ಸ್ವಚ್ಛ ಭಾರತ ಅಭಿಯಾನ ಆರಂಭವಾಗಿ ವರ್ಷಗಳು ಹಲವು ಉರುಳಿತು. ಇಂದಿಗೂ ಕಸ ಹೆಕ್ಕುವುದರಲ್ಲೇ ಈ ಅಭಿಯಾನ ನಿಂತಿದೆ. ಅದಕ್ಕಿಂತ ಆಚೆಗೆ ನಿಂತು ಯೋಚಿಸಿದೆ ಪುಟ್ಟ ಹಳ್ಳಿ. ಕಳೆದ 3 ವಾರಗಳಿಂದ ಈ ಅಭಿಯಾನ ನಡೆಯುತ್ತಿದೆ. ಇದೀಗ ಒಂದು ಹೆಜ್ಜೆಯಷ್ಟು ಯಶಸ್ಸು ಕಂಡಿದೆ ಈ ಅಭಿಯಾನದಲ್ಲಿ.
ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಗುತ್ತಿಗಾರು ಗ್ರಾಮದಲ್ಲಿ ಸ್ವಚ್ಛತೆಯ ಬಗ್ಗೆ ಜನರಲ್ಲಿ ಅರಿವು ಮೂಡಿಸಲು ಗ್ರಾಮದ ಕ್ರಿಯಾಶೀಲ ತಂಡವೊಂದು ಗುತ್ತಿಗಾರು ಗ್ರಾಮ ಪಂಚಾಯತ್ ಸಹಕಾರದೊಂದಿಗೆ ಸಕ್ರಿಯವಾಗಿದೆ. ಇದಕ್ಕೆ ಗುತ್ತಿಗಾರು ಎಂಬ ಪುಟ್ಟ ಹಳ್ಳಿಯ ಎಲ್ಲಾ ಸಂಘಸಂಸ್ಥೆಗಳೂ ಕೈಜೋಡಿಸಿದೆ. ಸ್ವಚ್ಛತೆಯ ಬಗ್ಗೆ ಅರಿವು ಮೂಡಿಸಲು ಟಾಸ್ಕ್ ಫೋರ್ಸ್ ಕೂಡಾ ಸಿದ್ಧವಾಗಿದೆ. ಈಗ ಪ್ರತೀ ವಾರ ಪೇಟೆಯಲ್ಲಿ ಸಂಚರಿಸಿ ಸ್ವಚ್ಛತೆಯ ಅರಿವು ಮೂಡಿಸುತ್ತಿದೆ. ಕಳೆದ 3 ವಾರಗಳಿಂದ ಈ ಅಭಿಯಾನ ನಡೆಯುತ್ತಿದೆ. ಈ ಹೊತ್ತಿಗೆ ಗುತ್ತಿಗಾರು ಪೇಟೆಯಲ್ಲಿ ಕಸದ ಪ್ರಮಾಣ ಕಡಿಮೆಯಾಗಿದೆ.ಕೆಲವು ಅಂಗಡಿಗಳಲ್ಲಿ ಬಟ್ಟೆ ಚೀಲದ ಬೇಡಿಕೆ ಶುರುವಾಗಿದೆ.
ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಇಳಿಮುಖವಾಗುತ್ತಿದ್ದು, ಕರಾವಳಿ–ಮಲೆನಾಡಿನಲ್ಲಿ ಸೆ.8ರಿಂದ 10ರವರೆಗೆ ಅಲ್ಲಲ್ಲಿ…
ಭಾರತ–ಜಪಾನ್ JCM ಮೂಲಕ ಭಾರತದಲ್ಲಿ ಕಡಿಮೆ-ಇಂಗಾಲ ಯೋಜನೆಗಳಿಗೆ ಜಪಾನ್ ಹೂಡಿಕೆ ಮತ್ತು ತಂತ್ರಜ್ಞಾನ…
ಸಿಕ್ಕಿಂನಲ್ಲಿ 40 ಹೆಚ್ಚಿನ ಅಪಾಯದ ಹಿಮನದಿ ಸರೋವರಗಳನ್ನು ಗುರುತಿಸಲಾಗಿದ್ದು, 16 ಸರೋವರಗಳು ಅತ್ಯಂತ…
2026ರ ಆಗಸ್ಟ್ ವೇಳೆಗೆ ಎಲ್ ನಿನೊ ಆರಂಭವಾಗಿದ್ದು , ವರ್ಷಾಂತ್ಯದ ವೇಳೆಗೆ ಅತ್ಯಂತ…
ನಾಗಾಲ್ಯಾಂಡ್ನಲ್ಲಿ ರಬ್ಬರ್ ಕೃಷಿ ಸುಮಾರು 29,794 ಹೆಕ್ಟೇರ್ಗೆ ವಿಸ್ತರಿಸಿರುವ ಬೆನ್ನಲ್ಲೇ ಜಾರ್ಖಂಡ್ನಲ್ಲಿ ಸೂಕ್ತ…
ದಾವಣಗೆರೆ ಜಿಲ್ಲೆಯಲ್ಲಿ 15 ದಿನಗಳಿಂದ ಮಳೆ ಕೊರತೆಯಾಗಿದ್ದು, ಮುಂದಿನ ಕೆಲ ದಿನಗಳಲ್ಲೂ ಮಳೆಯಾಗದಿದ್ದರೆ…