Advertisement
MIRROR FOCUS

#SwachchBharath | ಸ್ವಚ್ಛತೆಗಾಗಿ ಟಾಸ್ಕ್‌ಫೋರ್ಸ್‌ | ಪ್ಲಾಸ್ಟಿಕ್‌ ಮುಕ್ತ ಜಾಗೃತಿ ಅಭಿಯಾನ | ಸ್ವಚ್ಛತೆಯ ಬಗ್ಗೆ ಅರಿವು | ಪುಟ್ಟ ಗ್ರಾಮದ ದೊಡ್ಡ ಹೆಜ್ಜೆ… |

Share

ಸ್ವಚ್ಛ ಭಾರತ ಅಭಿಯಾನ ಆರಂಭವಾಗಿ ವರ್ಷಗಳು ಹಲವು ಉರುಳಿತು. ಇಂದಿಗೂ ಕಸ ಹೆಕ್ಕುವುದರಲ್ಲೇ ಈ ಅಭಿಯಾನ ನಿಂತಿದೆ. ಅದಕ್ಕಿಂತ ಆಚೆಗೆ ನಿಂತು ಯೋಚಿಸಿದೆ ಪುಟ್ಟ ಹಳ್ಳಿ. ಕಳೆದ 3 ವಾರಗಳಿಂದ ಈ ಅಭಿಯಾನ ನಡೆಯುತ್ತಿದೆ. ಇದೀಗ ಒಂದು ಹೆಜ್ಜೆಯಷ್ಟು ಯಶಸ್ಸು ಕಂಡಿದೆ ಈ ಅಭಿಯಾನದಲ್ಲಿ.

ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಗುತ್ತಿಗಾರು ಗ್ರಾಮದಲ್ಲಿ ಸ್ವಚ್ಛತೆಯ ಬಗ್ಗೆ ಜನರಲ್ಲಿ ಅರಿವು ಮೂಡಿಸಲು ಗ್ರಾಮದ ಕ್ರಿಯಾಶೀಲ ತಂಡವೊಂದು ಗುತ್ತಿಗಾರು ಗ್ರಾಮ ಪಂಚಾಯತ್‌ ಸಹಕಾರದೊಂದಿಗೆ ಸಕ್ರಿಯವಾಗಿದೆ. ಇದಕ್ಕೆ ಗುತ್ತಿಗಾರು ಎಂಬ ಪುಟ್ಟ ಹಳ್ಳಿಯ ಎಲ್ಲಾ ಸಂಘಸಂಸ್ಥೆಗಳೂ ಕೈಜೋಡಿಸಿದೆ. ಸ್ವಚ್ಛತೆಯ ಬಗ್ಗೆ ಅರಿವು ಮೂಡಿಸಲು  ಟಾಸ್ಕ್‌ ಫೋರ್ಸ್‌ ಕೂಡಾ ಸಿದ್ಧವಾಗಿದೆ. ಈಗ ಪ್ರತೀ ವಾರ ಪೇಟೆಯಲ್ಲಿ ಸಂಚರಿಸಿ ಸ್ವಚ್ಛತೆಯ ಅರಿವು ಮೂಡಿಸುತ್ತಿದೆ. ಕಳೆದ  3 ವಾರಗಳಿಂದ ಈ ಅಭಿಯಾನ ನಡೆಯುತ್ತಿದೆ. ಈ ಹೊತ್ತಿಗೆ ಗುತ್ತಿಗಾರು ಪೇಟೆಯಲ್ಲಿ ಕಸದ  ಪ್ರಮಾಣ ಕಡಿಮೆಯಾಗಿದೆ.ಕೆಲವು ಅಂಗಡಿಗಳಲ್ಲಿ ಬಟ್ಟೆ ಚೀಲದ ಬೇಡಿಕೆ ಶುರುವಾಗಿದೆ.

ಸ್ವಚ್ಛತೆ ಎಂದರೆ ಕೇವಲ ಕಸ ಹೆಕ್ಕುವುದಲ್ಲ. ನಮ್ಮ ಊರು ಸ್ವಚ್ಛ ಊರು ಎನ್ನುವ ಅರಿವು ಎಲ್ಲರಲ್ಲಿ ಬೆಳೆಯಬೇಕು. ಇದನ್ನು ಜನರಲ್ಲಿ ಅರಿವು ಮೂಡಿಸುವ ಕೆಲಸ ಈ ಟಾಸ್ಕ್‌ ಫೋರ್ಸ್‌ ಹಾಗೂ ಗ್ರಾಮ ಪಂಚಾಯತ್‌ ಮಾಡುತ್ತಿದೆ. ಟಾಸ್ಕ್‌ ಫೋರ್ಸ್‌ನಲ್ಲಿ ಪ್ರಮುಖವಾಗಿ ಸಂಜೀವಿನಿ ಘಟಕದ ಸದಸ್ಯರು ಇರುವುದು ಗಮನಾರ್ಹವಾಗಿದೆ. ಇವರೆಲ್ಲಾ ಮಹಿಳಾ ಸದಸ್ಯರೇ ಆಗಿರುವುದು  ಸ್ವಚ್ಛ ಗ್ರಾಮದ ಉದ್ದೇಶಕ್ಕೆ ಬಲ ತುಂಬಿದೆ.  ಇಲ್ಲಿ  ಕೇವಲ ಕಸದ ಬಗ್ಗೆ ಜಾಗೃತಿ ಮಾತ್ರವಲ್ಲ,  ಪ್ಲಾಸ್ಟಿಕ್‌ ಬಳಕೆ ಕಡಿಮೆ ಮಾಡಿ ಬಟ್ಟೆ ಚೀಲ ಉಪಯೋಗಿಸಿ ಪರಿಸರ ರಕ್ಷಣೆಯ ಉದ್ದೇಶವೂ ಇಲ್ಲಿದೆ. ಈ ಜಾಗೃತಿಯ ಮೂಲಕ ಈಗಾಗಲೇ ಹಲವಾರು ಮಂದಿಯನ್ನು  ಎಚ್ಚರಿಸಿದೆ. ಸ್ವಯಂಪ್ರೇರಿತರಾಗಿ ಸ್ವಚ್ಛತೆ, ಪ್ಲಾಸ್ಟಿಕ್‌ ಬಳಕೆ ಕಡಿಮೆ ಮಾಡುವ ಕಡೆಗೆ ಮನಸ್ಸು ಮಾಡಿದ್ದಾರೆ.
ಒಂದು ಪುಟ್ಟ ಹಳ್ಳಿಯ ಈ ಜಾಗೃತಿ ದೊಡ್ಡ ಸಂದೇಶ ನೀಡುತ್ತಿದೆ. ಈಗ ಬೇಕಿರುವುದು  ಜನರ ಸಹಕಾರ, ಸಹಭಾಗಿತ್ವ. ಇದರ ಕಡೆಗೆ ಇನ್ನಷ್ಟು ಮಂದಿ ಗಮನಹರಿಸಬೇಕಿದೆ. ಸ್ವಚ್ಛ ಗ್ರಾಮ, ಸ್ವಚ್ಛ ಭಾರತದ ಕನಸು ಸಾಕಾರಗೊಳ್ಳಲು ಸ್ವಯಂ ಜಾಗೃತಿಯೇ ಮುಖ್ಯವಾಗಿದೆ.
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 06-09-2026 | ಕರ್ನಾಟಕದಲ್ಲಿ ಮಳೆ ಇಳಿಮುಖದ ಲಕ್ಷಣ

ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಇಳಿಮುಖವಾಗುತ್ತಿದ್ದು, ಕರಾವಳಿ–ಮಲೆನಾಡಿನಲ್ಲಿ ಸೆ.8ರಿಂದ 10ರವರೆಗೆ ಅಲ್ಲಲ್ಲಿ…

6 hours ago

ಭಾರತದ ಹಸಿರು ಯೋಜನೆಗಳಿಗೆ ಜಪಾನ್‌ನ ಕಾರ್ಬನ್ ಕ್ರೆಡಿಟ್ ಅವಕಾಶ – ರೈತರೂ ಪಡೆಯಬಹುದೇ ಇದರ ಲಾಭ?

ಭಾರತ–ಜಪಾನ್ JCM ಮೂಲಕ ಭಾರತದಲ್ಲಿ ಕಡಿಮೆ-ಇಂಗಾಲ ಯೋಜನೆಗಳಿಗೆ ಜಪಾನ್ ಹೂಡಿಕೆ ಮತ್ತು ತಂತ್ರಜ್ಞಾನ…

9 hours ago

ಹಿಮಾಲಯದಲ್ಲಿ ಮತ್ತೊಂದು ಅಪಾಯದ ಎಚ್ಚರಿಕೆ..!

ಸಿಕ್ಕಿಂನಲ್ಲಿ 40 ಹೆಚ್ಚಿನ ಅಪಾಯದ ಹಿಮನದಿ ಸರೋವರಗಳನ್ನು ಗುರುತಿಸಲಾಗಿದ್ದು, 16 ಸರೋವರಗಳು ಅತ್ಯಂತ…

10 hours ago

ಎಲ್ ನಿನೊ ಮತ್ತಷ್ಟು ಬಲಗೊಳ್ಳುವ ಮುನ್ಸೂಚನೆ..!

2026ರ ಆಗಸ್ಟ್ ವೇಳೆಗೆ ಎಲ್ ನಿನೊ ಆರಂಭವಾಗಿದ್ದು , ವರ್ಷಾಂತ್ಯದ ವೇಳೆಗೆ ಅತ್ಯಂತ…

11 hours ago

ಈಶಾನ್ಯದಿಂದ ಜಾರ್ಖಂಡ್‌ವರೆಗೆ ರಬ್ಬರ್‌ ಕೃಷಿಯ ವಿಸ್ತರಣೆ | ಹೊಸ ಪ್ರದೇಶಗಳಲ್ಲಿ ರಬ್ಬರ್‌ ಕೃಷಿ ವಿಸ್ತರಣೆ – ಅಪಾಯವೇ..? ಅವಕಾಶವೇ..?

ನಾಗಾಲ್ಯಾಂಡ್‌ನಲ್ಲಿ ರಬ್ಬರ್‌ ಕೃಷಿ ಸುಮಾರು 29,794 ಹೆಕ್ಟೇರ್‌ಗೆ ವಿಸ್ತರಿಸಿರುವ ಬೆನ್ನಲ್ಲೇ ಜಾರ್ಖಂಡ್‌ನಲ್ಲಿ ಸೂಕ್ತ…

23 hours ago

ದಾವಣಗೆರೆಯಲ್ಲಿ ಮಳೆ ಕೊರತೆ – ಮೆಕ್ಕೆಜೋಳ, ರಾಗಿ ಬೆಳೆ ಶೇ.50 ಹಾನಿ ಭೀತಿ

ದಾವಣಗೆರೆ ಜಿಲ್ಲೆಯಲ್ಲಿ 15 ದಿನಗಳಿಂದ ಮಳೆ ಕೊರತೆಯಾಗಿದ್ದು, ಮುಂದಿನ ಕೆಲ ದಿನಗಳಲ್ಲೂ ಮಳೆಯಾಗದಿದ್ದರೆ…

1 day ago