ಸ್ವಚ್ಛ ಭಾರತ ಅಭಿಯಾನ ಆರಂಭವಾಗಿ ವರ್ಷಗಳು ಹಲವು ಉರುಳಿತು. ಇಂದಿಗೂ ಕಸ ಹೆಕ್ಕುವುದರಲ್ಲೇ ಈ ಅಭಿಯಾನ ನಿಂತಿದೆ. ಅದಕ್ಕಿಂತ ಆಚೆಗೆ ನಿಂತು ಯೋಚಿಸಿದೆ ಪುಟ್ಟ ಹಳ್ಳಿ. ಕಳೆದ 3 ವಾರಗಳಿಂದ ಈ ಅಭಿಯಾನ ನಡೆಯುತ್ತಿದೆ. ಇದೀಗ ಒಂದು ಹೆಜ್ಜೆಯಷ್ಟು ಯಶಸ್ಸು ಕಂಡಿದೆ ಈ ಅಭಿಯಾನದಲ್ಲಿ.
ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಗುತ್ತಿಗಾರು ಗ್ರಾಮದಲ್ಲಿ ಸ್ವಚ್ಛತೆಯ ಬಗ್ಗೆ ಜನರಲ್ಲಿ ಅರಿವು ಮೂಡಿಸಲು ಗ್ರಾಮದ ಕ್ರಿಯಾಶೀಲ ತಂಡವೊಂದು ಗುತ್ತಿಗಾರು ಗ್ರಾಮ ಪಂಚಾಯತ್ ಸಹಕಾರದೊಂದಿಗೆ ಸಕ್ರಿಯವಾಗಿದೆ. ಇದಕ್ಕೆ ಗುತ್ತಿಗಾರು ಎಂಬ ಪುಟ್ಟ ಹಳ್ಳಿಯ ಎಲ್ಲಾ ಸಂಘಸಂಸ್ಥೆಗಳೂ ಕೈಜೋಡಿಸಿದೆ. ಸ್ವಚ್ಛತೆಯ ಬಗ್ಗೆ ಅರಿವು ಮೂಡಿಸಲು ಟಾಸ್ಕ್ ಫೋರ್ಸ್ ಕೂಡಾ ಸಿದ್ಧವಾಗಿದೆ. ಈಗ ಪ್ರತೀ ವಾರ ಪೇಟೆಯಲ್ಲಿ ಸಂಚರಿಸಿ ಸ್ವಚ್ಛತೆಯ ಅರಿವು ಮೂಡಿಸುತ್ತಿದೆ. ಕಳೆದ 3 ವಾರಗಳಿಂದ ಈ ಅಭಿಯಾನ ನಡೆಯುತ್ತಿದೆ. ಈ ಹೊತ್ತಿಗೆ ಗುತ್ತಿಗಾರು ಪೇಟೆಯಲ್ಲಿ ಕಸದ ಪ್ರಮಾಣ ಕಡಿಮೆಯಾಗಿದೆ.ಕೆಲವು ಅಂಗಡಿಗಳಲ್ಲಿ ಬಟ್ಟೆ ಚೀಲದ ಬೇಡಿಕೆ ಶುರುವಾಗಿದೆ.
ಅಡಿಕೆ ಜಗಿಯುವುದು ಕೇವಲ ಸಾಂಪ್ರದಾಯಿಕ ಅಭ್ಯಾಸ ಮಾತ್ರವಲ್ಲ, ಅದು ಗಂಭೀರ ಆರೋಗ್ಯ ಅಪಾಯಗಳಿಗೆ…
ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ ಹಾಗೂ ಆನೆ ದಾಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು…
ದಾವಣಗೆರೆ ಜಿಲ್ಲೆಯಲ್ಲಿ 5 ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರು 87,258 ಕ್ವಿಂಟಲ್…
ಜಲಜೀವನ್ ಮಿಷನ್ ಯೋಜನೆಯ ಕಾಮಗಾರಿಗಳನ್ನು ಆದಷ್ಟು ಶೀಘ್ರ ಪೂರ್ಣಗೊಳಿಸುವಂತೆ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್…
ಕರಾವಳಿ ಕರ್ನಾಟಕದ ಅಡಿಕೆ ತೋಟಗಳು ಕಾಡುಪ್ರಾಣಿಗಳ ಹಾವಳಿಯಿಂದ ಭಾರೀ ನಷ್ಟ ಅನುಭವಿಸುತ್ತಿವೆ. ಮಾನವ–ವನ್ಯಜೀವಿ…
ಭಾರತವು ಜಗತ್ತಿನ ಅತಿದೊಡ್ಡ ಅಡಿಕೆ ಉತ್ಪಾದಕ ರಾಷ್ಟ್ರವಾಗಿದ್ದು, ಜಾಗತಿಕ ಉತ್ಪಾದನೆಯ ಸುಮಾರು 63…