Advertisement
MIRROR FOCUS

#SwachchBharath | ಸ್ವಚ್ಛತೆಗಾಗಿ ಟಾಸ್ಕ್‌ಫೋರ್ಸ್‌ | ಪ್ಲಾಸ್ಟಿಕ್‌ ಮುಕ್ತ ಜಾಗೃತಿ ಅಭಿಯಾನ | ಸ್ವಚ್ಛತೆಯ ಬಗ್ಗೆ ಅರಿವು | ಪುಟ್ಟ ಗ್ರಾಮದ ದೊಡ್ಡ ಹೆಜ್ಜೆ… |

Share

ಸ್ವಚ್ಛ ಭಾರತ ಅಭಿಯಾನ ಆರಂಭವಾಗಿ ವರ್ಷಗಳು ಹಲವು ಉರುಳಿತು. ಇಂದಿಗೂ ಕಸ ಹೆಕ್ಕುವುದರಲ್ಲೇ ಈ ಅಭಿಯಾನ ನಿಂತಿದೆ. ಅದಕ್ಕಿಂತ ಆಚೆಗೆ ನಿಂತು ಯೋಚಿಸಿದೆ ಪುಟ್ಟ ಹಳ್ಳಿ. ಕಳೆದ 3 ವಾರಗಳಿಂದ ಈ ಅಭಿಯಾನ ನಡೆಯುತ್ತಿದೆ. ಇದೀಗ ಒಂದು ಹೆಜ್ಜೆಯಷ್ಟು ಯಶಸ್ಸು ಕಂಡಿದೆ ಈ ಅಭಿಯಾನದಲ್ಲಿ.

ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಗುತ್ತಿಗಾರು ಗ್ರಾಮದಲ್ಲಿ ಸ್ವಚ್ಛತೆಯ ಬಗ್ಗೆ ಜನರಲ್ಲಿ ಅರಿವು ಮೂಡಿಸಲು ಗ್ರಾಮದ ಕ್ರಿಯಾಶೀಲ ತಂಡವೊಂದು ಗುತ್ತಿಗಾರು ಗ್ರಾಮ ಪಂಚಾಯತ್‌ ಸಹಕಾರದೊಂದಿಗೆ ಸಕ್ರಿಯವಾಗಿದೆ. ಇದಕ್ಕೆ ಗುತ್ತಿಗಾರು ಎಂಬ ಪುಟ್ಟ ಹಳ್ಳಿಯ ಎಲ್ಲಾ ಸಂಘಸಂಸ್ಥೆಗಳೂ ಕೈಜೋಡಿಸಿದೆ. ಸ್ವಚ್ಛತೆಯ ಬಗ್ಗೆ ಅರಿವು ಮೂಡಿಸಲು  ಟಾಸ್ಕ್‌ ಫೋರ್ಸ್‌ ಕೂಡಾ ಸಿದ್ಧವಾಗಿದೆ. ಈಗ ಪ್ರತೀ ವಾರ ಪೇಟೆಯಲ್ಲಿ ಸಂಚರಿಸಿ ಸ್ವಚ್ಛತೆಯ ಅರಿವು ಮೂಡಿಸುತ್ತಿದೆ. ಕಳೆದ  3 ವಾರಗಳಿಂದ ಈ ಅಭಿಯಾನ ನಡೆಯುತ್ತಿದೆ. ಈ ಹೊತ್ತಿಗೆ ಗುತ್ತಿಗಾರು ಪೇಟೆಯಲ್ಲಿ ಕಸದ  ಪ್ರಮಾಣ ಕಡಿಮೆಯಾಗಿದೆ.ಕೆಲವು ಅಂಗಡಿಗಳಲ್ಲಿ ಬಟ್ಟೆ ಚೀಲದ ಬೇಡಿಕೆ ಶುರುವಾಗಿದೆ.

ಸ್ವಚ್ಛತೆ ಎಂದರೆ ಕೇವಲ ಕಸ ಹೆಕ್ಕುವುದಲ್ಲ. ನಮ್ಮ ಊರು ಸ್ವಚ್ಛ ಊರು ಎನ್ನುವ ಅರಿವು ಎಲ್ಲರಲ್ಲಿ ಬೆಳೆಯಬೇಕು. ಇದನ್ನು ಜನರಲ್ಲಿ ಅರಿವು ಮೂಡಿಸುವ ಕೆಲಸ ಈ ಟಾಸ್ಕ್‌ ಫೋರ್ಸ್‌ ಹಾಗೂ ಗ್ರಾಮ ಪಂಚಾಯತ್‌ ಮಾಡುತ್ತಿದೆ. ಟಾಸ್ಕ್‌ ಫೋರ್ಸ್‌ನಲ್ಲಿ ಪ್ರಮುಖವಾಗಿ ಸಂಜೀವಿನಿ ಘಟಕದ ಸದಸ್ಯರು ಇರುವುದು ಗಮನಾರ್ಹವಾಗಿದೆ. ಇವರೆಲ್ಲಾ ಮಹಿಳಾ ಸದಸ್ಯರೇ ಆಗಿರುವುದು  ಸ್ವಚ್ಛ ಗ್ರಾಮದ ಉದ್ದೇಶಕ್ಕೆ ಬಲ ತುಂಬಿದೆ.  ಇಲ್ಲಿ  ಕೇವಲ ಕಸದ ಬಗ್ಗೆ ಜಾಗೃತಿ ಮಾತ್ರವಲ್ಲ,  ಪ್ಲಾಸ್ಟಿಕ್‌ ಬಳಕೆ ಕಡಿಮೆ ಮಾಡಿ ಬಟ್ಟೆ ಚೀಲ ಉಪಯೋಗಿಸಿ ಪರಿಸರ ರಕ್ಷಣೆಯ ಉದ್ದೇಶವೂ ಇಲ್ಲಿದೆ. ಈ ಜಾಗೃತಿಯ ಮೂಲಕ ಈಗಾಗಲೇ ಹಲವಾರು ಮಂದಿಯನ್ನು  ಎಚ್ಚರಿಸಿದೆ. ಸ್ವಯಂಪ್ರೇರಿತರಾಗಿ ಸ್ವಚ್ಛತೆ, ಪ್ಲಾಸ್ಟಿಕ್‌ ಬಳಕೆ ಕಡಿಮೆ ಮಾಡುವ ಕಡೆಗೆ ಮನಸ್ಸು ಮಾಡಿದ್ದಾರೆ.
ಒಂದು ಪುಟ್ಟ ಹಳ್ಳಿಯ ಈ ಜಾಗೃತಿ ದೊಡ್ಡ ಸಂದೇಶ ನೀಡುತ್ತಿದೆ. ಈಗ ಬೇಕಿರುವುದು  ಜನರ ಸಹಕಾರ, ಸಹಭಾಗಿತ್ವ. ಇದರ ಕಡೆಗೆ ಇನ್ನಷ್ಟು ಮಂದಿ ಗಮನಹರಿಸಬೇಕಿದೆ. ಸ್ವಚ್ಛ ಗ್ರಾಮ, ಸ್ವಚ್ಛ ಭಾರತದ ಕನಸು ಸಾಕಾರಗೊಳ್ಳಲು ಸ್ವಯಂ ಜಾಗೃತಿಯೇ ಮುಖ್ಯವಾಗಿದೆ.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

₹2,500 ಕೋಟಿಗೂ ಅಧಿಕ ತೆರಿಗೆ ವಂಚನೆ ಪತ್ತೆ..! ಅಡಿಕೆ ಆಮದು ಜಾಲದ ಹಿಂದೆ ಏನಿತ್ತು?

ದಕ್ಷಿಣ-ಪೂರ್ವ ಏಷ್ಯಾದಿಂದ ಆಮದು ಮಾಡಿದ ಅಡಿಕೆಯನ್ನು ಬಾಂಗ್ಲಾದೇಶ ಮೂಲದ ಅಡಿಕೆಯೆಂದು ತಪ್ಪಾಗಿ ಘೋಷಿಸಿ…

5 hours ago

ಹವಾಮಾನ ವರದಿ | 16-08-2026 | ಕರಾವಳಿ–ಮಲೆನಾಡಿನಲ್ಲಿ ಮಳೆ ಕಡಿಮೆ – ಉತ್ತರ ಒಳನಾಡಿನಲ್ಲಿ 19 ರಿಂದ ಮಳೆ ಹೆಚ್ಚಳ ಸಾಧ್ಯತೆ

ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 24ರವರೆಗೂ ಬಿಸಿಲು, ಮೋಡ ಹಾಗೂ ಅಲ್ಲಲ್ಲಿ ಸಾಮಾನ್ಯ…

1 day ago

ಗ್ರಾಮೀಣ ಸಂಪರ್ಕಕ್ಕೆ 15 ಸಾವಿರ ಹೊಸ ಬಸ್‌ಗಳು: ಸಾರಿಗೆ ಸಚಿವ

ಗ್ರಾಮೀಣ ಹಾಗೂ ಸಾರಿಗೆ ಸಂಪರ್ಕದಿಂದ ವಂಚಿತ ಪ್ರದೇಶಗಳಿಗೆ ಸಾರ್ವಜನಿಕ ಸಾರಿಗೆ ಸೇವೆ ಹೆಚ್ಚಿಸುವ…

1 day ago

ಹವಾಮಾನ ವರದಿ | 15-08-2026 | ಕರಾವಳಿಯಲ್ಲಿ ಮುಂದಿನ 10 ದಿನವೂ ಮಳೆ ಚದುರಿಕೆ; ಒಳನಾಡಿನಲ್ಲಿ ಆಗಸ್ಟ್ 18–19ರಿಂದ ಮಳೆ ಸಾಧ್ಯತೆ

ಕರ್ನಾಟಕದಲ್ಲಿ ಮಳೆ ಚಟುವಟಿಕೆ ಸದ್ಯಕ್ಕೆ ಇಳಿಕೆಯಾಗಿದ್ದು, ಕರಾವಳಿಯಲ್ಲಿ ಮುಂದಿನ 10 ದಿನವೂ ಚದುರಿದ…

2 days ago

ಎತ್ತುಗಳಿಂದ ಡ್ರೋನ್‌ವರೆಗೆ… ಇದು ಭಾರತದ ಕೃಷಿಯ 79 ವರ್ಷಗಳ ಪಯಣ..!

ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…

2 days ago

ತೀವ್ರ ವಿರೋಧದ ಹಿನ್ನೆಲೆ – ರಾಜ್ಯದಲ್ಲಿ ಗುಟ್ಕಾ ನಿಷೇಧ ಹಿಂತೆಗೆದುಕೊಳ್ಳಲು ಸರ್ಕಾರ ನಿರ್ಧಾರ – ಹೊರಬೀಳದ ಅಧಿಕೃತ ಆದೇಶ..!

ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…

2 days ago