ಸುದ್ದಿಗಳು

ಶಾಲಾ ಮಕ್ಕಳ ಹೇರ್ ಕಟ್ಟಿಂಗ್ ಗೆ ಬೇಸತ್ತ ಶಿಕ್ಷಕ | ಮಕ್ಕಳಿಗೆ ಸಿನಿಮಾ ಹೀರೋಗಳೇ ರೋಲ್ ಮಾಡೆಲ್ |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಕಿಚ್ಚ ಸುದೀಪ್ ನಟನೆ, ಮ್ಯಾನರಿಸಮ್, ಡೈಲಾಗ್ ಡೆಲಿವರಿಗೆ ಫಿದಾ ಆಗದವರೇ ಇಲ್ಲ. ಅಷ್ಟು ಮಾತ್ರವಲ್ಲ. ಅವರ ಪ್ರತಿಯೊಂದು ಸಿನಿಮಾ ಬಂದಾಗಲು ಅದಕ್ಕೆ ತಕ್ಕಂತೆ ವಿಶಿಷ್ಟ ಹೇರ್ ಸ್ಟೈಲ್ ಮಾಡಿಕೊಂಡಿರುತ್ತಾರೆ. ಇದರಿಂದ ಶಾಲಾ ಕಾಲೇಜ್ ಯುವಕರಂತು ಫುಲ್ ಫಿದಾ ಆಗಿರುತ್ತಾರೆ. ಅವರಂತೆ ನಂತರ ಅದೇ ಟ್ರೆಂಡ್ ಆಗಿ ಬಿಡುತ್ತೆ. ಸುದೀಪ್ ಅಭಿನಯದ ಹೆಬ್ಬುಲಿ ಚಿತ್ರ ಬಂದ ಮೇಲಂತೂ ಅವರ ಹೆಬ್ಬುಲಿ ಹೇರ್ ಸ್ಟೈಲ್ ಫುಲ್ ಫೇಮಸ್ ಆಗಿತ್ತು.  ಈಗ ಈ ಹೇರ್ ಸ್ಟೈಲ್ ಗೆ ರಬಕವಿಬನಹಟ್ಟಿ ಮುಖ್ಯ ಶಿಕ್ಷಕರು ಬೇಸತ್ತು ಹೋಗಿದ್ದಾರೆ.

Advertisement

ನಮ್ಮ ಶಾಲೆಯ ಗಂಡುಮಕ್ಕಳು ಹೆಬ್ಬುಲಿಯಂತಹ ಹೇರ್ ಕಟಿಂಗ್ ಮಾಡಿಸಿಕೊಂಡು ಬರುತ್ತಿದ್ದಾರೆ. ಇದರಿಂದ ಕಲಿಕೆಗೆ ಆಸಕ್ತಿ ತೋರಿಸುತ್ತಿಲ್ಲ.‌ ಆದ್ದರಿಂದ ನಮ್ಮ ಶಾಲೆಯ ವಿದ್ಯಾರ್ಥಿಗಳಿಗೆ ಒಪ್ಪುವಂತಹ ಹೇರ್ ಕಟಿಂಗ್ ಮಾಡಲು ತಮ್ಮಲ್ಲಿ‌ ವಿನಂತಿಸುತ್ತೇನೆ‌‌. -ಕುಲಹಳ್ಳಿ ಸರಕಾರಿ ಪ್ರೌಢಶಾಲೆ ಮುಖ್ಯ ಶಿಕ್ಷಕ 

ಹೀಗಂತ ವಿದ್ಯಾರ್ಥಿಗಳ “ಹೆಬ್ಬುಲಿ” ಕಟಿಂಗ್ ಸೇರಿದಂತೆ ವಿಚಿತ್ರ ಹೇರ್ ಸ್ಟೈಲ್ ಗೆ ಬೇಸತ್ತ ಮುಖ್ಯ ಶಿಕ್ಷಕರೊಬ್ಬರು ಅಂತಹ ಕಟಿಂಗ್ ಮಾಡದಂತೆ ಸಲೂನ್ ಮಾಲೀಕರಿಗೆ ಪತ್ರ ಬರೆದಿದ್ದಾರೆ. ಬಾಗಲಕೋಟೆ ಜಿಲ್ಲೆಯ ರಬಕವಿಬನಹಟ್ಟಿ ತಾಲ್ಲೂಕಿನ ಕುಲಹಳ್ಳಿ ಸರಕಾರಿ ಪ್ರೌಢಶಾಲೆ ಮುಖ್ಯ ಶಿಕ್ಷಕ ಶಿವಾಜಿ ನಾಯಕ ಎಂಬ ಮುಖ್ಯ ಶಿಕ್ಷಕರು ಹೀಗೆ ಕುಲಹಳ್ಳಿ ಗ್ರಾಮದ ಸಲೂನ್ ಅಂಗಡಿಗಳಿಗೆ ಪತ್ರ ಬರೆದಿದ್ದಾರೆ.

ನಮ್ಮ ಶಾಲೆಯ ಗಂಡುಮಕ್ಕಳು ಹೆಬ್ಬುಲಿಯಂತಹ ಹೇರ್ ಕಟಿಂಗ್ ಮಾಡಿಸಿಕೊಂಡು ಬರುತ್ತಿದ್ದಾರೆ. ತಲೆಯ ಒಂದು ಬದಿ ಕೂದಲು ಬಿಟ್ಟು, ಇನ್ನೊಂದು ಬದಿ ಕೂದಲು ಉಳಿಸಿಕೊಂಡು ಕಟಿಂಗ್ ಮಾಡಿಸಿಕೊಂಡು ಶಾಲೆಗೆ ಬರುತ್ತಿದ್ದಾರೆ‌. ಇದರಿಂದ ವಿದ್ಯಾರ್ಥಿಗಳು ಕಲಿಕೆಗೆ ಆಸಕ್ತಿ ತೋರಿಸುತ್ತಿಲ್ಲ.‌ ಶೈಕ್ಷಣಿಕ ಚಟುವಟಿಕೆಗಳಿಗೆ ಮಹತ್ವ ನೀಡುತ್ತಿಲ್ಲ. ಆದ್ದರಿಂದ ನಮ್ಮ ಶಾಲೆಯ ವಿದ್ಯಾರ್ಥಿಗಳಿಗೆ ಒಪ್ಪುವಂತಹ ಹೇರ್ ಕಟಿಂಗ್ ಮಾಡಲು ತಮ್ಮಲ್ಲಿ‌ ವಿನಂತಿಸುತ್ತೇನೆ‌‌. ಒಂದು ವೇಳೆ ವಿದ್ಯಾರ್ಥಿಗಳು “ಹೆಬ್ಬುಲಿ” ಹೇರ್ ಕಟಿಂಗ್ ಮಾಡಲು ಒತ್ತಾಯ ಮಾಡಿದರೆ… ಅಂತಹ ವಿದ್ಯಾರ್ಥಿಗಳ ಹೆಸರನ್ನು ನನಗೆ ಅಥವಾ ಪಾಲಕರ ಗಮನಕ್ಕೆ ತನ್ನಿ ಎಂದು ತಮ್ಮಲ್ಲಿ ಕೋರುತ್ತೇನೆ ಎಂದು ಪತ್ರದಲ್ಲಿ ಮುಖ್ಯ ಶಿಕ್ಷಕ ಉಲ್ಲೇಖಿಸಿದ್ದಾರೆ.

ಹಿಂದೆ ಒಂದು ಕಾಲ ಇತ್ತು. ಅಲ್ಲಿ ಮಕ್ಕಳಿಗೆ ಕ್ರಾಪ್ ಕಟ್ ಮಾತ್ರ. ಅವಕಾಶ. ಅ ದಕ್ಕೆ ಒಂದಷ್ಟು ಎಣ್ಣೆ ಹಾಕಿ ಸೈಡ್ ಕ್ರಾಪ್ ಹಾಕಿ ಬಾಚಿದ್ರೆ ಥೇಟ್ ಮನ್ಮಥ ಲುಕ್. ಆದ್ರೆ ಈಗ ಹಾಗಲ್ಲ. ತರಹೇವಾರಿ ಹೇರ್ ಸ್ಟೈಲ್ ಗಳು, ದಿನಕ್ಕೊಂದು ಬರುವ ಸಿನಿಮಾಗಳಲ್ಲಿ ಹೀರೋಗಳು ಮಾಡಿದ ಹೇರ್ ಸ್ಟೈಲೇ ಈಗಿನ ಮಕ್ಕಳಿಗೆ ಬೇಕು. ಅದು ಶಿಸ್ತು ಅಲ್ಲ, ಶಾಲೆಗೆ, ಕಾಲೇಜಿಗೆ ಹೀಗೆ ಹೋಗಬಾರದು ಎಂದರೆ ಕೇಳುವವರಾರು ಅಲ್ವಾ..?

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಅಮರನಾಥ ಯಾತ್ರೆ ಹಿನ್ನೆಲೆ | ಜುಲೈ 1 ರಿಂದ ಆಗಸ್ಟ್  ತಿಂಗಳವರೆಗೆ ಅಮರನಾಥ ಹಾರಾಟ ನಿಷೇಧ ವಲಯ

ಜಮ್ಮು - ಕಾಶ್ಮೀರ ಸರ್ಕಾರ ಅಮರನಾಥ ಗುಹೆ ದೇಗುಲಕ್ಕೆ ಹೋಗುವ ಎಲ್ಲಾ ಮಾರ್ಗಗಳನ್ನು…

2 hours ago

ಹವಾಮಾನ ವರದಿ | 18-06-2025 | ರೈತರೇ ಗಮನಿಸಿ- ಜೂ.21 ರವರೆಗೆ ಮಳೆ ಕಡಿಮೆ ಇರಲಿದೆ | ಔಷಧಿ ಸಿಂಪಡಣೆಗೆ ಸಿಗಬಹುದು ಅವಕಾಶ |

ಅರಬ್ಬಿ ಸಮುದ್ರದ ವಾಯುಭಾರ ಕುಸಿತದಂತಹ ತಿರುವಿಕೆಯು ರಾಜಸ್ಥಾನ ತಲುಪಿದ್ದು, ಅಲ್ಲಿ ಶಿಥಿಲಗೊಳ್ಳುವ ಲಕ್ಷಣಗಳಿವೆ.…

5 hours ago

ಹಂಸ ಮಹಾಪುರುಷ ರಾಜಯೋಗ | ಈ 3 ರಾಶಿಯವರಿಗೆ ಸಂಪತ್ತಿನ ಸುರಿಮಳೆ..!

2025 ರಲ್ಲಿ ಗುರು ಗ್ರಹವು ತನ್ನ ಸ್ವಂತ ರಾಶಿಯಾದ ಮೇಷದಲ್ಲಿ ಸಂಚರಿಸುತ್ತಿದ್ದಾಗ, ಶುಕ್ರ…

11 hours ago

ರಾಜ್ಯದ 6 ಕಡೆ ಕೌಶಲ್ಯ ಪ್ರಯೋಗಾಲಯ ನಿರ್ಮಿಸಲು ಸರ್ಕಾರ ನಿರ್ಧಾರ

ಮಂಗಳೂರಿನಲ್ಲಿ ನಿರ್ಮಾಣಗೊಳ್ಳುತ್ತಿರುವ ರಾಜೀವ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾನಿಲಯದ ಪ್ರಾದೇಶಿಕ ಕಚೇರಿ ಕಟ್ಟಡ…

19 hours ago

ಕೋಲಾರದಲ್ಲಿ ಬಾಕಿ ಇರುವ 3610 ಜಮೀನಿನ ಸರ್ವೆ ಮುಂದಿನ ಎರಡು ತಿಂಗಳೊಳಗಾಗಿ ಪೂರ್ಣ

ಕೋಲಾರ ಜಿಲ್ಲೆಯಲ್ಲಿ ಸರ್ಕಾರಿ ಜಮೀನುಗಳಲ್ಲಿ ರೈತರಿಗೆ ಮಂಜೂರಾಗಿರುವ ಜಮೀನುಗಳಿಗೆ ಪೋಡಿ ದುರಸ್ತಿ ಮಾಡಲಾಗುತ್ತಿದೆ.…

19 hours ago

ಭಾರಿ ಮಳೆಗೆ ಮೂರು ಜನರು ಬಲಿ | ಕರಾವಳಿ ಜಿಲ್ಲೆಗಳಲ್ಲಿ ಜೂ.21 ರವರೆಗೆ ವ್ಯಾಪಕ ಮಳೆ |  ಹವಾಮಾನ ಇಲಾಖೆ ಮುನ್ಸೂಚನೆ

ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕವಾಗಿ ಮಳೆಯಾಗಿದೆ. ಉತ್ತರ ಹಾಗೂ ದಕ್ಷಿಣ ಒಳನಾಡಿನ ಕೆಲವೆಡೆ ಮಳೆಯಾಗಿದೆ.…

20 hours ago