Advertisement
ಸುದ್ದಿಗಳು

#ICC World Cup | ಟೀಂ ಇಂಡಿಯಾ ಬೌಲಿಂಗ್‌ಗೆ ತತ್ತರಿಸಿದ ಪಾಕ್ | ಬ್ಲೂ ಬಾಯ್ಸ್‌ಗೆ 192 ರನ್​​ಗಳ ಟಾರ್ಗೆಟ್

Share

ಭಾರಿ ಕುತೂಲದ ಪಂದ್ಯವಾಗಿರುವ ಅಹ್ಮದಾಬಾದ್#Ahamadabad​ನ ನರೇಂದ್ರ ಮೋದಿ ಸ್ಟೇಡಿಯಂ#Narendra Modi stadiumನಲ್ಲಿ ನಡೆಯುತ್ತಿರುವ ಐಸಿಸಿ ಏಕದಿನ ವಿಶ್ವಕಪ್‌ನ ಭಾರತ ಹಾಗೂ ಪಾಕಿಸ್ತಾನ#India vs Pakistan  ನಡುವಣ ಪಂದ್ಯ ರೋಚಕತೆ ಸೃಷ್ಟಿಸಿದೆ. ಟಾಸ್ ಸೋತು ಬ್ಯಾಟಿಂಗ್​ಗೆ ಇಳಿದ ಪಾಕಿಸ್ತಾನ ತಂಡ ಟೀಮ್ ಇಂಡಿಯಾ ಬೌಲಿಂಗ್ ದಾಳಿಗೆ ತತ್ತರಿಸಿ ಕೇವಲ 191 ರನ್​ಗೆ ಆಲೌಟ್ ಆಗಿದೆ. ಒಂದು ಹಂತದಲ್ಲಿ ದೊಡ್ಡ ಸ್ಕೋರ್ ಕಲೆಹಾಕುವ ಸೂಚನೆ ನೀಡಿದ್ದ ಬಾಬರ್ ಪಡೆಗೆ ಕುಲ್ದೀಪ್ ಹಾಗೂ ಬುಮ್ರಾ ಶಾಕ್ ನೀಡಿ ಅಲ್ಪ ಮೊತ್ತಕ್ಕೆ ಕುಸಿಯುವಂತೆ ಮಾಡಿದರು. ಸದ್ಯ ಭಾರತ ಗೆಲ್ಲಲು 192 ರನ್​ಗಳ ಅವಶ್ಯಕತೆ ಇದೆ.

ಟಾಸ್ ಸೋತು ಪಾಕ್ ಪರ ಇನ್ನಿಂಗ್ಸ್ ಆರಂಭಿಸಿದ ಅಬ್ದುಲ್ ಶಫೀಖ್ ಹಾಗೂ ಇಮಾನ್ ಹೆಚ್ಚು ಹೊತ್ತು ಕ್ರೀಸ್​ನಲ್ಲಿ ನಿಲ್ಲಲಿಲ್ಲ. 8 ಓವರ್ ಆಗುವ ಹೊತ್ತಿಗೆ 41 ರನ್ ಗಳಿಸಿದ್ದಾಗ ಸಿರಾಜ್ ಬೌಲಿಂಗ್​ನಲ್ಲಿ ಶಫೀಖ್ (20) ಎಲ್​ಬಿ ಬಲೆಗೆ ಸಿಲುಕಿದರು. ನಂತರ ಇಮಾಮ್ (36) ಹಾರ್ದಿಕ್ ಪಾಂಡ್ಯ ಬೌಲಿಂಗ್​ನಲ್ಲಿ ಕೀಪರ್ ರಾಹುಲ್​ಗೆ ಕ್ಯಾಚ್ ನೀಡಿ ನಿರ್ಗಮಿಸಿದರು. ಆದರೆ, ಈ ಸಂದರ್ಭ ಜೊತೆಯಾದ ಪಾಕ್ ಅನುಭವಿ ಬ್ಯಾಟರ್​ಗಳಾದ ನಾಯಕ ಬಾಬರ್ ಅಝಂ ಹಾಗೂ ಮೊಹಮ್ಮದ್ ರಿಝ್ವಾನ್ ಎಚ್ಚರಿಕೆಯ ಆಟ ಪ್ರದರ್ಶಿಸಿದರು.

ಭಾರತೀಯ ಬೌಲರ್​ಗಳ ಮರ್ಮವನ್ನು ಅರಿತ ಬಾಬರ್-ರಿಝ್ವಾನ್ ಜೋಡಿ 82 ರನ್​ಗಳ ಕಾಣಿಕೆ ನೀಡಿದರು. ಫಾರ್ಮ್ ವೈಫಲ್ಯದಿಂದ ಬಳಲುತ್ತಿದ್ದ ಬಾಬರ್ ಅರ್ಧಶತಕ ಸಿಡಿಸಿದರು. ಆದರೆ, 50 ರನ್ ಗಳಿಸಿದ ಕೂಡಲೇ ಬಾಬರ್ ಅವರು ಸಿರಾಜ್ ಬೌಲಿಂಗ್​ನಲ್ಲಿ ಬೌಲ್ಡ್ ಆದರು. ಇದರ ಬೆನ್ನಲ್ಲೆ ಕುಲ್ದೀಪ್, ಸೌದ್ ಶಕೀಲ್ (6) ಅವರನ್ನು ಎಲ್​ಬಿಡಬ್ಲ್ಯೂ ಮಾಡಿದರೆ, ಇಫ್ತಿಖರ್ ಅಹ್ಮದ್​ರನ್ನು (4) ಬೌಲ್ಡ್ ಮಾಡಿದರು. ಅತ್ತ ಭರ್ಜರಿ ಬ್ಯಾಟಿಂಗ್ ನಡೆಸುತ್ತಿದ್ದ ರಿಝ್ವಾನ್ 49 ರನ್ ಗಳಿಸಿದ್ದಾಗ ಬುಮ್ರಾ ಎಸೆತದಲ್ಲಿ ಕ್ಲೀನ್ ಬೌಲ್ಡ್ ಆದರು. ಶಬಾದ್ ಖಾನ್ ಕೂಡ 2 ರನ್​ಗೆ ಔಟಾದರು.

155 ರನ್​ಗೆ 3ನೇ ವಿಕೆಟ್ ಕಳೆದುಕೊಂಡ ಪಾಕಿಸ್ತಾನ 171 ರನ್ ಆಗುವ ಹೊತ್ತಿಗೆ 7 ವಿಕೆಟ್ ಪತನಗೊಂಡಿತು. ದಿಢೀರ್ ಕುಸಿತದಿಂದ ಬಾಬರ್ ಪಡೆ ಮೇಲೇಳಲು ಸಾಧ್ಯವಾಗಲಿಲ್ಲ. ಅಂತಿಮವಾಗಿ 42.5 ಓವರ್​ಗಳಲ್ಲಿ 191 ರನ್​ಗಳಿಗೆ ಆಲೌಟ್ ಆಯಿತು. ಭಾರತ ಪರ ಜಸ್​ಪ್ರಿತ್ ಬುಮ್ರಾ, ಮೊಹಮ್ಮದ್ ಸಿರಾಜ್, ಕುಲ್ದೀಪ್ ಯಾದವ್ ಹಾಗೂ ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ ತಲಾ 2 ವಿಕೆಟ್ ಕಿತ್ತರು.

  • ಅಂತರ್‌ಜಾಲ ಮಾಹಿತಿ
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಎಲೆಯ ಫೋಟೋ ತೆಗೆದರೆ AI ಕೀಟ ಯಾವುದೆಂದು ಹೇಳುತ್ತದೆ…! – 73 ಬೆಳೆಗಳ ಮೇಲೆ ಭಾರತದ ಹೊಸ ಕೃಷಿ ಕಣ್ಗಾವಲು

ಭಾರತದ ರಾಷ್ಟ್ರೀಯ ಕೀಟ ಕಣ್ಗಾವಲು ವ್ಯವಸ್ಥೆ ಈಗ 73 ಬೆಳೆಗಳು ಮತ್ತು 436…

6 hours ago

ಹವಾಮಾನ ವರದಿ | 24-08-2026 | ಕರಾವಳಿಯಲ್ಲಿ ಮಳೆ ಮುಂದುವರಿಕೆ – ಕರ್ನಾಟಕದಲ್ಲಿ ಮಳೆ ಪರಿಸ್ಥಿತಿ ಹೇಗೆ..?

ಕರ್ನಾಟಕದ ಕರಾವಳಿ ಹಾಗೂ ಮಲೆನಾಡಿನಲ್ಲಿ ಆಗಸ್ಟ್ 26ರವರೆಗೆ ಮೋಡ ಮತ್ತು ಅಲ್ಲಲ್ಲಿ ಬಿಟ್ಟುಬಿಟ್ಟು…

17 hours ago

ಉದ್ಯೋಗಗಳಿಲ್ಲವೇ? ಅಥವಾ ಉದ್ಯೋಗಕ್ಕೆ ಬೇಕಾದ ಕೌಶಲ್ಯವಿರುವವರು ಇಲ್ಲವೇ?

ಭಾರತದಲ್ಲಿ ಸಮಸ್ಯೆ ಕೇವಲ ಉದ್ಯೋಗಗಳ ಕೊರತೆಯಲ್ಲ, ಉದ್ಯೋಗಕ್ಕೆ ಅಗತ್ಯವಾದ ಕೌಶಲ್ಯ ಹೊಂದಿದ ಅಭ್ಯರ್ಥಿಗಳ…

22 hours ago

ಅಡಿಕೆ ರೋಗ ನಿಯಂತ್ರಣಕ್ಕೆ ಕೇಂದ್ರದ ಬೆಂಬಲ – ಕ್ಯಾ. ಚೌಟಗೆ ಸಚಿವ ಶಿವರಾಜ್‌ ಸಿಂಗ್‌ ಚೌಹಾಣ್ ಭರವಸೆ

ಕರಾವಳಿ ಮತ್ತು ಮಲೆನಾಡಿನ ಅಡಿಕೆ ತೋಟಗಳಲ್ಲಿ ಕಾಣಿಸಿಕೊಳ್ಳುತ್ತಿರುವ ಎಲೆಚುಕ್ಕೆ, ಹಳದಿ ಎಲೆ ಹಾಗೂ…

1 day ago

ಹವಾಮಾನ ವರದಿ | 23-08-2026 | ಆಗಸ್ಟ್ 25 ರವರೆಗೆ ಮಳೆ – ಕರಾವಳಿ-ಮಲೆನಾಡಿನಲ್ಲಿ ಉತ್ತಮ ಮಳೆ ಸಾಧ್ಯತೆ

ಕರ್ನಾಟಕದಲ್ಲಿ ಮುಂಗಾರು ಮತ್ತೆ ಚುರುಕಾಗಿದ್ದು, ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 25ರವರೆಗೆ ಮಳೆ…

2 days ago