Advertisement
ಸುದ್ದಿಗಳು

ಶಾಲಾ ಮಕ್ಕಳ ಹೇರ್ ಕಟ್ಟಿಂಗ್ ಗೆ ಬೇಸತ್ತ ಶಿಕ್ಷಕ | ಮಕ್ಕಳಿಗೆ ಸಿನಿಮಾ ಹೀರೋಗಳೇ ರೋಲ್ ಮಾಡೆಲ್ |

Share

ಕಿಚ್ಚ ಸುದೀಪ್ ನಟನೆ, ಮ್ಯಾನರಿಸಮ್, ಡೈಲಾಗ್ ಡೆಲಿವರಿಗೆ ಫಿದಾ ಆಗದವರೇ ಇಲ್ಲ. ಅಷ್ಟು ಮಾತ್ರವಲ್ಲ. ಅವರ ಪ್ರತಿಯೊಂದು ಸಿನಿಮಾ ಬಂದಾಗಲು ಅದಕ್ಕೆ ತಕ್ಕಂತೆ ವಿಶಿಷ್ಟ ಹೇರ್ ಸ್ಟೈಲ್ ಮಾಡಿಕೊಂಡಿರುತ್ತಾರೆ. ಇದರಿಂದ ಶಾಲಾ ಕಾಲೇಜ್ ಯುವಕರಂತು ಫುಲ್ ಫಿದಾ ಆಗಿರುತ್ತಾರೆ. ಅವರಂತೆ ನಂತರ ಅದೇ ಟ್ರೆಂಡ್ ಆಗಿ ಬಿಡುತ್ತೆ. ಸುದೀಪ್ ಅಭಿನಯದ ಹೆಬ್ಬುಲಿ ಚಿತ್ರ ಬಂದ ಮೇಲಂತೂ ಅವರ ಹೆಬ್ಬುಲಿ ಹೇರ್ ಸ್ಟೈಲ್ ಫುಲ್ ಫೇಮಸ್ ಆಗಿತ್ತು.  ಈಗ ಈ ಹೇರ್ ಸ್ಟೈಲ್ ಗೆ ರಬಕವಿಬನಹಟ್ಟಿ ಮುಖ್ಯ ಶಿಕ್ಷಕರು ಬೇಸತ್ತು ಹೋಗಿದ್ದಾರೆ.

ನಮ್ಮ ಶಾಲೆಯ ಗಂಡುಮಕ್ಕಳು ಹೆಬ್ಬುಲಿಯಂತಹ ಹೇರ್ ಕಟಿಂಗ್ ಮಾಡಿಸಿಕೊಂಡು ಬರುತ್ತಿದ್ದಾರೆ. ಇದರಿಂದ ಕಲಿಕೆಗೆ ಆಸಕ್ತಿ ತೋರಿಸುತ್ತಿಲ್ಲ.‌ ಆದ್ದರಿಂದ ನಮ್ಮ ಶಾಲೆಯ ವಿದ್ಯಾರ್ಥಿಗಳಿಗೆ ಒಪ್ಪುವಂತಹ ಹೇರ್ ಕಟಿಂಗ್ ಮಾಡಲು ತಮ್ಮಲ್ಲಿ‌ ವಿನಂತಿಸುತ್ತೇನೆ‌‌. -ಕುಲಹಳ್ಳಿ ಸರಕಾರಿ ಪ್ರೌಢಶಾಲೆ ಮುಖ್ಯ ಶಿಕ್ಷಕ 

ಹೀಗಂತ ವಿದ್ಯಾರ್ಥಿಗಳ “ಹೆಬ್ಬುಲಿ” ಕಟಿಂಗ್ ಸೇರಿದಂತೆ ವಿಚಿತ್ರ ಹೇರ್ ಸ್ಟೈಲ್ ಗೆ ಬೇಸತ್ತ ಮುಖ್ಯ ಶಿಕ್ಷಕರೊಬ್ಬರು ಅಂತಹ ಕಟಿಂಗ್ ಮಾಡದಂತೆ ಸಲೂನ್ ಮಾಲೀಕರಿಗೆ ಪತ್ರ ಬರೆದಿದ್ದಾರೆ. ಬಾಗಲಕೋಟೆ ಜಿಲ್ಲೆಯ ರಬಕವಿಬನಹಟ್ಟಿ ತಾಲ್ಲೂಕಿನ ಕುಲಹಳ್ಳಿ ಸರಕಾರಿ ಪ್ರೌಢಶಾಲೆ ಮುಖ್ಯ ಶಿಕ್ಷಕ ಶಿವಾಜಿ ನಾಯಕ ಎಂಬ ಮುಖ್ಯ ಶಿಕ್ಷಕರು ಹೀಗೆ ಕುಲಹಳ್ಳಿ ಗ್ರಾಮದ ಸಲೂನ್ ಅಂಗಡಿಗಳಿಗೆ ಪತ್ರ ಬರೆದಿದ್ದಾರೆ.

ನಮ್ಮ ಶಾಲೆಯ ಗಂಡುಮಕ್ಕಳು ಹೆಬ್ಬುಲಿಯಂತಹ ಹೇರ್ ಕಟಿಂಗ್ ಮಾಡಿಸಿಕೊಂಡು ಬರುತ್ತಿದ್ದಾರೆ. ತಲೆಯ ಒಂದು ಬದಿ ಕೂದಲು ಬಿಟ್ಟು, ಇನ್ನೊಂದು ಬದಿ ಕೂದಲು ಉಳಿಸಿಕೊಂಡು ಕಟಿಂಗ್ ಮಾಡಿಸಿಕೊಂಡು ಶಾಲೆಗೆ ಬರುತ್ತಿದ್ದಾರೆ‌. ಇದರಿಂದ ವಿದ್ಯಾರ್ಥಿಗಳು ಕಲಿಕೆಗೆ ಆಸಕ್ತಿ ತೋರಿಸುತ್ತಿಲ್ಲ.‌ ಶೈಕ್ಷಣಿಕ ಚಟುವಟಿಕೆಗಳಿಗೆ ಮಹತ್ವ ನೀಡುತ್ತಿಲ್ಲ. ಆದ್ದರಿಂದ ನಮ್ಮ ಶಾಲೆಯ ವಿದ್ಯಾರ್ಥಿಗಳಿಗೆ ಒಪ್ಪುವಂತಹ ಹೇರ್ ಕಟಿಂಗ್ ಮಾಡಲು ತಮ್ಮಲ್ಲಿ‌ ವಿನಂತಿಸುತ್ತೇನೆ‌‌. ಒಂದು ವೇಳೆ ವಿದ್ಯಾರ್ಥಿಗಳು “ಹೆಬ್ಬುಲಿ” ಹೇರ್ ಕಟಿಂಗ್ ಮಾಡಲು ಒತ್ತಾಯ ಮಾಡಿದರೆ… ಅಂತಹ ವಿದ್ಯಾರ್ಥಿಗಳ ಹೆಸರನ್ನು ನನಗೆ ಅಥವಾ ಪಾಲಕರ ಗಮನಕ್ಕೆ ತನ್ನಿ ಎಂದು ತಮ್ಮಲ್ಲಿ ಕೋರುತ್ತೇನೆ ಎಂದು ಪತ್ರದಲ್ಲಿ ಮುಖ್ಯ ಶಿಕ್ಷಕ ಉಲ್ಲೇಖಿಸಿದ್ದಾರೆ.

ಹಿಂದೆ ಒಂದು ಕಾಲ ಇತ್ತು. ಅಲ್ಲಿ ಮಕ್ಕಳಿಗೆ ಕ್ರಾಪ್ ಕಟ್ ಮಾತ್ರ. ಅವಕಾಶ. ಅ ದಕ್ಕೆ ಒಂದಷ್ಟು ಎಣ್ಣೆ ಹಾಕಿ ಸೈಡ್ ಕ್ರಾಪ್ ಹಾಕಿ ಬಾಚಿದ್ರೆ ಥೇಟ್ ಮನ್ಮಥ ಲುಕ್. ಆದ್ರೆ ಈಗ ಹಾಗಲ್ಲ. ತರಹೇವಾರಿ ಹೇರ್ ಸ್ಟೈಲ್ ಗಳು, ದಿನಕ್ಕೊಂದು ಬರುವ ಸಿನಿಮಾಗಳಲ್ಲಿ ಹೀರೋಗಳು ಮಾಡಿದ ಹೇರ್ ಸ್ಟೈಲೇ ಈಗಿನ ಮಕ್ಕಳಿಗೆ ಬೇಕು. ಅದು ಶಿಸ್ತು ಅಲ್ಲ, ಶಾಲೆಗೆ, ಕಾಲೇಜಿಗೆ ಹೀಗೆ ಹೋಗಬಾರದು ಎಂದರೆ ಕೇಳುವವರಾರು ಅಲ್ವಾ..?

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 13-05-2026| ಕರ್ನಾಟಕದಲ್ಲಿ ಇನ್ನೂ ಕೆಲ ದಿನ ಗುಡುಗು ಸಹಿತ ಮಳೆ| ಮೇ 20-25ರೊಳಗೆ ಮುಂಗಾರು ಪ್ರವೇಶ ಸಾಧ್ಯತೆ!

ಕರ್ನಾಟಕದಲ್ಲಿ 14.05.2026ರ ಬೆಳಿಗ್ಗೆ 8 ಗಂಟೆವರೆಗಿನ ಹವಾಮಾನ ಮುನ್ಸೂಚನೆಯ ಪ್ರಕಾರ ಕರಾವಳಿ, ಮಲೆನಾಡು…

15 hours ago

ಹವಾಮಾನ ವರದಿ | 12-05-2026 | ಮೇ 20ರ ಸುಮಾರಿಗೆ ಕರಾವಳಿಯಲ್ಲಿ ಮುಂಗಾರು ಮಾದರಿಯ ಮಳೆ ಸಾಧ್ಯತೆ..! |

ರಾಜ್ಯದ ಬಹುತೇಕ ಭಾಗಗಳಲ್ಲಿ ಬಿಸಿಲು ಮುಂದುವರಿದರೂ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ…

2 days ago

ರೋಸ್ಟೆಡ್‌ ಅಡಿಕೆ- ಸುಪ್ರೀಂ ಕೋರ್ಟ್‌ ಮಹತ್ವದ ಆದೇಶ | “ರೋಸ್ಟೆಡ್‌ ಅಡಿಕೆ” ವರ್ಗೀಕರಣಕ್ಕೆ ಮುದ್ರೆ, ಜಪ್ತಿ ಸರಕುಗಳಿಗೆ ಮಾರ್ಗಸೂಚಿ

‘ರೋಸ್ಟೆಡ್‌ ಅಡಿಕೆ’ ವರ್ಗೀಕರಣ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್‌ ಅಲಹಾಬಾದ್‌ ಹೈಕೋರ್ಟ್‌ ಆದೇಶಕ್ಕೆ ತಾತ್ಕಾಲಿಕ…

2 days ago

ಹವಾಮಾನ ವರದಿ| 10-05-2026 | ರಾಜ್ಯದಲ್ಲಿ ಮಳೆ ಕ್ಷೀಣಿಸುವ ಸೂಚನೆ | ಮೇ 15ರಿಂದ ಮುಂಗಾರು ಮಾರುತ ಚಟುವಟಿಕೆ ಚುರುಕು ಸಾಧ್ಯತೆ

ಕರ್ನಾಟಕದಲ್ಲಿ ಮುಂದಿನ 24 ಗಂಟೆಗಳ ಅವಧಿಯಲ್ಲಿ ಕರಾವಳಿ ಹಾಗೂ ಮಲೆನಾಡಿನ ಕೆಲವು ಭಾಗಗಳಲ್ಲಿ…

4 days ago

ಅಭಿವೃದ್ಧಿ ಹೆಸರಿನಲ್ಲಿ ಮರಗಳನ್ನು ಕಡಿಯುವುದಿಲ್ಲ

ಮೈಸೂರು ಜಿಲ್ಲೆಯ ಮೇಲ್ಸೇತುವೆ ಕಾಮಗಾರಿಗಳ ವೇಳೆ ಯಾವುದೇ ಮರಗಳನ್ನು ಕಡಿಯುವುದಿಲ್ಲ ಎಂದು ಸಂಸದ…

6 days ago