ಅರಣ್ಯ ಇಲಾಖೆ ನೆಡುತೋಪುಗಳಲ್ಲಿ ಬೆಳೆಸಿರುವ ತೇಗದ ಮರವನ್ನು ಎಷ್ಟು ವರ್ಷಕ್ಕೆ ಕತ್ತರಿಸಬೇಕು ಎಂಬ ಬಗ್ಗೆ ಶೀಘ್ರ ನಿರ್ಧಾರ ಕೈಗೊಳ್ಳುವಂತೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.…..ಮುಂದೆ ಓದಿ….
ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ಅರಣ್ಯ ಇಲಾಖೆ ಮರಮುಟ್ಟುಗಳಿಗಾಗಿಯೇ ಕೆಲವೊಂದು ನಿರ್ದಿಷ್ಟ ಪ್ರದೇಶಗಳಲ್ಲಿ ತೇಗದ ಮರಗಳನ್ನು ಬೆಳೆಸಿರುತ್ತದೆ. ಇದರ ಕತ್ರಾವಣೆ 80 ವರ್ಷಕ್ಕೋ ಅಥವಾ 120 ವರ್ಷಕ್ಕೋ ಎಂಬ ಬಗ್ಗೆ ಜಿಜ್ಞಾಸೆ ಇದೆ. ಈ ಹಿನ್ನೆಲೆಯಲ್ಲಿ ಎ.ಪಿ.ಸಿ.ಸಿ.ಎಫ್. ನೇತೃತ್ವದಲ್ಲಿ ಒಂದು ಸಮಿತಿ ಮಾಡಲಾಗಿದೆ ಎಂದು ತಿಳಿಸಿದ್ದಾರೆ. ಈಗಾಗಲೇ ಕಾರ್ಯೋಜನೆ, ಸಂಶೋಧನೆ ಹಾಗೂ ಶಿರಸಿ ಅರಣ್ಯಶಾಸ್ತ್ರ ಕಾಲೇಜಿನ ತಜ್ಞರು ವೈಜ್ಞಾನಿಕವಾಗಿ ಅಧ್ಯಯನ ಮಾಡಿ ವರದಿ ಸಲ್ಲಿಸಿರುತ್ತಾರೆ. ಆದಷ್ಟು ಶೀಘ್ರ ಇದನ್ನು ಪೂರ್ಣಗೊಳಿಸುವಂತೆ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಮತ್ತು ಅರಣ್ಯ ಪಡೆ ಮುಖ್ಯಸ್ಥರಿಗೆ ಸೂಚಿಸಲಾಗಿದೆ ಎಂದು ಅರಣ್ಯ ಸಚಿವರು ಹೇಳಿದ್ದಾರೆ.
ದಕ್ಷಿಣ ಕನ್ನಡದ ಮಲೆನಾಡು ತಪ್ಪಲಿನ ಸುಬ್ರಹ್ಮಣ್ಯ, ಸುಳ್ಯ, ಕಡಬ ಸೇರಿದಂತೆ ಹಲವು ಪ್ರದೇಶಗಳಲ್ಲಿ…
ಆಗಸ್ಟ್ 26ರಿಂದ ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳಿದ್ದು, ಕರಾವಳಿ…
ಎಲ್ ನಿನೋ ಪರಿಣಾಮದಿಂದ ಮಳೆ ಕಡಿಮೆಯಾಗಬಹುದು ಎಂಬ ನಿರೀಕ್ಷೆಯ ನಡುವೆಯೂ ಕರಾವಳಿಯಲ್ಲಿ ಆಗಸ್ಟ್ನಲ್ಲಿ…
ಸುಮಾರು 35 ವರ್ಷಗಳ ಹಿಂದೆ ಡಾ. ವಿಘ್ನೇಶ್ವರ ವರ್ಮುಡಿಯವರು ಮುಂದಿಟ್ಟಿದ್ದ ಅಡಿಕೆ ಮಾರುಕಟ್ಟೆ…
ಭಾರತದ ರಾಷ್ಟ್ರೀಯ ಕೀಟ ಕಣ್ಗಾವಲು ವ್ಯವಸ್ಥೆ ಈಗ 73 ಬೆಳೆಗಳು ಮತ್ತು 436…
ICAR 16 ಹೊಸ ಜಾನುವಾರು ಮತ್ತು ನಾಯಿ ತಳಿಗಳಿಗೆ ರಾಷ್ಟ್ರೀಯ ನೋಂದಣಿ ನೀಡಿದ್ದು,…