ಸ್ವಚ್ಛ ಭಾರತ ಅಭಿಯಾನ ಆರಂಭವಾಗಿ ವರ್ಷಗಳು ಹಲವು ಉರುಳಿತು. ಇಂದಿಗೂ ಕಸ ಹೆಕ್ಕುವುದರಲ್ಲೇ ಈ ಅಭಿಯಾನ ನಿಂತಿದೆ. ಅದಕ್ಕಿಂತ ಆಚೆಗೆ ನಿಂತು ಯೋಚಿಸಿದೆ ಪುಟ್ಟ ಹಳ್ಳಿ. ಕಳೆದ 3 ವಾರಗಳಿಂದ ಈ ಅಭಿಯಾನ ನಡೆಯುತ್ತಿದೆ. ಇದೀಗ ಒಂದು ಹೆಜ್ಜೆಯಷ್ಟು ಯಶಸ್ಸು ಕಂಡಿದೆ ಈ ಅಭಿಯಾನದಲ್ಲಿ.
ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಗುತ್ತಿಗಾರು ಗ್ರಾಮದಲ್ಲಿ ಸ್ವಚ್ಛತೆಯ ಬಗ್ಗೆ ಜನರಲ್ಲಿ ಅರಿವು ಮೂಡಿಸಲು ಗ್ರಾಮದ ಕ್ರಿಯಾಶೀಲ ತಂಡವೊಂದು ಗುತ್ತಿಗಾರು ಗ್ರಾಮ ಪಂಚಾಯತ್ ಸಹಕಾರದೊಂದಿಗೆ ಸಕ್ರಿಯವಾಗಿದೆ. ಇದಕ್ಕೆ ಗುತ್ತಿಗಾರು ಎಂಬ ಪುಟ್ಟ ಹಳ್ಳಿಯ ಎಲ್ಲಾ ಸಂಘಸಂಸ್ಥೆಗಳೂ ಕೈಜೋಡಿಸಿದೆ. ಸ್ವಚ್ಛತೆಯ ಬಗ್ಗೆ ಅರಿವು ಮೂಡಿಸಲು ಟಾಸ್ಕ್ ಫೋರ್ಸ್ ಕೂಡಾ ಸಿದ್ಧವಾಗಿದೆ. ಈಗ ಪ್ರತೀ ವಾರ ಪೇಟೆಯಲ್ಲಿ ಸಂಚರಿಸಿ ಸ್ವಚ್ಛತೆಯ ಅರಿವು ಮೂಡಿಸುತ್ತಿದೆ. ಕಳೆದ 3 ವಾರಗಳಿಂದ ಈ ಅಭಿಯಾನ ನಡೆಯುತ್ತಿದೆ. ಈ ಹೊತ್ತಿಗೆ ಗುತ್ತಿಗಾರು ಪೇಟೆಯಲ್ಲಿ ಕಸದ ಪ್ರಮಾಣ ಕಡಿಮೆಯಾಗಿದೆ.ಕೆಲವು ಅಂಗಡಿಗಳಲ್ಲಿ ಬಟ್ಟೆ ಚೀಲದ ಬೇಡಿಕೆ ಶುರುವಾಗಿದೆ.
05.07.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ದಕ್ಷಿಣ ಧ್ರುವದ…
ಪುತ್ತೂರಿನ ಪ್ರಕರಣವೊಂದು ರಾಜ್ಯಮಟ್ಟದಲ್ಲಿ ಚರ್ಚೆಯಾಗುತ್ತಿದೆ. ಈ ನಡುವೆ ರಾಜಕೀಯವಾಗಿಯೂ ಇದೊಂದು ಚರ್ಚೆ, ಆರೋಪಗಳಿಗೂ…
ಭಾರತದ ರಾಸಾಯನಿಕ ವಲಯವು ಒಟ್ಟು ದೇಶೀಯ ಉತ್ಪನ್ನ ಕೊಡುಗೆಯಲ್ಲಿ ಗಮನಾರ್ಹ ಪಾತ್ರ ವಹಿಸುತ್ತಿದೆ.…
ರಾಯರ ಪರಮಭಕ್ತರದ ಜ್ಯೋತಿಷಿಗಳು ನಿಮ್ಮನ್ನು ಸಂಪರ್ಕಿಸುತ್ತಾರೆ 9535156490
ಹಿಂದೂಗಳ ಪವಿತ್ರ ಅಮರನಾಥ ಯಾತ್ರೆಗೆ, ಜಮ್ಮುವಿನ ಭಗವತಿ ನಗರದಲ್ಲಿ ಜಮ್ಮು ಮತ್ತು ಕಾಶ್ಮೀರದ…
ರಾಜ್ಯದ ಕರಾವಳಿ ಜಿಲ್ಲೆಗಳು ಸೇರಿದಂತೆ ಹಲವೆಡೆ ಧಾರಾಕಾರ ಮಳೆಯಾಗುತ್ತಿದೆ. ಮಡಿಕೇರಿ ಸೇರಿದಂತೆ ಕೊಡಗು…