Advertisement
ಸುದ್ದಿಗಳು

ಶಾಲಾ ಮಕ್ಕಳ ಹೇರ್ ಕಟ್ಟಿಂಗ್ ಗೆ ಬೇಸತ್ತ ಶಿಕ್ಷಕ | ಮಕ್ಕಳಿಗೆ ಸಿನಿಮಾ ಹೀರೋಗಳೇ ರೋಲ್ ಮಾಡೆಲ್ |

Share

ಕಿಚ್ಚ ಸುದೀಪ್ ನಟನೆ, ಮ್ಯಾನರಿಸಮ್, ಡೈಲಾಗ್ ಡೆಲಿವರಿಗೆ ಫಿದಾ ಆಗದವರೇ ಇಲ್ಲ. ಅಷ್ಟು ಮಾತ್ರವಲ್ಲ. ಅವರ ಪ್ರತಿಯೊಂದು ಸಿನಿಮಾ ಬಂದಾಗಲು ಅದಕ್ಕೆ ತಕ್ಕಂತೆ ವಿಶಿಷ್ಟ ಹೇರ್ ಸ್ಟೈಲ್ ಮಾಡಿಕೊಂಡಿರುತ್ತಾರೆ. ಇದರಿಂದ ಶಾಲಾ ಕಾಲೇಜ್ ಯುವಕರಂತು ಫುಲ್ ಫಿದಾ ಆಗಿರುತ್ತಾರೆ. ಅವರಂತೆ ನಂತರ ಅದೇ ಟ್ರೆಂಡ್ ಆಗಿ ಬಿಡುತ್ತೆ. ಸುದೀಪ್ ಅಭಿನಯದ ಹೆಬ್ಬುಲಿ ಚಿತ್ರ ಬಂದ ಮೇಲಂತೂ ಅವರ ಹೆಬ್ಬುಲಿ ಹೇರ್ ಸ್ಟೈಲ್ ಫುಲ್ ಫೇಮಸ್ ಆಗಿತ್ತು.  ಈಗ ಈ ಹೇರ್ ಸ್ಟೈಲ್ ಗೆ ರಬಕವಿಬನಹಟ್ಟಿ ಮುಖ್ಯ ಶಿಕ್ಷಕರು ಬೇಸತ್ತು ಹೋಗಿದ್ದಾರೆ.

ನಮ್ಮ ಶಾಲೆಯ ಗಂಡುಮಕ್ಕಳು ಹೆಬ್ಬುಲಿಯಂತಹ ಹೇರ್ ಕಟಿಂಗ್ ಮಾಡಿಸಿಕೊಂಡು ಬರುತ್ತಿದ್ದಾರೆ. ಇದರಿಂದ ಕಲಿಕೆಗೆ ಆಸಕ್ತಿ ತೋರಿಸುತ್ತಿಲ್ಲ.‌ ಆದ್ದರಿಂದ ನಮ್ಮ ಶಾಲೆಯ ವಿದ್ಯಾರ್ಥಿಗಳಿಗೆ ಒಪ್ಪುವಂತಹ ಹೇರ್ ಕಟಿಂಗ್ ಮಾಡಲು ತಮ್ಮಲ್ಲಿ‌ ವಿನಂತಿಸುತ್ತೇನೆ‌‌. -ಕುಲಹಳ್ಳಿ ಸರಕಾರಿ ಪ್ರೌಢಶಾಲೆ ಮುಖ್ಯ ಶಿಕ್ಷಕ 

ಹೀಗಂತ ವಿದ್ಯಾರ್ಥಿಗಳ “ಹೆಬ್ಬುಲಿ” ಕಟಿಂಗ್ ಸೇರಿದಂತೆ ವಿಚಿತ್ರ ಹೇರ್ ಸ್ಟೈಲ್ ಗೆ ಬೇಸತ್ತ ಮುಖ್ಯ ಶಿಕ್ಷಕರೊಬ್ಬರು ಅಂತಹ ಕಟಿಂಗ್ ಮಾಡದಂತೆ ಸಲೂನ್ ಮಾಲೀಕರಿಗೆ ಪತ್ರ ಬರೆದಿದ್ದಾರೆ. ಬಾಗಲಕೋಟೆ ಜಿಲ್ಲೆಯ ರಬಕವಿಬನಹಟ್ಟಿ ತಾಲ್ಲೂಕಿನ ಕುಲಹಳ್ಳಿ ಸರಕಾರಿ ಪ್ರೌಢಶಾಲೆ ಮುಖ್ಯ ಶಿಕ್ಷಕ ಶಿವಾಜಿ ನಾಯಕ ಎಂಬ ಮುಖ್ಯ ಶಿಕ್ಷಕರು ಹೀಗೆ ಕುಲಹಳ್ಳಿ ಗ್ರಾಮದ ಸಲೂನ್ ಅಂಗಡಿಗಳಿಗೆ ಪತ್ರ ಬರೆದಿದ್ದಾರೆ.

ನಮ್ಮ ಶಾಲೆಯ ಗಂಡುಮಕ್ಕಳು ಹೆಬ್ಬುಲಿಯಂತಹ ಹೇರ್ ಕಟಿಂಗ್ ಮಾಡಿಸಿಕೊಂಡು ಬರುತ್ತಿದ್ದಾರೆ. ತಲೆಯ ಒಂದು ಬದಿ ಕೂದಲು ಬಿಟ್ಟು, ಇನ್ನೊಂದು ಬದಿ ಕೂದಲು ಉಳಿಸಿಕೊಂಡು ಕಟಿಂಗ್ ಮಾಡಿಸಿಕೊಂಡು ಶಾಲೆಗೆ ಬರುತ್ತಿದ್ದಾರೆ‌. ಇದರಿಂದ ವಿದ್ಯಾರ್ಥಿಗಳು ಕಲಿಕೆಗೆ ಆಸಕ್ತಿ ತೋರಿಸುತ್ತಿಲ್ಲ.‌ ಶೈಕ್ಷಣಿಕ ಚಟುವಟಿಕೆಗಳಿಗೆ ಮಹತ್ವ ನೀಡುತ್ತಿಲ್ಲ. ಆದ್ದರಿಂದ ನಮ್ಮ ಶಾಲೆಯ ವಿದ್ಯಾರ್ಥಿಗಳಿಗೆ ಒಪ್ಪುವಂತಹ ಹೇರ್ ಕಟಿಂಗ್ ಮಾಡಲು ತಮ್ಮಲ್ಲಿ‌ ವಿನಂತಿಸುತ್ತೇನೆ‌‌. ಒಂದು ವೇಳೆ ವಿದ್ಯಾರ್ಥಿಗಳು “ಹೆಬ್ಬುಲಿ” ಹೇರ್ ಕಟಿಂಗ್ ಮಾಡಲು ಒತ್ತಾಯ ಮಾಡಿದರೆ… ಅಂತಹ ವಿದ್ಯಾರ್ಥಿಗಳ ಹೆಸರನ್ನು ನನಗೆ ಅಥವಾ ಪಾಲಕರ ಗಮನಕ್ಕೆ ತನ್ನಿ ಎಂದು ತಮ್ಮಲ್ಲಿ ಕೋರುತ್ತೇನೆ ಎಂದು ಪತ್ರದಲ್ಲಿ ಮುಖ್ಯ ಶಿಕ್ಷಕ ಉಲ್ಲೇಖಿಸಿದ್ದಾರೆ.

ಹಿಂದೆ ಒಂದು ಕಾಲ ಇತ್ತು. ಅಲ್ಲಿ ಮಕ್ಕಳಿಗೆ ಕ್ರಾಪ್ ಕಟ್ ಮಾತ್ರ. ಅವಕಾಶ. ಅ ದಕ್ಕೆ ಒಂದಷ್ಟು ಎಣ್ಣೆ ಹಾಕಿ ಸೈಡ್ ಕ್ರಾಪ್ ಹಾಕಿ ಬಾಚಿದ್ರೆ ಥೇಟ್ ಮನ್ಮಥ ಲುಕ್. ಆದ್ರೆ ಈಗ ಹಾಗಲ್ಲ. ತರಹೇವಾರಿ ಹೇರ್ ಸ್ಟೈಲ್ ಗಳು, ದಿನಕ್ಕೊಂದು ಬರುವ ಸಿನಿಮಾಗಳಲ್ಲಿ ಹೀರೋಗಳು ಮಾಡಿದ ಹೇರ್ ಸ್ಟೈಲೇ ಈಗಿನ ಮಕ್ಕಳಿಗೆ ಬೇಕು. ಅದು ಶಿಸ್ತು ಅಲ್ಲ, ಶಾಲೆಗೆ, ಕಾಲೇಜಿಗೆ ಹೀಗೆ ಹೋಗಬಾರದು ಎಂದರೆ ಕೇಳುವವರಾರು ಅಲ್ವಾ..?

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಮಳೆ ಆರಂಭವಾಗುತ್ತಿದ್ದಂತೆಯೇ ಗಿಡಗಳ ನಾಟಿಗೆ ಸಿದ್ಧತೆ – ಅಡಿಕೆ ಗಿಡಗಳಿಗೆ ಬೇಡಿಕೆ ಹೆಚ್ಚಾಗುತ್ತಿದೆ…!

ರಾಜ್ಯಾದ್ಯಂತ ಅಡಿಕೆ ಗಿಡಗಳಿಗೆ ಭಾರೀ ಬೇಡಿಕೆ ವ್ಯಕ್ತವಾಗಿದ್ದು,ಕೆಲವು ಕಡೆ ಸಸಿಯ ಬೆಲೆ ₹100ಕ್ಕೆ…

9 hours ago

ಕೇಂದ್ರ ಸರ್ಕಾರದ ಸೌಲಭ್ಯಗಳಿಗೆ ‘ಕೇಂದ್ರ ರೈತ ಐಡಿ’ ಕಡ್ಡಾಯ – ಮಂಗಳೂರು ತಾಲೂಕಿನ 14,520 ರೈತರು ಇನ್ನೂ ನೋಂದಣಿ ಬಾಕಿ

ಕೇಂದ್ರ ಸರ್ಕಾರದ ವಿವಿಧ ಕೃಷಿ ಸೌಲಭ್ಯಗಳನ್ನು ಪಡೆಯಲು ‘ಕೇಂದ್ರ ರೈತ ಐಡಿ’ ಕಡ್ಡಾಯವಾಗುತ್ತಿದೆ.…

10 hours ago

ಮಂಗಳೂರು ಚಾಲಿ ಅಡಿಕೆ ಮಾರುಕಟ್ಟೆಯಲ್ಲಿ ಧಾರಣೆ ಏರಿಕೆ | ಮತ್ತೆ ಚೇತರಿಕೆಯ ಸಂಕೇತ ನೀಡಿದ ಅಡಿಕೆ ಧಾರಣೆ

ಮಂಗಳೂರು ಚಾಲಿ ಅಡಿಕೆ ಮಾರುಕಟ್ಟೆಯಲ್ಲಿ ಕೆಜಿಗೆ ₹5 ಏರಿಕೆ ದಾಖಲಾಗಿದ್ದು, ಹೊಸ ಅಡಿಕೆ…

19 hours ago

ಒಂದು ದಿನದ ತೀವ್ರ ಬಿಸಿಲು 3,400 ಹೆಚ್ಚುವರಿ ಸಾವುಗಳಿಗೆ ಕಾರಣ…? ಭಾರತದ ಬಗ್ಗೆ ಬೆಚ್ಚಿಬೀಳಿಸುವ ಅಧ್ಯಯನ

ಭಾರತದಲ್ಲಿ ಕೇವಲ ಒಂದು ದಿನದ ತೀವ್ರ ಬಿಸಿಲು ಸುಮಾರು 3,400 ಹೆಚ್ಚುವರಿ ಸಾವುಗಳಿಗೆ…

23 hours ago

ಹವಾಮಾನ ಬಿಕ್ಕಟ್ಟಿನ ನಡುವೆಯೂ ಕೃಷಿ ಉಳಿಸುವ ದಾರಿ ಕಂಡುಕೊಂಡ ದಕ್ಷಿಣ ಏಷ್ಯಾ ದೇಶಗಳು – ಸ್ಥಳೀಯ ಆವಿಷ್ಕಾರಗಳಿಗೆ ಹೆಚ್ಚಿದ ಮಹತ್ವ

ದಕ್ಷಿಣ ಪೂರ್ವ ಏಷ್ಯಾ ರಾಷ್ಟ್ರಗಳು ಹವಾಮಾನ ಬದಲಾವಣೆ ಮತ್ತು ಆಹಾರ ಭದ್ರತೆ ಸವಾಲುಗಳನ್ನು…

23 hours ago

ಮುಂಗಾರು ಅಧಿಕೃತ ದಿನಾಂಕ ತಪ್ಪಿತು..! ಜೂನ್ ಮೊದಲ ವಾರದ ಬಳಿಕವೇ ಭಾರೀ ಮಳೆ ಸಾಧ್ಯತೆ ಎಂದ ಸ್ಕೈಮೆಟ್

ಈ ಬಾರಿ ಮುಂಗಾರು ತನ್ನ ಸಾಮಾನ್ಯ ಪ್ರವೇಶ ದಿನಾಂಕವನ್ನು ತಪ್ಪಿಸಿದೆ ಎಂದು ಸ್ಕೈಮೆಟ್…

1 day ago