MIRROR FOCUS

#SwachchBharath | ಸ್ವಚ್ಛತೆಗಾಗಿ ಟಾಸ್ಕ್‌ಫೋರ್ಸ್‌ | ಪ್ಲಾಸ್ಟಿಕ್‌ ಮುಕ್ತ ಜಾಗೃತಿ ಅಭಿಯಾನ | ಸ್ವಚ್ಛತೆಯ ಬಗ್ಗೆ ಅರಿವು | ಪುಟ್ಟ ಗ್ರಾಮದ ದೊಡ್ಡ ಹೆಜ್ಜೆ… |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಸ್ವಚ್ಛ ಭಾರತ ಅಭಿಯಾನ ಆರಂಭವಾಗಿ ವರ್ಷಗಳು ಹಲವು ಉರುಳಿತು. ಇಂದಿಗೂ ಕಸ ಹೆಕ್ಕುವುದರಲ್ಲೇ ಈ ಅಭಿಯಾನ ನಿಂತಿದೆ. ಅದಕ್ಕಿಂತ ಆಚೆಗೆ ನಿಂತು ಯೋಚಿಸಿದೆ ಪುಟ್ಟ ಹಳ್ಳಿ. ಕಳೆದ 3 ವಾರಗಳಿಂದ ಈ ಅಭಿಯಾನ ನಡೆಯುತ್ತಿದೆ. ಇದೀಗ ಒಂದು ಹೆಜ್ಜೆಯಷ್ಟು ಯಶಸ್ಸು ಕಂಡಿದೆ ಈ ಅಭಿಯಾನದಲ್ಲಿ.

Advertisement

ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಗುತ್ತಿಗಾರು ಗ್ರಾಮದಲ್ಲಿ ಸ್ವಚ್ಛತೆಯ ಬಗ್ಗೆ ಜನರಲ್ಲಿ ಅರಿವು ಮೂಡಿಸಲು ಗ್ರಾಮದ ಕ್ರಿಯಾಶೀಲ ತಂಡವೊಂದು ಗುತ್ತಿಗಾರು ಗ್ರಾಮ ಪಂಚಾಯತ್‌ ಸಹಕಾರದೊಂದಿಗೆ ಸಕ್ರಿಯವಾಗಿದೆ. ಇದಕ್ಕೆ ಗುತ್ತಿಗಾರು ಎಂಬ ಪುಟ್ಟ ಹಳ್ಳಿಯ ಎಲ್ಲಾ ಸಂಘಸಂಸ್ಥೆಗಳೂ ಕೈಜೋಡಿಸಿದೆ. ಸ್ವಚ್ಛತೆಯ ಬಗ್ಗೆ ಅರಿವು ಮೂಡಿಸಲು  ಟಾಸ್ಕ್‌ ಫೋರ್ಸ್‌ ಕೂಡಾ ಸಿದ್ಧವಾಗಿದೆ. ಈಗ ಪ್ರತೀ ವಾರ ಪೇಟೆಯಲ್ಲಿ ಸಂಚರಿಸಿ ಸ್ವಚ್ಛತೆಯ ಅರಿವು ಮೂಡಿಸುತ್ತಿದೆ. ಕಳೆದ  3 ವಾರಗಳಿಂದ ಈ ಅಭಿಯಾನ ನಡೆಯುತ್ತಿದೆ. ಈ ಹೊತ್ತಿಗೆ ಗುತ್ತಿಗಾರು ಪೇಟೆಯಲ್ಲಿ ಕಸದ  ಪ್ರಮಾಣ ಕಡಿಮೆಯಾಗಿದೆ.ಕೆಲವು ಅಂಗಡಿಗಳಲ್ಲಿ ಬಟ್ಟೆ ಚೀಲದ ಬೇಡಿಕೆ ಶುರುವಾಗಿದೆ.

ಸ್ವಚ್ಛತೆ ಎಂದರೆ ಕೇವಲ ಕಸ ಹೆಕ್ಕುವುದಲ್ಲ. ನಮ್ಮ ಊರು ಸ್ವಚ್ಛ ಊರು ಎನ್ನುವ ಅರಿವು ಎಲ್ಲರಲ್ಲಿ ಬೆಳೆಯಬೇಕು. ಇದನ್ನು ಜನರಲ್ಲಿ ಅರಿವು ಮೂಡಿಸುವ ಕೆಲಸ ಈ ಟಾಸ್ಕ್‌ ಫೋರ್ಸ್‌ ಹಾಗೂ ಗ್ರಾಮ ಪಂಚಾಯತ್‌ ಮಾಡುತ್ತಿದೆ. ಟಾಸ್ಕ್‌ ಫೋರ್ಸ್‌ನಲ್ಲಿ ಪ್ರಮುಖವಾಗಿ ಸಂಜೀವಿನಿ ಘಟಕದ ಸದಸ್ಯರು ಇರುವುದು ಗಮನಾರ್ಹವಾಗಿದೆ. ಇವರೆಲ್ಲಾ ಮಹಿಳಾ ಸದಸ್ಯರೇ ಆಗಿರುವುದು  ಸ್ವಚ್ಛ ಗ್ರಾಮದ ಉದ್ದೇಶಕ್ಕೆ ಬಲ ತುಂಬಿದೆ.  ಇಲ್ಲಿ  ಕೇವಲ ಕಸದ ಬಗ್ಗೆ ಜಾಗೃತಿ ಮಾತ್ರವಲ್ಲ,  ಪ್ಲಾಸ್ಟಿಕ್‌ ಬಳಕೆ ಕಡಿಮೆ ಮಾಡಿ ಬಟ್ಟೆ ಚೀಲ ಉಪಯೋಗಿಸಿ ಪರಿಸರ ರಕ್ಷಣೆಯ ಉದ್ದೇಶವೂ ಇಲ್ಲಿದೆ. ಈ ಜಾಗೃತಿಯ ಮೂಲಕ ಈಗಾಗಲೇ ಹಲವಾರು ಮಂದಿಯನ್ನು  ಎಚ್ಚರಿಸಿದೆ. ಸ್ವಯಂಪ್ರೇರಿತರಾಗಿ ಸ್ವಚ್ಛತೆ, ಪ್ಲಾಸ್ಟಿಕ್‌ ಬಳಕೆ ಕಡಿಮೆ ಮಾಡುವ ಕಡೆಗೆ ಮನಸ್ಸು ಮಾಡಿದ್ದಾರೆ.
ಒಂದು ಪುಟ್ಟ ಹಳ್ಳಿಯ ಈ ಜಾಗೃತಿ ದೊಡ್ಡ ಸಂದೇಶ ನೀಡುತ್ತಿದೆ. ಈಗ ಬೇಕಿರುವುದು  ಜನರ ಸಹಕಾರ, ಸಹಭಾಗಿತ್ವ. ಇದರ ಕಡೆಗೆ ಇನ್ನಷ್ಟು ಮಂದಿ ಗಮನಹರಿಸಬೇಕಿದೆ. ಸ್ವಚ್ಛ ಗ್ರಾಮ, ಸ್ವಚ್ಛ ಭಾರತದ ಕನಸು ಸಾಕಾರಗೊಳ್ಳಲು ಸ್ವಯಂ ಜಾಗೃತಿಯೇ ಮುಖ್ಯವಾಗಿದೆ.
Advertisement
/**/
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 04.07.2025| ರಾಜ್ಯದ ಕರಾವಳಿ ಭಾಗದಲ್ಲಿ ಏಕೆ ಉತ್ತಮ‌ ಮಳೆಯಾಗುತ್ತಿದೆ..? | ಇಂದೂ‌ ಸಾಮಾನ್ಯ ಮಳೆ

05.07.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ದಕ್ಷಿಣ ಧ್ರುವದ…

3 hours ago

ಪುತ್ತೂರು ಪ್ರಕರಣ | ಶಾಸಕ ಅಶೋಕ್‌ ಕುಮಾರ್‌ ರೈ ಅವರ ಬರಹ ಇದು… | ನಾವೀಗ ಆಕೆಗೆ ನೀಡಬೇಕಾಗಿರುವುದು ಧೈರ್ಯ ಮತ್ತು ಸ್ಥೈರ್ಯ

ಪುತ್ತೂರಿನ ಪ್ರಕರಣವೊಂದು ರಾಜ್ಯಮಟ್ಟದಲ್ಲಿ ಚರ್ಚೆಯಾಗುತ್ತಿದೆ. ಈ ನಡುವೆ ರಾಜಕೀಯವಾಗಿಯೂ ಇದೊಂದು ಚರ್ಚೆ, ಆರೋಪಗಳಿಗೂ…

6 hours ago

ರಾಸಾಯನಿಕ ಉದ್ಯಮ | ಭಾರತವು ರಾಸಾಯನಿಕಗಳ ಪ್ರಮುಖ ಉತ್ಪಾದಕ ರಾಷ್ಟ್ರ

ಭಾರತದ ರಾಸಾಯನಿಕ ವಲಯವು  ಒಟ್ಟು ದೇಶೀಯ ಉತ್ಪನ್ನ ಕೊಡುಗೆಯಲ್ಲಿ ಗಮನಾರ್ಹ ಪಾತ್ರ ವಹಿಸುತ್ತಿದೆ.…

9 hours ago

ಬುಧ ಮತ್ತು ಶನಿ ಕಾಟದಿಂದ ಈ ರಾಶಿಯವರು ಸ್ವಲ್ಪ ಜೋಪಾನವಾಗಿರಬೇಕು

ರಾಯರ ಪರಮಭಕ್ತರದ ಜ್ಯೋತಿಷಿಗಳು ನಿಮ್ಮನ್ನು ಸಂಪರ್ಕಿಸುತ್ತಾರೆ 9535156490

9 hours ago

ಅಮರನಾಥ ಯಾತ್ರೆಗೆ ಚಾಲನೆ | ಮೊದಲ ಗುಂಪಿನ 5,880 ಯಾತ್ರಿಗಳು ಪ್ರಯಾಣ

ಹಿಂದೂಗಳ ಪವಿತ್ರ ಅಮರನಾಥ ಯಾತ್ರೆಗೆ, ಜಮ್ಮುವಿನ ಭಗವತಿ ನಗರದಲ್ಲಿ  ಜಮ್ಮು ಮತ್ತು ಕಾಶ್ಮೀರದ…

16 hours ago

ರಾಜ್ಯದ ವಿವಿಧೆಡೆ ಧಾರಾಕಾರ ಮಳೆ | ಉತ್ತರಕನ್ನಡ, ಕೊಡಗಿನಲ್ಲಿ ಸಮಸ್ಯೆ

ರಾಜ್ಯದ ಕರಾವಳಿ ಜಿಲ್ಲೆಗಳು ಸೇರಿದಂತೆ ಹಲವೆಡೆ ಧಾರಾಕಾರ ಮಳೆಯಾಗುತ್ತಿದೆ. ಮಡಿಕೇರಿ ಸೇರಿದಂತೆ ಕೊಡಗು…

16 hours ago