Advertisement
ಸುದ್ದಿಗಳು

ಶಾಲಾ ಮಕ್ಕಳ ಹೇರ್ ಕಟ್ಟಿಂಗ್ ಗೆ ಬೇಸತ್ತ ಶಿಕ್ಷಕ | ಮಕ್ಕಳಿಗೆ ಸಿನಿಮಾ ಹೀರೋಗಳೇ ರೋಲ್ ಮಾಡೆಲ್ |

Share

ಕಿಚ್ಚ ಸುದೀಪ್ ನಟನೆ, ಮ್ಯಾನರಿಸಮ್, ಡೈಲಾಗ್ ಡೆಲಿವರಿಗೆ ಫಿದಾ ಆಗದವರೇ ಇಲ್ಲ. ಅಷ್ಟು ಮಾತ್ರವಲ್ಲ. ಅವರ ಪ್ರತಿಯೊಂದು ಸಿನಿಮಾ ಬಂದಾಗಲು ಅದಕ್ಕೆ ತಕ್ಕಂತೆ ವಿಶಿಷ್ಟ ಹೇರ್ ಸ್ಟೈಲ್ ಮಾಡಿಕೊಂಡಿರುತ್ತಾರೆ. ಇದರಿಂದ ಶಾಲಾ ಕಾಲೇಜ್ ಯುವಕರಂತು ಫುಲ್ ಫಿದಾ ಆಗಿರುತ್ತಾರೆ. ಅವರಂತೆ ನಂತರ ಅದೇ ಟ್ರೆಂಡ್ ಆಗಿ ಬಿಡುತ್ತೆ. ಸುದೀಪ್ ಅಭಿನಯದ ಹೆಬ್ಬುಲಿ ಚಿತ್ರ ಬಂದ ಮೇಲಂತೂ ಅವರ ಹೆಬ್ಬುಲಿ ಹೇರ್ ಸ್ಟೈಲ್ ಫುಲ್ ಫೇಮಸ್ ಆಗಿತ್ತು.  ಈಗ ಈ ಹೇರ್ ಸ್ಟೈಲ್ ಗೆ ರಬಕವಿಬನಹಟ್ಟಿ ಮುಖ್ಯ ಶಿಕ್ಷಕರು ಬೇಸತ್ತು ಹೋಗಿದ್ದಾರೆ.

Advertisement
Advertisement

ನಮ್ಮ ಶಾಲೆಯ ಗಂಡುಮಕ್ಕಳು ಹೆಬ್ಬುಲಿಯಂತಹ ಹೇರ್ ಕಟಿಂಗ್ ಮಾಡಿಸಿಕೊಂಡು ಬರುತ್ತಿದ್ದಾರೆ. ಇದರಿಂದ ಕಲಿಕೆಗೆ ಆಸಕ್ತಿ ತೋರಿಸುತ್ತಿಲ್ಲ.‌ ಆದ್ದರಿಂದ ನಮ್ಮ ಶಾಲೆಯ ವಿದ್ಯಾರ್ಥಿಗಳಿಗೆ ಒಪ್ಪುವಂತಹ ಹೇರ್ ಕಟಿಂಗ್ ಮಾಡಲು ತಮ್ಮಲ್ಲಿ‌ ವಿನಂತಿಸುತ್ತೇನೆ‌‌. -ಕುಲಹಳ್ಳಿ ಸರಕಾರಿ ಪ್ರೌಢಶಾಲೆ ಮುಖ್ಯ ಶಿಕ್ಷಕ 

Advertisement

ಹೀಗಂತ ವಿದ್ಯಾರ್ಥಿಗಳ “ಹೆಬ್ಬುಲಿ” ಕಟಿಂಗ್ ಸೇರಿದಂತೆ ವಿಚಿತ್ರ ಹೇರ್ ಸ್ಟೈಲ್ ಗೆ ಬೇಸತ್ತ ಮುಖ್ಯ ಶಿಕ್ಷಕರೊಬ್ಬರು ಅಂತಹ ಕಟಿಂಗ್ ಮಾಡದಂತೆ ಸಲೂನ್ ಮಾಲೀಕರಿಗೆ ಪತ್ರ ಬರೆದಿದ್ದಾರೆ. ಬಾಗಲಕೋಟೆ ಜಿಲ್ಲೆಯ ರಬಕವಿಬನಹಟ್ಟಿ ತಾಲ್ಲೂಕಿನ ಕುಲಹಳ್ಳಿ ಸರಕಾರಿ ಪ್ರೌಢಶಾಲೆ ಮುಖ್ಯ ಶಿಕ್ಷಕ ಶಿವಾಜಿ ನಾಯಕ ಎಂಬ ಮುಖ್ಯ ಶಿಕ್ಷಕರು ಹೀಗೆ ಕುಲಹಳ್ಳಿ ಗ್ರಾಮದ ಸಲೂನ್ ಅಂಗಡಿಗಳಿಗೆ ಪತ್ರ ಬರೆದಿದ್ದಾರೆ.

ನಮ್ಮ ಶಾಲೆಯ ಗಂಡುಮಕ್ಕಳು ಹೆಬ್ಬುಲಿಯಂತಹ ಹೇರ್ ಕಟಿಂಗ್ ಮಾಡಿಸಿಕೊಂಡು ಬರುತ್ತಿದ್ದಾರೆ. ತಲೆಯ ಒಂದು ಬದಿ ಕೂದಲು ಬಿಟ್ಟು, ಇನ್ನೊಂದು ಬದಿ ಕೂದಲು ಉಳಿಸಿಕೊಂಡು ಕಟಿಂಗ್ ಮಾಡಿಸಿಕೊಂಡು ಶಾಲೆಗೆ ಬರುತ್ತಿದ್ದಾರೆ‌. ಇದರಿಂದ ವಿದ್ಯಾರ್ಥಿಗಳು ಕಲಿಕೆಗೆ ಆಸಕ್ತಿ ತೋರಿಸುತ್ತಿಲ್ಲ.‌ ಶೈಕ್ಷಣಿಕ ಚಟುವಟಿಕೆಗಳಿಗೆ ಮಹತ್ವ ನೀಡುತ್ತಿಲ್ಲ. ಆದ್ದರಿಂದ ನಮ್ಮ ಶಾಲೆಯ ವಿದ್ಯಾರ್ಥಿಗಳಿಗೆ ಒಪ್ಪುವಂತಹ ಹೇರ್ ಕಟಿಂಗ್ ಮಾಡಲು ತಮ್ಮಲ್ಲಿ‌ ವಿನಂತಿಸುತ್ತೇನೆ‌‌. ಒಂದು ವೇಳೆ ವಿದ್ಯಾರ್ಥಿಗಳು “ಹೆಬ್ಬುಲಿ” ಹೇರ್ ಕಟಿಂಗ್ ಮಾಡಲು ಒತ್ತಾಯ ಮಾಡಿದರೆ… ಅಂತಹ ವಿದ್ಯಾರ್ಥಿಗಳ ಹೆಸರನ್ನು ನನಗೆ ಅಥವಾ ಪಾಲಕರ ಗಮನಕ್ಕೆ ತನ್ನಿ ಎಂದು ತಮ್ಮಲ್ಲಿ ಕೋರುತ್ತೇನೆ ಎಂದು ಪತ್ರದಲ್ಲಿ ಮುಖ್ಯ ಶಿಕ್ಷಕ ಉಲ್ಲೇಖಿಸಿದ್ದಾರೆ.

Advertisement

ಹಿಂದೆ ಒಂದು ಕಾಲ ಇತ್ತು. ಅಲ್ಲಿ ಮಕ್ಕಳಿಗೆ ಕ್ರಾಪ್ ಕಟ್ ಮಾತ್ರ. ಅವಕಾಶ. ಅ ದಕ್ಕೆ ಒಂದಷ್ಟು ಎಣ್ಣೆ ಹಾಕಿ ಸೈಡ್ ಕ್ರಾಪ್ ಹಾಕಿ ಬಾಚಿದ್ರೆ ಥೇಟ್ ಮನ್ಮಥ ಲುಕ್. ಆದ್ರೆ ಈಗ ಹಾಗಲ್ಲ. ತರಹೇವಾರಿ ಹೇರ್ ಸ್ಟೈಲ್ ಗಳು, ದಿನಕ್ಕೊಂದು ಬರುವ ಸಿನಿಮಾಗಳಲ್ಲಿ ಹೀರೋಗಳು ಮಾಡಿದ ಹೇರ್ ಸ್ಟೈಲೇ ಈಗಿನ ಮಕ್ಕಳಿಗೆ ಬೇಕು. ಅದು ಶಿಸ್ತು ಅಲ್ಲ, ಶಾಲೆಗೆ, ಕಾಲೇಜಿಗೆ ಹೀಗೆ ಹೋಗಬಾರದು ಎಂದರೆ ಕೇಳುವವರಾರು ಅಲ್ವಾ..?

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 01-10-2024 | ಗುಡುಗು ಸಹಿತ ಮಳೆ ಸಾಧ್ಯತೆ | 10 ದಿನಗಳವರೆಗೂ ಮಲೆನಾಡಿನ ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ |

ರಾಜ್ಯದಲ್ಲಿ ತಮಿಳುನಾಡು ಕಡೆಯಿಂದ ಬೀಸುತ್ತಿರುವ ಗಾಳಿಯ ಪ್ರಭಾವ ಹಾಗೂ ಅಧಿಕ ತಾಪಮಾನದಿಂದ ಸ್ಥಳೀಯ…

3 hours ago

ಆರ್ಥಿಕ ವರ್ಷದಲ್ಲಿ 33% ರಬ್ಬರ್‌ ಬೆಲೆ ಹೆಚ್ಚಳ | ಪೂರೈಕೆಯಲ್ಲೂ ಕೊರತೆ | ಒತ್ತಡದಲ್ಲಿ ಟಯರ್‌ ಕಂಪನಿಗಳು |

ಜಾಗತಿಕ ನೈಸರ್ಗಿಕ ರಬ್ಬರ್ ಉತ್ಪಾದನೆಯು ಶೇಕಡಾ 35 ರಷ್ಟು ಬೆಳೆದಿದೆ, ಆದರೆ ಬೇಡಿಕೆಯು…

10 hours ago

ಕೋಲಾರದಲ್ಲಿ ಸೌರ ವಿದ್ಯುತ್ ಯೋಜನೆ ಜಾರಿ | ಒಣಗುತ್ತಿರುವ ತೋಟವನ್ನು ಉಳಿಸಿಕೊಂಡ ರೈತರು |

ಕೋಲಾರ ಜಿಲ್ಲೆಯ 9 ಮಂದಿ ರೈತರು ಕೇಂದ್ರ ಸರ್ಕಾರದಿಂದ ಸಹಾಯಧನದೊಂದಿಗೆ ಸೌರ ವಿದ್ಯುತ್…

20 hours ago

ಅ.3-14 | ಮಂಗಳೂರಿನ ಕುದ್ರೋಳಿ ದಸರಾ | ದಸರಾ ಮೆರವಣಿಗೆ ವೇಳೆ ಡಿಜೆ ಮ್ಯೂಸಿಕ್ ಕಡಿಮೆ ಆದ್ಯತೆಗೆ ಮನವಿ |

ಮಂಗಳೂರು ದಸರಾ ಎಂದೇ ಖ್ಯಾತಿ ಪಡೆದ ಕುದ್ರೋಳಿಯ ಶ್ರೀಗೋಕರ್ಣನಾಥ ಕ್ಷೇತ್ರದ ನವರಾತ್ರಿ ಉತ್ಸವ…

23 hours ago

ಕಾವೇರಿ ವಿಚಾರದಲ್ಲಿ ರಾಜಕೀಯ ಸಲ್ಲದು | ತಮಿಳುನಾಡಿನ ರೈತರಿಗೆ ಕೇಂದ್ರ ಸಚಿವ ಕುಮಾರಸ್ವಾಮಿ

ಕಾವೇರಿ ವಿಚಾರದಲ್ಲಿ ರಾಜಕೀಯ ಮಾಡಬಾರದು ಎಂದು ಕೇಂದ್ರ ಬೃಹತ್ ಕೈಗಾರಿಕೆ ಸಚಿವ ಎಚ್.ಡಿ.ಕುಮಾರಸಾಮಿ…

23 hours ago

2025ರ ವೇಳೆಗೆ ತುಮಕೂರಿಗೆ ಎತ್ತಿನಹೊಳೆ ನೀರು

ತುಮಕೂರು, ಬೆಂಗಳೂರು, ಬೆಂಗಳೂರು ಗ್ರಾಮಾಂತರ ,ಮಂಡ್ಯ ಹಾಗೂ ರಾಮನಗರ ಜಿಲ್ಲೆಗಳಲ್ಲಿ ಕುಡಿಯುವ ನೀರಿನ…

24 hours ago