ಸ್ವಚ್ಛ ಭಾರತ ಅಭಿಯಾನ ಆರಂಭವಾಗಿ ವರ್ಷಗಳು ಹಲವು ಉರುಳಿತು. ಇಂದಿಗೂ ಕಸ ಹೆಕ್ಕುವುದರಲ್ಲೇ ಈ ಅಭಿಯಾನ ನಿಂತಿದೆ. ಅದಕ್ಕಿಂತ ಆಚೆಗೆ ನಿಂತು ಯೋಚಿಸಿದೆ ಪುಟ್ಟ ಹಳ್ಳಿ. ಕಳೆದ 3 ವಾರಗಳಿಂದ ಈ ಅಭಿಯಾನ ನಡೆಯುತ್ತಿದೆ. ಇದೀಗ ಒಂದು ಹೆಜ್ಜೆಯಷ್ಟು ಯಶಸ್ಸು ಕಂಡಿದೆ ಈ ಅಭಿಯಾನದಲ್ಲಿ.
ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಗುತ್ತಿಗಾರು ಗ್ರಾಮದಲ್ಲಿ ಸ್ವಚ್ಛತೆಯ ಬಗ್ಗೆ ಜನರಲ್ಲಿ ಅರಿವು ಮೂಡಿಸಲು ಗ್ರಾಮದ ಕ್ರಿಯಾಶೀಲ ತಂಡವೊಂದು ಗುತ್ತಿಗಾರು ಗ್ರಾಮ ಪಂಚಾಯತ್ ಸಹಕಾರದೊಂದಿಗೆ ಸಕ್ರಿಯವಾಗಿದೆ. ಇದಕ್ಕೆ ಗುತ್ತಿಗಾರು ಎಂಬ ಪುಟ್ಟ ಹಳ್ಳಿಯ ಎಲ್ಲಾ ಸಂಘಸಂಸ್ಥೆಗಳೂ ಕೈಜೋಡಿಸಿದೆ. ಸ್ವಚ್ಛತೆಯ ಬಗ್ಗೆ ಅರಿವು ಮೂಡಿಸಲು ಟಾಸ್ಕ್ ಫೋರ್ಸ್ ಕೂಡಾ ಸಿದ್ಧವಾಗಿದೆ. ಈಗ ಪ್ರತೀ ವಾರ ಪೇಟೆಯಲ್ಲಿ ಸಂಚರಿಸಿ ಸ್ವಚ್ಛತೆಯ ಅರಿವು ಮೂಡಿಸುತ್ತಿದೆ. ಕಳೆದ 3 ವಾರಗಳಿಂದ ಈ ಅಭಿಯಾನ ನಡೆಯುತ್ತಿದೆ. ಈ ಹೊತ್ತಿಗೆ ಗುತ್ತಿಗಾರು ಪೇಟೆಯಲ್ಲಿ ಕಸದ ಪ್ರಮಾಣ ಕಡಿಮೆಯಾಗಿದೆ.ಕೆಲವು ಅಂಗಡಿಗಳಲ್ಲಿ ಬಟ್ಟೆ ಚೀಲದ ಬೇಡಿಕೆ ಶುರುವಾಗಿದೆ.
ದಕ್ಷಿಣ-ಪೂರ್ವ ಏಷ್ಯಾದಿಂದ ಆಮದು ಮಾಡಿದ ಅಡಿಕೆಯನ್ನು ಬಾಂಗ್ಲಾದೇಶ ಮೂಲದ ಅಡಿಕೆಯೆಂದು ತಪ್ಪಾಗಿ ಘೋಷಿಸಿ…
ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 24ರವರೆಗೂ ಬಿಸಿಲು, ಮೋಡ ಹಾಗೂ ಅಲ್ಲಲ್ಲಿ ಸಾಮಾನ್ಯ…
ಗ್ರಾಮೀಣ ಹಾಗೂ ಸಾರಿಗೆ ಸಂಪರ್ಕದಿಂದ ವಂಚಿತ ಪ್ರದೇಶಗಳಿಗೆ ಸಾರ್ವಜನಿಕ ಸಾರಿಗೆ ಸೇವೆ ಹೆಚ್ಚಿಸುವ…
ಕರ್ನಾಟಕದಲ್ಲಿ ಮಳೆ ಚಟುವಟಿಕೆ ಸದ್ಯಕ್ಕೆ ಇಳಿಕೆಯಾಗಿದ್ದು, ಕರಾವಳಿಯಲ್ಲಿ ಮುಂದಿನ 10 ದಿನವೂ ಚದುರಿದ…
ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…
ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…