿಗಳು ಹವಾಮಾನ ಬದಲಾವಣೆಗೆ ಎಷ್ಟು ಸಿದ್ಧ?

ಭಾರತದ 126 ಪ್ರಮುಖ ನಗರಗಳ ಹವಾಮಾನ ಸಿದ್ಧತೆಯನ್ನು ಅಳೆಯಲಾಗಿದ್ದರೂ, 2021ರ ಮೌಲ್ಯಮಾಪನದಲ್ಲಿ ರಾಷ್ಟ್ರೀಯ…

2 hours ago

ಭಾರತದ ಕಾಫಿಗೆ ಜಾಗತಿಕ ಬೇಡಿಕೆ ಹೆಚ್ಚಳ : ‘ಇಂಡಿ ಕಾಫಿ’ಗೆ ಹೊಸ ಬ್ರ್ಯಾಂಡ್‌ ಒತ್ತು

ಭಾರತದ ಕಾಫಿ ರಫ್ತು ಗಳಿಕೆ 2021-22ರ ಸುಮಾರು 1 ಶತಕೋಟಿ ಡಾಲರ್‌ನಿಂದ 2025-26ರಲ್ಲಿ…

8 hours ago

ಕಸವೆಂದು ಎಸೆಯುವ ಮೀನಿನ ಮುಳ್ಳು–ಹುರುಪೆಯಲ್ಲಿ ‘ಸಂಜೀವಿನಿ’!

ಮೀನಿನ ಮುಳ್ಳು ಮತ್ತು ಹುರುಪೆಯನ್ನು ವೈಜ್ಞಾನಿಕವಾಗಿ ಸಂಸ್ಕರಿಸಿ ಹಲ್ಲುಗಳ ಪುನರ್ ನಿರ್ಮಾಣ ಹಾಗೂ…

9 hours ago

ಕರ್ನಾಟಕ–ತಮಿಳುನಾಡು ಗಡಿಯಲ್ಲಿ ಆನೆಗಳಿಗಾಗಿ 3 ಹೊಸ ಕಾರಿಡಾರ್‌

ಕರ್ನಾಟಕ–ತಮಿಳುನಾಡು ಗಡಿಯಲ್ಲಿ ಆನೆಗಳ ಸುರಕ್ಷಿತ ಸಂಚಾರಕ್ಕೆ ಅನುಕೂಲವಾಗುವಂತೆ ತಮಿಳುನಾಡು ಮೂರು ಹೊಸ ಆನೆ…

20 hours ago

ಹವಾಮಾನ ವರದಿ | 29-08-2026 | ಕರ್ನಾಟಕದಲ್ಲಿ ಸೆಪ್ಟೆಂಬರ್‌ ಆರಂಭದಲ್ಲಿ ಮಳೆ ಚುರುಕಾಗುವ ಲಕ್ಷಣ…?

ಬಂಗಾಳಕೊಲ್ಲಿಯ ಬಾಂಗ್ಲಾದೇಶ ಕರಾವಳಿ ಭಾಗದಲ್ಲಿ ಮಧ್ಯಮ ಸ್ತರದ ತಿರುವಿಕೆ ಉಂಟಾಗಿದ್ದು, ಇದರ ಪ್ರಭಾವದಿಂದ…

20 hours ago

ಕಸ್ತೂರಿ ರಂಗನ್ ವರದಿ ಜಾರಿಗೆ ಅವಕಾಶವಿಲ್ಲ: ಪಶ್ಚಿಮಘಟ್ಟದ 1,449 ಗ್ರಾಮಗಳ ಬಗ್ಗೆ ಆತಂಕ ಬೇಡ ಎಂದ ಪರಮೇಶ್ವರ್

ಕಸ್ತೂರಿ ರಂಗನ್ ವರದಿಯನ್ನು ಯಾವುದೇ ಕಾರಣಕ್ಕೂ ಜಾರಿಗೆ ಅವಕಾಶ ನೀಡುವುದಿಲ್ಲ ಎಂದು ಉಪಮುಖ್ಯಮಂತ್ರಿ…

2 days ago