ವರ್ಷದ ಮೊದಲ ಚಂಡಮಾರುತ ದೇಶದ ಕರಾವಳಿ ಜಿಲ್ಲೆಗಳಿಗೆ ಅಪ್ಪಳಿಸಲಿದೆ. ಮ್ಯಾನ್ಮಾರ್ ಈ ಚಂಡಮಾರುತಕ್ಕೆ “ಟೌಕ್ಟೇ” (Tauktae) ಎಂದು ಹೆಸರು ಇರಿಸಿದೆ.
ಮೇ 16ರಂದು ಅರಬ್ಬಿ ಸಮುದ್ರದಲ್ಲಿ ಚಂಡಮಾರುತದ ಪ್ರಭಾವ ಹೆಚ್ಚಾಗಿ ಕರ್ನಾಟಕ, ಕೇರಳ, ತಮಿಳುನಾಡು ಸೇರಿದಂತೆ ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ. ಈಗಾಗಲೇ ಮ್ಯಾನ್ಮಾರ್ ತನ್ನ ದೇಶದಲ್ಲಿ ಹೈ ಅಲರ್ಟ್ ಘೋಷಣೆ ಮಾಡಿದ್ದು ಮಹಾರಾಷ್ಟ್ರ, ಗುಜರಾತ್ ಮತ್ತು ಕೇರಳದ ಕಡೆಗೆ ಈ ಚಂಡಮಾರುತ ಸಾಗುತ್ತಿದೆ ಎಂದು ತಿಳಿಸಿದೆ.
ಮೇ.13 ರಿಂದ ಮೇ 16 ರವರೆಗೆ ಲಕ್ಷದ್ವೀಪ, ಕೇರಳ, ಕರ್ನಾಟಕ ಮತ್ತು ತಮಿಳುನಾಡಿನಲ್ಲಿ ಮಳೆಯಾಗುವ ಸಾಧ್ಯತೆ ಇದ್ದು ಮೇ 14 ರ ಹೊತ್ತಿಗೆ ಆಗ್ನೇಯ ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತವಾಗಿ ಕಡಿಮೆ ಒತ್ತಡದ ಪ್ರದೇಶವಾಗುವ ಸಾಧ್ಯತೆ ಇದೆ. ಮೇ 16 ರ ಸುಮಾರಿಗೆ ಚಂಡಮಾರುತದ ಪ್ರಭಾವ ತೀವ್ರವಾಗಬಹುದು ಎಂದು ಭಾರತೀಯ ಹವಾಮಾನ ಇಲಾಖೆ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದೆ.
ಮೇ 15 ರಂದು ಗೋವಾ ಮತ್ತು ಮಹಾರಾಷ್ಟ್ರದಲ್ಲಿ ಸಮುದ್ರದ ಅಬ್ಬರ ಹೆಚ್ಚಾಗಲಿದ್ದು ಗಂಟೆಗೆ 40 ರಿಂದ 60 ಕಿ.ಮೀ ವೇಗದಿಂದ ಲಕ್ಷದ್ವೀಪ, ಮಾಲ್ಡೀವ್ಸ್ ಪ್ರದೇಶಗಳಿಗೆ ಅಪ್ಪಳಿಸಲಿದೆ. ಕೇರಳ, ಗೋವಾ, ಕರ್ನಾಟಕ ಮತ್ತು ಮಹಾರಾಷ್ಟ್ರದ ಕರಾವಳಿ ತೀರಗಳಲ್ಲಿ ಭಾನುವಾರದವರೆಗೆ ಇದೇ ರೀತಿಯಲ್ಲಿ ಗಾಳಿ ಬೀಸುತ್ತವೆ ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ.
ಹೀಗಾಗಿ ಕರಾವಳಿ ಭಾಗದಲ್ಲಿ ಮುಂದಿನ ಒಂದು ವಾರಗಳ ಕಾಲ ಸಮುದ್ರಕ್ಕಿಳಿಯದಂತೆ ಎಚ್ಚರಿಕೆ ನೀಡಲಾಗಿದೆ. ಮಹಾರಾಷ್ಟ್ರ, ಕರ್ನಾಟಕ, ಕೇರಳ, ಗೋವಾದ ಸಮುದ್ರ ತೀರಗಳಲ್ಲಿ ಗಾಳಿ ಬೀಸುವ ನಿರೀಕ್ಷೆ ಇದ್ದು ಮುಂದಿನ ಒಂದು ವಾರಗಳ ಕಾಲ ಮುಂಜಾಗ್ರತೆ ವಹಿಸಲು ಇಲಾಖೆ ಸೂಚಿಸಿದೆ.
ಬಿ.ಎಸ್ಸಿ. ಕೃಷಿ ಪದವೀಧರರಿಗೆ ಸರ್ಕಾರಿ ಉದ್ಯೋಗ, ಖಾಸಗಿ ಕಂಪನಿಗಳು, ಬ್ಯಾಂಕಿಂಗ್, ಸಂಶೋಧನೆ ಮತ್ತು…
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 2026-27ನೇ ಸಾಲಿನ ಹವಾಮಾನ ಆಧಾರಿತ ಬೆಳೆವಿಮೆ ಯೋಜನೆಯಡಿ ಅಡಿಕೆ…
ಮಧ್ಯಪ್ರದೇಶದಲ್ಲಿ ಹೊಸ ತಿರುವಿಕೆ ಪರಿಣಾಮ: ಕರಾವಳಿ, ಮಲೆನಾಡಿನಲ್ಲಿ ಮಳೆ ಚುರುಕು ಸಾಧ್ಯತೆ ಕರ್ನಾಟಕದ…
ಕಡಿಮೆ ಸಂಪನ್ಮೂಲ ಬಳಸಿ ಹೆಚ್ಚು ಉತ್ಪಾದನೆ ಪಡೆಯಲು ಸ್ಮಾರ್ಟ್ ಸಂಪನ್ಮೂಲ ನಿರ್ವಹಣೆ ಅಗತ್ಯವಾಗಿದೆ.…
ತೀವ್ರ ಬರ ಮತ್ತು ಉಷ್ಣಾಂಶದಿಂದ ಇಂಗ್ಲೆಂಡ್ನಲ್ಲಿ ಕೃಷಿ ಉತ್ಪಾದನೆ ಕುಸಿದಿದ್ದು, ಆಹಾರ ಕೊರತೆ…
ಕರಾವಳಿ ಜಿಲ್ಲೆಗಳಲ್ಲಿ ಸಣ್ಣ ಅವಧಿಯ ಸಾಮಾನ್ಯ ಮಳೆ ಮಾತ್ರ; ಮಲೆನಾಡಿನಲ್ಲಿ ಮಳೆ ಕಡಿಮೆಯಾಗುವ…