ಕರಾವಳಿ ಜಿಲ್ಲೆಗಳಿಗೆ ಅಪ್ಪಳಿಸಲಿದೆ ವರ್ಷದ ಮೊದಲ ಚಂಡಮಾರುತ “ಟೌಕ್ಟೇ” | ಗಾಳಿ-ಮಳೆಯ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ |

May 11, 2021
8:56 PM

ವರ್ಷದ ಮೊದಲ ಚಂಡಮಾರುತ ದೇಶದ ಕರಾವಳಿ ಜಿಲ್ಲೆಗಳಿಗೆ ಅಪ್ಪಳಿಸಲಿದೆ. ಮ್ಯಾನ್ಮಾರ್‌ ಈ ಚಂಡಮಾರುತಕ್ಕೆ “ಟೌಕ್ಟೇ” (Tauktae) ಎಂದು ಹೆಸರು ಇರಿಸಿದೆ.

ಮೇ 16ರಂದು ಅರಬ್ಬಿ ಸಮುದ್ರದಲ್ಲಿ ಚಂಡಮಾರುತದ ಪ್ರಭಾವ ಹೆಚ್ಚಾಗಿ ಕರ್ನಾಟಕ, ಕೇರಳ, ತಮಿಳುನಾಡು ಸೇರಿದಂತೆ ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ. ಈಗಾಗಲೇ ಮ್ಯಾನ್ಮಾರ್ ತನ್ನ ದೇಶದಲ್ಲಿ  ಹೈ ಅಲರ್ಟ್ ಘೋಷಣೆ ಮಾಡಿದ್ದು ಮಹಾರಾಷ್ಟ್ರ, ಗುಜರಾತ್ ಮತ್ತು ಕೇರಳದ ಕಡೆಗೆ ಈ ಚಂಡಮಾರುತ ಸಾಗುತ್ತಿದೆ ಎಂದು ತಿಳಿಸಿದೆ.

ಮೇ.13 ರಿಂದ ಮೇ 16 ರವರೆಗೆ ಲಕ್ಷದ್ವೀಪ, ಕೇರಳ, ಕರ್ನಾಟಕ ಮತ್ತು ತಮಿಳುನಾಡಿನಲ್ಲಿ  ಮಳೆಯಾಗುವ ಸಾಧ್ಯತೆ ಇದ್ದು  ಮೇ 14 ರ ಹೊತ್ತಿಗೆ ಆಗ್ನೇಯ ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತವಾಗಿ ಕಡಿಮೆ ಒತ್ತಡದ ಪ್ರದೇಶವಾಗುವ ಸಾಧ್ಯತೆ ಇದೆ. ಮೇ 16 ರ ಸುಮಾರಿಗೆ ಚಂಡಮಾರುತದ ಪ್ರಭಾವ ತೀವ್ರವಾಗಬಹುದು ಎಂದು ಭಾರತೀಯ ಹವಾಮಾನ ಇಲಾಖೆ  ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದೆ.

ಮೇ 15 ರಂದು ಗೋವಾ ಮತ್ತು ಮಹಾರಾಷ್ಟ್ರದಲ್ಲಿ ಸಮುದ್ರದ ಅಬ್ಬರ ಹೆಚ್ಚಾಗಲಿದ್ದು  ಗಂಟೆಗೆ 40 ರಿಂದ 60 ಕಿ.ಮೀ ವೇಗದಿಂದ  ಲಕ್ಷದ್ವೀಪ, ಮಾಲ್ಡೀವ್ಸ್ ಪ್ರದೇಶಗಳಿಗೆ  ಅಪ್ಪಳಿಸಲಿದೆ. ಕೇರಳ, ಗೋವಾ, ಕರ್ನಾಟಕ ಮತ್ತು ಮಹಾರಾಷ್ಟ್ರದ ಕರಾವಳಿ ತೀರಗಳಲ್ಲಿ ಭಾನುವಾರದವರೆಗೆ ಇದೇ ರೀತಿಯಲ್ಲಿ ಗಾಳಿ ಬೀಸುತ್ತವೆ ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ.

ಹೀಗಾಗಿ ಕರಾವಳಿ ಭಾಗದಲ್ಲಿ ಮುಂದಿನ ಒಂದು ವಾರಗಳ ಕಾಲ ಸಮುದ್ರಕ್ಕಿಳಿಯದಂತೆ ಎಚ್ಚರಿಕೆ ನೀಡಲಾಗಿದೆ. ಮಹಾರಾಷ್ಟ್ರ, ಕರ್ನಾಟಕ, ಕೇರಳ, ಗೋವಾದ ಸಮುದ್ರ ತೀರಗಳಲ್ಲಿ ಗಾಳಿ ಬೀಸುವ ನಿರೀಕ್ಷೆ ಇದ್ದು ಮುಂದಿನ ಒಂದು ವಾರಗಳ ಕಾಲ ಮುಂಜಾಗ್ರತೆ ವಹಿಸಲು ಇಲಾಖೆ ಸೂಚಿಸಿದೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 05-04-2026 | ರಾಜ್ಯದಲ್ಲಿ ಮಳೆ ಕಡಿಮೆಯ ಸೂಚನೆ – ಕರಾವಳಿ-ಮಲೆನಾಡಿನಲ್ಲಿ ತುಂತುರು ಮಳೆ, ರಾಜ್ಯಾದ್ಯಂತ ಬಿಸಿಲು ಏರಿಕೆ..!
April 5, 2026
1:27 PM
by: ಸಾಯಿಶೇಖರ್ ಕರಿಕಳ
ದೇಶಾದ್ಯಂತ 9.25 ಕೋಟಿ ರೈತ ಐಡಿ ನಿರ್ಮಾಣ | ರಸಗೊಬ್ಬರ ಬ್ಲಾಕ್‌ ಮಾರ್ಕೆಟ್‌ ವಿರುದ್ಧ ಕಟ್ಟುನಿಟ್ಟಾಗಿ ಕ್ರಮಕ್ಕೆ ಕೇಂದ್ರ ಕೃಷಿ ಸಚಿವರ ಸೂಚನೆ
April 4, 2026
7:34 AM
by: ದ ರೂರಲ್ ಮಿರರ್.ಕಾಂ
ಮಕ್ಕಳ ಆಟದ ಹಿಂದೆ ಅಡಗಿರುವ ಅಪಾಯ ಗೊತ್ತಾ? ಬೇಸಿಗೆ ರಜೆಯಲ್ಲಿ ಮಕ್ಕಳ ಸುರಕ್ಷತೆ ಬಗ್ಗೆ ಇರಲಿ ಎಚ್ಚರಿಕೆ
April 3, 2026
9:24 PM
by: ಮಹೇಶ್ ಪುಚ್ಚಪ್ಪಾಡಿ
ಹವಾಮಾನ ವರದಿ | 03-04-2026 | ಕರ್ನಾಟಕದಲ್ಲಿ ಗುಡುಗು-ಮಳೆಯ ಸರಣಿ | ಎ.5 ರಿಂದ ವಿರಾಮ, 10 ರಿಂದ ಮಳೆ ವಾಪಸ್..!
April 3, 2026
4:02 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror