ಸ್ವಚ್ಛ ಭಾರತ ಅಭಿಯಾನ ಆರಂಭವಾಗಿ ವರ್ಷಗಳು ಹಲವು ಉರುಳಿತು. ಇಂದಿಗೂ ಕಸ ಹೆಕ್ಕುವುದರಲ್ಲೇ ಈ ಅಭಿಯಾನ ನಿಂತಿದೆ. ಅದಕ್ಕಿಂತ ಆಚೆಗೆ ನಿಂತು ಯೋಚಿಸಿದೆ ಪುಟ್ಟ ಹಳ್ಳಿ. ಕಳೆದ 3 ವಾರಗಳಿಂದ ಈ ಅಭಿಯಾನ ನಡೆಯುತ್ತಿದೆ. ಇದೀಗ ಒಂದು ಹೆಜ್ಜೆಯಷ್ಟು ಯಶಸ್ಸು ಕಂಡಿದೆ ಈ ಅಭಿಯಾನದಲ್ಲಿ.
ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಗುತ್ತಿಗಾರು ಗ್ರಾಮದಲ್ಲಿ ಸ್ವಚ್ಛತೆಯ ಬಗ್ಗೆ ಜನರಲ್ಲಿ ಅರಿವು ಮೂಡಿಸಲು ಗ್ರಾಮದ ಕ್ರಿಯಾಶೀಲ ತಂಡವೊಂದು ಗುತ್ತಿಗಾರು ಗ್ರಾಮ ಪಂಚಾಯತ್ ಸಹಕಾರದೊಂದಿಗೆ ಸಕ್ರಿಯವಾಗಿದೆ. ಇದಕ್ಕೆ ಗುತ್ತಿಗಾರು ಎಂಬ ಪುಟ್ಟ ಹಳ್ಳಿಯ ಎಲ್ಲಾ ಸಂಘಸಂಸ್ಥೆಗಳೂ ಕೈಜೋಡಿಸಿದೆ. ಸ್ವಚ್ಛತೆಯ ಬಗ್ಗೆ ಅರಿವು ಮೂಡಿಸಲು ಟಾಸ್ಕ್ ಫೋರ್ಸ್ ಕೂಡಾ ಸಿದ್ಧವಾಗಿದೆ. ಈಗ ಪ್ರತೀ ವಾರ ಪೇಟೆಯಲ್ಲಿ ಸಂಚರಿಸಿ ಸ್ವಚ್ಛತೆಯ ಅರಿವು ಮೂಡಿಸುತ್ತಿದೆ. ಕಳೆದ 3 ವಾರಗಳಿಂದ ಈ ಅಭಿಯಾನ ನಡೆಯುತ್ತಿದೆ. ಈ ಹೊತ್ತಿಗೆ ಗುತ್ತಿಗಾರು ಪೇಟೆಯಲ್ಲಿ ಕಸದ ಪ್ರಮಾಣ ಕಡಿಮೆಯಾಗಿದೆ.ಕೆಲವು ಅಂಗಡಿಗಳಲ್ಲಿ ಬಟ್ಟೆ ಚೀಲದ ಬೇಡಿಕೆ ಶುರುವಾಗಿದೆ.
ಅವೈಜ್ಞಾನಿಕ ಮಳೆ ಮುನ್ಸೂಚನೆಗಳ ಆಧಾರದ ಮೇಲೆ ಪದೇ ಪದೇ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸುವುದು…
ಪಶ್ಚಿಮ ಬಂಗಾಳ ಕರಾವಳಿಯಲ್ಲಿ ರೂಪುಗೊಳ್ಳಲಿರುವ ವಾಯುಭಾರ ಕುಸಿತದಿಂದ ಕರ್ನಾಟಕದಲ್ಲಿ ಮತ್ತೆ ಮುಂಗಾರು ಚುರುಕುಗೊಳ್ಳುವ…
ಆಗಸ್ಟ್ 2ರಿಂದ 8ರವರೆಗೆ ಮಂಗಳೂರಿನಲ್ಲಿ ರಾಷ್ಟ್ರೀಯ ಅಂಡರ್-11 ಮುಕ್ತ ಹಾಗೂ ಬಾಲಕಿಯರ ಚೆಸ್…
ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…
ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…