ಸ್ವಚ್ಛ ಭಾರತ ಅಭಿಯಾನ ಆರಂಭವಾಗಿ ವರ್ಷಗಳು ಹಲವು ಉರುಳಿತು. ಇಂದಿಗೂ ಕಸ ಹೆಕ್ಕುವುದರಲ್ಲೇ ಈ ಅಭಿಯಾನ ನಿಂತಿದೆ. ಅದಕ್ಕಿಂತ ಆಚೆಗೆ ನಿಂತು ಯೋಚಿಸಿದೆ ಪುಟ್ಟ ಹಳ್ಳಿ. ಕಳೆದ 3 ವಾರಗಳಿಂದ ಈ ಅಭಿಯಾನ ನಡೆಯುತ್ತಿದೆ. ಇದೀಗ ಒಂದು ಹೆಜ್ಜೆಯಷ್ಟು ಯಶಸ್ಸು ಕಂಡಿದೆ ಈ ಅಭಿಯಾನದಲ್ಲಿ.
ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಗುತ್ತಿಗಾರು ಗ್ರಾಮದಲ್ಲಿ ಸ್ವಚ್ಛತೆಯ ಬಗ್ಗೆ ಜನರಲ್ಲಿ ಅರಿವು ಮೂಡಿಸಲು ಗ್ರಾಮದ ಕ್ರಿಯಾಶೀಲ ತಂಡವೊಂದು ಗುತ್ತಿಗಾರು ಗ್ರಾಮ ಪಂಚಾಯತ್ ಸಹಕಾರದೊಂದಿಗೆ ಸಕ್ರಿಯವಾಗಿದೆ. ಇದಕ್ಕೆ ಗುತ್ತಿಗಾರು ಎಂಬ ಪುಟ್ಟ ಹಳ್ಳಿಯ ಎಲ್ಲಾ ಸಂಘಸಂಸ್ಥೆಗಳೂ ಕೈಜೋಡಿಸಿದೆ. ಸ್ವಚ್ಛತೆಯ ಬಗ್ಗೆ ಅರಿವು ಮೂಡಿಸಲು ಟಾಸ್ಕ್ ಫೋರ್ಸ್ ಕೂಡಾ ಸಿದ್ಧವಾಗಿದೆ. ಈಗ ಪ್ರತೀ ವಾರ ಪೇಟೆಯಲ್ಲಿ ಸಂಚರಿಸಿ ಸ್ವಚ್ಛತೆಯ ಅರಿವು ಮೂಡಿಸುತ್ತಿದೆ. ಕಳೆದ 3 ವಾರಗಳಿಂದ ಈ ಅಭಿಯಾನ ನಡೆಯುತ್ತಿದೆ. ಈ ಹೊತ್ತಿಗೆ ಗುತ್ತಿಗಾರು ಪೇಟೆಯಲ್ಲಿ ಕಸದ ಪ್ರಮಾಣ ಕಡಿಮೆಯಾಗಿದೆ.ಕೆಲವು ಅಂಗಡಿಗಳಲ್ಲಿ ಬಟ್ಟೆ ಚೀಲದ ಬೇಡಿಕೆ ಶುರುವಾಗಿದೆ.
ರಾಜ್ಯದ ಹಲವೆಡೆ ಮುಂದಿನ ಎರಡು ದಿನ ಸಂಜೆ ಹಾಗೂ ರಾತ್ರಿ ಗುಡುಗು ಸಹಿತ…
ಬೇಸಿಗೆಯಲ್ಲಿ ದೇಹದಲ್ಲಿ ನೀರಿನಾಂಶ ಕಡಿಮೆಯಾಗುವುದರಿಂದ ಕಿಡ್ನಿ ಸ್ಟೋನ್ ಸಮಸ್ಯೆ ಹೆಚ್ಚಾಗುವ ಸಾಧ್ಯತೆ ಇದೆ.…
ಮಂಗಳೂರು ನಗರದಲ್ಲಿ ಮಳೆಗಾಲದ ಹಿನ್ನೆಲೆ ಜೂನ್ 1ರಿಂದ ಸೆಪ್ಟೆಂಬರ್ 30ರವರೆಗೆ ರಸ್ತೆ, ಗುಡ್ಡ…
ಈಶಾನ್ಯ ಭಾರತದಲ್ಲಿ ಡಿಆರ್ಐ ನಡೆಸಿದ ದಾಳಿಯಲ್ಲಿ ಸುಮಾರು 60 ಸಾವಿರ ಕೆಜಿ ಅಕ್ರಮ…
ರಾಜ್ಯದ ಹಲವು ಜಿಲ್ಲೆಗಳಲ್ಲಿ ಇನ್ನೂ ಎರಡು ದಿನ ಸಂಜೆ ಹಾಗೂ ರಾತ್ರಿ ಮಳೆಯ…
ಅಡಿಕೆ ಮಾರುಕಟ್ಟೆಗೆ ದೊಡ್ಡ ಕಾರ್ಪೊರೇಟ್ ಸಂಸ್ಥೆಗಳು ಬಂದರೆ ರೈತರಿಗೆ ಆರಂಭದಲ್ಲಿ ಲಾಭದ ಅನುಭವ…