Advertisement
MIRROR FOCUS

ಶಿಕ್ಷಕರ ದಿನಾಚರಣೆ | ಅರಿವಿನ ಗುರುವಿಗೆ ನಮನ |

Share
ಗುರು ಶಿಷ್ಯರ ಸಂಬಂದವೇ ವಿಶೇಷವಾದುದು. ಅಲ್ಲಿ ಏಕಕಾಲಕ್ಕೆ ಗುರುಗಳ ಮಕ್ಕಳ ಮೇಲೆ ಪ್ರೀತಿಯನ್ನೂ ಹರಿಸಬೇಕು. ದಂಡಿಸಲೂ ಸಿದ್ಧರಿರ ಬೇಕು. ಎಲ್ಲಿ ತಪ್ಪಿದೆಯೋ ಅಲ್ಲಿಗೆ ತಕ್ಕ ಸಮಯಕ್ಕೆ ಚುರುಕು ಮುಟ್ಟಿದಲು ಸಾಧ್ಯವಾಗುವುದೆಂದರೆ ಅದು ಶಿಕ್ಷಕರಿಂದ ಮಾತ್ರ ಸಾಧ್ಯ. ಮಕ್ಕಳ ಓರೆಕ್ಕೋರೆ ಬುದ್ಧಿಗಳನ್ನು ಗುರುತಿಸುವುದು ಕೂಡ ಶಿಕ್ಷಕರೇ ಎಂಬುದು ಸಾರ್ವಕಾಲಿಕ ಸತ್ಯ.

ಅದು ವಿಶೇಷ ದಿನ. ಯಾವಾಗಲೂ ಮಕ್ಕಳಿಗಾಗಿ ಶಿಕ್ಷಕರು ಸ್ಪರ್ಧೆಗಳನ್ನು, ಕಾರ್ಯಕ್ರಮಗಳನ್ನು ಆಯೋಜಿಸುತ್ತಿದ್ದರೆ ಇಂದು ಅಲ್ಲಿ ಮಕ್ಕಳು ವೀಕ್ಷಕರ ಸಾಲಿನಲ್ಲಿ ಕುಳಿತಿದ್ದರು. ಶಿಕ್ಷಕರು ವೇದಿಕೆಯಲ್ಲಿ ತಮ್ಮ ಪ್ರತಿಭೆಯನ್ನು ಪ್ರದರ್ಶಿಸುತ್ತಿದ್ದರು.

Advertisement
Advertisement
Advertisement
Advertisement

ಅವರಿಗಾಗಿ ನೃತ್ಯ, ಸಂಗೀತ, ನಾಟಕ, ಆಶುಭಾಷಣ , ಅಭಿನಯ ಮೊದಲಾದ ಕಾರ್ಯಕ್ರಮಗಳನ್ನು ಏರ್ಪಡಿಸಲಾಗಿತ್ತು. ಈ ಸಾಂಸ್ಕೃತಿಕ ಕಾರ್ಯಕ್ರಮವಲ್ಲದೆ ಕ್ರಿಕೆಟ್ ಪಂದ್ಯವನ್ನೂ ನಡೆಸಲಾಗಿತ್ತು. ಇದರಲ್ಲಿ ಹತ್ತನೇಯ ತರಗತಿಯ ವಿದ್ಯಾರ್ಥಿಗಳು ಹಾಗೂ ಅಧ್ಯಾಪಕರುಗಳ ನಡುವೆ ಪಂದ್ಯವಿತ್ತು. ಮಕ್ಕಳೋ ನಿತ್ಯ ಕ್ರಿಕೇಟ್ ಆಡುವವರು. ಒಂದುಕಾಲದಲ್ಲಿ ನಿತ್ಯ ಆಡುತ್ತಿದ್ದ ಶಿಕ್ಷಕರೇ , ಆದರೆ ಇತ್ತೀಚೆಗೆ ಕೆಲಸದ ಒತ್ತಡ ಹಾಗೂ ಇತರ ತಾಪತ್ರಯಗಳಿಂದಾಗಿ ಆಟದಿಂದ ವಿಮುಖರಾದವರು. ಆದರೆ ಶಿಕ್ಷಕರ ದಿನಾಚರಣೆಯ ನೆಪವಾಗಿ ಅವರೆಲ್ಲರೂ ಉತ್ಸಾಹದಿಂದ ಕ್ರೀಡಾಂಗಣದಲ್ಲಿ ಸೇರಿದ್ದರು. ಮಕ್ಕಳ ಪ್ರೋತ್ಸಾಹದ ದನಿ ಶಿಕ್ಷಕರು ಹಾಗೂ ವಿದ್ಯಾರ್ಥಿಗಳ ನಡುವಿನ ಪಂದ್ಯದ ರಂಗು ಹೆಚ್ಚಿಸಿತು. ಪರಸ್ಪರ ಸೌಹಾರ್ದ ಹೆಚ್ಚಿಸುವಲ್ಲಿ ಈ ಪಂದ್ಯ ನೆರವಾಯಿತು. ಈ ಸಂತೋಷದ ಸಂದರ್ಭಗಳನ್ನು ಕೋವಿಡ್ ಕಾರಣದಿಂದ ಮಕ್ಕಳು, ಅಧ್ಯಾಪಕರು ಕಳೆದುಕೊಳ್ಳುತ್ತಿದ್ದಾರಲ್ಲಾ ಎಂಬುದು ದುಃಖದ ಸಂಗತಿ.

Advertisement

ಗುರು ಶಿಷ್ಯರ ಸಂಬಂದವೇ ವಿಶೇಷವಾದುದು. ಅಲ್ಲಿ ಏಕಕಾಲಕ್ಕೆ ಗುರುಗಳ ಮಕ್ಕಳ ಮೇಲೆ ಪ್ರೀತಿಯನ್ನೂ ಹರಿಸಬೇಕು. ದಂಡಿಸಲೂ ಸಿದ್ಧರಿರ ಬೇಕು. ಎಲ್ಲಿ ತಪ್ಪಿದೆಯೋ ಅಲ್ಲಿಗೆ ತಕ್ಕ ಸಮಯಕ್ಕೆ ಚುರುಕು ಮುಟ್ಟಿದಲು ಸಾಧ್ಯವಾಗುವುದೆಂದರೆ ಅದು ಶಿಕ್ಷಕರಿಂದ ಮಾತ್ರ ಸಾಧ್ಯ. ಮಕ್ಕಳ ಓರೆಕ್ಕೋರೆ ಬುದ್ಧಿಗಳನ್ನು ಗುರುತಿಸುವುದು ಕೂಡ ಶಿಕ್ಷಕರೇ ಎಂಬುದು ಸಾರ್ವಕಾಲಿಕ ಸತ್ಯ.

ಶಾಲಾ ವಿದ್ಯಾಭ್ಯಾಸದ ದಿನಗಳು ಪ್ರತಿಯೊಬ್ಬರ ಬಾಳಿನಲ್ಲೂ ಮಹತ್ವದ ಸಮಯ. ಅಲ್ಲಿ ಸರಿಯಾದ ಶಿಕ್ಷಕರ ಮಾರ್ಗದರ್ಶನ ಸಿಕ್ಕಿದಾಗ ಒಂದು ಒಳ್ಳೆಯ ಗುರಿಯತ್ತ ಮುನ್ನಡೆಯಲು ಸಾಧ್ಯ. ಹಿಂದಿನ ಕಾಲದಲ್ಲಿ ಗುರುಗಳು ಸರ್ವ ಸ್ವತಂತ್ರರು. ಅವರೇನೇ ಹೇಳಿದರೂ ಮಕ್ಕಳು ತಮ್ಮ ಒಳಿತಿಗೆ ಎಂದು ತಿಳಿಯುತ್ತಿದ್ದರು. ( ಈಗ ಬಿಡಿ ಕೊರೋನಾ ಸಮಯದಲ್ಲಿ ಮನೆಯೇ ಪಾಠಶಾಲೆಯಾಗಿದೆ)

Advertisement

ಪ್ರತಿಯೊಬ್ಬರಿಗೂ ಅವರದೇ ಆದ ಇತಿಮಿತಿಗಳಿವೆ, ಅರಿತು ಮುಂದುವರಿವುದು ಒಳ್ಳೆಯದು. ಭವಿಷ್ಯದ ದೃೃಷ್ಟಿಯಿಂದ ಯೋಚಿಸ ಬೇಕು. ಹಿಂದೆ ಮುಂದೆ ನೋಡದೆ ಮುಂದಡಿ ಇಡಬಾರದು. ಓದುವ ಸಮಯದಲ್ಲಿ ಓದಬೇಕು. ಸರಿಯಾದ ರೀತಿಯಲ್ಲಿ ಅಭ್ಯಾಸ ಮಾಡಬೇಕು. ಹೀಗೆ ಹಲವು ನೀತಿ ಕಥೆಗಳನ್ನು ಹೇಳುವ ಮೂಲಕ ಮಕ್ಕಳನ್ನು ಸರಿ ಮಾಡುವ ಅವಕಾಶ ಅಂದು ಗುರುಗಳಿಗಿತ್ತು. ತಪ್ಪು ಮಾಡಿದಾಗ ಪೆಟ್ಟು ಕೊಟ್ಟು ಬುದ್ಧಿ ಹೇಳಿ ಸರಿ ಮಾಡುತ್ತಿದ್ದರು. ಶಾಲೆಯಲ್ಲಿ ಹೊಡೆದರೆ, ಯಾಕೆ ಎತ್ತ ಎಂದು ಮನೆಯವರು ಕೇಳಿಕೊಂಡು ಬರುತ್ತಿರಲಿಲ್ಲ. ಇನ್ನೂ ಎರಡು ಕೊಡ ಬೇಕಿತ್ತು ಅನ್ನುವವರೇ ಹೆಚ್ಚಿನವರು.
ಮಕ್ಕಳು ಅಡ್ಡ ದಾರಿ ಹಿಡಿಯದಂತೆ ಶಾಲೆ, ಮನೆಗಳಲ್ಲೇ ಎಚ್ಚರಿಕೆ ವಹಿಸಲಾಗುತ್ತಿತ್ತು. ಹಾಗಿದ್ದು ತಪ್ಪು ಹಾದಿ ಹಿಡಿದರೆ ಪೋಲಿಸರು ವಿಚಾರಿಸುತ್ತಿದ್ದರು. ಆದರೆ ಈಗ ಮಕ್ಕಳ ‌ಮೇಲಿನ ಕುರುಡು ನಂಬಿಕೆ ಗುರುಗಳತ್ತಲೇ ಸಂಶಯ ದೃಷ್ಟಿಯಿಂದ ನೋಡುವಂತಾಗಿದೆ. ಈಗ ಪಾಠ , ಪ್ರಾಜೆಕ್ಟ್, ಟಾರ್ಗೆಟ್, ಪರೀಕ್ಷೆ, ಎಂದು ಯಾವಾಗಲೂ ಓಡುತ್ತಾ ಸಾಗುವ ಟೀಚರ್ ಗಳಿಗೂ , ಮಕ್ಕಳಿಗೂ ಪುರುಸೊತ್ತೇ ಇಲ್ಲ,. ಬುದ್ಧಿ ಹೇಳುವ ತಾಳ್ಮೆ ಅಧ್ಯಾಪಕರಿಗೂ, ಕೇಳುವ ಮನಸ್ಸು ಮಕ್ಕಳಿಗೂ ಇದ್ದಾಗ ಮಾತ್ರ ಪ್ರಯೋಜನ.

ಸೆಪ್ಟೆಂಬರ್ 5 ಒಂದು ವಿಶೇಷ ದಿನವಾಗಿದೆ. ಆ ದಿನವನ್ನು ಭಾರತದೆಲ್ಲೆಡೆ ಶಿಕ್ಷಕರ ದಿನಾಚರಣೆಯಾಗಿ ಆಚರಿಸಲಾಗುತ್ತದೆ. ನಮ್ಮ ದ್ವಿತೀಯ ರಾಷ್ಟ್ರಪತಿ ಗಳಾಗಿದ್ದ ಸರ್ವಪಲ್ಲಿ ರಾಧಾಕೃಷ್ಣನ್ ಅವರ ಜನುಮ ದಿನವನ್ನು ಶಿಕ್ಷಕರ ದಿನವಾಗಿ ಆಚರಿಸಲಾಗುತ್ತದೆ. ಅವರು ಮಹಾನ್ ಚೇತನವಾಗಿದ್ದರು. ಅಪಾರ ಜ್ಞಾನವಂತ, ಮಹಾ ಮೇಧಾವಿ. ಅವರು ಹಲವು ಉಪಯುಕ್ತ ಕೃತಿಗಳ ರಚನೆಯನ್ನು ಮಾಡಿದ್ದರು. ಶಿಕ್ಷಣ ಕ್ಷೇತ್ರದಲ್ಲಿ ಅವರ ಗಣನೀಯ ಕೊಡುಗೆಯನ್ನು ಅವರ ಜನುಮ ದಿನದ ನೆಪದಲ್ಲಿ ನೆನಪಿಸುವ ಕಾರ್ಯಕ್ರಮ ಎಲ್ಲೆಡೆ ಶಿಕ್ಷಕರ ದಿನಾಚರಣೆಯ ಮೂಲಕ ಆಚರಿಸಲಾಗುತ್ತದೆ. ಆದಷ್ಟು ಬೇಗ ಮಕ್ಕಳು ಶಾಲೆಯಲ್ಲಿ ಕುಳಿತು ಪಾಠ ಕೇಳುವಂತಾಗಲಿ.

Advertisement

# ಅಶ್ವಿನಿಮೂರ್ತಿ ಅಯ್ಯನಕಟ್ಟೆ

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಅಶ್ವಿನಿ ಮೂರ್ತಿ, ಅಯ್ಯನಕಟ್ಟೆ

ಪತ್ರಿಕೋದ್ಯಮ ಪದವೀಧರೆ, ಲೇಖಕಿ ಗೃಹಿಣಿ,

Published by
ಅಶ್ವಿನಿ ಮೂರ್ತಿ, ಅಯ್ಯನಕಟ್ಟೆ

Recent Posts

ರಾಜ್ಯದ ಗ್ರಾಮ ಪಂಚಾಯತ್‌ ಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ʼದರ್ಶಿನಿʼ ವಿನೂತನ ಕಾರ್ಯಕ್ರಮಕ್ಕೆ  ಸರ್ಕಾರ ಚಾಲನೆ

ರಾಜ್ಯದ ಗ್ರಾಮ ಪಂಚಾಯತ್‌ ಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಅರಿವು ಕೇಂದ್ರಗಳು ಜ್ಞಾನದ ಕೇಂದ್ರಗಳಾಗಿದ್ದು, ಸ್ಪರ್ಧಾತ್ಮಕ…

13 hours ago

‘ಜಲಾನಯನ ಯಾತ್ರೆ’ ಕುರುಡು ಮಲೆಯಲ್ಲಿ ಆರಂಭ

ಜಲಾನಯನ ಯಾತ್ರೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಯಾತ್ರೆ ಸಂಚರಿಸಲಿದ್ದು, ನೀರು ನಿರ್ವಹಣೆ ಬಗ್ಗೆ…

13 hours ago

ದೇಶದ 25 ಸಾವಿರ ಗ್ರಾಮಗಳಲ್ಲಿ ಸಂಪರ್ಕ ಕಲ್ಪಿಸುವ ಕ್ರಮ  | 900 ಕ್ಕೂ ಅಧಿಕ ಗ್ರಾಮಗಳಲ್ಲಿ ಮೊಬೈಲ್‌ ಟವರ್‌ ಅಳವಡಿಕೆ |

15 ರಾಜ್ಯಗಳಲ್ಲಿ 2 ಸಾವಿರದ 590 ಮೊಬೈಲ್ ಸಂಪರ್ಕರಹಿತ ಗ್ರಾಮಗಳನ್ನು ಗುರುತಿಸಲಾಗಿದೆ. ಈ…

13 hours ago

ಕಪ್ಪತ ಗುಡ್ಡ ರಕ್ಷಣೆ ಕುರಿತು ಜಾಗೃತಿ | ಗುಡ್ಡದ ತಪ್ಪಲಿನ ಗ್ರಾಮಗಳಲ್ಲಿ ಜನಜಾಗೃತಿ

ಗದಗ ಜಿಲ್ಲೆಯ ಮುಂಡರಗಿ ಮತ್ತು ಶಿರಹಟ್ಟಿ ತಾಲೂಕಿನ ಸುಮಾರು 33 ಸಾವಿರ ಹೆಕ್ಟೇರ್…

13 hours ago

ಅಡಿಕೆಯ ಹಳದಿ ಎಲೆ ರೋಗದ ಖಾಯಂ ನಿವಾರಣೆಗಾಗಿ ಯೋಜನೆ ಅನುಷ್ಟಾನಗೊಳ್ಳುತ್ತದೆ ಎಂಬ ಭರವಸೆ ಇರಲಿ

ಅಡಿಕೆಯಲ್ಲೂ ಟಿಶ್ಯೂ ಕಲ್ಚರ್ ತಂತ್ರಜ್ಞಾನದ ಅಳವಡಿಕೆ ಸಾಧ್ಯವೇ ಎಂಬ ಪ್ರಯತ್ನ ಸಾಕಷ್ಟು ಹಿಂದೆಯೇ…

20 hours ago

ಅಡಿಕೆ ಆಮದು ಮೇಲೆ ನಿಗಾ ವಹಿಸಲು ಸಚಿವರಿಗೆ ಮನವಿ ಮಾಡಿದ ಸಂಸದ ಕ್ಯಾ. ಬ್ರಿಜೇಶ್ ಚೌಟ

ಅಡಿಕೆ ಆಮದು ಆಗುತ್ತಿರುವ ಹಿನ್ನಲೆ ನಮ್ಮ ಸ್ಥಳೀಯ ಅಡಿಕೆ ಬೆಳೆಗಾರರು ನ್ಯಾಯಸಮ್ಮತವಲ್ಲದ ದರ…

21 hours ago