ಎನ್ನೆಂಸಿಯಲ್ಲಿ ಶಿಕ್ಷಕರ ದಿನಾಚರಣೆ | ಶಿಕ್ಷಕರು ವಿದ್ಯಾರ್ಥಿಗಳ ಭವಿಷ್ಯ ರೂಪಿಸುವ ಶಿಲ್ಪಿಗಳು | ‌ ಕೆ ಆರ್ ಗೋಪಾಲಕೃಷ್ಣ

September 6, 2023
4:10 PM
ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನಲ್ಲಿ  ಶಿಕ್ಷಕರ ದಿನಾಚರಣೆ ಕಾರ್ಯಕ್ರಮ‌ ನಡೆಯಿತು.

ಶಿಕ್ಷಕರು ವಿದ್ಯಾರ್ಥಿಗಳ ಜೀವನದಲ್ಲಿ ಒಂದಲ್ಲ ಒಂದು ರೀತಿಯಲ್ಲಿ ಮಹತ್ತರವಾದ ಪಾತ್ರವನ್ನು ವಹಿಸುತ್ತಾರೆ. ಶಿಕ್ಷಕ ಇಡೀ ಸಮಾಜದ ಪರಿವರ್ತಕ, ನಿರ್ಮಾತ್ರ. ಅವರು ಮಕ್ಕಳಲ್ಲಿ ಅಜ್ಞಾನದ ಕತ್ತಲೆಯನ್ನು ಕಳೆದು ಸುಜ್ಞಾನದೆಡೆ ಕರೆದುಕೊಂಡು ಹೋಗುವ, ವಿದ್ಯಾರ್ಥಿಗಳ ಭವಿಷ್ಯವನ್ನು ರೂಪಿಸುವ ಶಿಲ್ಪಿಗಳು ಎಂದು ಶ್ರೀ ಸೀತಾ ರಾಘವ ಪದವಿಪೂರ್ವ ಕಾಲೇಜು ನಿವೃತ್ತ ಪ್ರಾಂಶುಪಾಲರಾದ  ಕೆ ಆರ್ ಗೋಪಾಲಕೃಷ್ಣ  ಹೇಳಿದರು.

Advertisement

ಅವರು ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನಲ್ಲಿ  ವಿದ್ಯಾರ್ಥಿ ಕ್ಷೇಮ ಪಾಲನಾ ಸಮಿತಿ ಮತ್ತು ಆಂತರಿಕ ಗುಣಮಟ್ಟ ಖಾತರಿ ಕೋಶದ ಸಹಬಾಗಿತ್ವದಲ್ಲಿ ಆಚರಿಸಲ್ಪಟ್ಟ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲರಾದ ರುದ್ರಕುಮಾರ್ ಎಂ ಎಂ ಮಾತನಾಡಿ, ಶಿಕ್ಷಕರು ವಿದ್ಯಾರ್ಥಿಗಳು ತಪ್ಪಿದಾಗ ತಿದ್ದುವ, ಒಳ್ಳೆಯ ಕೆಲಸ ಮಾಡಿದಾಗ ಪ್ರಶಂಸಿಸುವ ಮಾರ್ಗದರ್ಶಕರು. ಅವರ ಮಾತನ್ನು ಪಾಲಿಸುವುದೇ ನೀವು ಆಚರಿಸುವ ಶಿಕ್ಷಕರ ದಿನಾಚರಣೆಗೆ ಸಿಗುವ ಮಹತ್ವ ಎಂದರು.

ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಕಾಲೇಜಿನ ಶೈಕ್ಷಣಿಕ ಸಲಹೆಗಾರರಾದ ಪ್ರೊ ಎಂ ಬಾಲಚಂದ್ರ ಗೌಡ ಮಾತನಾಡಿ, ಶಿಕ್ಷಕರು ವಿದ್ಯಾರ್ಥಿಗಳ ಕಾರ್ಯ ಚಟುವಟಿಕೆಯನ್ನು, ಸಾಧನೆಯನ್ನು ಕಂಡು ಖುಷಿ ಪಡುತ್ತಾರೆ. ನೀವು ಮಾಡುವ ಒಳ್ಳೆಯ ಕೆಲಸಗಳೇ ಶಿಕ್ಷಕರಿಗೆ ಕೊಡುವ ಗೌರವ ಎಂದು ತಮ್ಮ ವೃತ್ತಿ ಜೀವನವನ್ನು ನೆನಪಿಸಿಕೊಂಡರು.

ವೇದಿಕೆಯಲ್ಲಿ ಕಾಲೇಜಿನ ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಡಾ. ವಿಶ್ವನಾಥ ಕೆ ಟಿ, ಕಾಲೇಜಿನ ಆಂತರಿಕ ಗುಣಮಟ್ಟ ಖಾತರಿ ಕೋಶದ ಸಂಯೋಜಕಿ ಡಾ. ಮಮತಾ ಕೆ ಉಪಸ್ಥಿತರಿದ್ದರು. ಕಾಲೇಜಿನ ವಿದ್ಯಾರ್ಥಿ ಕ್ಷೇಮ ಪಾಲನಾಧಿಕಾರಿ,  ರತ್ನಾವತಿ ಡಿ ಪ್ರಾಸ್ತಾವಿಕವಾಗಿ ಮಾತನಾಡಿದರು.

ಅಂತಿಮ ಬಿಕಾಂ ವಿದ್ಯಾರ್ಥಿ ಜೋಸ್ಬಿನ್ ಬಾಬು ಸ್ವಾಗತಿಸಿ ಅಂತಿಮ ಬಿಎ ವಿದ್ಯಾರ್ಥಿನಿ ನಿರೀಕ್ಷಾ ವಂದಿಸಿದರು.
ದ್ವಿತೀಯ ಬಿ ಎ ವಿದ್ಯಾರ್ಥಿನಿ ಗಾನಾ ಹಾಗೂ ದ್ವಿತೀಯ ಬಿ ಕಾಂ ವಿದ್ಯಾರ್ಥಿನಿ ಅನ್ವಯ ಕಾರ್ಯಕ್ರಮ ನಿರೂಪಿಸಿದರು.

Advertisement

Advertisement

Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಸಹಜ ಸಾವನ್ನಪ್ಪುವ ಕಾಡುಪ್ರಾಣಿಗಳನ್ನು ಸುಡುವಂತಿಲ್ಲ | ಪ್ರಕೃತಿ ಚಕ್ರ ಕಾಪಾಡಲು ಸಹಕಾರಿ | ರಾಜ್ಯ ಸರ್ಕಾರದಿಂದ ಸುತ್ತೋಲೆ
May 5, 2025
10:56 PM
by: ದ ರೂರಲ್ ಮಿರರ್.ಕಾಂ
ಬದರೀನಾಥ ಧಾಮ ಯಾತ್ರಾ ಆರಂಭ | ಭಾರೀ ಪ್ರಮಾಣದಲ್ಲಿ ಆಗಮಿಸಿರುವ ಭಕ್ತರು | ಸುರಕ್ಷತೆಗಾಗಿಅರೆಸೇನಾ ಪಡೆ ನಿಯೋಜನೆ
May 5, 2025
12:21 PM
by: The Rural Mirror ಸುದ್ದಿಜಾಲ
ಅರಣ್ಯ ಭೂಮಿ ಕಬಳಿಸಲು ಪ್ರಯತ್ನಿಸುತ್ತಿರುವವರ ವಿರುದ್ಧ ಕಾನೂನು ಕ್ರಮ – ಅರಣ್ಯ ಸಚಿವ ಈಶ್ವರ ಖಂಡ್ರೆ
May 5, 2025
12:02 PM
by: The Rural Mirror ಸುದ್ದಿಜಾಲ
ಅಡಿಕೆ ಧಾರಣೆ ಏರಿಕೆಗೆ ಕಾರಣ ಇದೆ | ಈಗ ಅಡಿಕೆ ಮಾರುಕಟ್ಟೆಗೆ ಅನ್ವಯಿಸುವ ಸಿದ್ಧಾಂತಗಳು ಯಾವುದು..?
May 5, 2025
6:52 AM
by: ಡಾ|ವಿಘ್ನೇಶ್ವರ ಭಟ್‌ ವರ್ಮುಡಿ

You cannot copy content of this page - Copyright -The Rural Mirror

Join Our Group