ಸ್ವಚ್ಛ ಭಾರತ ಅಭಿಯಾನ ಆರಂಭವಾಗಿ ವರ್ಷಗಳು ಹಲವು ಉರುಳಿತು. ಇಂದಿಗೂ ಕಸ ಹೆಕ್ಕುವುದರಲ್ಲೇ ಈ ಅಭಿಯಾನ ನಿಂತಿದೆ. ಅದಕ್ಕಿಂತ ಆಚೆಗೆ ನಿಂತು ಯೋಚಿಸಿದೆ ಪುಟ್ಟ ಹಳ್ಳಿ. ಕಳೆದ 3 ವಾರಗಳಿಂದ ಈ ಅಭಿಯಾನ ನಡೆಯುತ್ತಿದೆ. ಇದೀಗ ಒಂದು ಹೆಜ್ಜೆಯಷ್ಟು ಯಶಸ್ಸು ಕಂಡಿದೆ ಈ ಅಭಿಯಾನದಲ್ಲಿ.
ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಗುತ್ತಿಗಾರು ಗ್ರಾಮದಲ್ಲಿ ಸ್ವಚ್ಛತೆಯ ಬಗ್ಗೆ ಜನರಲ್ಲಿ ಅರಿವು ಮೂಡಿಸಲು ಗ್ರಾಮದ ಕ್ರಿಯಾಶೀಲ ತಂಡವೊಂದು ಗುತ್ತಿಗಾರು ಗ್ರಾಮ ಪಂಚಾಯತ್ ಸಹಕಾರದೊಂದಿಗೆ ಸಕ್ರಿಯವಾಗಿದೆ. ಇದಕ್ಕೆ ಗುತ್ತಿಗಾರು ಎಂಬ ಪುಟ್ಟ ಹಳ್ಳಿಯ ಎಲ್ಲಾ ಸಂಘಸಂಸ್ಥೆಗಳೂ ಕೈಜೋಡಿಸಿದೆ. ಸ್ವಚ್ಛತೆಯ ಬಗ್ಗೆ ಅರಿವು ಮೂಡಿಸಲು ಟಾಸ್ಕ್ ಫೋರ್ಸ್ ಕೂಡಾ ಸಿದ್ಧವಾಗಿದೆ. ಈಗ ಪ್ರತೀ ವಾರ ಪೇಟೆಯಲ್ಲಿ ಸಂಚರಿಸಿ ಸ್ವಚ್ಛತೆಯ ಅರಿವು ಮೂಡಿಸುತ್ತಿದೆ. ಕಳೆದ 3 ವಾರಗಳಿಂದ ಈ ಅಭಿಯಾನ ನಡೆಯುತ್ತಿದೆ. ಈ ಹೊತ್ತಿಗೆ ಗುತ್ತಿಗಾರು ಪೇಟೆಯಲ್ಲಿ ಕಸದ ಪ್ರಮಾಣ ಕಡಿಮೆಯಾಗಿದೆ.ಕೆಲವು ಅಂಗಡಿಗಳಲ್ಲಿ ಬಟ್ಟೆ ಚೀಲದ ಬೇಡಿಕೆ ಶುರುವಾಗಿದೆ.
ಚಿಕ್ಕಮಗಳೂರಿನ ರೈತ ಶಿವಪ್ರಸಾದ್ ಬೇವಿನ ಬೀಜ ಸಂಸ್ಕರಣೆಯ ಮೂಲಕ ಯಶಸ್ಸು ಕಂಡಿದ್ದಾರೆ. ಅವರ…
ಕಡಿಮೆ ಮಳೆ ಮತ್ತು ಪಶ್ಚಿಮ ಏಷ್ಯಾ ಬಿಕ್ಕಟ್ಟು ಭಾರತೀಯ ಕೃಷಿಗೆ ದೊಡ್ಡ ಹೊಡೆತವಾಗುವ…
ಯಾದಗಿರಿಯಲ್ಲಿ ಬಿಸಿಗಾಳಿ ಹೆಚ್ಚಾಗುವ ಸಾಧ್ಯತೆ ಹಿನ್ನೆಲೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಸಾರ್ವಜನಿಕರು ಹಾಗೂ…
ಬೇಸಿಗೆಯಲ್ಲಿಯೂ ಎಳ್ಳು ಬೆಳೆದು ಉತ್ತಮ ಇಳುವರಿ ಪಡೆದ ವಿಜಯಕುಮಾರ್ ಪಾಟೀಲ್ ಇತರ ರೈತರಿಗೆ…
2026ರ ಮುಂಗಾರು ಬೇಗ ಆರಂಭವಾಗುವ ಸಾಧ್ಯತೆ ಇದ್ದರೂ, ಮಳೆಯ ಪ್ರಮಾಣ ಕಡಿಮೆಯಾಗಬಹುದು. ಇದು…
ಈರುಳ್ಳಿ ಬೆಳೆಯಲ್ಲಿ ಜೇನುನೊಣಗಳ ಪರಾಗಸ್ಪರ್ಶದಿಂದ ಇಳುವರಿ ಹೆಚ್ಚಿಸಬಹುದು ಎಂದು ತಜ್ಞರು ತಿಳಿಸಿದ್ದಾರೆ. ರೈತರಿಗೆ…