ಸ್ವಚ್ಛ ಭಾರತ ಅಭಿಯಾನ ಆರಂಭವಾಗಿ ವರ್ಷಗಳು ಹಲವು ಉರುಳಿತು. ಇಂದಿಗೂ ಕಸ ಹೆಕ್ಕುವುದರಲ್ಲೇ ಈ ಅಭಿಯಾನ ನಿಂತಿದೆ. ಅದಕ್ಕಿಂತ ಆಚೆಗೆ ನಿಂತು ಯೋಚಿಸಿದೆ ಪುಟ್ಟ ಹಳ್ಳಿ. ಕಳೆದ 3 ವಾರಗಳಿಂದ ಈ ಅಭಿಯಾನ ನಡೆಯುತ್ತಿದೆ. ಇದೀಗ ಒಂದು ಹೆಜ್ಜೆಯಷ್ಟು ಯಶಸ್ಸು ಕಂಡಿದೆ ಈ ಅಭಿಯಾನದಲ್ಲಿ.
ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಗುತ್ತಿಗಾರು ಗ್ರಾಮದಲ್ಲಿ ಸ್ವಚ್ಛತೆಯ ಬಗ್ಗೆ ಜನರಲ್ಲಿ ಅರಿವು ಮೂಡಿಸಲು ಗ್ರಾಮದ ಕ್ರಿಯಾಶೀಲ ತಂಡವೊಂದು ಗುತ್ತಿಗಾರು ಗ್ರಾಮ ಪಂಚಾಯತ್ ಸಹಕಾರದೊಂದಿಗೆ ಸಕ್ರಿಯವಾಗಿದೆ. ಇದಕ್ಕೆ ಗುತ್ತಿಗಾರು ಎಂಬ ಪುಟ್ಟ ಹಳ್ಳಿಯ ಎಲ್ಲಾ ಸಂಘಸಂಸ್ಥೆಗಳೂ ಕೈಜೋಡಿಸಿದೆ. ಸ್ವಚ್ಛತೆಯ ಬಗ್ಗೆ ಅರಿವು ಮೂಡಿಸಲು ಟಾಸ್ಕ್ ಫೋರ್ಸ್ ಕೂಡಾ ಸಿದ್ಧವಾಗಿದೆ. ಈಗ ಪ್ರತೀ ವಾರ ಪೇಟೆಯಲ್ಲಿ ಸಂಚರಿಸಿ ಸ್ವಚ್ಛತೆಯ ಅರಿವು ಮೂಡಿಸುತ್ತಿದೆ. ಕಳೆದ 3 ವಾರಗಳಿಂದ ಈ ಅಭಿಯಾನ ನಡೆಯುತ್ತಿದೆ. ಈ ಹೊತ್ತಿಗೆ ಗುತ್ತಿಗಾರು ಪೇಟೆಯಲ್ಲಿ ಕಸದ ಪ್ರಮಾಣ ಕಡಿಮೆಯಾಗಿದೆ.ಕೆಲವು ಅಂಗಡಿಗಳಲ್ಲಿ ಬಟ್ಟೆ ಚೀಲದ ಬೇಡಿಕೆ ಶುರುವಾಗಿದೆ.
E20 ಪೆಟ್ರೋಲ್ ಬಳಕೆಯಿಂದ ಸುಮಾರು 3–5% ಮೈಲೇಜ್ ಕುಸಿಯುವ ಸಾಧ್ಯತೆ ಇದೆ. ಆದರೆ…
ರಾಜ್ಯದ ಬಹುತೇಕ ಭಾಗಗಳಲ್ಲಿ ಮಳೆಯ ತೀವ್ರತೆ ಕ್ರಮೇಣ ಕಡಿಮೆಯಾಗುವ ಲಕ್ಷಣಗಳು ಗೋಚರಿಸುತ್ತಿವೆ. ಜುಲೈ…
ನೀರಿನ ಕೊರತೆಯಿಂದ ಅಡಿಕೆ ತೋಟದ ಒಂದು ಭಾಗವನ್ನು ಹಲಸು ತೋಟವನ್ನಾಗಿ ಪರಿವರ್ತಿಸಿದ ಪುತ್ತೂರಿನ…
ಜುಲೈ 8ರಿಂದ ರಾಜ್ಯದಲ್ಲಿ ಮಳೆಯ ಪ್ರಮಾಣ ತೀವ್ರವಾಗಿ ಕುಸಿಯುವ ಸಾಧ್ಯತೆ ಇದೆ. ಕರಾವಳಿ…